Homeಮುಖಪುಟಆರ್ಥಿಕ ಕುಸಿತ, ಐಟಿ ಉದ್ಯೋಗಗಳ ಕಡಿತದ ವಿರುದ್ಧ ಎಂ.ಕೆ ಸ್ಟಾಲಿನ್‌ ಕಿಡಿ

ಆರ್ಥಿಕ ಕುಸಿತ, ಐಟಿ ಉದ್ಯೋಗಗಳ ಕಡಿತದ ವಿರುದ್ಧ ಎಂ.ಕೆ ಸ್ಟಾಲಿನ್‌ ಕಿಡಿ

- Advertisement -
- Advertisement -

ಆರ್ಥಿಕ ಕುಸಿತದ ಮಧ್ಯೆ ತಮಿಳುನಾಡಿನ ಐಟಿ ಸಂಸ್ಥೆಗಳಲ್ಲಿ ಉದ್ಯೋಗ ಕಡಿತವನ್ನು ತಪ್ಪಿಸಲು ರಾಜ್ಯ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವಿರೋಧ ಪಕ್ಷದ ನಾಯಕ ಎಂ.ಕೆ ಸ್ಟಾಲಿನ್ ಒತ್ತಾಯಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗುತ್ತಿರುವ ಉದ್ಯೋಗ ಕಡಿತದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ.ಸ್ಟಾಲಿನ್ ಅವರು ನಿರುದ್ಯೋಗ ಹೆಚ್ಚಳದ ಕುರಿತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ವಾರಗಳಲ್ಲಿ ಹಲವಾರು ಐಟಿ ಕಂಪನಿಗಳು ನಷ್ಟ ಸರಿದೂಗಿಸಲು ಸಾವಿರಾರು ಕಾರ್ಮಿಕರನ್ನು ವಜಾಗೊಳಿಸಿದ್ದಾರೆ. ಕೇಂದ್ರ ನೀತಿಗಳ ಕಾರಣದಿಂದಾಗ ಆರ್ಥಿಕ  ಕುಸಿತದಿಂತ ಹೀಗಾಗುತ್ತಿದ್ದು, ತಮಿಳುನಾಡಿನ ಐಟಿ ಸಂಸ್ಥೆಗಳಲ್ಲಿ ಉದ್ಯೋಗ ಕಡಿತವನ್ನು ತಪ್ಪಿಸಲು ರಾಜ್ಯ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

“ಎಐಎಡಿಎಂಕೆ ನೇತೃತ್ವದ ರಾಜ್ಯ ಸರ್ಕಾರದ ಆಡಳಿತವು ಯುವಜನರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಬಗ್ಗೆ ಯೋಚಿಸಿಲ್ಲ, ಇದು ರಾಜ್ಯಕ್ಕೆ ಶಾಪವಾಗಿದೆ. ತಮಿಳುನಾಡಿನ ಐಟಿ ಸಂಸ್ಥೆಗಳು ಈಗಾಗಲೇ ತನ್ನ ಅನೇಕ ಉದ್ಯೋಗಿಗಳನ್ನು ವಜಾ ಮಾಡಲು ಕೆಲವು ನಕಲಿ ಕಾರಣಗಳನ್ನು ನೀಡುತ್ತಿವೆ. ಈ ನಡುವೆ ಬಿಜೆಪಿಯ ಕಳಪೆ ಆರ್ಥಿಕ ಯೋಜನೆಗಳಿಂದಾಗಿ ದೇಶದಲ್ಲಿ 40,000 ಕ್ಕೂ ಹೆಚ್ಚು ಐಟಿ ಉದ್ಯೋಗಿಗಳು ತಮ್ಮ ಉದ್ಯೋಗವನ್ನು ಕಳೆದುಕೊಂಡಿದ್ದಾರೆ ಎಂದು ವರದಿಗಳು ಬಂದಿವೆ” ಎಂದು ಅವರು ತಿಳಿಸಿದ್ದಾರೆ.

ಶುಕ್ರವಾರ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ಬೆಳವಣಿಗೆಯ ದರವು 4.5% ಕ್ಕೆ ಕುಸಿದಿದೆ. ಇದು ಜನವರಿ-ಮಾರ್ಚ್ 2013 ರ ನಂತರದ ಅತ್ಯಂತ ಕನಿಷ್ಠ ಮಟ್ಟವಾಗಿದೆ. ಇದು ಸತತ ಐದನೇ ತ್ರೈಮಾಸಿಕ ಕುಸಿತವನ್ನು ಸೂಚಿಸುತ್ತದೆ. ಈ ಬೆಳವಣಿಗೆಯ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿರುವ ಸ್ಟಾಲಿನ್‌  “ಜಿಡಿಪಿ 4.5% ಕ್ಕೆ ಕುಸಿದಿದ್ದು ಕಳೆದ ಆರು ವರ್ಷಗಳಲ್ಲಿ ಕಡಿಮೆ ಆರ್ಥಿಕ ಬೆಳವಣಿಗೆಯ ದರವಾಗಿದೆ. ಇದು ಕೇವಲ ಆರ್ಥಿಕ ಬೆಳವಣಿಗೆ ನಿಧಾನಗತಿಯಲ್ಲ, ಇದು ದೊಡ್ಡ ಆರ್ಥಿಕ ಬಿಕ್ಕಟ್ಟಾಗಿದೆ. ಸರ್ಕಾರವು ದಿಕ್ಕು ತಪ್ಪಿಸುವುದನ್ನು ನಿಲ್ಲಿಸಬೇಕು ಮತ್ತು ಅಸಲಿ ಆರ್ಥಿಕ ಕಾರ್ಯತಂತ್ರವನ್ನು ತಿಳಿಸಲು ಪ್ರಾರಂಭಿಸಬೇಕು” ಎಂದಿದ್ದಾರೆ.

ಇದಲ್ಲದೆ, ನಿರುದ್ಯೋಗವನ್ನು ತಡೆಗಟ್ಟುವಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಆಸಕ್ತಿ ತೋರಿಸದಿರುವುದನ್ನು ಅವರು ಖಂಡಿಸಿದ್ದಾರೆ. “ಈ ದೇಶದ ಭವಿಷ್ಯವೆಂದು ಪರಿಗಣಿಸಲ್ಪಟ್ಟಿರುವ ಯುವಜನರ ಬಗ್ಗೆ ಯಾವುದೇ ಕಾಳಜಿ ಇಲ್ಲದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಈ ಆಟವನ್ನು ಆಡುತ್ತಿವೆ. ಆದ್ದರಿಂದ, ನಿರುದ್ಯೋಗ ಮತ್ತು ಐಟಿ ಉದ್ಯೋಗಿಗಳನ್ನು ದೊಡ್ಡ ಮಟ್ಟದಲ್ಲಿ ವಜಾ ಮಾಡುವ ಸಮಸ್ಯೆಯನ್ನು ಪರಿಹರಿಸಲು ತಕ್ಷಣವೇ ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ರಾಜ್ಯದ ಎಐಎಡಿಎಂಕೆ ಮತ್ತು ಕೇಂದ್ರದ ಬಿಜೆಪಿಯನ್ನು ನಾನು ವಿನಂತಿಸುತ್ತೇನೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...