Homeಚಳವಳಿದಲಿತ ಯುವಕರ ಮೇಲೆ ಸಾಮೂಹಿಕ ಹಲ್ಲೆ ಖಂಡಿಸಿ ಗುಜರಾತ್‌ ಬಂದ್‌ಗೆ ಜಿಗ್ನೇಶ್‌ ಮೇವಾನಿ ಚಿಂತನೆ: ವಿಡಿಯೋ...

ದಲಿತ ಯುವಕರ ಮೇಲೆ ಸಾಮೂಹಿಕ ಹಲ್ಲೆ ಖಂಡಿಸಿ ಗುಜರಾತ್‌ ಬಂದ್‌ಗೆ ಜಿಗ್ನೇಶ್‌ ಮೇವಾನಿ ಚಿಂತನೆ: ವಿಡಿಯೋ ನೋಡಿ

ಉತ್ತರ ಪ್ರದೇಶದ ಖ್ಯಾತ ವೈದ್ಯರಾದ ಡಾ.ಕಫೀಲ್‌ ಖಾನ್‌ "ಈ ಘೋರ ಅಪರಾಧದ ವಿರುದ್ಧ ನಿಜವಾಗಿಯೂ ಪ್ರತಿಭಟಿಸಬೇಕಾಗಿದೆ" ಎಂದು ಟ್ವೀಟ್‌ ಮಾಡಿದ್ದಾರೆ

- Advertisement -
- Advertisement -

ನಿನ್ನೆ ರಾತ್ರಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಇಬ್ಬರು ದಲಿತ ಯುವಕರ ಮೇಲೆ ನಾಲ್ಕೈದು ಜನರು ಮಾರಣಾಂತಿಕವಾಗಿ ಸಾಮೂಹಿಕ ಹಲ್ಲೆ ನಡೆಸಿರುವ ಘಟನೆ ಜರುಗಿದ್ದು ತೀವ್ರ ಖಂಡನೆ ವ್ಯಕ್ತವಾಗಿದೆ.

ಯುವಕನೊಬ್ಬನ ಬಟ್ಟೆ ಬಿಚ್ಚಿ ಹೊಡೆಯುತ್ತಿದ್ದು, ಅದನ್ನು ತಡೆಯಲು ಬಂದ ಮತ್ತೊಬ್ಬ ಯುವಕನಿಗೂ ಸಹ ಕಾಲಿನಿಂದ ಒದ್ದು ದರ್ಪ ಮೆರೆದಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಹೋರಾಟಗಾರ ಮತ್ತು ಶಾಸಕ ಜಿಗ್ನೇಶ್‌ ಮೇವಾನಿ ನಿಂದನೀಯ ಮಾತುಗಳು ಮತ್ತು ಹಿಂಸೆ ಎಂಬ ಟೈಟಲ್‌ ನೀಡಿ

“ನಿನ್ನೆ ರಾತ್ರಿ ಅಹಮದಾಬಾದ್‌ನಲ್ಲಿ ಇಬ್ಬರು ದಲಿತ ಯುವಕರನ್ನು ಹತ್ಯೆ ಮಾಡಲು ಯತ್ನಿಸಿದ ಆರೋಪಿಗಳನ್ನು 24 ಗಂಟೆಗಳಲ್ಲಿ ಪೊಲೀಸರು ಬಂಧಿಸದಿದ್ದರೆ ನಾನು ಗುಜರಾತ್ ಬಂದ್‌ಗೆ ಕರೆ ನೀಡುತ್ತೇನೆ. ದಲಿತರು ಹೇಡಿಗಳು ಎಂದು ಭಾವಿಸಬೇಡಿ: ನಾವು ಸಂವಿಧಾನವನ್ನು ನಂಬುತ್ತೇವೆ!” ಎಂದಿದ್ದಾರೆ.

ನಾನು ಈ ಘಟನೆಯ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ತಲುಪಿಸಿದ್ದೇನೆ. ದಲಿತರ ವಿರುದ್ಧದ ಈ ದಾದಗಿರಿ ಸಹಿಸುವುದಿಲ್ಲ. ಇಂದೇ ಅವರನ್ನು ಬಂಧಿಸಿ, ಇಲ್ಲದಿದ್ದರೆ ನಾವು ಬೀದಿಗಳಲ್ಲಿ ಆಂದೋಲನ ನಡೆಸುತ್ತೇವೆ ಎಂದು ಘೋಷಿಸಿದ್ದಾರೆ.

ಇನ್ನು ಉತ್ತರ ಪ್ರದೇಶದ ಖ್ಯಾತ ವೈದ್ಯರಾದ ಡಾ.ಕಫೀಲ್‌ ಖಾನ್‌ “ಈ ಘೋರ ಅಪರಾಧದ ವಿರುದ್ಧ ನಿಜವಾಗಿಯೂ ಪ್ರತಿಭಟಿಸಬೇಕಾಗಿದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆಯೇ ಸಹ ಗುಜರಾತ್‌ನ ಊನಾ ಎಂಬ ಊರಿನಲ್ಲಿ ಮೂರು ಜನ ದಲಿತ ಯುವಕರನ್ನು ಅರೆಬೆತ್ತಲೆಗೊಳಿಸಿ ಸಾಮೂಹಿಕ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್‌ ಆಗಿತ್ತು. ಇದರ ವಿರುದ್ಧ ತೀವ್ರ ಹೋರಾಟ ನಡೆಸಿದ್ದ ಜಿಗ್ನೇಶ್ ಮೇವಾನಿ ’ಊನಾ ಚಲೋ’ ನಡೆಸಿದ್ದರು. ಇದು ಗುಜರಾತ್‌ನಲ್ಲಿ ತೀವ್ರ ಸಂಚಲನ ಮೂಡಿಸಿತ್ತು.

“ನಿಮ್ಮ ಸತ್ತ ದನ ನೀವೆ ಇಟ್ಟುಕೊಳ್ಳಿ, ನಮ್ಮ ಭೂಮಿ ನಮಗೆ ಕೊಡಿ” ಎಂದು ಜಿಗ್ನೇಶ್ ಮೇವಾನಿಯವರ ನೀಡಿದ ಕರೆಗೆ ದೇಶದ ದಲಿತ ಸಮುದಾಯ ಅಭೂತಪೂರ್ವವಾಗಿ ಸ್ಪಂದಿಸಿತ್ತು. ಅಲ್ಲಿಂದ ಮುಂದೆ ಜಿಗ್ನೇಶ್‌ ಮೇವಾನಿಯವರು ಯುವ ದಲಿತ ಹೋರಾಟಗಾರನಾಗಿ ಪ್ರವರ್ಧಮಾನಕ್ಕೆ ಬಂದಿದ್ದಲ್ಲದೇ ನಂತರ ಶಾಸಕರಾಗಿದ್ದು ಇತಿಹಾಸ.

ಈಗ ಮತ್ತೆ ನಡೆದಿರುವ ದಲಿತರ ಮೇಲಿನ ದೌರ್ಜನ್ಯದ ಪ್ರಕರಣ ಎಲ್ಲಿಗೆ ಹೋಗಿ ತಲುಪಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಹಲ್ಲೆ ಖಂಡನಾರ್ಹ. ಇದನ್ನು ನಡೆಸಿರುವ ಪಾತಕಿಗಳನ್ನು ಈ ಕೂಡಲೇ ಬಂಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು ಯಾವುದೇ...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...