Homeಮುಖಪುಟ‘ಮಾ, ಮಟಿ, ಮನುಷ್‌’ ಎಂದು ಮೂರು ಬೆರಳೆತ್ತಿ ದಿಗ್ವಿಜಯ ಸಂಭ್ರಮಿಸಿದ ದೀದಿ

‘ಮಾ, ಮಟಿ, ಮನುಷ್‌’ ಎಂದು ಮೂರು ಬೆರಳೆತ್ತಿ ದಿಗ್ವಿಜಯ ಸಂಭ್ರಮಿಸಿದ ದೀದಿ

58,832 ಮತಗಳ ಅಂತರದಲ್ಲಿ ಗೆಲುವು, ಮಮತಾ ಬ್ಯಾನರ್ಜಿಯವರ ಮುಖ್ಯಮಂತ್ರಿ ಕುರ್ಚಿ ಭದ್ರ; ಸೋಲಿನ ಬಳಿಕ ‘ನಕಲಿ ಮತ’ ಆರೋಪ ಮಾಡಿದ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಪಶ್ಚಿಮ ಬಂಗಾಳದ ಭಬನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯವರು ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಮುಂದುವರಿಯಲು ಇದ್ದ ತೊಡಕು ನಿವಾರಣೆಯಾಗಿದೆ.

ಮಾರ್ಚ್-ಏಪ್ರಿಲ್‌‌ನಲ್ಲಿ ನಡೆದ ಚುನಾವಣೆಯಲ್ಲಿ ನಂದೀಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿಯವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಬಹುಮತ ಪಡೆದ ಟಿಎಂಸಿ ಅಧಿಕಾರ ಹಿಡಿದಿತ್ತು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮಮತಾ ಅವರು, ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ಆರು ತಿಂಗಳ ನಂತರ ಶಾಸಕರಾಗಿ ಆಯ್ಕೆಯಾಗುವುದು ಅನಿವಾರ್ಯವಾಗಿತ್ತು. ಹೀಗಾಗಿ ತಮ್ಮ ಸಾಂಪ್ರದಾಯಿಕ ಕ್ಷೇತ್ರದಲ್ಲಿಯೇ ಚುನಾವಣೆ ಎದುರಿಸಲು ನಿರ್ಧರಿಸಿ, ಸಚಿವ ಹಾಗೂ ಶಾಸಕ  ಸೋವಂದೇಬ್ ಚಟ್ಟೋಪಾಧ್ಯಾಯ ಅವರಿಂದ ರಾಜೀನಾಮೆ ಕೊಡಿಸಿದ್ದರು. ಸೆ.30ರಂದು (ಗುರುವಾರ) ಮತದಾನ ನಡೆದಿದ್ದು, ಆ.3ರಂದು (ಭಾನುವಾರ) ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ತಿಬ್ರೇವಾಲ್‌ ಅವರನ್ನು ಸುಲಭವಾಗಿ ಸೋಲಿಸಿರುವ ದೀದಿ, ತಮ್ಮ ಸಿಎಂ ಸ್ಥಾನವನ್ನು ಭದ್ರ ಮಾಡಿಕೊಂಡಿದ್ದಾರೆ.

58,832 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದು, “ಇದು ನಂದಿಗ್ರಾಮದಲ್ಲಿ ನನ್ನನ್ನು ಸೋಲಿಸಲು ರೂಪಿಸಿದ ಪಿತೂರಿಯ ವಿರುದ್ಧದ ಗೆಲುವು ಇದು. ನನಗೆ ಇಷ್ಟು ದೊಡ್ಡ ಜನಾದೇಶ ನೀಡಿದ ಭಬನಿಪುರದ ಜನರಿಗೆ ಧನ್ಯವಾದ ಹೇಳುತ್ತೇನೆ” ಎಂದಿದ್ದಾರೆ. 2011ರ ಚುನಾವಣೆಯಲ್ಲಿ ಪಡೆದ ಮತಗಳಿಂದ ಹೆಚ್ಚು ಮತಗಳನ್ನು ಮಮತಾ ಬ್ಯಾನರ್ಜಿ ಈ ಚುನಾವಣೆಯಲ್ಲಿ ಪಡೆದಿದ್ದಾರೆ ಎನ್ನಲಾಗಿದೆ.

“ಅತ್ಯಂತ ಹೃದಯಸ್ಪರ್ಶಿ ಸಂಗತಿಯೆಂದರೆ, ನಾನು ಕ್ಷೇತ್ರದಲ್ಲಿ ಒಂದೇ ಒಂದು ವಾರ್ಡ್‌ನಲ್ಲಿಯೂ ಸೋತಿಲ್ಲ. ಕಳೆದ ಬಾರಿ, ನಾನು ಒಂದೆರಡು ವಾರ್ಡ್‌ಗಳಲ್ಲಿ ಹಿಂದುಳಿದಿದ್ದೆ. ಏಪ್ರಿಲ್ ಚುನಾವಣೆಯಲ್ಲಿ ನಮ್ಮ ವಿರುದ್ಧ ಸಾಕಷ್ಟು ಪಿತೂರಿಗಳು ನಡೆದಿವೆ. ನಾವು ಗೆದ್ದಿದ್ದಕ್ಕೆ ನಾವು ಕೃತಜ್ಞರಾಗಿರುತ್ತೇವೆ. ನಂದಿಗ್ರಾಮದಲ್ಲಿ ನಾನು ಸೋತಿದ್ದೇನೆ ಆದರೆ ಪ್ರಕರಣ ನ್ಯಾಯಾಲಯದಲ್ಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ಸೋಲಿನ ನಂತರ ‘ನಕಲಿ ಮತ’ ಆರೋಪ

ಇದರ ನಡುವೆ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೇವಾಲ್ ತಮ್ಮ ಸೋಲಿಗೆ ‘ನಕಲಿ ಮತದಾರರು ಕಾರಣ’ ಎಂದು ಆರೋಪಿಸಿದ್ದಾರೆ. “ಜನರು ಮತ ಚಲಾಯಿಸಲು ಅವಕಾಶ ನೀಡಿದ್ದರೆ, ಫಲಿತಾಂಶವು ವಿಭಿನ್ನವಾಗಿರುತ್ತಿತ್ತು. ಮತದಾನದ ದಿನವೂ ನಾನು ನಕಲಿ ಮತದಾರರನ್ನು ಹಿಡಿದಿದ್ದೇನೆ. ಹಲವು ಬೂತ್‌ಗಳಲ್ಲಿ ಮತಯಂತ್ರಗಳನ್ನು ಕಳ್ಳತನ ಮಾಡಲಾಗಿದೆ. ಆದರೆ ಭಬಾನಿಪುರದಲ್ಲಿ ನಮ್ಮ ಸಂಘಟನೆ ದುರ್ಬಲವಾಗಿತ್ತು ಎಂದು ನಾನು ಒಪ್ಪಿಕೊಳ್ಳುತ್ತೇನೆ. ನಾವು ಇದನ್ನು ಸುಧಾರಿಸಬೇಕು” ಎಂದು ತಿಬ್ರೇವಾಲ್‌ ಆರೋಪಿಸಿದ್ದಾರೆ.

ಮುರ್ಶಾಬಾದ್‌ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮುರ್ಶಾಬಾದ್‌ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ತೃಣಮೂಲ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಸಂಸರ್‌ಜಂಗ್‌ನ ಟಿಎಂಸಿ ಅಭ್ಯರ್ಥಿ ಐದನೇ ಸುತ್ತಿನ ಮತ ಎಣಿಕೆ 3,768 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಜಂಗೀಪರದ ಟಿಎಂಸಿ ಅಭ್ಯರ್ಥಿ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ 15,643 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಬಿಗಿ ಭದ್ರತೆ

ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಕೈಗೊಂಡಿದ್ದರು. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿತ್ತು. 24 ಕಂಪನಿಗಳ ಕೇಂದ್ರ ಪಡೆಗಳನ್ನು ಎಣಿಕೆ ಕೇಂದ್ರಗಳಲ್ಲಿ ನಿಯೋಜಿಸಲಾಗಿತ್ತು. ಇಡೀ ಪ್ರದೇಶವನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ಇಡಲಾಗಿತ್ತು.

ಇದನ್ನೂ ಓದಿ: ರೋಮ್‌ ಭೇಟಿಗೆ ಅನುಮತಿ ನಿರಾಕರಣೆ: ಕೇಂದ್ರದ ‘ಅಸೂಯೆ’ ಎಂದ ದೀದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ನೋಡಿ ಗೆದ್ದ ಟಿಎಂಸಿ ಸೋತ ಬಿಜೆಪಿ ಅಭ್ಯರ್ಥಿ ಮನೆ ಸುಡುವುದು,ಬೆಂಕಿ ಹಚ್ಚುವುದು, ಬಿಜೆಪಿ ಪರ ಓಡಾಡಿದ ಮಹಿಳೆ ರೇಪ್ ಮಾಡುವುದು ಸಾಮಾನ್ಯ ಕಾರ್ಯ ಎನಿಸುತ್ತೇ ಇದನ್ನು ನೋಡಿ ಸಾಕಾಗಿ ಬಿಜೆಪಿಗೆ ಓಡಾಡಿದ ಜನ ಸದ್ದಿಲ್ಲದೆ ಟಿಎಂಸಿ ಸೇರಿ ಕೊಂಡು ಉಸಿರು ಬಿಡುತ್ತಾರೆ…!!
    #wastePM #GreatSecularTMC

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...