Homeಮುಖಪುಟಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

ಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

- Advertisement -
- Advertisement -

ಮಾಧ್ಯಮಗಳು ತಮ್ಮ ದೇಶ ಮತ್ತು ಪ್ರದೇಶಗಳಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು G20 ದೇಶಗಳ ಸಂಪಾದಕರು ಮತ್ತು ಪತ್ರಕರ್ತರು ಒಟ್ಟುಗೂಡಿ ಸೆಪ್ಟೆಂಬರ್ 6ರಂದು ‘M20’ ಎಂಬ ಆನ್‌ಲೈನ್ ಮಾಧ್ಯಮ ಸ್ವಾತಂತ್ರ್ಯ ಶೃಂಗಸಭೆ ನಡೆಸಿದರು.

”M20 ಮಾಧ್ಯಮ ಸ್ವಾತಂತ್ರ್ಯ ಶೃಂಗಸಭೆ”ಯ ಉದ್ದೇಶವು ಮಾಧ್ಯಮಗಳ ಕಳವಳಗಳನ್ನು ಎತ್ತಿ ತೋರಿಸುವುದು ಮತ್ತು ಸೆಪ್ಟೆಂಬರ್ 9-10ರಂದು ನವದೆಹಲಿಯಲ್ಲಿ G20 ನಾಯಕರ ಸಭೆಗೆ ಪತ್ರಿಕಾ ಸ್ವಾತಂತ್ರ್ಯದ ಮುಖ್ಯವಾದ ಸಂದೇಶವನ್ನು ಕಳುಹಿಸುವುದಾಗಿದೆ.

ಭಾರತದ 11 ಸಂಪಾದಕರು ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರನ್ನು ಒಳಗೊಂಡ M20 ಸಂಘಟನಾ ಸಮಿತಿಯು ಈ ಶೃಂಗಸಭೆಯನ್ನು ಆಯೋಜಿಸಿದೆ.

M20 ಏಕೆ?

ದಿ ವೈರ್‌ನ ಸಂಸ್ಥಾಪಕ ಸಂಪಾದಕ ಮತ್ತು ಸಂಘಟನಾ ಸಮಿತಿಯ ಸಂಚಾಲಕ ಸಿದ್ಧಾರ್ಥ್ ವರದರಾಜನ್ ಅವರು ತಮ್ಮ ಆರಂಭಿಕ ಭಾಷಣದಲ್ಲಿ, ”ಆತಿಥೇಯ ಸರ್ಕಾರ ಮತ್ತು ಅನೇಕ ಜಿ20 ಸದಸ್ಯರಿಗೆ ಮಾಧ್ಯಮ ಸ್ವಾತಂತ್ರ್ಯವು ಮುಖ್ಯ ಎಂದೆನಿಸದ ಕಾರಣಕ್ಕೆ M20 ಶೃಂಗಸಭೆಯ ಅಗತ್ಯವು ಉದ್ಭವಿಸಿದೆ” ಎಂದು ಹೇಳಿದರು.

”G20 ದೇಶಗಳು ಮಾಧ್ಯಮಗಳ ಸ್ವಾತಂತ್ರದ ಬಗ್ಗೆ ಮಾತವಲ್ಲ ಅನೇಕ ಸಾಮಾನ್ಯ ಸಮಸ್ಯೆಗಳು ಮತ್ತು ಮಾಧ್ಯಮಗಳು ಎದುರಿಸುತ್ತಿರುವ ಬೆದರಿಕೆಗಳ ಬಗ್ಗೆ ಚರ್ಚೆ ಮಾಡಲು ಆಸಕ್ತಿ ತೋರುತ್ತಿಲ್ಲ” ಎಂದು ಅವರು ಹೇಳಿದರು.

”ನಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಾವುಗಳೇ ಮಾತನಾಡಬೇಕು ಆಗ ಅವರಿಗೆ ಸ್ಪಷ್ಟ ಸಂದೇಶವನ್ನು ಕಳುಹಿಸಬಹುದು. ಜಿ20 ನಾಯಕರು ಶೀಘ್ರದಲ್ಲೇ ತಮ್ಮ ಶೃಂಗಸಭೆಗೆ ಸೇರುತ್ತಾರೆ, ಅವರು ತಮ್ಮ ದೇಶಗಳಲ್ಲಿ ಮಾಧ್ಯಮಗಳು ಮುಕ್ತವಾಗಿಲ್ಲದಿದ್ದರೆ, ಅಲ್ಲಿ ಯಾವುದೇ ಸಮಸ್ಯೆಗಳನ್ನು ನಿಭಾಯಿಸಲು ಸಾಧ್ಯವಿಲ್ಲ” ಎಂದರು.

G20 ದೇಶಗಳಲ್ಲಿ ಮಾಧ್ಯಮಗಳು ಎದುರಿಸುತ್ತಿರುವ ಸಾಮಾನ್ಯ ಸವಾಲುಗಳು ದಮನದ ಸಮಸ್ಯೆ ಮತ್ತು ‘ಕಾಶ್ಮೀರದಿಂದ ಕನ್ಯಾಕುಮಾರಿ’ವರೆಗೆ ಪತ್ರಿಕೋದ್ಯಮವನ್ನು ಅಪರಾಧೀಕರಿಸಲು ಕಾನೂನಿನ ದುರುಪಯೋಗ, ಸ್ಪೈವೇರ್ ಮೂಲಕ ಪತ್ರಕರ್ತರ ಮೇಲೆ ಕಣ್ಗಾವಲು ಇಡುವುದು, ಮಾಧ್ಯಮಗಳು ತೀವ್ರ ಒತ್ತಡದಲ್ಲಿವೆ” ಎಂದು ವರದರಾಜನ್ ಹೇಳಿದರು.

ಇದನ್ನೂ ಓದಿ: G20 ಔತಣ ಕೂಟಕ್ಕೆ ಆಹ್ವಾನಿಸದ ಬಗ್ಗೆ ಮೌನ ಮುರಿದ ಖರ್ಗೆ

ದಿ ಹಿಂದೂ ಮಾಧ್ಯಮ ಸಂಸ್ಥೆಯ ಮಾಜಿ ಪ್ರಧಾನ ಸಂಪಾದಕ ಎನ್. ರಾಮ್ ಮಾತನಾಡಿ, ”ಜಾಗತಿಕವಾಗಿ ಮಾಧ್ಯಮ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ಭಾರತದ ಶ್ರೇಯಾಂಕವು ಕಳೆದ ಒಂಬತ್ತು ವರ್ಷಗಳಲ್ಲಿ ಅಥವಾ ಈ ಸರ್ಕಾರವು ಅಧಿಕಾರದಲ್ಲಿದ್ದಾಗಿನಿಂದ ನಿರಂತರವಾಗಿ ಅಡೆತಡೆಯಿಲ್ಲದೆ ಇಳಿಯುತ್ತಿದೆ” ಎಂದು ಹೇಳಿದರು.

ಸ್ವತಂತ್ರ ಸುದ್ದಿ ಸಂಸ್ಥೆಗಳ ಮೇಲಿನ ತೆರಿಗೆ ದಾಳಿಗಳು, ಭಯೋತ್ಪಾದನೆಗೆ ಸಂಬಂಧಿಸಿದ ಕಾನೂನುಗಳನ್ನು ಬಳಸಿಕೊಂಡು ಪತ್ರಕರ್ತರ ಬಂಧನಗಳು ಮತ್ತು ಕೇಂದ್ರೀಯ ಕಾನೂನುಗಳನ್ನು ಬಳಸಿಕೊಂಡು ಅಂತರ್ಜಾಲದಲ್ಲಿ ಸೆನ್ಸಾರ್ಶಿಪ್‌ನ್ನು ರಾಮ್ ಉಲ್ಲೇಖಿಸಿದರು.

”ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳುಗಳನ್ನು ಹೇಳಲಾಗುತ್ತದೆ. ಅವರನ್ನು ಭಕ್ತರು ಎಂದು ಕರೆಯಲಾಗುತ್ತದೆ. ಅವರು ನಿಜವಾಗಿಯೂ ತಾವು ಇಷ್ಟಪಡದವರನ್ನು ಗುರಿಯಾಗಿಸಿ ದಾಳಿ ಮಾಡುತ್ತಾರೆ” ಎಂದು ಅವರು ಹೇಳಿದರು.

ಸ್ವತಂತ್ರ ಪತ್ರಕರ್ತ ಮತ್ತು ಟರ್ಕಿಯ ಹರ್ರಿಯೆಟ್‌ನ ಮಾಜಿ ವಿದೇಶಿ ಸಂಪಾದಕ ಇಪೆಕ್ ಯೆಜ್ದಾನಿ ಮಾತನಾಡಿ, ”ಟರ್ಕಿಯಲ್ಲಿನ 90% ಕ್ಕಿಂತ ಹೆಚ್ಚು ಮುಖ್ಯವಾಹಿನಿಯ ಮಾಧ್ಯಮವು ಸರ್ಕಾರದ ನಿಯಂತ್ರಣದಲ್ಲಿದೆ ಅಥವಾ ನೇರವಾಗಿ ಸರ್ಕಾರದ ಒಡೆತನದಲ್ಲಿದೆ” ಎಂದು ಆತಂಕಕಾರಿ ವಿಚಾರವನ್ನು ಹಂಚಿಕೊಂಡರು.

”ಮಾಧ್ಯಮಗಳ ಮೇಲೆ ಹಿಡಿತ ಸಾಧಿಸಲು ಸರ್ಕಾರದ ಒತ್ತಡ ಹೇರಿ ಪತ್ರಕರ್ತರನ್ನು ಬಂಧಿಸಲಾಗಿದೆ, ಹಿಂಬಾಲಿಸಲಾಗಿದೆ. ಟರ್ಕಿಯಲ್ಲಿ ಹಲವು ವರ್ಷಗಳಿಂದ ಪತ್ರಕರ್ತರು ಅನಿಶ್ಚಿತ ನಿರುದ್ಯೋಗ ಮತ್ತು ಕಡಿಮೆ ವೇತನದೊಂದಿಗೆ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದರು.

”ಪತ್ರಕರ್ತರ ಬಂಧಿಸಲು ಒತ್ತಡಗಳು ಕಡಿಮೆಯಾಗಿದ್ದರೂ, ಸಾರ್ವಜನಿಕ ಜಾಹೀರಾತುಗಳನ್ನು ನ್ಯಾಯಯುತವಾಗಿ ವಿತರಿಸಲು ಸ್ಥಾಪಿಸಲಾದ ಟರ್ಕಿಯ ಸಾರ್ವಜನಿಕ ಜಾಹೀರಾತು ಏಜೆನ್ಸಿಯಂತಹ ಏಜೆನ್ಸಿಗಳ ಮೂಲಕ ಪ್ರಯೋಗಗಳು ಮತ್ತು ದಂಡಗಳು ಹೆಚ್ಚಿವೆ. ಸರ್ಕಾರವನ್ನು ಟೀಕಿಸುವ ಎಲ್ಲಾ ಪತ್ರಿಕೆಗಳ ವಿರುದ್ಧ ಸರ್ಕಾರ ಯುದ್ಧ ಘೋಷಿಸಿದೆ” ಎಂದು ಅವರು ಹೇಳಿದರು.

ಮ್ಯಾನ್ಮಾರ್ ನೌ ಸಂಪಾದಕ ಸ್ವೆ ವಿನ್ ಅವರು ಮಾತನಾಡಿ, ”ಮಾಧ್ಯಮ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ” ಎಂದು ಹೇಳಿದರು.

”ನಾನು ಹೇಳಬಯಸುವುದೇನೆಂದರೆ, ಭಾರತದ ನೆರೆಯ ರಾಷ್ಟ್ರವಾದ ಮ್ಯಾನ್ಮಾರ್, ದಮನ ಮತ್ತು ಕ್ರೂರತೆಯ ವಿಷಯದಲ್ಲಿ ಉತ್ತರ ಕೊರಿಯಾವನ್ನು ಹೋಲುವ ದೇಶವಾಗಿದೆ. ಬಹಳಷ್ಟು ಕ್ರೌರ್ಯಗಳು ನಡೆಯುತ್ತಿವೆ. ನಮ್ಮ ತ್ಯಂತ ಪುಟ್ಟ ದೇಶವಾಗಿರುವುದರಿಂದ, ನಮ್ಮ ದೇಶದೆಡೆಗೆ ಯಾರೂ ಗಮನಹರಿಸುತ್ತಿಲ್ಲ” ಎಂದು ಅವರು ಹೇಳಿದರು.

ಇದೇ ರೀತಿ ಈ ಮಾಧ್ಯಮ ಸ್ವಾತಂತ್ರ್ಯ ಶೃಂಗಸಭೆಯಲ್ಲಿ ಅರಬ್, ಇಂಡೋನೇಷಿಯಾ ,ಯುರೋಪ್‌, ಇಟಲಿ, ಬ್ರೆಜಿಲ್‌ನಲ್ಲಿ, ದಕ್ಷಿಣ ಆಫ್ರಿಕಾ, ಜಪಾನ್‌, ಕೊರಿಯಾ, ಆಸ್ಟ್ರೇಲಿಯಾ ಕೆನಡಾ ದೇಶದ ಮಾಧ್ಯಮ ಪ್ರತಿನಿಧಿಗಳು ತಾವು ತಮ್ಮ ದೇಶದಲ್ಲಿ ಎದುರಿಸುತ್ತಿರುವ ಸವಾಲುಗಳು ಬಗ್ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...