Homeಮುಖಪುಟಕ್ಷೇತ್ರ ಪುನರ್‌ವಿಂಗಡನೆ: ಪ್ರಧಾನಿ ಮೋದಿ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲಿರುವ ಎಂ.ಕೆ ಸ್ಟಾಲಿನ್

ಕ್ಷೇತ್ರ ಪುನರ್‌ವಿಂಗಡನೆ: ಪ್ರಧಾನಿ ಮೋದಿ ಬಳಿಗೆ ಸರ್ವಪಕ್ಷ ನಿಯೋಗ ಕೊಂಡೊಯ್ಯಲಿರುವ ಎಂ.ಕೆ ಸ್ಟಾಲಿನ್

- Advertisement -
- Advertisement -

ಕ್ಷೇತ್ರ ಪುನರ್‌ವಿಂಗಡನೆಗೆ ಸಂಬಂಧಿಸಿದಂತೆ ರಚಿಸಲಾದ ಜಂಟಿ ಕ್ರಿಯಾ ಸಮಿತಿಯ (ಜೆಎಸಿ) ಮೊದಲ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಕುರಿತು ವಿವರಿಸಲು ಪ್ರಧಾನಿ ನರೇಂದ್ರ ಮೋದಿ ಬಳಿಗೆ ವಿವಿಧ ಪಕ್ಷಗಳ ಸಂಸದರ ನಿಯೋಗ ಕೊಂಡೊಯ್ಯಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮುಂದಾಗಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿಗೆ ಬರೆದಿರುವ ಪತ್ರದ ಪ್ರತಿಯನ್ನು ಹಂಚಿಕೊಂಡಿರುವ ಸ್ಟಾಲಿನ್, ಮಾರ್ಚ್ 22ರಂದು ನಡೆದ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳು ರಾಜಕೀಯ ಗಡಿಗಳನ್ನು ಮೀರಿ ಸಂಸದೀಯ ಪ್ರಜಾಪ್ರಭುತ್ವದಲ್ಲಿ ನ್ಯಾಯಯುತ ಪ್ರಾತಿನಿಧ್ಯವನ್ನು ಬಯಸುವ ವಿವಿಧ ಪ್ರದೇಶಗಳ ನಾಗರಿಕರ ಬೇಡಿಕೆಗಳನ್ನು ಸಾಕಾರಗೊಳಿಸುತ್ತವೆ ಎಂದು ಹೇಳಿದ್ದಾರೆ.

“ಈ ವಿಷಯವು (ಕ್ಷೇತ್ರ ಪುನರ್‌ವಿಂಗಡನೆ) ನಮ್ಮ ರಾಜ್ಯಗಳು ಮತ್ತು ನಾಗರಿಕರಿಗೆ ಅತ್ಯಂತ ಮಹತ್ವದ್ದಾಗಿರುವುದರಿಂದ, ಜಂಟಿ ಕ್ರಿಯಾ ಸಮಿತಿಯ ಪರವಾಗಿ ಜ್ಞಾಪಕ ಪತ್ರವನ್ನು ಔಪಚಾರಿಕವಾಗಿ ಸಲ್ಲಿಸಲು ನಿಮ್ಮೊಂದಿಗೆ ಸಭೆ ನಡೆಸಲು ಸಮಯ ನೀಡುವಂತೆ ವಿನಂತಿಸುತ್ತೇನೆ” ಎಂದು ಸ್ಟಾಲಿನ್ ಪತ್ರದಲ್ಲಿ ತಿಳಿಸಿದ್ದಾರೆ.

ಕ್ಷೇತ್ರ ಪುನರ್‌ವಿಂಗಡನೆಗೆ ಸಂಬಂಧಿಸಿದಂತೆ ರಚಿಸಿರುವ ಜಂಟಿ ಕ್ರಿಯಾ ಸಮಿತಿಯ ಮೊದಲ ಸಭೆಯಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇತರ ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಸಭೆಯಲ್ಲಿ ಕ್ಷೇತ್ರ ಪುನರ್‌ವಿಂಗಡನೆಯನ್ನು ಮುಂದಿನ 25 ವರ್ಷಗಳ ಅವಧಿಗೆ ಮುಂದೂಡುವಂತೆ ಕೇಂದ್ರ ಸರ್ಕಾರವನ್ನು ಒಕ್ಕೊರೊಳಿನಿಂದ ಒತ್ತಾಯಿಸಲಾಗಿದೆ.

ಪ್ರಜಾಪ್ರಭುತ್ವದ ವಿಷಯ ಮತ್ತು ಸ್ವರೂಪವನ್ನು ಸುಧಾರಿಸುವ ಕ್ಷೇತ್ರ ಪುನರ್‌ವಿಂಗಡನೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಬೇಕು ಮತ್ತು ರಾಜಕೀಯ ಪಕ್ಷಗಳು, ರಾಜ್ಯ ಸರ್ಕಾರಗಳು ಮತ್ತು ಇತರ ಪಕ್ಷಕಾರರಿಗೆ ಚರ್ಚಿಸಲು ಮತ್ತು ಅಭಿಪ್ರಾಯ ವ್ಯಕ್ತಪಡಿಸಲು ಮುಕ್ತ ಅವಕಾಶ ನೀಡಬೇಕು ಎಂದು ಸಭೆಯಲ್ಲಿ ಆಗ್ರಹಿಸಲಾಗಿದೆ.

ಜನಸಂಖ್ಯಾ ನಿಯಂತ್ರಣ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದ ರಾಜ್ಯಗಳನ್ನು ರಕ್ಷಿಸಲು ಮತ್ತು ಪ್ರೋತ್ಸಾಹಿಸಲು ಕ್ಷೇತ್ರ ಪುನರ್‌ವಿಂಗಡನೆಗೆ ಸಂಬಂಧಿಸಿದ 42, 84 ಮತ್ತು 87 ನೇ ಸಾಂವಿಧಾನಿಕ ತಿದ್ದುಪಡಿಗಳನ್ನು ಜಾರಿಗೆ ತರಲಾಗಿದೆ. ರಾಷ್ಟ್ರೀಯ ಜನಸಂಖ್ಯಾ ಸ್ಥಿರೀಕರಣದ ಗುರಿಯನ್ನು ಇನ್ನೂ ಸಾಧಿಸಲಾಗಿಲ್ಲ. ಹಾಗಾಗಿ, 1971ರ ಜನಗಣತಿಯ ಜನಸಂಖ್ಯೆಯ ಆಧಾರದ ಮೇಲೆ ಸಂಸದೀಯ ಕ್ಷೇತ್ರಗಳ ಮೇಲಿನ ಪುನರ್‌ವಿಂಗಡನೆಯನ್ನು 25 ವರ್ಷಗಳವರೆಗೆ ವಿಸ್ತರಿಸಬೇಕು” ಸಭೆಯಲ್ಲಿ ಒತ್ತಾಯಿಸಲಾಗಿದೆ.

ತಮಿಳುನಾಡು| ಕಚ್ಚತೀವು ಮರಳಿ ಪಡೆಯುವ ನಿರ್ಣಯ ಮಂಡಿಸಲು ಮುಂದಾದ ಎಂ.ಕೆ. ಸ್ಟಾಲಿನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...