Homeಮುಖಪುಟತಮಿಳುನಾಡು ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ

ತಮಿಳುನಾಡು ಮುಖ್ಯಮಂತ್ರಿಯಾಗಿ ಎಂ.ಕೆ. ಸ್ಟಾಲಿನ್ ಪ್ರಮಾಣ ವಚನ

- Advertisement -
- Advertisement -

ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಚೆನ್ನೈನ ರಾಜ ಭವನದಲ್ಲಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದರು. ಅವರು ತಮಿಳು ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ಇದರ ಜೊತೆಗೆ ಹಿರಿಯ ನಾಯಕರು ಹಾಗೂ ಒಂದು ಡಜನ್‌ಗೂ ಹೆಚ್ಚು ಮೊದಲ ಬಾರಿಗೆ ಸಚಿವರಾಗುತ್ತಿರುವ 34 ಸದಸ್ಯರ ಕ್ಯಾಬಿನೆಟ್‌ನ ಪಟ್ಟಿಯನ್ನು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅನುಮೋದಿಸಿದ್ದಾರೆ ಎಂದು ರಾಜ ಭವನ ಪ್ರಕಟಣೆ ತಿಳಿಸಿದೆ.

ಗೃಹ ಇಲಾಖೆ ಸೇರಿದಂತೆ ಕೆಲವು ಇಲಾಖೆಗಳನ್ನು ಸ್ಟಾಲಿನ ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಪಕ್ಷದ ಹಿರಿಯ ನಾಯಕ, ಪ್ರಧಾನ ಕಾರ್ಯದರ್ಶಿ, ದುರೈಮುರುಗನ್ ಅವರು ಜಲಸಂಪನ್ಮೂಲ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ‘ತಂಬಿ ತೇಜಸ್ವಿ ಸೂರ್ಯ, ಇದು ತಮಿಳುನಾಡು; ನಿಮ್ಮ ನಾಟಕ ಬೆಂಗಳೂರಲ್ಲೇ ಬಿಟ್ಟು ಬನ್ನಿ’

ಸಚಿವ ಸಂಪುಟವು ಇಬ್ಬರು ಮಹಿಳಾ ಸದಸ್ಯರನ್ನು ಹೊಂದಿದೆ. ಮೊದಲ ಸಚಿವ ಸಂಪುಟ ಪಟ್ಟಿಯಲ್ಲಿ ಸ್ಟಾಲಿನ್ ಅವರ ಮಗ ಉದಯನಿಧಿ ಅವರ ಹೆಸರು ಕಾಣಿಸಿಕೊಂಡಿಲ್ಲ.

ಸಂಪುಟದಲ್ಲಿ ಮೊದಲ ಬಾರಿಗೆ ಮಂತ್ರಿಯಾಗುತ್ತಿರುವ ಮಾಜಿ ಚೆನ್ನೈ ಮೇಯರ್ ಮಾ ಸುಬ್ರಮಣಿಯನ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾಗಿ ನಿಯೋಜನೆಗೊಂಡಿದ್ದಾರೆ. ಪಕ್ಷದ ಪ್ರಭಾವಿ ವ್ಯಕ್ತಿ ಪಿ.ಕೆ.ಸೇಕರ್‌‌ಬಾಬು ಅವರಿಗೆ ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆಯನ್ನು ನೀಡಲಾಗಿದೆ.

ಮಾಜಿ ಬ್ಯಾಂಕರ್ ಪಳನಿವೇಲ್ ತ್ಯಾಗರಾಜನ್ ಅವರಿಗೆ ಹಣಕಾಸು ಇಲಾಖೆಯನ್ನು ಮತ್ತು ಶಾಲಾ ಶಿಕ್ಷಣ ಇಲಾಖೆಯನ್ನು ಅನ್ಬಿಲ್ ಮಹೇಶ್ ಪೊಯ್ಯಮೊಳಿಗೆ ಹಂಚಿಕೆ ಮಾಡಲಾಗಿದೆ. 2018 ರಲ್ಲಿ ಎಐಎಡಿಎಂಕೆ ಡಿಎಂಕೆ ಸೇರಿಕೊಂಡ ವಿ. ಸೆಂಥಿಲ್ ಬಾಲಾಜಿಗೆ ವಿದ್ಯುತ್ ಇಲಾಖೆ ಸಚಿವಾಲಯವನ್ನು ನೀಡಲಾಗಿದೆ.

ಕೆ.ಎನ್. ನೆಹರೂ ಅವರನ್ನು ಪುರಸಭೆ ಆಡಳಿತ ಸಚಿವರನ್ನಾಗಿ ಆಯ್ಕೆ ಮಾಡಲಾಗಿದ್ದರೆ, ಐ ಪೆರಿಯಸಾಮಿಯನ್ನು ಸಹಕಾರ ಸಚಿವರನ್ನಾಗಿ ನೇಮಿಸಲಾಗಿದೆ. ಕೆ.ಪೊನ್ಮುಡಿ ಅವರು 2006-11ರ ಅಧಿಕಾರಾವಧಿಯಲ್ಲಿದ್ದಾಗ ಇದ್ದ ಉನ್ನತ ಶಿಕ್ಷಣ ಇಲಾಖೆಯನ್ನು ಮರಳಿ ಪಡೆದಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ಭರ್ಜರಿ ಮುನ್ನಡೆ ಸಾಧಿಸಿದ ಡಿಎಂಕೆ – ದಶಕದ ನಂತರ ಉದಯಿಸಿದ ಸೂರ್ಯ!

ಪಕ್ಷದ ಪ್ರಭಾವಿ ನಾಯಕ ಇ.ವಿ.ವೇಲು ಅವರನ್ನು ಲೋಕೋಪಯೋಗಿ ಸಚಿವರನ್ನಾಗಿ ಆಯ್ಕೆ ಮಾಡಲಾಗಿದ್ದರೆ, ಎಂ.ಆರ್.ಕೆ ಪನ್ನೀರ್‌ಸೆಲ್ವಂ ಅವರು ಕೃಷಿ ಮತ್ತು ಕಲ್ಯಾಣ ಸಚಿವರಾಗಲಿದ್ದಾರೆ. ಕೆಕೆಎಸ್‌ಎಸ್‌ಆರ್ ರಾಮಚಂದ್ರನ್ ಅವರು ಕಂದಾಯ ಸಚಿವರಾಗಿ, ತಂಗಮ್ ತೆನ್ನರಸು ಕೈಗಾರಿಕಾ ಸಚಿವರಾಗಿ ಮತ್ತು ಎಸ್. ರಘುಪತಿ ಅವರು ಕಾನೂನು ಸಚಿವಾಗಿ ಆಯ್ಕೆಯಾಗಿದ್ದಾರೆ.

ಕೆ.ಆರ್. ಪೆರಿಯಕಾರಪ್ಪನ್, ಟಿ.ಎಂ. ಅನ್ಬರಸನ್, ಎಂ.ಪಿ. ಸಮಿನಾಥನ್, ಈ ಎಲ್ಲಾ ಮಾಜಿ ಮಂತ್ರಿಗಳನ್ನು ಸಹ ಸಚಿವರನ್ನಾಗಿ ಹೆಸರಿಸಲಾಗಿದ್ದು, ಕ್ರಮವಾಗಿ ಗ್ರಾಮೀಣಾಭಿವೃದ್ಧಿ, ಗ್ರಾಮೀಣ ಕೈಗಾರಿಕೆಗಳು ಮತ್ತು ಮಾಹಿತಿ ಮತ್ತು ಪ್ರಚಾರ ಇಲಾಖೆಗಳನ್ನು ನೀಡಲಾಗಿದೆ. ಏತನ್ಮಧ್ಯೆ, ಪಿ. ಗೀತಾ ಜೀವನ್ ಅವರನ್ನು ಸಮಾಜ ಕಲ್ಯಾಣ ಮತ್ತು ಮಹಿಳಾ ಸಬಲೀಕರಣ ಸಚಿವರಾಗಿ ಆಯ್ಕೆ ಮಾಡಲಾಗಿದೆ.

ಇನ್ನುಳಿದಂತೆ ಎಸ್. ಸೆಲ್ವರಾಜ್ (ಆದಿ ದ್ರಾವಿಡಾರ್ ಕಲ್ಯಾಣ), ಆರ್ ಸಕ್ಕರಪಾಣಿ (ಆಹಾರ), ಆರ್ ಗಾಂಧಿ (ಕೈಮಗ್ಗ ಮತ್ತು ಜವಳಿ), ಪಿ ಮೂರ್ತಿ (ವಾಣಿಜ್ಯ ತೆರಿಗೆ), ಎಸ್.ಎಸ್.ಶಿವಶಂಕರ್ (ಹಿಂದುಳಿದ ವರ್ಗಗಳ ಕಲ್ಯಾಣ), ಶಿವ ವಿ ಮಯನಾಥನ್ (ಪರಿಸರ), ಜಿಂಗಿ ಕೆ.ಎಸ್.ಮಸ್ತಾನ್ (ಅಲ್ಪಸಂಖ್ಯಾತರ ಕಲ್ಯಾಣ) ಮತ್ತು ಎಸ್.ಎಂ.ನಾಸರ್ (ಡೈರಿ) ಇಲಾಖೆಯ ಸಚಿವರಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...