Homeಚಳವಳಿದಲಿತ ಯುವಕರ ಮೇಲೆ ಸಾಮೂಹಿಕ ಹಲ್ಲೆ ಖಂಡಿಸಿ ಗುಜರಾತ್‌ ಬಂದ್‌ಗೆ ಜಿಗ್ನೇಶ್‌ ಮೇವಾನಿ ಚಿಂತನೆ: ವಿಡಿಯೋ...

ದಲಿತ ಯುವಕರ ಮೇಲೆ ಸಾಮೂಹಿಕ ಹಲ್ಲೆ ಖಂಡಿಸಿ ಗುಜರಾತ್‌ ಬಂದ್‌ಗೆ ಜಿಗ್ನೇಶ್‌ ಮೇವಾನಿ ಚಿಂತನೆ: ವಿಡಿಯೋ ನೋಡಿ

ಉತ್ತರ ಪ್ರದೇಶದ ಖ್ಯಾತ ವೈದ್ಯರಾದ ಡಾ.ಕಫೀಲ್‌ ಖಾನ್‌ "ಈ ಘೋರ ಅಪರಾಧದ ವಿರುದ್ಧ ನಿಜವಾಗಿಯೂ ಪ್ರತಿಭಟಿಸಬೇಕಾಗಿದೆ" ಎಂದು ಟ್ವೀಟ್‌ ಮಾಡಿದ್ದಾರೆ

- Advertisement -
- Advertisement -

ನಿನ್ನೆ ರಾತ್ರಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಇಬ್ಬರು ದಲಿತ ಯುವಕರ ಮೇಲೆ ನಾಲ್ಕೈದು ಜನರು ಮಾರಣಾಂತಿಕವಾಗಿ ಸಾಮೂಹಿಕ ಹಲ್ಲೆ ನಡೆಸಿರುವ ಘಟನೆ ಜರುಗಿದ್ದು ತೀವ್ರ ಖಂಡನೆ ವ್ಯಕ್ತವಾಗಿದೆ.

ಯುವಕನೊಬ್ಬನ ಬಟ್ಟೆ ಬಿಚ್ಚಿ ಹೊಡೆಯುತ್ತಿದ್ದು, ಅದನ್ನು ತಡೆಯಲು ಬಂದ ಮತ್ತೊಬ್ಬ ಯುವಕನಿಗೂ ಸಹ ಕಾಲಿನಿಂದ ಒದ್ದು ದರ್ಪ ಮೆರೆದಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಹೋರಾಟಗಾರ ಮತ್ತು ಶಾಸಕ ಜಿಗ್ನೇಶ್‌ ಮೇವಾನಿ ನಿಂದನೀಯ ಮಾತುಗಳು ಮತ್ತು ಹಿಂಸೆ ಎಂಬ ಟೈಟಲ್‌ ನೀಡಿ

“ನಿನ್ನೆ ರಾತ್ರಿ ಅಹಮದಾಬಾದ್‌ನಲ್ಲಿ ಇಬ್ಬರು ದಲಿತ ಯುವಕರನ್ನು ಹತ್ಯೆ ಮಾಡಲು ಯತ್ನಿಸಿದ ಆರೋಪಿಗಳನ್ನು 24 ಗಂಟೆಗಳಲ್ಲಿ ಪೊಲೀಸರು ಬಂಧಿಸದಿದ್ದರೆ ನಾನು ಗುಜರಾತ್ ಬಂದ್‌ಗೆ ಕರೆ ನೀಡುತ್ತೇನೆ. ದಲಿತರು ಹೇಡಿಗಳು ಎಂದು ಭಾವಿಸಬೇಡಿ: ನಾವು ಸಂವಿಧಾನವನ್ನು ನಂಬುತ್ತೇವೆ!” ಎಂದಿದ್ದಾರೆ.

ನಾನು ಈ ಘಟನೆಯ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ತಲುಪಿಸಿದ್ದೇನೆ. ದಲಿತರ ವಿರುದ್ಧದ ಈ ದಾದಗಿರಿ ಸಹಿಸುವುದಿಲ್ಲ. ಇಂದೇ ಅವರನ್ನು ಬಂಧಿಸಿ, ಇಲ್ಲದಿದ್ದರೆ ನಾವು ಬೀದಿಗಳಲ್ಲಿ ಆಂದೋಲನ ನಡೆಸುತ್ತೇವೆ ಎಂದು ಘೋಷಿಸಿದ್ದಾರೆ.

ಇನ್ನು ಉತ್ತರ ಪ್ರದೇಶದ ಖ್ಯಾತ ವೈದ್ಯರಾದ ಡಾ.ಕಫೀಲ್‌ ಖಾನ್‌ “ಈ ಘೋರ ಅಪರಾಧದ ವಿರುದ್ಧ ನಿಜವಾಗಿಯೂ ಪ್ರತಿಭಟಿಸಬೇಕಾಗಿದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆಯೇ ಸಹ ಗುಜರಾತ್‌ನ ಊನಾ ಎಂಬ ಊರಿನಲ್ಲಿ ಮೂರು ಜನ ದಲಿತ ಯುವಕರನ್ನು ಅರೆಬೆತ್ತಲೆಗೊಳಿಸಿ ಸಾಮೂಹಿಕ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್‌ ಆಗಿತ್ತು. ಇದರ ವಿರುದ್ಧ ತೀವ್ರ ಹೋರಾಟ ನಡೆಸಿದ್ದ ಜಿಗ್ನೇಶ್ ಮೇವಾನಿ ’ಊನಾ ಚಲೋ’ ನಡೆಸಿದ್ದರು. ಇದು ಗುಜರಾತ್‌ನಲ್ಲಿ ತೀವ್ರ ಸಂಚಲನ ಮೂಡಿಸಿತ್ತು.

“ನಿಮ್ಮ ಸತ್ತ ದನ ನೀವೆ ಇಟ್ಟುಕೊಳ್ಳಿ, ನಮ್ಮ ಭೂಮಿ ನಮಗೆ ಕೊಡಿ” ಎಂದು ಜಿಗ್ನೇಶ್ ಮೇವಾನಿಯವರ ನೀಡಿದ ಕರೆಗೆ ದೇಶದ ದಲಿತ ಸಮುದಾಯ ಅಭೂತಪೂರ್ವವಾಗಿ ಸ್ಪಂದಿಸಿತ್ತು. ಅಲ್ಲಿಂದ ಮುಂದೆ ಜಿಗ್ನೇಶ್‌ ಮೇವಾನಿಯವರು ಯುವ ದಲಿತ ಹೋರಾಟಗಾರನಾಗಿ ಪ್ರವರ್ಧಮಾನಕ್ಕೆ ಬಂದಿದ್ದಲ್ಲದೇ ನಂತರ ಶಾಸಕರಾಗಿದ್ದು ಇತಿಹಾಸ.

ಈಗ ಮತ್ತೆ ನಡೆದಿರುವ ದಲಿತರ ಮೇಲಿನ ದೌರ್ಜನ್ಯದ ಪ್ರಕರಣ ಎಲ್ಲಿಗೆ ಹೋಗಿ ತಲುಪಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಹಲ್ಲೆ ಖಂಡನಾರ್ಹ. ಇದನ್ನು ನಡೆಸಿರುವ ಪಾತಕಿಗಳನ್ನು ಈ ಕೂಡಲೇ ಬಂಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ವಾಂಗ್‌ಚುಕ್ ಬಂಧನ ಕಾನೂನುಬಾಹಿರ; ಹಾಗಾಗಿ ಸರ್ಕಾರ ವಿಚಾರಣೆ ಮುಂದೂಡುವಂತೆ ಮಾಡುತ್ತಿದೆ: ಪತ್ನಿ ಗೀತಾಂಜಲಿ ಆಂಗ್ಮೋ ಆರೋಪ

"ಪರಿಸರವಾದಿ, ಲಡಾಖ್ ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನವು ಕಾನೂನುಬಾಹಿರವಾಗಿ ನಡೆದಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುವುದು ಈಗಾಗಲೇ ಸರ್ಕಾರದ (ಸಾಲಿಸಿಟರ್ ಜನರಲ್) ಗಮನಕ್ಕೆ ಬಂದಿದೆ. ಆದ್ದರಿಂದ ಪ್ರತಿ ಸಲ ಹೊಸ ದಿನಾಂಕ...

ಬಹುಮತವಿಲ್ಲದ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿಯುವುದು ಹೇಗೆ? ಕೇಸರಿ ಪಕ್ಷದ ತಂತ್ರ ತಿಳಿಸಿದ ಕಪಿಲ್ ಸಿಬಲ್

ಬಿಜೆಪಿ ಜೊತೆ ಕೈಜೋಡಿಸುವ ಪ್ರಾದೇಶಿಗಳ ಪಕ್ಷಗಳು ಅಥವಾ ಸಣ್ಣ ಪಕ್ಷಗಳಿಗೆ ರಾಜ್ಯಸಭಾ ಸಂಸದ ಮತ್ತು ಹಿರಿಯ ವಕೀಲ ಕಪಿಲ್ ಸಿಬಲ್ ಭಾನುವಾರ (ಜ.18) ಎಚ್ಚರಿಕೆ ನೀಡಿದ್ದು, ಕೇಸರಿ ಪಕ್ಷ ಆರಂಭದಲ್ಲಿ ಮೈತ್ರಿ ಮಾಡಿಕೊಂಡು...

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17)...

ಖಾಲಿ ಮನೆಯಲ್ಲಿ ನಮಾಝ್ : 12 ಜನರನ್ನು ಬಂಧಿಸಿದ ಪೊಲೀಸರು

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರ ಖಾಲಿ ಮನೆಯಲ್ಲಿ ನಮಾಝ್ ಮಾಡಿದ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ ವರದಿಯಾಗಿದೆ. ಅನುಮತಿ ಪಡೆಯದೆ ನಮಾಝ್ ಮಾಡಿದ್ದಾರೆ ಎಂಬ ಕಾರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು theprint.in ವರದಿ ಮಾಡಿದೆ....

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು,...

ವಿಮಾನ ಸೇವೆಯಲ್ಲಿ ವ್ಯತ್ಯಯ : ಇಂಡಿಗೋ ಏರ್‌ಲೈನ್ಸ್‌ಗೆ 22 ಕೋಟಿ ರೂ. ದಂಡ

ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಉಂಟಾದ ಭಾರೀ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಡಿಸೆಂಬರ್ 3 ರಿಂದ 5 ರವರೆಗಿನ...

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...