Homeಮುಖಪುಟ'ಸ್ನೇಹಿತರ' ಮೇಲಿನ ದಾಳಿಯು ಮೋದಿಯ ಕುರ್ಚಿ ಅಲುಗಾಡುತ್ತಿರುವುದನ್ನು ತೋರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

‘ಸ್ನೇಹಿತರ’ ಮೇಲಿನ ದಾಳಿಯು ಮೋದಿಯ ಕುರ್ಚಿ ಅಲುಗಾಡುತ್ತಿರುವುದನ್ನು ತೋರಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

- Advertisement -
- Advertisement -

ತೆಲಂಗಾಣದಲ್ಲಿ ಚುನಾವಣಾ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ಮೋದಿ, ಚುನಾವಣೆ ಘೋಷಣೆಯಾದ ಬಳಿಕ ರಾಹುಲ್ ಗಾಂಧಿಯೇಕೆ ಅದಾನಿ–ಅಂಬಾನಿ ಬಗ್ಗೆ ಮಾತನಾಡುತ್ತಿಲ್ಲ. ಏನಾದರೂ ರಹಸ್ಯ ಒಪ್ಪಂದ ಮಾಡಿಕೊಂಡಿದ್ದಾರಾ? ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮೋದಿ ಸ್ನೇಹಿತರ ಮೇಲಿನ ದಾಳಿಯು ಕಾಲ ಬದಲಾಗುತ್ತಿದೆ ಮತ್ತು ನರೇಂದ್ರ ಮೋದಿ ಅವರ ಕುರ್ಚಿ ಅಲುಗಾಡುತ್ತಿದೆ ಎಂಬುವುದನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಕಾಲ ಬದಲಾಗುತ್ತಿದೆ, ಸ್ನೇಹಿತ ಇನ್ನು ಮುಂದೆ ಸ್ನೇಹಿತನಲ್ಲ, ಮೂರನೇ ಹಂತದ ಚುನಾವಣೆ ಮುಗಿದ ಬಳಿಕ ಇಂದು ಪ್ರಧಾನಿ ತಮ್ಮ ಸ್ನೇಹಿತರ ಮೇಲೆಯೇ ದಾಳಿ ನಡೆಸುತ್ತಿದ್ದಾರೆ. ಇದು ಮೋದಿಯವರ ಕುರ್ಚಿ ಅಲುಗಾಡುತ್ತಿರುವುದನ್ನು ತೋರಿಸುತ್ತದೆ. ಇದು ಫಲಿತಾಂಶಗಳ ನಿಜವಾದ ಪ್ರವೃತ್ತಿಯಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಆರೋಪಿಸಿದಂತೆ ಕೈಗಾರಿಕೋದ್ಯಮಿಗಳು ಕಾಂಗ್ರೆಸ್‌ಗೆ  ಕಪ್ಪುಹಣ ನೀಡಿದ್ದರೆ ಜಾರಿ ನಿರ್ದೇಶನಾಲಯ  ಮತ್ತು ಇತರ ಏಜೆನ್ಸಿಗಳು ಅವರ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ತೆಲಂಗಾಣದ ವೇಮುಲವಾಡದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ಚುನಾವಣೆ ಘೋಷಣೆಯಾಗುತ್ತಿದ್ದಂತೆ ಕಾಂಗ್ರೆಸ್‌ ಪಕ್ಷವು ಏಕಾಏಕಿ ಅಂಬಾನಿ–ಅದಾನಿಯ ವಿಷಯದ ಬಗ್ಗೆ ಟೀಕಿಸುವುದನ್ನು ನಿಲ್ಲಿಸಿದೆ. ತೆಲಂಗಾಣದ ಮಣ್ಣಿನಲ್ಲಿ ನಿಂತು ಕೇಳುತ್ತೇನೆ, ಕಾಂಗ್ರೆಸ್‌ಗೆ ಎಷ್ಟು ಹಣ ತಲುಪಿದೆ? ಯಾವ ಒಪ್ಪಂದ ಮಾಡಿಕೊಂಡಿದೆ? ಅಂಬಾನಿ–ಅದಾನಿ ಬಗ್ಗೆ ಟೀಕಿಸುವುದನ್ನು ರಾತ್ರಿ ಕಳೆಯುವುದರೊಳಗಾಗಿ ನಿಲ್ಲಿಸಿದ್ದು ಏಕೆ ಎನ್ನುವುದನ್ನು ಜನರಿಗೆ ಹೇಳಬೇಕು ಎಂದು ಹೇಳಿದ್ದರು.

ಮಂಗಳವಾರ ಜಾರ್ಖಂಡ್‌ನಲ್ಲಿ ನಡೆದ ರ್ಯಾಲಿಯಲ್ಲಿ ಅದಾನಿಯನ್ನು ಉಲ್ಲೇಖಿಸಿದ ರಾಹುಲ್, “ಮೋದಿ-ಅದಾನಿ ಸರ್ಕಾರ” ಬೇಕಾ ಅಥವಾ ದಲಿತರು, ಹಿಂದುಳಿದವರು, ರೈತರು, ಆದಿವಾಸಿಗಳು ಮತ್ತು ಬಡವರ ಸರ್ಕಾರ ಬೇಕಾ ಎಂಬುದನ್ನು ಜನರು ನಿರ್ಧರಿಸಬೇಕು ಎಂದು ಹೇಳಿದ್ದರು.

ರಾಯ್ ಬರೇಲಿಯಲ್ಲಿ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡುತ್ತಾ, ಪ್ರಧಾನಿ ನನ್ನ ಸಹೋದರನನ್ನು ರಾಜಕುಮಾರ ಎಂದು ಕರೆಯುತ್ತಾರೆ ಆದರೆ ಅವರು ಚಕ್ರವರ್ತಿ, ಅವರು ಸ್ಪಷ್ಟೀಕರಣಗಳನ್ನು ನೀಡುತ್ತಿದ್ದಾರೆ ಏಕೆಂದರೆ ಅವರು ಇಡೀ ದೇಶದ ಆಸ್ತಿಯನ್ನು ಕೆಲವು ಕೋಟ್ಯಾಧಿಪತಿಗಳಿಗೆ ನೀಡಿದ್ದನ್ನು ಜನರು ನೋಡಿದ್ದಾರೆ ಎಂದು ಹೇಳಿದ್ದಾರೆ.

ರಾಹುಲ್ ಅವರ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್ ಕಾರ್ಯದರ್ಶಿ (ಆಡಳಿತ) ಗುರ್ದೀಪ್ ಸಪ್ಪಲ್, ಮೋದಿ ಅವರ ‘ಟೈಟಾನಿಕ್’ ಮುಳುಗುತ್ತಿದೆಯೇ ಮತ್ತು ಅವರು ತಮ್ಮ “ಆತ್ಮ ಸ್ನೇಹಿತರನ್ನು” ಮುಳುಗುತ್ತಿರುವ ಹಡಗಿನಿಂದ ಏಕೆ ತಳ್ಳುತ್ತಿದ್ದಾರೆ ಎಂದು ಕೇಳಿದರು. ಮೋದಿ ಅವರು ಅದಾನಿ ಮತ್ತು ಅಂಬಾನಿಯ ಮನೆಗಳಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳನ್ನು ಯಾವಾಗ ಕಳುಹಿಸುತ್ತಿದ್ದಾರೆಂದು ದೇಶಕ್ಕೆ ತಿಳಿಸಬೇಕು.  ಅಧಿಕಾರಿಗಳು ಟೆಂಪೋಗಳಲ್ಲಿ ಹಣ ತುಂಬಿದ ಬಗ್ಗೆ ಪ್ರಧಾನಿಗೆ ಮಾಹಿತಿ ನೀಡಿದ್ದಾರೆ ಹೊರತು ಟೆಂಪೋವನ್ನು  ಸೀಜ್‌ ಮಾಡಿಲ್ಲ, ಈ ಅಧಿಕಾರಿಗಳನ್ನು ಯಾವಾಗ ವಜಾ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ದ್ವೇಷಪೂರಿತ ಭಾಷಣ: ಮೋದಿಯಿಂದ ವಿವರಣೆ ಕೇಳಲು ಚು.ಆಯೋಗಕ್ಕೆ ನಿರ್ದೇಶಿಸುವಂತೆ ಕೋರಿ ಕಾಂಗ್ರೆಸ್‌ ಹೈಕೋರ್ಟ್‌ ಮೊರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...