Homeಮುಖಪುಟ‘ಮಾ, ಮಟಿ, ಮನುಷ್‌’ ಎಂದು ಮೂರು ಬೆರಳೆತ್ತಿ ದಿಗ್ವಿಜಯ ಸಂಭ್ರಮಿಸಿದ ದೀದಿ

‘ಮಾ, ಮಟಿ, ಮನುಷ್‌’ ಎಂದು ಮೂರು ಬೆರಳೆತ್ತಿ ದಿಗ್ವಿಜಯ ಸಂಭ್ರಮಿಸಿದ ದೀದಿ

58,832 ಮತಗಳ ಅಂತರದಲ್ಲಿ ಗೆಲುವು, ಮಮತಾ ಬ್ಯಾನರ್ಜಿಯವರ ಮುಖ್ಯಮಂತ್ರಿ ಕುರ್ಚಿ ಭದ್ರ; ಸೋಲಿನ ಬಳಿಕ ‘ನಕಲಿ ಮತ’ ಆರೋಪ ಮಾಡಿದ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಪಶ್ಚಿಮ ಬಂಗಾಳದ ಭಬನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯವರು ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಮುಂದುವರಿಯಲು ಇದ್ದ ತೊಡಕು ನಿವಾರಣೆಯಾಗಿದೆ.

ಮಾರ್ಚ್-ಏಪ್ರಿಲ್‌‌ನಲ್ಲಿ ನಡೆದ ಚುನಾವಣೆಯಲ್ಲಿ ನಂದೀಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿಯವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಬಹುಮತ ಪಡೆದ ಟಿಎಂಸಿ ಅಧಿಕಾರ ಹಿಡಿದಿತ್ತು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮಮತಾ ಅವರು, ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ಆರು ತಿಂಗಳ ನಂತರ ಶಾಸಕರಾಗಿ ಆಯ್ಕೆಯಾಗುವುದು ಅನಿವಾರ್ಯವಾಗಿತ್ತು. ಹೀಗಾಗಿ ತಮ್ಮ ಸಾಂಪ್ರದಾಯಿಕ ಕ್ಷೇತ್ರದಲ್ಲಿಯೇ ಚುನಾವಣೆ ಎದುರಿಸಲು ನಿರ್ಧರಿಸಿ, ಸಚಿವ ಹಾಗೂ ಶಾಸಕ  ಸೋವಂದೇಬ್ ಚಟ್ಟೋಪಾಧ್ಯಾಯ ಅವರಿಂದ ರಾಜೀನಾಮೆ ಕೊಡಿಸಿದ್ದರು. ಸೆ.30ರಂದು (ಗುರುವಾರ) ಮತದಾನ ನಡೆದಿದ್ದು, ಆ.3ರಂದು (ಭಾನುವಾರ) ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ತಿಬ್ರೇವಾಲ್‌ ಅವರನ್ನು ಸುಲಭವಾಗಿ ಸೋಲಿಸಿರುವ ದೀದಿ, ತಮ್ಮ ಸಿಎಂ ಸ್ಥಾನವನ್ನು ಭದ್ರ ಮಾಡಿಕೊಂಡಿದ್ದಾರೆ.

58,832 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದು, “ಇದು ನಂದಿಗ್ರಾಮದಲ್ಲಿ ನನ್ನನ್ನು ಸೋಲಿಸಲು ರೂಪಿಸಿದ ಪಿತೂರಿಯ ವಿರುದ್ಧದ ಗೆಲುವು ಇದು. ನನಗೆ ಇಷ್ಟು ದೊಡ್ಡ ಜನಾದೇಶ ನೀಡಿದ ಭಬನಿಪುರದ ಜನರಿಗೆ ಧನ್ಯವಾದ ಹೇಳುತ್ತೇನೆ” ಎಂದಿದ್ದಾರೆ. 2011ರ ಚುನಾವಣೆಯಲ್ಲಿ ಪಡೆದ ಮತಗಳಿಂದ ಹೆಚ್ಚು ಮತಗಳನ್ನು ಮಮತಾ ಬ್ಯಾನರ್ಜಿ ಈ ಚುನಾವಣೆಯಲ್ಲಿ ಪಡೆದಿದ್ದಾರೆ ಎನ್ನಲಾಗಿದೆ.

“ಅತ್ಯಂತ ಹೃದಯಸ್ಪರ್ಶಿ ಸಂಗತಿಯೆಂದರೆ, ನಾನು ಕ್ಷೇತ್ರದಲ್ಲಿ ಒಂದೇ ಒಂದು ವಾರ್ಡ್‌ನಲ್ಲಿಯೂ ಸೋತಿಲ್ಲ. ಕಳೆದ ಬಾರಿ, ನಾನು ಒಂದೆರಡು ವಾರ್ಡ್‌ಗಳಲ್ಲಿ ಹಿಂದುಳಿದಿದ್ದೆ. ಏಪ್ರಿಲ್ ಚುನಾವಣೆಯಲ್ಲಿ ನಮ್ಮ ವಿರುದ್ಧ ಸಾಕಷ್ಟು ಪಿತೂರಿಗಳು ನಡೆದಿವೆ. ನಾವು ಗೆದ್ದಿದ್ದಕ್ಕೆ ನಾವು ಕೃತಜ್ಞರಾಗಿರುತ್ತೇವೆ. ನಂದಿಗ್ರಾಮದಲ್ಲಿ ನಾನು ಸೋತಿದ್ದೇನೆ ಆದರೆ ಪ್ರಕರಣ ನ್ಯಾಯಾಲಯದಲ್ಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ಸೋಲಿನ ನಂತರ ‘ನಕಲಿ ಮತ’ ಆರೋಪ

ಇದರ ನಡುವೆ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೇವಾಲ್ ತಮ್ಮ ಸೋಲಿಗೆ ‘ನಕಲಿ ಮತದಾರರು ಕಾರಣ’ ಎಂದು ಆರೋಪಿಸಿದ್ದಾರೆ. “ಜನರು ಮತ ಚಲಾಯಿಸಲು ಅವಕಾಶ ನೀಡಿದ್ದರೆ, ಫಲಿತಾಂಶವು ವಿಭಿನ್ನವಾಗಿರುತ್ತಿತ್ತು. ಮತದಾನದ ದಿನವೂ ನಾನು ನಕಲಿ ಮತದಾರರನ್ನು ಹಿಡಿದಿದ್ದೇನೆ. ಹಲವು ಬೂತ್‌ಗಳಲ್ಲಿ ಮತಯಂತ್ರಗಳನ್ನು ಕಳ್ಳತನ ಮಾಡಲಾಗಿದೆ. ಆದರೆ ಭಬಾನಿಪುರದಲ್ಲಿ ನಮ್ಮ ಸಂಘಟನೆ ದುರ್ಬಲವಾಗಿತ್ತು ಎಂದು ನಾನು ಒಪ್ಪಿಕೊಳ್ಳುತ್ತೇನೆ. ನಾವು ಇದನ್ನು ಸುಧಾರಿಸಬೇಕು” ಎಂದು ತಿಬ್ರೇವಾಲ್‌ ಆರೋಪಿಸಿದ್ದಾರೆ.

ಮುರ್ಶಾಬಾದ್‌ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮುರ್ಶಾಬಾದ್‌ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ತೃಣಮೂಲ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಸಂಸರ್‌ಜಂಗ್‌ನ ಟಿಎಂಸಿ ಅಭ್ಯರ್ಥಿ ಐದನೇ ಸುತ್ತಿನ ಮತ ಎಣಿಕೆ 3,768 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಜಂಗೀಪರದ ಟಿಎಂಸಿ ಅಭ್ಯರ್ಥಿ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ 15,643 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಬಿಗಿ ಭದ್ರತೆ

ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಕೈಗೊಂಡಿದ್ದರು. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿತ್ತು. 24 ಕಂಪನಿಗಳ ಕೇಂದ್ರ ಪಡೆಗಳನ್ನು ಎಣಿಕೆ ಕೇಂದ್ರಗಳಲ್ಲಿ ನಿಯೋಜಿಸಲಾಗಿತ್ತು. ಇಡೀ ಪ್ರದೇಶವನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ಇಡಲಾಗಿತ್ತು.

ಇದನ್ನೂ ಓದಿ: ರೋಮ್‌ ಭೇಟಿಗೆ ಅನುಮತಿ ನಿರಾಕರಣೆ: ಕೇಂದ್ರದ ‘ಅಸೂಯೆ’ ಎಂದ ದೀದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ನೋಡಿ ಗೆದ್ದ ಟಿಎಂಸಿ ಸೋತ ಬಿಜೆಪಿ ಅಭ್ಯರ್ಥಿ ಮನೆ ಸುಡುವುದು,ಬೆಂಕಿ ಹಚ್ಚುವುದು, ಬಿಜೆಪಿ ಪರ ಓಡಾಡಿದ ಮಹಿಳೆ ರೇಪ್ ಮಾಡುವುದು ಸಾಮಾನ್ಯ ಕಾರ್ಯ ಎನಿಸುತ್ತೇ ಇದನ್ನು ನೋಡಿ ಸಾಕಾಗಿ ಬಿಜೆಪಿಗೆ ಓಡಾಡಿದ ಜನ ಸದ್ದಿಲ್ಲದೆ ಟಿಎಂಸಿ ಸೇರಿ ಕೊಂಡು ಉಸಿರು ಬಿಡುತ್ತಾರೆ…!!
    #wastePM #GreatSecularTMC

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...