Homeಚಳವಳಿದಲಿತ ಯುವಕರ ಮೇಲೆ ಸಾಮೂಹಿಕ ಹಲ್ಲೆ ಖಂಡಿಸಿ ಗುಜರಾತ್‌ ಬಂದ್‌ಗೆ ಜಿಗ್ನೇಶ್‌ ಮೇವಾನಿ ಚಿಂತನೆ: ವಿಡಿಯೋ...

ದಲಿತ ಯುವಕರ ಮೇಲೆ ಸಾಮೂಹಿಕ ಹಲ್ಲೆ ಖಂಡಿಸಿ ಗುಜರಾತ್‌ ಬಂದ್‌ಗೆ ಜಿಗ್ನೇಶ್‌ ಮೇವಾನಿ ಚಿಂತನೆ: ವಿಡಿಯೋ ನೋಡಿ

ಉತ್ತರ ಪ್ರದೇಶದ ಖ್ಯಾತ ವೈದ್ಯರಾದ ಡಾ.ಕಫೀಲ್‌ ಖಾನ್‌ "ಈ ಘೋರ ಅಪರಾಧದ ವಿರುದ್ಧ ನಿಜವಾಗಿಯೂ ಪ್ರತಿಭಟಿಸಬೇಕಾಗಿದೆ" ಎಂದು ಟ್ವೀಟ್‌ ಮಾಡಿದ್ದಾರೆ

- Advertisement -
- Advertisement -

ನಿನ್ನೆ ರಾತ್ರಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಇಬ್ಬರು ದಲಿತ ಯುವಕರ ಮೇಲೆ ನಾಲ್ಕೈದು ಜನರು ಮಾರಣಾಂತಿಕವಾಗಿ ಸಾಮೂಹಿಕ ಹಲ್ಲೆ ನಡೆಸಿರುವ ಘಟನೆ ಜರುಗಿದ್ದು ತೀವ್ರ ಖಂಡನೆ ವ್ಯಕ್ತವಾಗಿದೆ.

ಯುವಕನೊಬ್ಬನ ಬಟ್ಟೆ ಬಿಚ್ಚಿ ಹೊಡೆಯುತ್ತಿದ್ದು, ಅದನ್ನು ತಡೆಯಲು ಬಂದ ಮತ್ತೊಬ್ಬ ಯುವಕನಿಗೂ ಸಹ ಕಾಲಿನಿಂದ ಒದ್ದು ದರ್ಪ ಮೆರೆದಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.

ಈ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಹೋರಾಟಗಾರ ಮತ್ತು ಶಾಸಕ ಜಿಗ್ನೇಶ್‌ ಮೇವಾನಿ ನಿಂದನೀಯ ಮಾತುಗಳು ಮತ್ತು ಹಿಂಸೆ ಎಂಬ ಟೈಟಲ್‌ ನೀಡಿ

“ನಿನ್ನೆ ರಾತ್ರಿ ಅಹಮದಾಬಾದ್‌ನಲ್ಲಿ ಇಬ್ಬರು ದಲಿತ ಯುವಕರನ್ನು ಹತ್ಯೆ ಮಾಡಲು ಯತ್ನಿಸಿದ ಆರೋಪಿಗಳನ್ನು 24 ಗಂಟೆಗಳಲ್ಲಿ ಪೊಲೀಸರು ಬಂಧಿಸದಿದ್ದರೆ ನಾನು ಗುಜರಾತ್ ಬಂದ್‌ಗೆ ಕರೆ ನೀಡುತ್ತೇನೆ. ದಲಿತರು ಹೇಡಿಗಳು ಎಂದು ಭಾವಿಸಬೇಡಿ: ನಾವು ಸಂವಿಧಾನವನ್ನು ನಂಬುತ್ತೇವೆ!” ಎಂದಿದ್ದಾರೆ.

ನಾನು ಈ ಘಟನೆಯ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ತಲುಪಿಸಿದ್ದೇನೆ. ದಲಿತರ ವಿರುದ್ಧದ ಈ ದಾದಗಿರಿ ಸಹಿಸುವುದಿಲ್ಲ. ಇಂದೇ ಅವರನ್ನು ಬಂಧಿಸಿ, ಇಲ್ಲದಿದ್ದರೆ ನಾವು ಬೀದಿಗಳಲ್ಲಿ ಆಂದೋಲನ ನಡೆಸುತ್ತೇವೆ ಎಂದು ಘೋಷಿಸಿದ್ದಾರೆ.

ಇನ್ನು ಉತ್ತರ ಪ್ರದೇಶದ ಖ್ಯಾತ ವೈದ್ಯರಾದ ಡಾ.ಕಫೀಲ್‌ ಖಾನ್‌ “ಈ ಘೋರ ಅಪರಾಧದ ವಿರುದ್ಧ ನಿಜವಾಗಿಯೂ ಪ್ರತಿಭಟಿಸಬೇಕಾಗಿದೆ” ಎಂದು ಟ್ವೀಟ್‌ ಮಾಡಿದ್ದಾರೆ.

ಈ ಹಿಂದೆಯೇ ಸಹ ಗುಜರಾತ್‌ನ ಊನಾ ಎಂಬ ಊರಿನಲ್ಲಿ ಮೂರು ಜನ ದಲಿತ ಯುವಕರನ್ನು ಅರೆಬೆತ್ತಲೆಗೊಳಿಸಿ ಸಾಮೂಹಿಕ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್‌ ಆಗಿತ್ತು. ಇದರ ವಿರುದ್ಧ ತೀವ್ರ ಹೋರಾಟ ನಡೆಸಿದ್ದ ಜಿಗ್ನೇಶ್ ಮೇವಾನಿ ’ಊನಾ ಚಲೋ’ ನಡೆಸಿದ್ದರು. ಇದು ಗುಜರಾತ್‌ನಲ್ಲಿ ತೀವ್ರ ಸಂಚಲನ ಮೂಡಿಸಿತ್ತು.

“ನಿಮ್ಮ ಸತ್ತ ದನ ನೀವೆ ಇಟ್ಟುಕೊಳ್ಳಿ, ನಮ್ಮ ಭೂಮಿ ನಮಗೆ ಕೊಡಿ” ಎಂದು ಜಿಗ್ನೇಶ್ ಮೇವಾನಿಯವರ ನೀಡಿದ ಕರೆಗೆ ದೇಶದ ದಲಿತ ಸಮುದಾಯ ಅಭೂತಪೂರ್ವವಾಗಿ ಸ್ಪಂದಿಸಿತ್ತು. ಅಲ್ಲಿಂದ ಮುಂದೆ ಜಿಗ್ನೇಶ್‌ ಮೇವಾನಿಯವರು ಯುವ ದಲಿತ ಹೋರಾಟಗಾರನಾಗಿ ಪ್ರವರ್ಧಮಾನಕ್ಕೆ ಬಂದಿದ್ದಲ್ಲದೇ ನಂತರ ಶಾಸಕರಾಗಿದ್ದು ಇತಿಹಾಸ.

ಈಗ ಮತ್ತೆ ನಡೆದಿರುವ ದಲಿತರ ಮೇಲಿನ ದೌರ್ಜನ್ಯದ ಪ್ರಕರಣ ಎಲ್ಲಿಗೆ ಹೋಗಿ ತಲುಪಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ಹಲ್ಲೆ ಖಂಡನಾರ್ಹ. ಇದನ್ನು ನಡೆಸಿರುವ ಪಾತಕಿಗಳನ್ನು ಈ ಕೂಡಲೇ ಬಂಧಿಸಬೇಕು.

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...