Homeಮುಖಪುಟತಮಿಳುನಾಡು ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ

ತಮಿಳುನಾಡು ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ

- Advertisement -
- Advertisement -

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಚೆನ್ನೈನ ರಾಜ ಭವನದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಇದರ ಜೊತೆಗೆ ಹಿರಿಯ ನಾಯಕರು ಹಾಗೂ ಒಂದು ಡಜನ್‌ಗೂ ಹೆಚ್ಚು ಮೊದಲ ಬಾರಿಗೆ ಸಚಿವರಾಗುತ್ತಿರುವ 34 ಸದಸ್ಯರ ಕ್ಯಾಬಿನೆಟ್‌ನ ಪಟ್ಟಿಯನ್ನು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅನುಮೋದಿಸಿದ್ದಾರೆ ಎಂದು ರಾಜ ಭವನ ಪ್ರಕಟಣೆ ತಿಳಿಸಿದೆ.

ಗೃಹ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳನ್ನು ಸ್ಟಾಲಿನ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಪಕ್ಷದ ಹಿರಿಯ ನಾಯಕ, ಪ್ರಧಾನ ಕಾರ್ಯದರ್ಶಿ, ದುರೈಮುರುಗನ್ ಅವರು ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಸಚಿವ ಸಂಪುಟವು ಇಬ್ಬರು ಮಹಿಳಾ ಸದಸ್ಯರನ್ನು ಹೊಂದಿದೆ. ಮೊದಲ ಸಚಿವ ಸಂಪುಟ ಪಟ್ಟಿಯಲ್ಲಿ ಸ್ಟಾಲಿನ್ ಅವರ ಮಗ ಉದಯನಿಧಿ ಅವರ ಹೆಸರು ಕಾಣಿಸಿಕೊಂಡಿಲ್ಲ.

ಸಂಪುಟದಲ್ಲಿ ಮೊದಲ ಬಾರಿಗೆ ಮಂತ್ರಿಯಾಗುತ್ತಿರುವ ಮಾಜಿ ಚೆನ್ನೈ ಮೇಯರ್ ಮಾ ಸುಬ್ರಮಣಿಯನ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾಗಿ ನಿಯೋಜನೆಗೊಂಡಿದ್ದಾರೆ. ಪಕ್ಷದ ಪ್ರಭಾವಿ ವ್ಯಕ್ತಿ ಪಿ.ಕೆ.ಸೇಕರ್‌‌ಬಾಬು ಅವರಿಗೆ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯನ್ನು ನೀಡಲಾಗಿದೆ.

ಮಾಜಿ ಬ್ಯಾಂಕರ್ ಪಳನಿವೇಲ್ ತ್ಯಾಗರಾಜನ್ ಅವರಿಗೆ ಹಣಕಾಸು ಇಲಾಖೆಯನ್ನು ಮತ್ತು ಶಾಲಾ ಶಿಕ್ಷಣ ಇಲಾಖೆಯನ್ನು ಅನ್ಬಿಲ್ ಮಹೇಶ್ ಪೊಯ್ಯಮೊಳಿಗೆ ಹಂಚಿಕೆ ಮಾಡಲಾಗಿದೆ. 2018 ರಲ್ಲಿ ಎಐಎಡಿಎಂಕೆ ಡಿಎಂಕೆ ಸೇರಿಕೊಂಡ ವಿ. ಸೆಂಥಿಲ್ ಬಾಲಾಜಿಗೆ ವಿದ್ಯುತ್ ಇಲಾಖೆ ಸಚಿವಾಲಯವನ್ನು ನೀಡಲಾಗಿದೆ.

ಕೆ.ಎನ್. ನೆಹರೂ ಅವರನ್ನು ಪುರಸಭೆ ಆಡಳಿತ ಸಚಿವರನ್ನಾಗಿ ಆಯ್ಕೆ ಮಾಡಲಾಗಿದ್ದರೆ, ಐ ಪೆರಿಯಸಾಮಿಯನ್ನು ಸಹಕಾರ ಸಚಿವರನ್ನಾಗಿ ನೇಮಿಸಲಾಗಿದೆ. ಕೆ.ಪೊನ್ಮುಡಿ ಅವರು 2006-11ರ ಅಧಿಕಾರಾವಧಿಯಲ್ಲಿದ್ದಾಗ ಇದ್ದ ಉನ್ನತ ಶಿಕ್ಷಣ ಇಲಾಖೆಯನ್ನು ಮರಳಿ ಪಡೆದಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಭರ್ಜರಿ ಮುನ್ನಡೆ ಸಾಧಿಸಿದ ಡಿಎಂಕೆ – ದಶಕದ ನಂತರ ಉದಯಿಸಿದ ಸೂರ್ಯ!

ಪಕ್ಷದ ಪ್ರಭಾವಿ ನಾಯಕ ಇ.ವಿ.ವೇಲು ಅವರನ್ನು ಲೋಕೋಪಯೋಗಿ ಸಚಿವರನ್ನಾಗಿ ಆಯ್ಕೆ ಮಾಡಲಾಗಿದ್ದರೆ, ಎಂ.ಆರ್.ಕೆ ಪನ್ನೀರ್‌ಸೆಲ್ವಂ ಅವರು ಕೃಷಿ ಮತ್ತು ಕಲ್ಯಾಣ ಸಚಿವರಾಗಲಿದ್ದಾರೆ. ಕೆಕೆಎಸ್‌ಎಸ್‌ಆರ್ ರಾಮಚಂದ್ರನ್ ಅವರು ಕಂದಾಯ ಸಚಿವರಾಗಿ, ತಂಗಮ್ ತೆನ್ನರಸು ಕೈಗಾರಿಕಾ ಸಚಿವರಾಗಿ ಮತ್ತು ಎಸ್. ರಘುಪತಿ ಅವರು ಕಾನೂನು ಸಚಿವಾಗಿ ಆಯ್ಕೆಯಾಗಿದ್ದಾರೆ.

ಕೆ.ಆರ್. ಪೆರಿಯಕಾರಪ್ಪನ್, ಟಿ.ಎಂ. ಅನ್ಬರಸನ್, ಎಂ.ಪಿ. ಸಮಿನಾಥನ್, ಈ ಎಲ್ಲಾ ಮಾಜಿ ಮಂತ್ರಿಗಳನ್ನು ಸಹ ಸಚಿವರನ್ನಾಗಿ ಹೆಸರಿಸಲಾಗಿದ್ದು, ಕ್ರಮವಾಗಿ ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಕೈಗಾರಿಕೆಗಳು ಮತ್ತು ಮಾಹಿತಿ ಮತ್ತು ಪ್ರಚಾರ ಇಲಾಖೆಗಳನ್ನು ನೀಡಲಾಗಿದೆ. ಏತನ್ಮಧ್ಯೆ, ಪಿ. ಗೀತಾ ಜೀವನ್ ಅವರನ್ನು ಸಮಾಜ ಕಲ್ಯಾಣ ಮತ್ತು ಮಹಿಳಾ ಸಬಲೀಕರಣ ಸಚಿವರಾಗಿ ಆಯ್ಕೆ ಮಾಡಲಾಗಿದೆ.

ಇನ್ನುಳಿದಂತೆ ಎಸ್. ಸೆಲ್ವರಾಜ್ (ಆದಿ ದ್ರಾವಿಡಾರ್ ಕಲ್ಯಾಣ), ಆರ್ ಸಕ್ಕರಪಾಣಿ (ಆಹಾರ), ಆರ್ ಗಾಂಧಿ (ಕೈಮಗ್ಗ ಮತ್ತು ಜವಳಿ), ಪಿ ಮೂರ್ತಿ (ವಾಣಿಜ್ಯ ತೆರಿಗೆ), ಎಸ್.ಎಸ್.ಶಿವಶಂಕರ್ (ಹಿಂದುಳಿದ ವರ್ಗಗಳ ಕಲ್ಯಾಣ), ಶಿವ ವಿ ಮಯನಾಥನ್ (ಪರಿಸರ), ಜಿಂಗಿ ಕೆ.ಎಸ್.ಮಸ್ತಾನ್ (ಅಲ್ಪಸಂಖ್ಯಾತರ ಕಲ್ಯಾಣ) ಮತ್ತು ಎಸ್.ಎಂ.ನಾಸರ್ (ಡೈರಿ) ಇಲಾಖೆಯ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...