Homeಮುಖಪುಟತಮಿಳುನಾಡು ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ

ತಮಿಳುನಾಡು ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ

- Advertisement -
- Advertisement -

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಚೆನ್ನೈನ ರಾಜ ಭವನದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಇದರ ಜೊತೆಗೆ ಹಿರಿಯ ನಾಯಕರು ಹಾಗೂ ಒಂದು ಡಜನ್‌ಗೂ ಹೆಚ್ಚು ಮೊದಲ ಬಾರಿಗೆ ಸಚಿವರಾಗುತ್ತಿರುವ 34 ಸದಸ್ಯರ ಕ್ಯಾಬಿನೆಟ್‌ನ ಪಟ್ಟಿಯನ್ನು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅನುಮೋದಿಸಿದ್ದಾರೆ ಎಂದು ರಾಜ ಭವನ ಪ್ರಕಟಣೆ ತಿಳಿಸಿದೆ.

ಗೃಹ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳನ್ನು ಸ್ಟಾಲಿನ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಪಕ್ಷದ ಹಿರಿಯ ನಾಯಕ, ಪ್ರಧಾನ ಕಾರ್ಯದರ್ಶಿ, ದುರೈಮುರುಗನ್ ಅವರು ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಸಚಿವ ಸಂಪುಟವು ಇಬ್ಬರು ಮಹಿಳಾ ಸದಸ್ಯರನ್ನು ಹೊಂದಿದೆ. ಮೊದಲ ಸಚಿವ ಸಂಪುಟ ಪಟ್ಟಿಯಲ್ಲಿ ಸ್ಟಾಲಿನ್ ಅವರ ಮಗ ಉದಯನಿಧಿ ಅವರ ಹೆಸರು ಕಾಣಿಸಿಕೊಂಡಿಲ್ಲ.

ಸಂಪುಟದಲ್ಲಿ ಮೊದಲ ಬಾರಿಗೆ ಮಂತ್ರಿಯಾಗುತ್ತಿರುವ ಮಾಜಿ ಚೆನ್ನೈ ಮೇಯರ್ ಮಾ ಸುಬ್ರಮಣಿಯನ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾಗಿ ನಿಯೋಜನೆಗೊಂಡಿದ್ದಾರೆ. ಪಕ್ಷದ ಪ್ರಭಾವಿ ವ್ಯಕ್ತಿ ಪಿ.ಕೆ.ಸೇಕರ್‌‌ಬಾಬು ಅವರಿಗೆ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯನ್ನು ನೀಡಲಾಗಿದೆ.

ಮಾಜಿ ಬ್ಯಾಂಕರ್ ಪಳನಿವೇಲ್ ತ್ಯಾಗರಾಜನ್ ಅವರಿಗೆ ಹಣಕಾಸು ಇಲಾಖೆಯನ್ನು ಮತ್ತು ಶಾಲಾ ಶಿಕ್ಷಣ ಇಲಾಖೆಯನ್ನು ಅನ್ಬಿಲ್ ಮಹೇಶ್ ಪೊಯ್ಯಮೊಳಿಗೆ ಹಂಚಿಕೆ ಮಾಡಲಾಗಿದೆ. 2018 ರಲ್ಲಿ ಎಐಎಡಿಎಂಕೆ ಡಿಎಂಕೆ ಸೇರಿಕೊಂಡ ವಿ. ಸೆಂಥಿಲ್ ಬಾಲಾಜಿಗೆ ವಿದ್ಯುತ್ ಇಲಾಖೆ ಸಚಿವಾಲಯವನ್ನು ನೀಡಲಾಗಿದೆ.

ಕೆ.ಎನ್. ನೆಹರೂ ಅವರನ್ನು ಪುರಸಭೆ ಆಡಳಿತ ಸಚಿವರನ್ನಾಗಿ ಆಯ್ಕೆ ಮಾಡಲಾಗಿದ್ದರೆ, ಐ ಪೆರಿಯಸಾಮಿಯನ್ನು ಸಹಕಾರ ಸಚಿವರನ್ನಾಗಿ ನೇಮಿಸಲಾಗಿದೆ. ಕೆ.ಪೊನ್ಮುಡಿ ಅವರು 2006-11ರ ಅಧಿಕಾರಾವಧಿಯಲ್ಲಿದ್ದಾಗ ಇದ್ದ ಉನ್ನತ ಶಿಕ್ಷಣ ಇಲಾಖೆಯನ್ನು ಮರಳಿ ಪಡೆದಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಭರ್ಜರಿ ಮುನ್ನಡೆ ಸಾಧಿಸಿದ ಡಿಎಂಕೆ – ದಶಕದ ನಂತರ ಉದಯಿಸಿದ ಸೂರ್ಯ!

ಪಕ್ಷದ ಪ್ರಭಾವಿ ನಾಯಕ ಇ.ವಿ.ವೇಲು ಅವರನ್ನು ಲೋಕೋಪಯೋಗಿ ಸಚಿವರನ್ನಾಗಿ ಆಯ್ಕೆ ಮಾಡಲಾಗಿದ್ದರೆ, ಎಂ.ಆರ್.ಕೆ ಪನ್ನೀರ್‌ಸೆಲ್ವಂ ಅವರು ಕೃಷಿ ಮತ್ತು ಕಲ್ಯಾಣ ಸಚಿವರಾಗಲಿದ್ದಾರೆ. ಕೆಕೆಎಸ್‌ಎಸ್‌ಆರ್ ರಾಮಚಂದ್ರನ್ ಅವರು ಕಂದಾಯ ಸಚಿವರಾಗಿ, ತಂಗಮ್ ತೆನ್ನರಸು ಕೈಗಾರಿಕಾ ಸಚಿವರಾಗಿ ಮತ್ತು ಎಸ್. ರಘುಪತಿ ಅವರು ಕಾನೂನು ಸಚಿವಾಗಿ ಆಯ್ಕೆಯಾಗಿದ್ದಾರೆ.

ಕೆ.ಆರ್. ಪೆರಿಯಕಾರಪ್ಪನ್, ಟಿ.ಎಂ. ಅನ್ಬರಸನ್, ಎಂ.ಪಿ. ಸಮಿನಾಥನ್, ಈ ಎಲ್ಲಾ ಮಾಜಿ ಮಂತ್ರಿಗಳನ್ನು ಸಹ ಸಚಿವರನ್ನಾಗಿ ಹೆಸರಿಸಲಾಗಿದ್ದು, ಕ್ರಮವಾಗಿ ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಕೈಗಾರಿಕೆಗಳು ಮತ್ತು ಮಾಹಿತಿ ಮತ್ತು ಪ್ರಚಾರ ಇಲಾಖೆಗಳನ್ನು ನೀಡಲಾಗಿದೆ. ಏತನ್ಮಧ್ಯೆ, ಪಿ. ಗೀತಾ ಜೀವನ್ ಅವರನ್ನು ಸಮಾಜ ಕಲ್ಯಾಣ ಮತ್ತು ಮಹಿಳಾ ಸಬಲೀಕರಣ ಸಚಿವರಾಗಿ ಆಯ್ಕೆ ಮಾಡಲಾಗಿದೆ.

ಇನ್ನುಳಿದಂತೆ ಎಸ್. ಸೆಲ್ವರಾಜ್ (ಆದಿ ದ್ರಾವಿಡಾರ್ ಕಲ್ಯಾಣ), ಆರ್ ಸಕ್ಕರಪಾಣಿ (ಆಹಾರ), ಆರ್ ಗಾಂಧಿ (ಕೈಮಗ್ಗ ಮತ್ತು ಜವಳಿ), ಪಿ ಮೂರ್ತಿ (ವಾಣಿಜ್ಯ ತೆರಿಗೆ), ಎಸ್.ಎಸ್.ಶಿವಶಂಕರ್ (ಹಿಂದುಳಿದ ವರ್ಗಗಳ ಕಲ್ಯಾಣ), ಶಿವ ವಿ ಮಯನಾಥನ್ (ಪರಿಸರ), ಜಿಂಗಿ ಕೆ.ಎಸ್.ಮಸ್ತಾನ್ (ಅಲ್ಪಸಂಖ್ಯಾತರ ಕಲ್ಯಾಣ) ಮತ್ತು ಎಸ್.ಎಂ.ನಾಸರ್ (ಡೈರಿ) ಇಲಾಖೆಯ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...