Homeಮುಖಪುಟ'ಸ್ನೇಹಿತರ' ಮೇಲಿನ ದಾಳಿಯು ಮೋದಿಯ ಕುರ್ಚಿ ಅಲುಗಾಡುತ್ತಿರುವುದನ್ನು ತೋರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

‘ಸ್ನೇಹಿತರ’ ಮೇಲಿನ ದಾಳಿಯು ಮೋದಿಯ ಕುರ್ಚಿ ಅಲುಗಾಡುತ್ತಿರುವುದನ್ನು ತೋರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ತೆಲಂಗಾಣದಲ್ಲಿ ಚುನಾವಣಾ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಚುನಾವಣೆ ಘೋಷಣೆಯಾದ ಬಳಿಕ ರಾಹುಲ್ ಗಾಂಧಿಯೇಕೆ ಅದಾನಿ–ಅಂಬಾನಿ ಬಗ್ಗೆ ಮಾತನಾಡುತ್ತಿಲ್ಲ. ಏನಾದರೂ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರಾ? ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸ್ನೇಹಿತರ ಮೇಲಿನ ದಾಳಿಯು ಕಾಲ ಬದಲಾಗುತ್ತಿದೆ ಮತ್ತು ನರೇಂದ್ರ ಮೋದಿ ಅವರ ಕುರ್ಚಿ ಅಲುಗಾಡುತ್ತಿದೆ ಎಂಬುವುದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಕಾಲ ಬದಲಾಗುತ್ತಿದೆ, ಸ್ನೇಹಿತ ಇನ್ನು ಮುಂದೆ ಸ್ನೇಹಿತನಲ್ಲ, ಮೂರನೇ ಹಂತದ ಚುನಾವಣೆ ಮುಗಿದ ಬಳಿಕ ಇಂದು ಪ್ರಧಾನಿ ತಮ್ಮ ಸ್ನೇಹಿತರ ಮೇಲೆಯೇ ದಾಳಿ ನಡೆಸುತ್ತಿದ್ದಾರೆ. ಇದು ಮೋದಿಯವರ ಕುರ್ಚಿ ಅಲುಗಾಡುತ್ತಿರುವುದನ್ನು ತೋರಿಸುತ್ತದೆ. ಇದು ಫಲಿತಾಂಶಗಳ ನಿಜವಾದ ಪ್ರವೃತ್ತಿಯಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಆರೋಪಿಸಿದಂತೆ ಕೈಗಾರಿಕೋದ್ಯಮಿಗಳು ಕಾಂಗ್ರೆಸ್‌ಗೆ  ಕಪ್ಪುಹಣ ನೀಡಿದ್ದರೆ ಜಾರಿ ನಿರ್ದೇಶನಾಲಯ  ಮತ್ತು ಇತರ ಏಜೆನ್ಸಿಗಳು ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ತೆಲಂಗಾಣದ ವೇಮುಲವಾಡದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್‌ ಪಕ್ಷವು ಏಕಾಏಕಿ ಅಂಬಾನಿ–ಅದಾನಿಯ ವಿಷಯದ ಬಗ್ಗೆ ಟೀಕಿಸುವುದನ್ನು ನಿಲ್ಲಿಸಿದೆ. ತೆಲಂಗಾಣದ ಮಣ್ಣಿನಲ್ಲಿ ನಿಂತು ಕೇಳುತ್ತೇನೆ, ಕಾಂಗ್ರೆಸ್‌ಗೆ ಎಷ್ಟು ಹಣ ತಲುಪಿದೆ? ಯಾವ ಒಪ್ಪಂದ ಮಾಡಿಕೊಂಡಿದೆ? ಅಂಬಾನಿ–ಅದಾನಿ ಬಗ್ಗೆ ಟೀಕಿಸುವುದನ್ನು ರಾತ್ರಿ ಕಳೆಯುವುದರೊಳಗಾಗಿ ನಿಲ್ಲಿಸಿದ್ದು ಏಕೆ ಎನ್ನುವುದನ್ನು ಜನರಿಗೆ ಹೇಳಬೇಕು ಎಂದು ಹೇಳಿದ್ದರು.

ಮಂಗಳವಾರ ಜಾರ್ಖಂಡ್‌ನಲ್ಲಿ ನಡೆದ ರ್ಯಾಲಿಯಲ್ಲಿ ಅದಾನಿಯನ್ನು ಉಲ್ಲೇಖಿಸಿದ ರಾಹುಲ್, “ಮೋದಿ-ಅದಾನಿ ಸರ್ಕಾರ” ಬೇಕಾ ಅಥವಾ ದಲಿತರು, ಹಿಂದುಳಿದವರು, ರೈತರು, ಆದಿವಾಸಿಗಳು ಮತ್ತು ಬಡವರ ಸರ್ಕಾರ ಬೇಕಾ ಎಂಬುದನ್ನು ಜನರು ನಿರ್ಧರಿಸಬೇಕು ಎಂದು ಹೇಳಿದ್ದರು.

ರಾಯ್ ಬರೇಲಿಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡುತ್ತಾ, ಪ್ರಧಾನಿ ನನ್ನ ಸಹೋದರನನ್ನು ರಾಜಕುಮಾರ ಎಂದು ಕರೆಯುತ್ತಾರೆ ಆದರೆ ಅವರು ಚಕ್ರವರ್ತಿ, ಅವರು ಸ್ಪಷ್ಟೀಕರಣಗಳನ್ನು ನೀಡುತ್ತಿದ್ದಾರೆ ಏಕೆಂದರೆ ಅವರು ಇಡೀ ದೇಶದ ಆಸ್ತಿಯನ್ನು ಕೆಲವು ಕೋಟ್ಯಾಧಿಪತಿಗಳಿಗೆ ನೀಡಿದ್ದನ್ನು ಜನರು ನೋಡಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಅವರ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್ ಕಾರ್ಯದರ್ಶಿ (ಆಡಳಿತ) ಗುರ್ದೀಪ್ ಸಪ್ಪಲ್, ಮೋದಿ ಅವರ ‘ಟೈಟಾನಿಕ್’ ಮುಳುಗುತ್ತಿದೆಯೇ ಮತ್ತು ಅವರು ತಮ್ಮ “ಆತ್ಮ ಸ್ನೇಹಿತರನ್ನು” ಮುಳುಗುತ್ತಿರುವ ಹಡಗಿನಿಂದ ಏಕೆ ತಳ್ಳುತ್ತಿದ್ದಾರೆ ಎಂದು ಕೇಳಿದರು. ಮೋದಿ ಅವರು ಅದಾನಿ ಮತ್ತು ಅಂಬಾನಿಯ ಮನೆಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಯಾವಾಗ ಕಳುಹಿಸುತ್ತಿದ್ದಾರೆಂದು ದೇಶಕ್ಕೆ ತಿಳಿಸಬೇಕು.  ಅಧಿಕಾರಿಗಳು ಟೆಂಪೋಗಳಲ್ಲಿ ಹಣ ತುಂಬಿದ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ ಹೊರತು ಟೆಂಪೋವನ್ನು  ಸೀಜ್‌ ಮಾಡಿಲ್ಲ, ಈ ಅಧಿಕಾರಿಗಳನ್ನು ಯಾವಾಗ ವಜಾ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ದ್ವೇಷಪೂರಿತ ಭಾಷಣ: ಮೋದಿಯಿಂದ ವಿವರಣೆ ಕೇಳಲು ಚು.ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಕಾಂಗ್ರೆಸ್‌ ಹೈಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...