Homeಮುಖಪುಟಆರ್ಥಿಕ ಕುಸಿತ, ಐಟಿ ಉದ್ಯೋಗಗಳ ಕಡಿತದ ವಿರುದ್ಧ ಎಂ.ಕೆ ಸ್ಟಾಲಿನ್‌ ಕಿಡಿ

ಆರ್ಥಿಕ ಕುಸಿತ, ಐಟಿ ಉದ್ಯೋಗಗಳ ಕಡಿತದ ವಿರುದ್ಧ ಎಂ.ಕೆ ಸ್ಟಾಲಿನ್‌ ಕಿಡಿ

- Advertisement -
- Advertisement -

ಆರ್ಥಿಕ ಕುಸಿತದ ಮಧ್ಯೆ ತಮಿಳುನಾಡಿನ ಐಟಿ ಸಂಸ್ಥೆಗಳಲ್ಲಿ ಉದ್ಯೋಗ ಕಡಿತವನ್ನು ತಪ್ಪಿಸಲು ರಾಜ್ಯ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಎಂ.ಕೆ ಸ್ಟಾಲಿನ್ ಒತ್ತಾಯಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಉದ್ಯೋಗ ಕಡಿತದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು ನಿರುದ್ಯೋಗ ಹೆಚ್ಚಳದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಹಲವಾರು ಐಟಿ ಕಂಪನಿಗಳು ನಷ್ಟ ಸರಿದೂಗಿಸಲು ಸಾವಿರಾರು ಕಾರ್ಮಿಕರನ್ನು ವಜಾಗೊಳಿಸಿದ್ದಾರೆ. ಕೇಂದ್ರ ನೀತಿಗಳ ಕಾರಣದಿಂದಾಗ ಆರ್ಥಿಕ  ಕುಸಿತದಿಂತ ಹೀಗಾಗುತ್ತಿದ್ದು, ತಮಿಳುನಾಡಿನ ಐಟಿ ಸಂಸ್ಥೆಗಳಲ್ಲಿ ಉದ್ಯೋಗ ಕಡಿತವನ್ನು ತಪ್ಪಿಸಲು ರಾಜ್ಯ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

“ಎಐಎಡಿಎಂಕೆ ನೇತೃತ್ವದ ರಾಜ್ಯ ಸರ್ಕಾರದ ಆಡಳಿತವು ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬಗ್ಗೆ ಯೋಚಿಸಿಲ್ಲ, ಇದು ರಾಜ್ಯಕ್ಕೆ ಶಾಪವಾಗಿದೆ. ತಮಿಳುನಾಡಿನ ಐಟಿ ಸಂಸ್ಥೆಗಳು ಈಗಾಗಲೇ ತನ್ನ ಅನೇಕ ಉದ್ಯೋಗಿಗಳನ್ನು ವಜಾ ಮಾಡಲು ಕೆಲವು ನಕಲಿ ಕಾರಣಗಳನ್ನು ನೀಡುತ್ತಿವೆ. ಈ ನಡುವೆ ಬಿಜೆಪಿಯ ಕಳಪೆ ಆರ್ಥಿಕ ಯೋಜನೆಗಳಿಂದಾಗಿ ದೇಶದಲ್ಲಿ 40,000 ಕ್ಕೂ ಹೆಚ್ಚು ಐಟಿ ಉದ್ಯೋಗಿಗಳು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ವರದಿಗಳು ಬಂದಿವೆ” ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ದರವು 4.5% ಕ್ಕೆ ಕುಸಿದಿದೆ. ಇದು ಜನವರಿ-ಮಾರ್ಚ್ 2013 ರ ನಂತರದ ಅತ್ಯಂತ ಕನಿಷ್ಠ ಮಟ್ಟವಾಗಿದೆ. ಇದು ಸತತ ಐದನೇ ತ್ರೈಮಾಸಿಕ ಕುಸಿತವನ್ನು ಸೂಚಿಸುತ್ತದೆ. ಈ ಬೆಳವಣಿಗೆಯ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ಸ್ಟಾಲಿನ್‌  “ಜಿಡಿಪಿ 4.5% ಕ್ಕೆ ಕುಸಿದಿದ್ದು ಕಳೆದ ಆರು ವರ್ಷಗಳಲ್ಲಿ ಕಡಿಮೆ ಆರ್ಥಿಕ ಬೆಳವಣಿಗೆಯ ದರವಾಗಿದೆ. ಇದು ಕೇವಲ ಆರ್ಥಿಕ ಬೆಳವಣಿಗೆ ನಿಧಾನಗತಿಯಲ್ಲ, ಇದು ದೊಡ್ಡ ಆರ್ಥಿಕ ಬಿಕ್ಕಟ್ಟಾಗಿದೆ. ಸರ್ಕಾರವು ದಿಕ್ಕು ತಪ್ಪಿಸುವುದನ್ನು ನಿಲ್ಲಿಸಬೇಕು ಮತ್ತು ಅಸಲಿ ಆರ್ಥಿಕ ಕಾರ್ಯತಂತ್ರವನ್ನು ತಿಳಿಸಲು ಪ್ರಾರಂಭಿಸಬೇಕು” ಎಂದಿದ್ದಾರೆ.

ಇದಲ್ಲದೆ, ನಿರುದ್ಯೋಗವನ್ನು ತಡೆಗಟ್ಟುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಆಸಕ್ತಿ ತೋರಿಸದಿರುವುದನ್ನು ಅವರು ಖಂಡಿಸಿದ್ದಾರೆ. “ಈ ದೇಶದ ಭವಿಷ್ಯವೆಂದು ಪರಿಗಣಿಸಲ್ಪಟ್ಟಿರುವ ಯುವಜನರ ಬಗ್ಗೆ ಯಾವುದೇ ಕಾಳಜಿ ಇಲ್ಲದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಆಟವನ್ನು ಆಡುತ್ತಿವೆ. ಆದ್ದರಿಂದ, ನಿರುದ್ಯೋಗ ಮತ್ತು ಐಟಿ ಉದ್ಯೋಗಿಗಳನ್ನು ದೊಡ್ಡ ಮಟ್ಟದಲ್ಲಿ ವಜಾ ಮಾಡುವ ಸಮಸ್ಯೆಯನ್ನು ಪರಿಹರಿಸಲು ತಕ್ಷಣವೇ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ರಾಜ್ಯದ ಎಐಎಡಿಎಂಕೆ ಮತ್ತು ಕೇಂದ್ರದ ಬಿಜೆಪಿಯನ್ನು ನಾನು ವಿನಂತಿಸುತ್ತೇನೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...