Homeಮುಖಪುಟಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

ಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

- Advertisement -
- Advertisement -

ಮಾಧ್ಯಮಗಳು ತಮ್ಮ ದೇಶ ಮತ್ತು ಪ್ರದೇಶಗಳಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು G20 ದೇಶಗಳ ಸಂಪಾದಕರು ಮತ್ತು ಪತ್ರಕರ್ತರು ಒಟ್ಟುಗೂಡಿ ಸೆಪ್ಟೆಂಬರ್ 6ರಂದು ‘M20’ ಎಂಬ ಆನ್‌ಲೈನ್ ಮಾಧ್ಯಮ ಸ್ವಾತಂತ್ರ್ಯ ಶೃಂಗಸಭೆ ನಡೆಸಿದರು.

”M20 ಮಾಧ್ಯಮ ಸ್ವಾತಂತ್ರ್ಯ ಶೃಂಗಸಭೆ”ಯ ಉದ್ದೇಶವು ಮಾಧ್ಯಮಗಳ ಕಳವಳಗಳನ್ನು ಎತ್ತಿ ತೋರಿಸುವುದು ಮತ್ತು ಸೆಪ್ಟೆಂಬರ್ 9-10ರಂದು ನವದೆಹಲಿಯಲ್ಲಿ G20 ನಾಯಕರ ಸಭೆಗೆ ಪತ್ರಿಕಾ ಸ್ವಾತಂತ್ರ್ಯದ ಮುಖ್ಯವಾದ ಸಂದೇಶವನ್ನು ಕಳುಹಿಸುವುದಾಗಿದೆ.

ಭಾರತದ 11 ಸಂಪಾದಕರು ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರನ್ನು ಒಳಗೊಂಡ M20 ಸಂಘಟನಾ ಸಮಿತಿಯು ಈ ಶೃಂಗಸಭೆಯನ್ನು ಆಯೋಜಿಸಿದೆ.

M20 ಏಕೆ?

ದಿ ವೈರ್‌ನ ಸಂಸ್ಥಾಪಕ ಸಂಪಾದಕ ಮತ್ತು ಸಂಘಟನಾ ಸಮಿತಿಯ ಸಂಚಾಲಕ ಸಿದ್ಧಾರ್ಥ್ ವರದರಾಜನ್ ಅವರು ತಮ್ಮ ಆರಂಭಿಕ ಭಾಷಣದಲ್ಲಿ, ”ಆತಿಥೇಯ ಸರ್ಕಾರ ಮತ್ತು ಅನೇಕ ಜಿ20 ಸದಸ್ಯರಿಗೆ ಮಾಧ್ಯಮ ಸ್ವಾತಂತ್ರ್ಯವು ಮುಖ್ಯ ಎಂದೆನಿಸದ ಕಾರಣಕ್ಕೆ M20 ಶೃಂಗಸಭೆಯ ಅಗತ್ಯವು ಉದ್ಭವಿಸಿದೆ” ಎಂದು ಹೇಳಿದರು.

”G20 ದೇಶಗಳು ಮಾಧ್ಯಮಗಳ ಸ್ವಾತಂತ್ರದ ಬಗ್ಗೆ ಮಾತವಲ್ಲ ಅನೇಕ ಸಾಮಾನ್ಯ ಸಮಸ್ಯೆಗಳು ಮತ್ತು ಮಾಧ್ಯಮಗಳು ಎದುರಿಸುತ್ತಿರುವ ಬೆದರಿಕೆಗಳ ಬಗ್ಗೆ ಚರ್ಚೆ ಮಾಡಲು ಆಸಕ್ತಿ ತೋರುತ್ತಿಲ್ಲ” ಎಂದು ಅವರು ಹೇಳಿದರು.

”ನಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಾವುಗಳೇ ಮಾತನಾಡಬೇಕು ಆಗ ಅವರಿಗೆ ಸ್ಪಷ್ಟ ಸಂದೇಶವನ್ನು ಕಳುಹಿಸಬಹುದು. ಜಿ20 ನಾಯಕರು ಶೀಘ್ರದಲ್ಲೇ ತಮ್ಮ ಶೃಂಗಸಭೆಗೆ ಸೇರುತ್ತಾರೆ, ಅವರು ತಮ್ಮ ದೇಶಗಳಲ್ಲಿ ಮಾಧ್ಯಮಗಳು ಮುಕ್ತವಾಗಿಲ್ಲದಿದ್ದರೆ, ಅಲ್ಲಿ ಯಾವುದೇ ಸಮಸ್ಯೆಗಳನ್ನು ನಿಭಾಯಿಸಲು ಸಾಧ್ಯವಿಲ್ಲ” ಎಂದರು.

G20 ದೇಶಗಳಲ್ಲಿ ಮಾಧ್ಯಮಗಳು ಎದುರಿಸುತ್ತಿರುವ ಸಾಮಾನ್ಯ ಸವಾಲುಗಳು ದಮನದ ಸಮಸ್ಯೆ ಮತ್ತು ‘ಕಾಶ್ಮೀರದಿಂದ ಕನ್ಯಾಕುಮಾರಿ’ವರೆಗೆ ಪತ್ರಿಕೋದ್ಯಮವನ್ನು ಅಪರಾಧೀಕರಿಸಲು ಕಾನೂನಿನ ದುರುಪಯೋಗ, ಸ್ಪೈವೇರ್ ಮೂಲಕ ಪತ್ರಕರ್ತರ ಮೇಲೆ ಕಣ್ಗಾವಲು ಇಡುವುದು, ಮಾಧ್ಯಮಗಳು ತೀವ್ರ ಒತ್ತಡದಲ್ಲಿವೆ” ಎಂದು ವರದರಾಜನ್ ಹೇಳಿದರು.

ಇದನ್ನೂ ಓದಿ: G20 ಔತಣ ಕೂಟಕ್ಕೆ ಆಹ್ವಾನಿಸದ ಬಗ್ಗೆ ಮೌನ ಮುರಿದ ಖರ್ಗೆ

ದಿ ಹಿಂದೂ ಮಾಧ್ಯಮ ಸಂಸ್ಥೆಯ ಮಾಜಿ ಪ್ರಧಾನ ಸಂಪಾದಕ ಎನ್. ರಾಮ್ ಮಾತನಾಡಿ, ”ಜಾಗತಿಕವಾಗಿ ಮಾಧ್ಯಮ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ಭಾರತದ ಶ್ರೇಯಾಂಕವು ಕಳೆದ ಒಂಬತ್ತು ವರ್ಷಗಳಲ್ಲಿ ಅಥವಾ ಈ ಸರ್ಕಾರವು ಅಧಿಕಾರದಲ್ಲಿದ್ದಾಗಿನಿಂದ ನಿರಂತರವಾಗಿ ಅಡೆತಡೆಯಿಲ್ಲದೆ ಇಳಿಯುತ್ತಿದೆ” ಎಂದು ಹೇಳಿದರು.

ಸ್ವತಂತ್ರ ಸುದ್ದಿ ಸಂಸ್ಥೆಗಳ ಮೇಲಿನ ತೆರಿಗೆ ದಾಳಿಗಳು, ಭಯೋತ್ಪಾದನೆಗೆ ಸಂಬಂಧಿಸಿದ ಕಾನೂನುಗಳನ್ನು ಬಳಸಿಕೊಂಡು ಪತ್ರಕರ್ತರ ಬಂಧನಗಳು ಮತ್ತು ಕೇಂದ್ರೀಯ ಕಾನೂನುಗಳನ್ನು ಬಳಸಿಕೊಂಡು ಅಂತರ್ಜಾಲದಲ್ಲಿ ಸೆನ್ಸಾರ್ಶಿಪ್‌ನ್ನು ರಾಮ್ ಉಲ್ಲೇಖಿಸಿದರು.

”ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳುಗಳನ್ನು ಹೇಳಲಾಗುತ್ತದೆ. ಅವರನ್ನು ಭಕ್ತರು ಎಂದು ಕರೆಯಲಾಗುತ್ತದೆ. ಅವರು ನಿಜವಾಗಿಯೂ ತಾವು ಇಷ್ಟಪಡದವರನ್ನು ಗುರಿಯಾಗಿಸಿ ದಾಳಿ ಮಾಡುತ್ತಾರೆ” ಎಂದು ಅವರು ಹೇಳಿದರು.

ಸ್ವತಂತ್ರ ಪತ್ರಕರ್ತ ಮತ್ತು ಟರ್ಕಿಯ ಹರ್ರಿಯೆಟ್‌ನ ಮಾಜಿ ವಿದೇಶಿ ಸಂಪಾದಕ ಇಪೆಕ್ ಯೆಜ್ದಾನಿ ಮಾತನಾಡಿ, ”ಟರ್ಕಿಯಲ್ಲಿನ 90% ಕ್ಕಿಂತ ಹೆಚ್ಚು ಮುಖ್ಯವಾಹಿನಿಯ ಮಾಧ್ಯಮವು ಸರ್ಕಾರದ ನಿಯಂತ್ರಣದಲ್ಲಿದೆ ಅಥವಾ ನೇರವಾಗಿ ಸರ್ಕಾರದ ಒಡೆತನದಲ್ಲಿದೆ” ಎಂದು ಆತಂಕಕಾರಿ ವಿಚಾರವನ್ನು ಹಂಚಿಕೊಂಡರು.

”ಮಾಧ್ಯಮಗಳ ಮೇಲೆ ಹಿಡಿತ ಸಾಧಿಸಲು ಸರ್ಕಾರದ ಒತ್ತಡ ಹೇರಿ ಪತ್ರಕರ್ತರನ್ನು ಬಂಧಿಸಲಾಗಿದೆ, ಹಿಂಬಾಲಿಸಲಾಗಿದೆ. ಟರ್ಕಿಯಲ್ಲಿ ಹಲವು ವರ್ಷಗಳಿಂದ ಪತ್ರಕರ್ತರು ಅನಿಶ್ಚಿತ ನಿರುದ್ಯೋಗ ಮತ್ತು ಕಡಿಮೆ ವೇತನದೊಂದಿಗೆ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದರು.

”ಪತ್ರಕರ್ತರ ಬಂಧಿಸಲು ಒತ್ತಡಗಳು ಕಡಿಮೆಯಾಗಿದ್ದರೂ, ಸಾರ್ವಜನಿಕ ಜಾಹೀರಾತುಗಳನ್ನು ನ್ಯಾಯಯುತವಾಗಿ ವಿತರಿಸಲು ಸ್ಥಾಪಿಸಲಾದ ಟರ್ಕಿಯ ಸಾರ್ವಜನಿಕ ಜಾಹೀರಾತು ಏಜೆನ್ಸಿಯಂತಹ ಏಜೆನ್ಸಿಗಳ ಮೂಲಕ ಪ್ರಯೋಗಗಳು ಮತ್ತು ದಂಡಗಳು ಹೆಚ್ಚಿವೆ. ಸರ್ಕಾರವನ್ನು ಟೀಕಿಸುವ ಎಲ್ಲಾ ಪತ್ರಿಕೆಗಳ ವಿರುದ್ಧ ಸರ್ಕಾರ ಯುದ್ಧ ಘೋಷಿಸಿದೆ” ಎಂದು ಅವರು ಹೇಳಿದರು.

ಮ್ಯಾನ್ಮಾರ್ ನೌ ಸಂಪಾದಕ ಸ್ವೆ ವಿನ್ ಅವರು ಮಾತನಾಡಿ, ”ಮಾಧ್ಯಮ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ” ಎಂದು ಹೇಳಿದರು.

”ನಾನು ಹೇಳಬಯಸುವುದೇನೆಂದರೆ, ಭಾರತದ ನೆರೆಯ ರಾಷ್ಟ್ರವಾದ ಮ್ಯಾನ್ಮಾರ್, ದಮನ ಮತ್ತು ಕ್ರೂರತೆಯ ವಿಷಯದಲ್ಲಿ ಉತ್ತರ ಕೊರಿಯಾವನ್ನು ಹೋಲುವ ದೇಶವಾಗಿದೆ. ಬಹಳಷ್ಟು ಕ್ರೌರ್ಯಗಳು ನಡೆಯುತ್ತಿವೆ. ನಮ್ಮ ತ್ಯಂತ ಪುಟ್ಟ ದೇಶವಾಗಿರುವುದರಿಂದ, ನಮ್ಮ ದೇಶದೆಡೆಗೆ ಯಾರೂ ಗಮನಹರಿಸುತ್ತಿಲ್ಲ” ಎಂದು ಅವರು ಹೇಳಿದರು.

ಇದೇ ರೀತಿ ಈ ಮಾಧ್ಯಮ ಸ್ವಾತಂತ್ರ್ಯ ಶೃಂಗಸಭೆಯಲ್ಲಿ ಅರಬ್, ಇಂಡೋನೇಷಿಯಾ ,ಯುರೋಪ್‌, ಇಟಲಿ, ಬ್ರೆಜಿಲ್‌ನಲ್ಲಿ, ದಕ್ಷಿಣ ಆಫ್ರಿಕಾ, ಜಪಾನ್‌, ಕೊರಿಯಾ, ಆಸ್ಟ್ರೇಲಿಯಾ ಕೆನಡಾ ದೇಶದ ಮಾಧ್ಯಮ ಪ್ರತಿನಿಧಿಗಳು ತಾವು ತಮ್ಮ ದೇಶದಲ್ಲಿ ಎದುರಿಸುತ್ತಿರುವ ಸವಾಲುಗಳು ಬಗ್ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...