Homeಮುಖಪುಟ'ಸ್ನೇಹಿತರ' ಮೇಲಿನ ದಾಳಿಯು ಮೋದಿಯ ಕುರ್ಚಿ ಅಲುಗಾಡುತ್ತಿರುವುದನ್ನು ತೋರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

‘ಸ್ನೇಹಿತರ’ ಮೇಲಿನ ದಾಳಿಯು ಮೋದಿಯ ಕುರ್ಚಿ ಅಲುಗಾಡುತ್ತಿರುವುದನ್ನು ತೋರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ತೆಲಂಗಾಣದಲ್ಲಿ ಚುನಾವಣಾ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಚುನಾವಣೆ ಘೋಷಣೆಯಾದ ಬಳಿಕ ರಾಹುಲ್ ಗಾಂಧಿಯೇಕೆ ಅದಾನಿ–ಅಂಬಾನಿ ಬಗ್ಗೆ ಮಾತನಾಡುತ್ತಿಲ್ಲ. ಏನಾದರೂ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರಾ? ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸ್ನೇಹಿತರ ಮೇಲಿನ ದಾಳಿಯು ಕಾಲ ಬದಲಾಗುತ್ತಿದೆ ಮತ್ತು ನರೇಂದ್ರ ಮೋದಿ ಅವರ ಕುರ್ಚಿ ಅಲುಗಾಡುತ್ತಿದೆ ಎಂಬುವುದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಕಾಲ ಬದಲಾಗುತ್ತಿದೆ, ಸ್ನೇಹಿತ ಇನ್ನು ಮುಂದೆ ಸ್ನೇಹಿತನಲ್ಲ, ಮೂರನೇ ಹಂತದ ಚುನಾವಣೆ ಮುಗಿದ ಬಳಿಕ ಇಂದು ಪ್ರಧಾನಿ ತಮ್ಮ ಸ್ನೇಹಿತರ ಮೇಲೆಯೇ ದಾಳಿ ನಡೆಸುತ್ತಿದ್ದಾರೆ. ಇದು ಮೋದಿಯವರ ಕುರ್ಚಿ ಅಲುಗಾಡುತ್ತಿರುವುದನ್ನು ತೋರಿಸುತ್ತದೆ. ಇದು ಫಲಿತಾಂಶಗಳ ನಿಜವಾದ ಪ್ರವೃತ್ತಿಯಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಆರೋಪಿಸಿದಂತೆ ಕೈಗಾರಿಕೋದ್ಯಮಿಗಳು ಕಾಂಗ್ರೆಸ್‌ಗೆ  ಕಪ್ಪುಹಣ ನೀಡಿದ್ದರೆ ಜಾರಿ ನಿರ್ದೇಶನಾಲಯ  ಮತ್ತು ಇತರ ಏಜೆನ್ಸಿಗಳು ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ತೆಲಂಗಾಣದ ವೇಮುಲವಾಡದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್‌ ಪಕ್ಷವು ಏಕಾಏಕಿ ಅಂಬಾನಿ–ಅದಾನಿಯ ವಿಷಯದ ಬಗ್ಗೆ ಟೀಕಿಸುವುದನ್ನು ನಿಲ್ಲಿಸಿದೆ. ತೆಲಂಗಾಣದ ಮಣ್ಣಿನಲ್ಲಿ ನಿಂತು ಕೇಳುತ್ತೇನೆ, ಕಾಂಗ್ರೆಸ್‌ಗೆ ಎಷ್ಟು ಹಣ ತಲುಪಿದೆ? ಯಾವ ಒಪ್ಪಂದ ಮಾಡಿಕೊಂಡಿದೆ? ಅಂಬಾನಿ–ಅದಾನಿ ಬಗ್ಗೆ ಟೀಕಿಸುವುದನ್ನು ರಾತ್ರಿ ಕಳೆಯುವುದರೊಳಗಾಗಿ ನಿಲ್ಲಿಸಿದ್ದು ಏಕೆ ಎನ್ನುವುದನ್ನು ಜನರಿಗೆ ಹೇಳಬೇಕು ಎಂದು ಹೇಳಿದ್ದರು.

ಮಂಗಳವಾರ ಜಾರ್ಖಂಡ್‌ನಲ್ಲಿ ನಡೆದ ರ್ಯಾಲಿಯಲ್ಲಿ ಅದಾನಿಯನ್ನು ಉಲ್ಲೇಖಿಸಿದ ರಾಹುಲ್, “ಮೋದಿ-ಅದಾನಿ ಸರ್ಕಾರ” ಬೇಕಾ ಅಥವಾ ದಲಿತರು, ಹಿಂದುಳಿದವರು, ರೈತರು, ಆದಿವಾಸಿಗಳು ಮತ್ತು ಬಡವರ ಸರ್ಕಾರ ಬೇಕಾ ಎಂಬುದನ್ನು ಜನರು ನಿರ್ಧರಿಸಬೇಕು ಎಂದು ಹೇಳಿದ್ದರು.

ರಾಯ್ ಬರೇಲಿಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡುತ್ತಾ, ಪ್ರಧಾನಿ ನನ್ನ ಸಹೋದರನನ್ನು ರಾಜಕುಮಾರ ಎಂದು ಕರೆಯುತ್ತಾರೆ ಆದರೆ ಅವರು ಚಕ್ರವರ್ತಿ, ಅವರು ಸ್ಪಷ್ಟೀಕರಣಗಳನ್ನು ನೀಡುತ್ತಿದ್ದಾರೆ ಏಕೆಂದರೆ ಅವರು ಇಡೀ ದೇಶದ ಆಸ್ತಿಯನ್ನು ಕೆಲವು ಕೋಟ್ಯಾಧಿಪತಿಗಳಿಗೆ ನೀಡಿದ್ದನ್ನು ಜನರು ನೋಡಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಅವರ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್ ಕಾರ್ಯದರ್ಶಿ (ಆಡಳಿತ) ಗುರ್ದೀಪ್ ಸಪ್ಪಲ್, ಮೋದಿ ಅವರ ‘ಟೈಟಾನಿಕ್’ ಮುಳುಗುತ್ತಿದೆಯೇ ಮತ್ತು ಅವರು ತಮ್ಮ “ಆತ್ಮ ಸ್ನೇಹಿತರನ್ನು” ಮುಳುಗುತ್ತಿರುವ ಹಡಗಿನಿಂದ ಏಕೆ ತಳ್ಳುತ್ತಿದ್ದಾರೆ ಎಂದು ಕೇಳಿದರು. ಮೋದಿ ಅವರು ಅದಾನಿ ಮತ್ತು ಅಂಬಾನಿಯ ಮನೆಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಯಾವಾಗ ಕಳುಹಿಸುತ್ತಿದ್ದಾರೆಂದು ದೇಶಕ್ಕೆ ತಿಳಿಸಬೇಕು.  ಅಧಿಕಾರಿಗಳು ಟೆಂಪೋಗಳಲ್ಲಿ ಹಣ ತುಂಬಿದ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ ಹೊರತು ಟೆಂಪೋವನ್ನು  ಸೀಜ್‌ ಮಾಡಿಲ್ಲ, ಈ ಅಧಿಕಾರಿಗಳನ್ನು ಯಾವಾಗ ವಜಾ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ದ್ವೇಷಪೂರಿತ ಭಾಷಣ: ಮೋದಿಯಿಂದ ವಿವರಣೆ ಕೇಳಲು ಚು.ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಕಾಂಗ್ರೆಸ್‌ ಹೈಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...