Homeಮುಖಪುಟ‘ಮಾ, ಮಟಿ, ಮನುಷ್‌’ ಎಂದು ಮೂರು ಬೆರಳೆತ್ತಿ ದಿಗ್ವಿಜಯ ಸಂಭ್ರಮಿಸಿದ ದೀದಿ

‘ಮಾ, ಮಟಿ, ಮನುಷ್‌’ ಎಂದು ಮೂರು ಬೆರಳೆತ್ತಿ ದಿಗ್ವಿಜಯ ಸಂಭ್ರಮಿಸಿದ ದೀದಿ

58,832 ಮತಗಳ ಅಂತರದಲ್ಲಿ ಗೆಲುವು, ಮಮತಾ ಬ್ಯಾನರ್ಜಿಯವರ ಮುಖ್ಯಮಂತ್ರಿ ಕುರ್ಚಿ ಭದ್ರ; ಸೋಲಿನ ಬಳಿಕ ‘ನಕಲಿ ಮತ’ ಆರೋಪ ಮಾಡಿದ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಪಶ್ಚಿಮ ಬಂಗಾಳದ ಭಬನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯವರು ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಮುಂದುವರಿಯಲು ಇದ್ದ ತೊಡಕು ನಿವಾರಣೆಯಾಗಿದೆ.

ಮಾರ್ಚ್-ಏಪ್ರಿಲ್‌‌ನಲ್ಲಿ ನಡೆದ ಚುನಾವಣೆಯಲ್ಲಿ ನಂದೀಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿಯವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಬಹುಮತ ಪಡೆದ ಟಿಎಂಸಿ ಅಧಿಕಾರ ಹಿಡಿದಿತ್ತು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮಮತಾ ಅವರು, ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ಆರು ತಿಂಗಳ ನಂತರ ಶಾಸಕರಾಗಿ ಆಯ್ಕೆಯಾಗುವುದು ಅನಿವಾರ್ಯವಾಗಿತ್ತು. ಹೀಗಾಗಿ ತಮ್ಮ ಸಾಂಪ್ರದಾಯಿಕ ಕ್ಷೇತ್ರದಲ್ಲಿಯೇ ಚುನಾವಣೆ ಎದುರಿಸಲು ನಿರ್ಧರಿಸಿ, ಸಚಿವ ಹಾಗೂ ಶಾಸಕ  ಸೋವಂದೇಬ್ ಚಟ್ಟೋಪಾಧ್ಯಾಯ ಅವರಿಂದ ರಾಜೀನಾಮೆ ಕೊಡಿಸಿದ್ದರು. ಸೆ.30ರಂದು (ಗುರುವಾರ) ಮತದಾನ ನಡೆದಿದ್ದು, ಆ.3ರಂದು (ಭಾನುವಾರ) ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ತಿಬ್ರೇವಾಲ್‌ ಅವರನ್ನು ಸುಲಭವಾಗಿ ಸೋಲಿಸಿರುವ ದೀದಿ, ತಮ್ಮ ಸಿಎಂ ಸ್ಥಾನವನ್ನು ಭದ್ರ ಮಾಡಿಕೊಂಡಿದ್ದಾರೆ.

58,832 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದು, “ಇದು ನಂದಿಗ್ರಾಮದಲ್ಲಿ ನನ್ನನ್ನು ಸೋಲಿಸಲು ರೂಪಿಸಿದ ಪಿತೂರಿಯ ವಿರುದ್ಧದ ಗೆಲುವು ಇದು. ನನಗೆ ಇಷ್ಟು ದೊಡ್ಡ ಜನಾದೇಶ ನೀಡಿದ ಭಬನಿಪುರದ ಜನರಿಗೆ ಧನ್ಯವಾದ ಹೇಳುತ್ತೇನೆ” ಎಂದಿದ್ದಾರೆ. 2011ರ ಚುನಾವಣೆಯಲ್ಲಿ ಪಡೆದ ಮತಗಳಿಂದ ಹೆಚ್ಚು ಮತಗಳನ್ನು ಮಮತಾ ಬ್ಯಾನರ್ಜಿ ಈ ಚುನಾವಣೆಯಲ್ಲಿ ಪಡೆದಿದ್ದಾರೆ ಎನ್ನಲಾಗಿದೆ.

“ಅತ್ಯಂತ ಹೃದಯಸ್ಪರ್ಶಿ ಸಂಗತಿಯೆಂದರೆ, ನಾನು ಕ್ಷೇತ್ರದಲ್ಲಿ ಒಂದೇ ಒಂದು ವಾರ್ಡ್‌ನಲ್ಲಿಯೂ ಸೋತಿಲ್ಲ. ಕಳೆದ ಬಾರಿ, ನಾನು ಒಂದೆರಡು ವಾರ್ಡ್‌ಗಳಲ್ಲಿ ಹಿಂದುಳಿದಿದ್ದೆ. ಏಪ್ರಿಲ್ ಚುನಾವಣೆಯಲ್ಲಿ ನಮ್ಮ ವಿರುದ್ಧ ಸಾಕಷ್ಟು ಪಿತೂರಿಗಳು ನಡೆದಿವೆ. ನಾವು ಗೆದ್ದಿದ್ದಕ್ಕೆ ನಾವು ಕೃತಜ್ಞರಾಗಿರುತ್ತೇವೆ. ನಂದಿಗ್ರಾಮದಲ್ಲಿ ನಾನು ಸೋತಿದ್ದೇನೆ ಆದರೆ ಪ್ರಕರಣ ನ್ಯಾಯಾಲಯದಲ್ಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ಸೋಲಿನ ನಂತರ ‘ನಕಲಿ ಮತ’ ಆರೋಪ

ಇದರ ನಡುವೆ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೇವಾಲ್ ತಮ್ಮ ಸೋಲಿಗೆ ‘ನಕಲಿ ಮತದಾರರು ಕಾರಣ’ ಎಂದು ಆರೋಪಿಸಿದ್ದಾರೆ. “ಜನರು ಮತ ಚಲಾಯಿಸಲು ಅವಕಾಶ ನೀಡಿದ್ದರೆ, ಫಲಿತಾಂಶವು ವಿಭಿನ್ನವಾಗಿರುತ್ತಿತ್ತು. ಮತದಾನದ ದಿನವೂ ನಾನು ನಕಲಿ ಮತದಾರರನ್ನು ಹಿಡಿದಿದ್ದೇನೆ. ಹಲವು ಬೂತ್‌ಗಳಲ್ಲಿ ಮತಯಂತ್ರಗಳನ್ನು ಕಳ್ಳತನ ಮಾಡಲಾಗಿದೆ. ಆದರೆ ಭಬಾನಿಪುರದಲ್ಲಿ ನಮ್ಮ ಸಂಘಟನೆ ದುರ್ಬಲವಾಗಿತ್ತು ಎಂದು ನಾನು ಒಪ್ಪಿಕೊಳ್ಳುತ್ತೇನೆ. ನಾವು ಇದನ್ನು ಸುಧಾರಿಸಬೇಕು” ಎಂದು ತಿಬ್ರೇವಾಲ್‌ ಆರೋಪಿಸಿದ್ದಾರೆ.

ಮುರ್ಶಾಬಾದ್‌ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮುರ್ಶಾಬಾದ್‌ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ತೃಣಮೂಲ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಸಂಸರ್‌ಜಂಗ್‌ನ ಟಿಎಂಸಿ ಅಭ್ಯರ್ಥಿ ಐದನೇ ಸುತ್ತಿನ ಮತ ಎಣಿಕೆ 3,768 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಜಂಗೀಪರದ ಟಿಎಂಸಿ ಅಭ್ಯರ್ಥಿ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ 15,643 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಬಿಗಿ ಭದ್ರತೆ

ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಕೈಗೊಂಡಿದ್ದರು. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿತ್ತು. 24 ಕಂಪನಿಗಳ ಕೇಂದ್ರ ಪಡೆಗಳನ್ನು ಎಣಿಕೆ ಕೇಂದ್ರಗಳಲ್ಲಿ ನಿಯೋಜಿಸಲಾಗಿತ್ತು. ಇಡೀ ಪ್ರದೇಶವನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ಇಡಲಾಗಿತ್ತು.

ಇದನ್ನೂ ಓದಿ: ರೋಮ್‌ ಭೇಟಿಗೆ ಅನುಮತಿ ನಿರಾಕರಣೆ: ಕೇಂದ್ರದ ‘ಅಸೂಯೆ’ ಎಂದ ದೀದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ನೋಡಿ ಗೆದ್ದ ಟಿಎಂಸಿ ಸೋತ ಬಿಜೆಪಿ ಅಭ್ಯರ್ಥಿ ಮನೆ ಸುಡುವುದು,ಬೆಂಕಿ ಹಚ್ಚುವುದು, ಬಿಜೆಪಿ ಪರ ಓಡಾಡಿದ ಮಹಿಳೆ ರೇಪ್ ಮಾಡುವುದು ಸಾಮಾನ್ಯ ಕಾರ್ಯ ಎನಿಸುತ್ತೇ ಇದನ್ನು ನೋಡಿ ಸಾಕಾಗಿ ಬಿಜೆಪಿಗೆ ಓಡಾಡಿದ ಜನ ಸದ್ದಿಲ್ಲದೆ ಟಿಎಂಸಿ ಸೇರಿ ಕೊಂಡು ಉಸಿರು ಬಿಡುತ್ತಾರೆ…!!
    #wastePM #GreatSecularTMC

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...