Homeಕರ್ನಾಟಕಎಂ.ಬಿ‌ ಪಾಟೀಲ್ ಹೇಳಿಕೆ ಒಡೆದಾಳುವ ತಂತ್ರ, ಭೂ ಸ್ವಾಧೀನ ಸಂಪೂರ್ಣ ರದ್ದಾಗದೆ ಹೋರಾಟ ನಿಲ್ಲುವುದಿಲ್ಲ: ಸಂಯುಕ್ತ...

ಎಂ.ಬಿ‌ ಪಾಟೀಲ್ ಹೇಳಿಕೆ ಒಡೆದಾಳುವ ತಂತ್ರ, ಭೂ ಸ್ವಾಧೀನ ಸಂಪೂರ್ಣ ರದ್ದಾಗದೆ ಹೋರಾಟ ನಿಲ್ಲುವುದಿಲ್ಲ: ಸಂಯುಕ್ತ ಹೋರಾಟ

- Advertisement -
- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆ ಚನ್ನರಾಯಪಟ್ಟಣ ಹೋಬಳಿಯ ಹದಿಮೂರು ಹಳ್ಳಿಗಳ ಪೈಕಿ 3 ಹಳ್ಳಿಗಳ 500 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈ ಬಿಡುತ್ತೇವೆ ಎಂಬ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರ ಹೇಳಿಕೆಯನ್ನು ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ ಸಂಪೂರ್ಣವಾಗಿ ತಿರಸ್ಕರಿಸಿದೆ.

ನಾಳೆ (ಜೂನ್‌ 25) ‘ದೇವನಹಳ್ಳಿ ಚಲೋ’ ಹೋರಾಟ ದೊಡ್ಡ ಮಟ್ಟದಲ್ಲಿ ನಡೆಯಲಿದೆ ಎಂದು ಸ್ಪಷ್ಟಪಡಿಸಿದೆ.

ಇಂದು (ಜೂ.24) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎಂ.ಬಿ ಪಾಟೀಲ್ “ಮೂರು ಹಳ್ಳಿಗಳ 500 ಎಕರೆ ಭೂಮಿಯನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿದ್ದೇವೆ. ಇನ್ನು ಮುಂದೆ ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೈಗಾರಿಕೆ ಸಲುವಾಗಿ ಭೂಸ್ವಾಧೀನ ಮಾಡುವುದಿಲ್ಲ. ಆದ್ದರಿಂದ ರೈತರು ದಯವಿಟ್ಟು ಹೋರಾಟ ಕೈಬಿಟ್ಟು ಸರ್ಕಾರದೊಂದಿಗೆ ಸಹಕರಿಸಿ” ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಂಯುಕ್ತ ಹೋರಾಟ ಕರ್ನಾಟಕ ಹಾಗೂ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ “ಹೋರಾಟದ ದಿಕ್ಕು ತಪ್ಪಿಸಲು ರಾಜ್ಯ ಸರ್ಕಾರ ಒಡೆದು ಆಳುವ ತಂತ್ರವನ್ನು ಅನುಸರಿಸುತ್ತಿದೆ” ಎಂದಿದೆ.

ಚನ್ನರಾಯಪಟ್ಟಣ ಹೋಬಳಿಯ ಭೂ ಸ್ವಾಧೀನವು ಕರಾಳ ಕೆಎಐಡಿಬಿ ಭೂ ಸ್ವಾಧೀನ ನೀತಿ ಪ್ರಕಾರ ನಡೆಸಲಾಗುತ್ತಿದೆ. ಇಂತಹ ಅನ್ಯಾಯದ ಭೂ ಸ್ವಾಧೀನವು, ಭೂ ಸ್ವಾಧೀನ ಕಾಯ್ದೆ, 2013ಕ್ಕೆ ವಿರುದ್ದವಾಗಿದೆ. ಈ ಹಿಂದಿನ ಬಿಜೆಪಿ ಸರ್ಕಾರ ರೈತರ ವಿರೋಧ ಧಿಕ್ಕರಿಸಿ ಭೂ ಸ್ವಾಧೀನಕ್ಕೆ ಪ್ರಾಥಮಿಕ ಅಧಿಸೂಚನೆ ಹೊರಡಿಸಿತ್ತು. ಇದನ್ನು ವಿರೋಧಿಸಿ ರೈತರು ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ.  ಬಿಜೆಪಿ ಅವಧಿಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದರು. ನಾವು ಅಧಿಕಾರಕ್ಕೆ ಬಂದರೆ ಬಿಜೆಪಿ ಸರ್ಕಾರದ ಭೂ ಸ್ವಾಧೀನ ಅಧಿಸೂಚನೆ ರದ್ದುಪಡಿಸುತ್ತೇವೆ ಎಂದು ಭರವಸೆ ನೀಡಿದ್ದರು. ಆದರೆ, ಈಗ ಭೂ ಸ್ವಾಧೀನಕ್ಕೆ ಹಠಮಾರಿ ಧೋರಣೆ ಅನುಸರಿಸುತ್ತಾ ಒಡೆದು ಆಳುವ ತಂತ್ರವನ್ನು ಅನುಸರಿಸುತ್ತಿದ್ದಾರೆ. ಈ ಕುಟಿಲ ತಂತ್ರದಿಂದ ರೈತ ಹೋರಾಟ ಬಗ್ಗು ಬಡಿಯಲು ಸಾಧ್ಯವಿಲ್ಲ ಎಂದು ಹೇಳಿದೆ.

ನಾಳೆ ದೇವನಹಳ್ಳಿ ತಹಶೀಲ್ದಾರ್ ಕಛೇರಿ ಎದುರು ನಡೆಯಲಿರುವ ಭೂ ಸ್ವಾಧೀನ ವಿರೋಧಿ ಹೋರಾಟಕ್ಕೆ ಎಲ್ಲಾ ರೈತರು, ಕಾರ್ಮಿಕರು ವಿದ್ಯಾರ್ಥಿಗಳು, ಯುವಜನರು, ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡುತ್ತೇವೆ ಎಂದಿದೆ.

ಶೇಕಡಾ 90ಕ್ಕಿಂತ ಹೆಚ್ಚು ರೈತರು ವಿರೋಧ ದಾಖಲಿಸಿರುವ ಈ ಅನ್ಯಾಯದ ಭೂಸ್ವಾಧೀನ ಮಾಡಿಕೊಳ್ಳಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಮುಖ್ಯಮಂತ್ರಿಗಳು ತಮ್ಮ ಭರವಸೆಯಂತೆ ನಡೆದುಕೊಳ್ಳಬೇಕು ಎಂದು ಸಂಯುಕ್ತ ಹೋರಾಟ ಕರ್ನಾಟಕ ಮತ್ತು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.

LIVE UPDATES | ‘ದೇವನಹಳ್ಳಿ ಚಲೋ’; ರೈತರ ಹೋರಾಟಕ್ಕೆ ರಂಗಕರ್ಮಿ ಮಹೇಶ್ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...