Homeಮುಖಪುಟತಮಿಳುನಾಡು ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ

ತಮಿಳುನಾಡು ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ

- Advertisement -
- Advertisement -

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಚೆನ್ನೈನ ರಾಜ ಭವನದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಇದರ ಜೊತೆಗೆ ಹಿರಿಯ ನಾಯಕರು ಹಾಗೂ ಒಂದು ಡಜನ್‌ಗೂ ಹೆಚ್ಚು ಮೊದಲ ಬಾರಿಗೆ ಸಚಿವರಾಗುತ್ತಿರುವ 34 ಸದಸ್ಯರ ಕ್ಯಾಬಿನೆಟ್‌ನ ಪಟ್ಟಿಯನ್ನು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅನುಮೋದಿಸಿದ್ದಾರೆ ಎಂದು ರಾಜ ಭವನ ಪ್ರಕಟಣೆ ತಿಳಿಸಿದೆ.

ಗೃಹ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳನ್ನು ಸ್ಟಾಲಿನ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಪಕ್ಷದ ಹಿರಿಯ ನಾಯಕ, ಪ್ರಧಾನ ಕಾರ್ಯದರ್ಶಿ, ದುರೈಮುರುಗನ್ ಅವರು ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಸಚಿವ ಸಂಪುಟವು ಇಬ್ಬರು ಮಹಿಳಾ ಸದಸ್ಯರನ್ನು ಹೊಂದಿದೆ. ಮೊದಲ ಸಚಿವ ಸಂಪುಟ ಪಟ್ಟಿಯಲ್ಲಿ ಸ್ಟಾಲಿನ್ ಅವರ ಮಗ ಉದಯನಿಧಿ ಅವರ ಹೆಸರು ಕಾಣಿಸಿಕೊಂಡಿಲ್ಲ.

ಸಂಪುಟದಲ್ಲಿ ಮೊದಲ ಬಾರಿಗೆ ಮಂತ್ರಿಯಾಗುತ್ತಿರುವ ಮಾಜಿ ಚೆನ್ನೈ ಮೇಯರ್ ಮಾ ಸುಬ್ರಮಣಿಯನ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾಗಿ ನಿಯೋಜನೆಗೊಂಡಿದ್ದಾರೆ. ಪಕ್ಷದ ಪ್ರಭಾವಿ ವ್ಯಕ್ತಿ ಪಿ.ಕೆ.ಸೇಕರ್‌‌ಬಾಬು ಅವರಿಗೆ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯನ್ನು ನೀಡಲಾಗಿದೆ.

ಮಾಜಿ ಬ್ಯಾಂಕರ್ ಪಳನಿವೇಲ್ ತ್ಯಾಗರಾಜನ್ ಅವರಿಗೆ ಹಣಕಾಸು ಇಲಾಖೆಯನ್ನು ಮತ್ತು ಶಾಲಾ ಶಿಕ್ಷಣ ಇಲಾಖೆಯನ್ನು ಅನ್ಬಿಲ್ ಮಹೇಶ್ ಪೊಯ್ಯಮೊಳಿಗೆ ಹಂಚಿಕೆ ಮಾಡಲಾಗಿದೆ. 2018 ರಲ್ಲಿ ಎಐಎಡಿಎಂಕೆ ಡಿಎಂಕೆ ಸೇರಿಕೊಂಡ ವಿ. ಸೆಂಥಿಲ್ ಬಾಲಾಜಿಗೆ ವಿದ್ಯುತ್ ಇಲಾಖೆ ಸಚಿವಾಲಯವನ್ನು ನೀಡಲಾಗಿದೆ.

ಕೆ.ಎನ್. ನೆಹರೂ ಅವರನ್ನು ಪುರಸಭೆ ಆಡಳಿತ ಸಚಿವರನ್ನಾಗಿ ಆಯ್ಕೆ ಮಾಡಲಾಗಿದ್ದರೆ, ಐ ಪೆರಿಯಸಾಮಿಯನ್ನು ಸಹಕಾರ ಸಚಿವರನ್ನಾಗಿ ನೇಮಿಸಲಾಗಿದೆ. ಕೆ.ಪೊನ್ಮುಡಿ ಅವರು 2006-11ರ ಅಧಿಕಾರಾವಧಿಯಲ್ಲಿದ್ದಾಗ ಇದ್ದ ಉನ್ನತ ಶಿಕ್ಷಣ ಇಲಾಖೆಯನ್ನು ಮರಳಿ ಪಡೆದಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಭರ್ಜರಿ ಮುನ್ನಡೆ ಸಾಧಿಸಿದ ಡಿಎಂಕೆ – ದಶಕದ ನಂತರ ಉದಯಿಸಿದ ಸೂರ್ಯ!

ಪಕ್ಷದ ಪ್ರಭಾವಿ ನಾಯಕ ಇ.ವಿ.ವೇಲು ಅವರನ್ನು ಲೋಕೋಪಯೋಗಿ ಸಚಿವರನ್ನಾಗಿ ಆಯ್ಕೆ ಮಾಡಲಾಗಿದ್ದರೆ, ಎಂ.ಆರ್.ಕೆ ಪನ್ನೀರ್‌ಸೆಲ್ವಂ ಅವರು ಕೃಷಿ ಮತ್ತು ಕಲ್ಯಾಣ ಸಚಿವರಾಗಲಿದ್ದಾರೆ. ಕೆಕೆಎಸ್‌ಎಸ್‌ಆರ್ ರಾಮಚಂದ್ರನ್ ಅವರು ಕಂದಾಯ ಸಚಿವರಾಗಿ, ತಂಗಮ್ ತೆನ್ನರಸು ಕೈಗಾರಿಕಾ ಸಚಿವರಾಗಿ ಮತ್ತು ಎಸ್. ರಘುಪತಿ ಅವರು ಕಾನೂನು ಸಚಿವಾಗಿ ಆಯ್ಕೆಯಾಗಿದ್ದಾರೆ.

ಕೆ.ಆರ್. ಪೆರಿಯಕಾರಪ್ಪನ್, ಟಿ.ಎಂ. ಅನ್ಬರಸನ್, ಎಂ.ಪಿ. ಸಮಿನಾಥನ್, ಈ ಎಲ್ಲಾ ಮಾಜಿ ಮಂತ್ರಿಗಳನ್ನು ಸಹ ಸಚಿವರನ್ನಾಗಿ ಹೆಸರಿಸಲಾಗಿದ್ದು, ಕ್ರಮವಾಗಿ ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಕೈಗಾರಿಕೆಗಳು ಮತ್ತು ಮಾಹಿತಿ ಮತ್ತು ಪ್ರಚಾರ ಇಲಾಖೆಗಳನ್ನು ನೀಡಲಾಗಿದೆ. ಏತನ್ಮಧ್ಯೆ, ಪಿ. ಗೀತಾ ಜೀವನ್ ಅವರನ್ನು ಸಮಾಜ ಕಲ್ಯಾಣ ಮತ್ತು ಮಹಿಳಾ ಸಬಲೀಕರಣ ಸಚಿವರಾಗಿ ಆಯ್ಕೆ ಮಾಡಲಾಗಿದೆ.

ಇನ್ನುಳಿದಂತೆ ಎಸ್. ಸೆಲ್ವರಾಜ್ (ಆದಿ ದ್ರಾವಿಡಾರ್ ಕಲ್ಯಾಣ), ಆರ್ ಸಕ್ಕರಪಾಣಿ (ಆಹಾರ), ಆರ್ ಗಾಂಧಿ (ಕೈಮಗ್ಗ ಮತ್ತು ಜವಳಿ), ಪಿ ಮೂರ್ತಿ (ವಾಣಿಜ್ಯ ತೆರಿಗೆ), ಎಸ್.ಎಸ್.ಶಿವಶಂಕರ್ (ಹಿಂದುಳಿದ ವರ್ಗಗಳ ಕಲ್ಯಾಣ), ಶಿವ ವಿ ಮಯನಾಥನ್ (ಪರಿಸರ), ಜಿಂಗಿ ಕೆ.ಎಸ್.ಮಸ್ತಾನ್ (ಅಲ್ಪಸಂಖ್ಯಾತರ ಕಲ್ಯಾಣ) ಮತ್ತು ಎಸ್.ಎಂ.ನಾಸರ್ (ಡೈರಿ) ಇಲಾಖೆಯ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...