Homeಮುಖಪುಟ‘ಮಾ, ಮಟಿ, ಮನುಷ್‌’ ಎಂದು ಮೂರು ಬೆರಳೆತ್ತಿ ದಿಗ್ವಿಜಯ ಸಂಭ್ರಮಿಸಿದ ದೀದಿ

‘ಮಾ, ಮಟಿ, ಮನುಷ್‌’ ಎಂದು ಮೂರು ಬೆರಳೆತ್ತಿ ದಿಗ್ವಿಜಯ ಸಂಭ್ರಮಿಸಿದ ದೀದಿ

58,832 ಮತಗಳ ಅಂತರದಲ್ಲಿ ಗೆಲುವು, ಮಮತಾ ಬ್ಯಾನರ್ಜಿಯವರ ಮುಖ್ಯಮಂತ್ರಿ ಕುರ್ಚಿ ಭದ್ರ; ಸೋಲಿನ ಬಳಿಕ ‘ನಕಲಿ ಮತ’ ಆರೋಪ ಮಾಡಿದ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಪಶ್ಚಿಮ ಬಂಗಾಳದ ಭಬನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯವರು ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಮುಂದುವರಿಯಲು ಇದ್ದ ತೊಡಕು ನಿವಾರಣೆಯಾಗಿದೆ.

ಮಾರ್ಚ್-ಏಪ್ರಿಲ್‌‌ನಲ್ಲಿ ನಡೆದ ಚುನಾವಣೆಯಲ್ಲಿ ನಂದೀಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿಯವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಬಹುಮತ ಪಡೆದ ಟಿಎಂಸಿ ಅಧಿಕಾರ ಹಿಡಿದಿತ್ತು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮಮತಾ ಅವರು, ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ಆರು ತಿಂಗಳ ನಂತರ ಶಾಸಕರಾಗಿ ಆಯ್ಕೆಯಾಗುವುದು ಅನಿವಾರ್ಯವಾಗಿತ್ತು. ಹೀಗಾಗಿ ತಮ್ಮ ಸಾಂಪ್ರದಾಯಿಕ ಕ್ಷೇತ್ರದಲ್ಲಿಯೇ ಚುನಾವಣೆ ಎದುರಿಸಲು ನಿರ್ಧರಿಸಿ, ಸಚಿವ ಹಾಗೂ ಶಾಸಕ  ಸೋವಂದೇಬ್ ಚಟ್ಟೋಪಾಧ್ಯಾಯ ಅವರಿಂದ ರಾಜೀನಾಮೆ ಕೊಡಿಸಿದ್ದರು. ಸೆ.30ರಂದು (ಗುರುವಾರ) ಮತದಾನ ನಡೆದಿದ್ದು, ಆ.3ರಂದು (ಭಾನುವಾರ) ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ತಿಬ್ರೇವಾಲ್‌ ಅವರನ್ನು ಸುಲಭವಾಗಿ ಸೋಲಿಸಿರುವ ದೀದಿ, ತಮ್ಮ ಸಿಎಂ ಸ್ಥಾನವನ್ನು ಭದ್ರ ಮಾಡಿಕೊಂಡಿದ್ದಾರೆ.

58,832 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದು, “ಇದು ನಂದಿಗ್ರಾಮದಲ್ಲಿ ನನ್ನನ್ನು ಸೋಲಿಸಲು ರೂಪಿಸಿದ ಪಿತೂರಿಯ ವಿರುದ್ಧದ ಗೆಲುವು ಇದು. ನನಗೆ ಇಷ್ಟು ದೊಡ್ಡ ಜನಾದೇಶ ನೀಡಿದ ಭಬನಿಪುರದ ಜನರಿಗೆ ಧನ್ಯವಾದ ಹೇಳುತ್ತೇನೆ” ಎಂದಿದ್ದಾರೆ. 2011ರ ಚುನಾವಣೆಯಲ್ಲಿ ಪಡೆದ ಮತಗಳಿಂದ ಹೆಚ್ಚು ಮತಗಳನ್ನು ಮಮತಾ ಬ್ಯಾನರ್ಜಿ ಈ ಚುನಾವಣೆಯಲ್ಲಿ ಪಡೆದಿದ್ದಾರೆ ಎನ್ನಲಾಗಿದೆ.

“ಅತ್ಯಂತ ಹೃದಯಸ್ಪರ್ಶಿ ಸಂಗತಿಯೆಂದರೆ, ನಾನು ಕ್ಷೇತ್ರದಲ್ಲಿ ಒಂದೇ ಒಂದು ವಾರ್ಡ್‌ನಲ್ಲಿಯೂ ಸೋತಿಲ್ಲ. ಕಳೆದ ಬಾರಿ, ನಾನು ಒಂದೆರಡು ವಾರ್ಡ್‌ಗಳಲ್ಲಿ ಹಿಂದುಳಿದಿದ್ದೆ. ಏಪ್ರಿಲ್ ಚುನಾವಣೆಯಲ್ಲಿ ನಮ್ಮ ವಿರುದ್ಧ ಸಾಕಷ್ಟು ಪಿತೂರಿಗಳು ನಡೆದಿವೆ. ನಾವು ಗೆದ್ದಿದ್ದಕ್ಕೆ ನಾವು ಕೃತಜ್ಞರಾಗಿರುತ್ತೇವೆ. ನಂದಿಗ್ರಾಮದಲ್ಲಿ ನಾನು ಸೋತಿದ್ದೇನೆ ಆದರೆ ಪ್ರಕರಣ ನ್ಯಾಯಾಲಯದಲ್ಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ಸೋಲಿನ ನಂತರ ‘ನಕಲಿ ಮತ’ ಆರೋಪ

ಇದರ ನಡುವೆ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೇವಾಲ್ ತಮ್ಮ ಸೋಲಿಗೆ ‘ನಕಲಿ ಮತದಾರರು ಕಾರಣ’ ಎಂದು ಆರೋಪಿಸಿದ್ದಾರೆ. “ಜನರು ಮತ ಚಲಾಯಿಸಲು ಅವಕಾಶ ನೀಡಿದ್ದರೆ, ಫಲಿತಾಂಶವು ವಿಭಿನ್ನವಾಗಿರುತ್ತಿತ್ತು. ಮತದಾನದ ದಿನವೂ ನಾನು ನಕಲಿ ಮತದಾರರನ್ನು ಹಿಡಿದಿದ್ದೇನೆ. ಹಲವು ಬೂತ್‌ಗಳಲ್ಲಿ ಮತಯಂತ್ರಗಳನ್ನು ಕಳ್ಳತನ ಮಾಡಲಾಗಿದೆ. ಆದರೆ ಭಬಾನಿಪುರದಲ್ಲಿ ನಮ್ಮ ಸಂಘಟನೆ ದುರ್ಬಲವಾಗಿತ್ತು ಎಂದು ನಾನು ಒಪ್ಪಿಕೊಳ್ಳುತ್ತೇನೆ. ನಾವು ಇದನ್ನು ಸುಧಾರಿಸಬೇಕು” ಎಂದು ತಿಬ್ರೇವಾಲ್‌ ಆರೋಪಿಸಿದ್ದಾರೆ.

ಮುರ್ಶಾಬಾದ್‌ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮುರ್ಶಾಬಾದ್‌ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ತೃಣಮೂಲ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಸಂಸರ್‌ಜಂಗ್‌ನ ಟಿಎಂಸಿ ಅಭ್ಯರ್ಥಿ ಐದನೇ ಸುತ್ತಿನ ಮತ ಎಣಿಕೆ 3,768 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಜಂಗೀಪರದ ಟಿಎಂಸಿ ಅಭ್ಯರ್ಥಿ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ 15,643 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಬಿಗಿ ಭದ್ರತೆ

ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಕೈಗೊಂಡಿದ್ದರು. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿತ್ತು. 24 ಕಂಪನಿಗಳ ಕೇಂದ್ರ ಪಡೆಗಳನ್ನು ಎಣಿಕೆ ಕೇಂದ್ರಗಳಲ್ಲಿ ನಿಯೋಜಿಸಲಾಗಿತ್ತು. ಇಡೀ ಪ್ರದೇಶವನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ಇಡಲಾಗಿತ್ತು.

ಇದನ್ನೂ ಓದಿ: ರೋಮ್‌ ಭೇಟಿಗೆ ಅನುಮತಿ ನಿರಾಕರಣೆ: ಕೇಂದ್ರದ ‘ಅಸೂಯೆ’ ಎಂದ ದೀದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ನೋಡಿ ಗೆದ್ದ ಟಿಎಂಸಿ ಸೋತ ಬಿಜೆಪಿ ಅಭ್ಯರ್ಥಿ ಮನೆ ಸುಡುವುದು,ಬೆಂಕಿ ಹಚ್ಚುವುದು, ಬಿಜೆಪಿ ಪರ ಓಡಾಡಿದ ಮಹಿಳೆ ರೇಪ್ ಮಾಡುವುದು ಸಾಮಾನ್ಯ ಕಾರ್ಯ ಎನಿಸುತ್ತೇ ಇದನ್ನು ನೋಡಿ ಸಾಕಾಗಿ ಬಿಜೆಪಿಗೆ ಓಡಾಡಿದ ಜನ ಸದ್ದಿಲ್ಲದೆ ಟಿಎಂಸಿ ಸೇರಿ ಕೊಂಡು ಉಸಿರು ಬಿಡುತ್ತಾರೆ…!!
    #wastePM #GreatSecularTMC

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...