Homeಮುಖಪುಟಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

ಸಂಪಾದಕರು, ಪತ್ರಕರ್ತರಿಂದ M20 ಶೃಂಗಸಭೆ: G20 ನಾಯಕರಿಗೆ ಪತ್ರಿಕಾ ಸ್ವಾತಂತ್ರ್ಯದ ಸಂದೇಶ ರವಾನೆ

- Advertisement -
- Advertisement -

ಮಾಧ್ಯಮಗಳು ತಮ್ಮ ದೇಶ ಮತ್ತು ಪ್ರದೇಶಗಳಲ್ಲಿ ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು G20 ದೇಶಗಳ ಸಂಪಾದಕರು ಮತ್ತು ಪತ್ರಕರ್ತರು ಒಟ್ಟುಗೂಡಿ ಸೆಪ್ಟೆಂಬರ್ 6ರಂದು ‘M20’ ಎಂಬ ಆನ್‌ಲೈನ್ ಮಾಧ್ಯಮ ಸ್ವಾತಂತ್ರ್ಯ ಶೃಂಗಸಭೆ ನಡೆಸಿದರು.

”M20 ಮಾಧ್ಯಮ ಸ್ವಾತಂತ್ರ್ಯ ಶೃಂಗಸಭೆ”ಯ ಉದ್ದೇಶವು ಮಾಧ್ಯಮಗಳ ಕಳವಳಗಳನ್ನು ಎತ್ತಿ ತೋರಿಸುವುದು ಮತ್ತು ಸೆಪ್ಟೆಂಬರ್ 9-10ರಂದು ನವದೆಹಲಿಯಲ್ಲಿ G20 ನಾಯಕರ ಸಭೆಗೆ ಪತ್ರಿಕಾ ಸ್ವಾತಂತ್ರ್ಯದ ಮುಖ್ಯವಾದ ಸಂದೇಶವನ್ನು ಕಳುಹಿಸುವುದಾಗಿದೆ.

ಭಾರತದ 11 ಸಂಪಾದಕರು ಮತ್ತು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರನ್ನು ಒಳಗೊಂಡ M20 ಸಂಘಟನಾ ಸಮಿತಿಯು ಈ ಶೃಂಗಸಭೆಯನ್ನು ಆಯೋಜಿಸಿದೆ.

M20 ಏಕೆ?

ದಿ ವೈರ್‌ನ ಸಂಸ್ಥಾಪಕ ಸಂಪಾದಕ ಮತ್ತು ಸಂಘಟನಾ ಸಮಿತಿಯ ಸಂಚಾಲಕ ಸಿದ್ಧಾರ್ಥ್ ವರದರಾಜನ್ ಅವರು ತಮ್ಮ ಆರಂಭಿಕ ಭಾಷಣದಲ್ಲಿ, ”ಆತಿಥೇಯ ಸರ್ಕಾರ ಮತ್ತು ಅನೇಕ ಜಿ20 ಸದಸ್ಯರಿಗೆ ಮಾಧ್ಯಮ ಸ್ವಾತಂತ್ರ್ಯವು ಮುಖ್ಯ ಎಂದೆನಿಸದ ಕಾರಣಕ್ಕೆ M20 ಶೃಂಗಸಭೆಯ ಅಗತ್ಯವು ಉದ್ಭವಿಸಿದೆ” ಎಂದು ಹೇಳಿದರು.

”G20 ದೇಶಗಳು ಮಾಧ್ಯಮಗಳ ಸ್ವಾತಂತ್ರದ ಬಗ್ಗೆ ಮಾತವಲ್ಲ ಅನೇಕ ಸಾಮಾನ್ಯ ಸಮಸ್ಯೆಗಳು ಮತ್ತು ಮಾಧ್ಯಮಗಳು ಎದುರಿಸುತ್ತಿರುವ ಬೆದರಿಕೆಗಳ ಬಗ್ಗೆ ಚರ್ಚೆ ಮಾಡಲು ಆಸಕ್ತಿ ತೋರುತ್ತಿಲ್ಲ” ಎಂದು ಅವರು ಹೇಳಿದರು.

”ನಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಾವುಗಳೇ ಮಾತನಾಡಬೇಕು ಆಗ ಅವರಿಗೆ ಸ್ಪಷ್ಟ ಸಂದೇಶವನ್ನು ಕಳುಹಿಸಬಹುದು. ಜಿ20 ನಾಯಕರು ಶೀಘ್ರದಲ್ಲೇ ತಮ್ಮ ಶೃಂಗಸಭೆಗೆ ಸೇರುತ್ತಾರೆ, ಅವರು ತಮ್ಮ ದೇಶಗಳಲ್ಲಿ ಮಾಧ್ಯಮಗಳು ಮುಕ್ತವಾಗಿಲ್ಲದಿದ್ದರೆ, ಅಲ್ಲಿ ಯಾವುದೇ ಸಮಸ್ಯೆಗಳನ್ನು ನಿಭಾಯಿಸಲು ಸಾಧ್ಯವಿಲ್ಲ” ಎಂದರು.

G20 ದೇಶಗಳಲ್ಲಿ ಮಾಧ್ಯಮಗಳು ಎದುರಿಸುತ್ತಿರುವ ಸಾಮಾನ್ಯ ಸವಾಲುಗಳು ದಮನದ ಸಮಸ್ಯೆ ಮತ್ತು ‘ಕಾಶ್ಮೀರದಿಂದ ಕನ್ಯಾಕುಮಾರಿ’ವರೆಗೆ ಪತ್ರಿಕೋದ್ಯಮವನ್ನು ಅಪರಾಧೀಕರಿಸಲು ಕಾನೂನಿನ ದುರುಪಯೋಗ, ಸ್ಪೈವೇರ್ ಮೂಲಕ ಪತ್ರಕರ್ತರ ಮೇಲೆ ಕಣ್ಗಾವಲು ಇಡುವುದು, ಮಾಧ್ಯಮಗಳು ತೀವ್ರ ಒತ್ತಡದಲ್ಲಿವೆ” ಎಂದು ವರದರಾಜನ್ ಹೇಳಿದರು.

ಇದನ್ನೂ ಓದಿ: G20 ಔತಣ ಕೂಟಕ್ಕೆ ಆಹ್ವಾನಿಸದ ಬಗ್ಗೆ ಮೌನ ಮುರಿದ ಖರ್ಗೆ

ದಿ ಹಿಂದೂ ಮಾಧ್ಯಮ ಸಂಸ್ಥೆಯ ಮಾಜಿ ಪ್ರಧಾನ ಸಂಪಾದಕ ಎನ್. ರಾಮ್ ಮಾತನಾಡಿ, ”ಜಾಗತಿಕವಾಗಿ ಮಾಧ್ಯಮ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ಭಾರತದ ಶ್ರೇಯಾಂಕವು ಕಳೆದ ಒಂಬತ್ತು ವರ್ಷಗಳಲ್ಲಿ ಅಥವಾ ಈ ಸರ್ಕಾರವು ಅಧಿಕಾರದಲ್ಲಿದ್ದಾಗಿನಿಂದ ನಿರಂತರವಾಗಿ ಅಡೆತಡೆಯಿಲ್ಲದೆ ಇಳಿಯುತ್ತಿದೆ” ಎಂದು ಹೇಳಿದರು.

ಸ್ವತಂತ್ರ ಸುದ್ದಿ ಸಂಸ್ಥೆಗಳ ಮೇಲಿನ ತೆರಿಗೆ ದಾಳಿಗಳು, ಭಯೋತ್ಪಾದನೆಗೆ ಸಂಬಂಧಿಸಿದ ಕಾನೂನುಗಳನ್ನು ಬಳಸಿಕೊಂಡು ಪತ್ರಕರ್ತರ ಬಂಧನಗಳು ಮತ್ತು ಕೇಂದ್ರೀಯ ಕಾನೂನುಗಳನ್ನು ಬಳಸಿಕೊಂಡು ಅಂತರ್ಜಾಲದಲ್ಲಿ ಸೆನ್ಸಾರ್ಶಿಪ್‌ನ್ನು ರಾಮ್ ಉಲ್ಲೇಖಿಸಿದರು.

”ಸಾಮಾಜಿಕ ಮಾಧ್ಯಮಗಳ ಮೂಲಕ ಸುಳ್ಳುಗಳನ್ನು ಹೇಳಲಾಗುತ್ತದೆ. ಅವರನ್ನು ಭಕ್ತರು ಎಂದು ಕರೆಯಲಾಗುತ್ತದೆ. ಅವರು ನಿಜವಾಗಿಯೂ ತಾವು ಇಷ್ಟಪಡದವರನ್ನು ಗುರಿಯಾಗಿಸಿ ದಾಳಿ ಮಾಡುತ್ತಾರೆ” ಎಂದು ಅವರು ಹೇಳಿದರು.

ಸ್ವತಂತ್ರ ಪತ್ರಕರ್ತ ಮತ್ತು ಟರ್ಕಿಯ ಹರ್ರಿಯೆಟ್‌ನ ಮಾಜಿ ವಿದೇಶಿ ಸಂಪಾದಕ ಇಪೆಕ್ ಯೆಜ್ದಾನಿ ಮಾತನಾಡಿ, ”ಟರ್ಕಿಯಲ್ಲಿನ 90% ಕ್ಕಿಂತ ಹೆಚ್ಚು ಮುಖ್ಯವಾಹಿನಿಯ ಮಾಧ್ಯಮವು ಸರ್ಕಾರದ ನಿಯಂತ್ರಣದಲ್ಲಿದೆ ಅಥವಾ ನೇರವಾಗಿ ಸರ್ಕಾರದ ಒಡೆತನದಲ್ಲಿದೆ” ಎಂದು ಆತಂಕಕಾರಿ ವಿಚಾರವನ್ನು ಹಂಚಿಕೊಂಡರು.

”ಮಾಧ್ಯಮಗಳ ಮೇಲೆ ಹಿಡಿತ ಸಾಧಿಸಲು ಸರ್ಕಾರದ ಒತ್ತಡ ಹೇರಿ ಪತ್ರಕರ್ತರನ್ನು ಬಂಧಿಸಲಾಗಿದೆ, ಹಿಂಬಾಲಿಸಲಾಗಿದೆ. ಟರ್ಕಿಯಲ್ಲಿ ಹಲವು ವರ್ಷಗಳಿಂದ ಪತ್ರಕರ್ತರು ಅನಿಶ್ಚಿತ ನಿರುದ್ಯೋಗ ಮತ್ತು ಕಡಿಮೆ ವೇತನದೊಂದಿಗೆ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದರು.

”ಪತ್ರಕರ್ತರ ಬಂಧಿಸಲು ಒತ್ತಡಗಳು ಕಡಿಮೆಯಾಗಿದ್ದರೂ, ಸಾರ್ವಜನಿಕ ಜಾಹೀರಾತುಗಳನ್ನು ನ್ಯಾಯಯುತವಾಗಿ ವಿತರಿಸಲು ಸ್ಥಾಪಿಸಲಾದ ಟರ್ಕಿಯ ಸಾರ್ವಜನಿಕ ಜಾಹೀರಾತು ಏಜೆನ್ಸಿಯಂತಹ ಏಜೆನ್ಸಿಗಳ ಮೂಲಕ ಪ್ರಯೋಗಗಳು ಮತ್ತು ದಂಡಗಳು ಹೆಚ್ಚಿವೆ. ಸರ್ಕಾರವನ್ನು ಟೀಕಿಸುವ ಎಲ್ಲಾ ಪತ್ರಿಕೆಗಳ ವಿರುದ್ಧ ಸರ್ಕಾರ ಯುದ್ಧ ಘೋಷಿಸಿದೆ” ಎಂದು ಅವರು ಹೇಳಿದರು.

ಮ್ಯಾನ್ಮಾರ್ ನೌ ಸಂಪಾದಕ ಸ್ವೆ ವಿನ್ ಅವರು ಮಾತನಾಡಿ, ”ಮಾಧ್ಯಮ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳಲಾಗಿದೆ” ಎಂದು ಹೇಳಿದರು.

”ನಾನು ಹೇಳಬಯಸುವುದೇನೆಂದರೆ, ಭಾರತದ ನೆರೆಯ ರಾಷ್ಟ್ರವಾದ ಮ್ಯಾನ್ಮಾರ್, ದಮನ ಮತ್ತು ಕ್ರೂರತೆಯ ವಿಷಯದಲ್ಲಿ ಉತ್ತರ ಕೊರಿಯಾವನ್ನು ಹೋಲುವ ದೇಶವಾಗಿದೆ. ಬಹಳಷ್ಟು ಕ್ರೌರ್ಯಗಳು ನಡೆಯುತ್ತಿವೆ. ನಮ್ಮ ತ್ಯಂತ ಪುಟ್ಟ ದೇಶವಾಗಿರುವುದರಿಂದ, ನಮ್ಮ ದೇಶದೆಡೆಗೆ ಯಾರೂ ಗಮನಹರಿಸುತ್ತಿಲ್ಲ” ಎಂದು ಅವರು ಹೇಳಿದರು.

ಇದೇ ರೀತಿ ಈ ಮಾಧ್ಯಮ ಸ್ವಾತಂತ್ರ್ಯ ಶೃಂಗಸಭೆಯಲ್ಲಿ ಅರಬ್, ಇಂಡೋನೇಷಿಯಾ ,ಯುರೋಪ್‌, ಇಟಲಿ, ಬ್ರೆಜಿಲ್‌ನಲ್ಲಿ, ದಕ್ಷಿಣ ಆಫ್ರಿಕಾ, ಜಪಾನ್‌, ಕೊರಿಯಾ, ಆಸ್ಟ್ರೇಲಿಯಾ ಕೆನಡಾ ದೇಶದ ಮಾಧ್ಯಮ ಪ್ರತಿನಿಧಿಗಳು ತಾವು ತಮ್ಮ ದೇಶದಲ್ಲಿ ಎದುರಿಸುತ್ತಿರುವ ಸವಾಲುಗಳು ಬಗ್ಗೆ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...