Homeಮುಖಪುಟಆರ್ಥಿಕ ಕುಸಿತ, ಐಟಿ ಉದ್ಯೋಗಗಳ ಕಡಿತದ ವಿರುದ್ಧ ಎಂ.ಕೆ ಸ್ಟಾಲಿನ್‌ ಕಿಡಿ

ಆರ್ಥಿಕ ಕುಸಿತ, ಐಟಿ ಉದ್ಯೋಗಗಳ ಕಡಿತದ ವಿರುದ್ಧ ಎಂ.ಕೆ ಸ್ಟಾಲಿನ್‌ ಕಿಡಿ

- Advertisement -
- Advertisement -

ಆರ್ಥಿಕ ಕುಸಿತದ ಮಧ್ಯೆ ತಮಿಳುನಾಡಿನ ಐಟಿ ಸಂಸ್ಥೆಗಳಲ್ಲಿ ಉದ್ಯೋಗ ಕಡಿತವನ್ನು ತಪ್ಪಿಸಲು ರಾಜ್ಯ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಎಂ.ಕೆ ಸ್ಟಾಲಿನ್ ಒತ್ತಾಯಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಉದ್ಯೋಗ ಕಡಿತದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು ನಿರುದ್ಯೋಗ ಹೆಚ್ಚಳದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಹಲವಾರು ಐಟಿ ಕಂಪನಿಗಳು ನಷ್ಟ ಸರಿದೂಗಿಸಲು ಸಾವಿರಾರು ಕಾರ್ಮಿಕರನ್ನು ವಜಾಗೊಳಿಸಿದ್ದಾರೆ. ಕೇಂದ್ರ ನೀತಿಗಳ ಕಾರಣದಿಂದಾಗ ಆರ್ಥಿಕ  ಕುಸಿತದಿಂತ ಹೀಗಾಗುತ್ತಿದ್ದು, ತಮಿಳುನಾಡಿನ ಐಟಿ ಸಂಸ್ಥೆಗಳಲ್ಲಿ ಉದ್ಯೋಗ ಕಡಿತವನ್ನು ತಪ್ಪಿಸಲು ರಾಜ್ಯ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

“ಎಐಎಡಿಎಂಕೆ ನೇತೃತ್ವದ ರಾಜ್ಯ ಸರ್ಕಾರದ ಆಡಳಿತವು ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬಗ್ಗೆ ಯೋಚಿಸಿಲ್ಲ, ಇದು ರಾಜ್ಯಕ್ಕೆ ಶಾಪವಾಗಿದೆ. ತಮಿಳುನಾಡಿನ ಐಟಿ ಸಂಸ್ಥೆಗಳು ಈಗಾಗಲೇ ತನ್ನ ಅನೇಕ ಉದ್ಯೋಗಿಗಳನ್ನು ವಜಾ ಮಾಡಲು ಕೆಲವು ನಕಲಿ ಕಾರಣಗಳನ್ನು ನೀಡುತ್ತಿವೆ. ಈ ನಡುವೆ ಬಿಜೆಪಿಯ ಕಳಪೆ ಆರ್ಥಿಕ ಯೋಜನೆಗಳಿಂದಾಗಿ ದೇಶದಲ್ಲಿ 40,000 ಕ್ಕೂ ಹೆಚ್ಚು ಐಟಿ ಉದ್ಯೋಗಿಗಳು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ವರದಿಗಳು ಬಂದಿವೆ” ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ದರವು 4.5% ಕ್ಕೆ ಕುಸಿದಿದೆ. ಇದು ಜನವರಿ-ಮಾರ್ಚ್ 2013 ರ ನಂತರದ ಅತ್ಯಂತ ಕನಿಷ್ಠ ಮಟ್ಟವಾಗಿದೆ. ಇದು ಸತತ ಐದನೇ ತ್ರೈಮಾಸಿಕ ಕುಸಿತವನ್ನು ಸೂಚಿಸುತ್ತದೆ. ಈ ಬೆಳವಣಿಗೆಯ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ಸ್ಟಾಲಿನ್‌  “ಜಿಡಿಪಿ 4.5% ಕ್ಕೆ ಕುಸಿದಿದ್ದು ಕಳೆದ ಆರು ವರ್ಷಗಳಲ್ಲಿ ಕಡಿಮೆ ಆರ್ಥಿಕ ಬೆಳವಣಿಗೆಯ ದರವಾಗಿದೆ. ಇದು ಕೇವಲ ಆರ್ಥಿಕ ಬೆಳವಣಿಗೆ ನಿಧಾನಗತಿಯಲ್ಲ, ಇದು ದೊಡ್ಡ ಆರ್ಥಿಕ ಬಿಕ್ಕಟ್ಟಾಗಿದೆ. ಸರ್ಕಾರವು ದಿಕ್ಕು ತಪ್ಪಿಸುವುದನ್ನು ನಿಲ್ಲಿಸಬೇಕು ಮತ್ತು ಅಸಲಿ ಆರ್ಥಿಕ ಕಾರ್ಯತಂತ್ರವನ್ನು ತಿಳಿಸಲು ಪ್ರಾರಂಭಿಸಬೇಕು” ಎಂದಿದ್ದಾರೆ.

ಇದಲ್ಲದೆ, ನಿರುದ್ಯೋಗವನ್ನು ತಡೆಗಟ್ಟುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಆಸಕ್ತಿ ತೋರಿಸದಿರುವುದನ್ನು ಅವರು ಖಂಡಿಸಿದ್ದಾರೆ. “ಈ ದೇಶದ ಭವಿಷ್ಯವೆಂದು ಪರಿಗಣಿಸಲ್ಪಟ್ಟಿರುವ ಯುವಜನರ ಬಗ್ಗೆ ಯಾವುದೇ ಕಾಳಜಿ ಇಲ್ಲದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಆಟವನ್ನು ಆಡುತ್ತಿವೆ. ಆದ್ದರಿಂದ, ನಿರುದ್ಯೋಗ ಮತ್ತು ಐಟಿ ಉದ್ಯೋಗಿಗಳನ್ನು ದೊಡ್ಡ ಮಟ್ಟದಲ್ಲಿ ವಜಾ ಮಾಡುವ ಸಮಸ್ಯೆಯನ್ನು ಪರಿಹರಿಸಲು ತಕ್ಷಣವೇ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ರಾಜ್ಯದ ಎಐಎಡಿಎಂಕೆ ಮತ್ತು ಕೇಂದ್ರದ ಬಿಜೆಪಿಯನ್ನು ನಾನು ವಿನಂತಿಸುತ್ತೇನೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...