Homeಮುಖಪುಟ‘ಮಾ, ಮಟಿ, ಮನುಷ್‌’ ಎಂದು ಮೂರು ಬೆರಳೆತ್ತಿ ದಿಗ್ವಿಜಯ ಸಂಭ್ರಮಿಸಿದ ದೀದಿ

‘ಮಾ, ಮಟಿ, ಮನುಷ್‌’ ಎಂದು ಮೂರು ಬೆರಳೆತ್ತಿ ದಿಗ್ವಿಜಯ ಸಂಭ್ರಮಿಸಿದ ದೀದಿ

58,832 ಮತಗಳ ಅಂತರದಲ್ಲಿ ಗೆಲುವು, ಮಮತಾ ಬ್ಯಾನರ್ಜಿಯವರ ಮುಖ್ಯಮಂತ್ರಿ ಕುರ್ಚಿ ಭದ್ರ; ಸೋಲಿನ ಬಳಿಕ ‘ನಕಲಿ ಮತ’ ಆರೋಪ ಮಾಡಿದ ಬಿಜೆಪಿ ಅಭ್ಯರ್ಥಿ

- Advertisement -
- Advertisement -

ಪಶ್ಚಿಮ ಬಂಗಾಳದ ಭಬನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭಾರೀ ಅಂತರದಲ್ಲಿ ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಯವರು ಗೆಲುವು ಸಾಧಿಸಿದ್ದು, ಮುಖ್ಯಮಂತ್ರಿಯಾಗಿ ಮುಂದುವರಿಯಲು ಇದ್ದ ತೊಡಕು ನಿವಾರಣೆಯಾಗಿದೆ.

ಮಾರ್ಚ್-ಏಪ್ರಿಲ್‌‌ನಲ್ಲಿ ನಡೆದ ಚುನಾವಣೆಯಲ್ಲಿ ನಂದೀಗ್ರಾಮ ಕ್ಷೇತ್ರದಲ್ಲಿ ಮಮತಾ ಬ್ಯಾನರ್ಜಿಯವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದರು. ಬಹುಮತ ಪಡೆದ ಟಿಎಂಸಿ ಅಧಿಕಾರ ಹಿಡಿದಿತ್ತು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮಮತಾ ಅವರು, ಮುಖ್ಯಮಂತ್ರಿಯಾಗಿ ಮುಂದುವರಿಯಬೇಕಾದರೆ ಆರು ತಿಂಗಳ ನಂತರ ಶಾಸಕರಾಗಿ ಆಯ್ಕೆಯಾಗುವುದು ಅನಿವಾರ್ಯವಾಗಿತ್ತು. ಹೀಗಾಗಿ ತಮ್ಮ ಸಾಂಪ್ರದಾಯಿಕ ಕ್ಷೇತ್ರದಲ್ಲಿಯೇ ಚುನಾವಣೆ ಎದುರಿಸಲು ನಿರ್ಧರಿಸಿ, ಸಚಿವ ಹಾಗೂ ಶಾಸಕ  ಸೋವಂದೇಬ್ ಚಟ್ಟೋಪಾಧ್ಯಾಯ ಅವರಿಂದ ರಾಜೀನಾಮೆ ಕೊಡಿಸಿದ್ದರು. ಸೆ.30ರಂದು (ಗುರುವಾರ) ಮತದಾನ ನಡೆದಿದ್ದು, ಆ.3ರಂದು (ಭಾನುವಾರ) ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕ ತಿಬ್ರೇವಾಲ್‌ ಅವರನ್ನು ಸುಲಭವಾಗಿ ಸೋಲಿಸಿರುವ ದೀದಿ, ತಮ್ಮ ಸಿಎಂ ಸ್ಥಾನವನ್ನು ಭದ್ರ ಮಾಡಿಕೊಂಡಿದ್ದಾರೆ.

58,832 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದು, “ಇದು ನಂದಿಗ್ರಾಮದಲ್ಲಿ ನನ್ನನ್ನು ಸೋಲಿಸಲು ರೂಪಿಸಿದ ಪಿತೂರಿಯ ವಿರುದ್ಧದ ಗೆಲುವು ಇದು. ನನಗೆ ಇಷ್ಟು ದೊಡ್ಡ ಜನಾದೇಶ ನೀಡಿದ ಭಬನಿಪುರದ ಜನರಿಗೆ ಧನ್ಯವಾದ ಹೇಳುತ್ತೇನೆ” ಎಂದಿದ್ದಾರೆ. 2011ರ ಚುನಾವಣೆಯಲ್ಲಿ ಪಡೆದ ಮತಗಳಿಂದ ಹೆಚ್ಚು ಮತಗಳನ್ನು ಮಮತಾ ಬ್ಯಾನರ್ಜಿ ಈ ಚುನಾವಣೆಯಲ್ಲಿ ಪಡೆದಿದ್ದಾರೆ ಎನ್ನಲಾಗಿದೆ.

“ಅತ್ಯಂತ ಹೃದಯಸ್ಪರ್ಶಿ ಸಂಗತಿಯೆಂದರೆ, ನಾನು ಕ್ಷೇತ್ರದಲ್ಲಿ ಒಂದೇ ಒಂದು ವಾರ್ಡ್‌ನಲ್ಲಿಯೂ ಸೋತಿಲ್ಲ. ಕಳೆದ ಬಾರಿ, ನಾನು ಒಂದೆರಡು ವಾರ್ಡ್‌ಗಳಲ್ಲಿ ಹಿಂದುಳಿದಿದ್ದೆ. ಏಪ್ರಿಲ್ ಚುನಾವಣೆಯಲ್ಲಿ ನಮ್ಮ ವಿರುದ್ಧ ಸಾಕಷ್ಟು ಪಿತೂರಿಗಳು ನಡೆದಿವೆ. ನಾವು ಗೆದ್ದಿದ್ದಕ್ಕೆ ನಾವು ಕೃತಜ್ಞರಾಗಿರುತ್ತೇವೆ. ನಂದಿಗ್ರಾಮದಲ್ಲಿ ನಾನು ಸೋತಿದ್ದೇನೆ ಆದರೆ ಪ್ರಕರಣ ನ್ಯಾಯಾಲಯದಲ್ಲಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಭಾರತವನ್ನು ತಾಲಿಬಾನ್, ಪಾಕಿಸ್ತಾನ ಆಗಲು ಬಿಡುವುದಿಲ್ಲ- ಮಮತಾ ಬ್ಯಾನರ್ಜಿ

ಸೋಲಿನ ನಂತರ ‘ನಕಲಿ ಮತ’ ಆರೋಪ

ಇದರ ನಡುವೆ ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೇವಾಲ್ ತಮ್ಮ ಸೋಲಿಗೆ ‘ನಕಲಿ ಮತದಾರರು ಕಾರಣ’ ಎಂದು ಆರೋಪಿಸಿದ್ದಾರೆ. “ಜನರು ಮತ ಚಲಾಯಿಸಲು ಅವಕಾಶ ನೀಡಿದ್ದರೆ, ಫಲಿತಾಂಶವು ವಿಭಿನ್ನವಾಗಿರುತ್ತಿತ್ತು. ಮತದಾನದ ದಿನವೂ ನಾನು ನಕಲಿ ಮತದಾರರನ್ನು ಹಿಡಿದಿದ್ದೇನೆ. ಹಲವು ಬೂತ್‌ಗಳಲ್ಲಿ ಮತಯಂತ್ರಗಳನ್ನು ಕಳ್ಳತನ ಮಾಡಲಾಗಿದೆ. ಆದರೆ ಭಬಾನಿಪುರದಲ್ಲಿ ನಮ್ಮ ಸಂಘಟನೆ ದುರ್ಬಲವಾಗಿತ್ತು ಎಂದು ನಾನು ಒಪ್ಪಿಕೊಳ್ಳುತ್ತೇನೆ. ನಾವು ಇದನ್ನು ಸುಧಾರಿಸಬೇಕು” ಎಂದು ತಿಬ್ರೇವಾಲ್‌ ಆರೋಪಿಸಿದ್ದಾರೆ.

ಮುರ್ಶಾಬಾದ್‌ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭಾ ಕ್ಷೇತ್ರಗಳಲ್ಲೂ ಗೆಲುವು ಸಾಧಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಮುರ್ಶಾಬಾದ್‌ ಜಿಲ್ಲೆಯ ಜಂಗೀಪುರ ಮತ್ತು ಸಂಸರ್‌ಗಂಜ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ತೃಣಮೂಲ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಸಂಸರ್‌ಜಂಗ್‌ನ ಟಿಎಂಸಿ ಅಭ್ಯರ್ಥಿ ಐದನೇ ಸುತ್ತಿನ ಮತ ಎಣಿಕೆ 3,768 ಮತಗಳ ಅಂತರ ಕಾಯ್ದುಕೊಂಡಿದ್ದಾರೆ. ಜಂಗೀಪರದ ಟಿಎಂಸಿ ಅಭ್ಯರ್ಥಿ ಎರಡನೇ ಸುತ್ತಿನ ಮತ ಎಣಿಕೆಯಲ್ಲಿ 15,643 ಮತಗಳ ಅಂತರ ಕಾಯ್ದುಕೊಂಡಿದ್ದಾರೆ.

ಬಿಗಿ ಭದ್ರತೆ

ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಕೈಗೊಂಡಿದ್ದರು. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿತ್ತು. 24 ಕಂಪನಿಗಳ ಕೇಂದ್ರ ಪಡೆಗಳನ್ನು ಎಣಿಕೆ ಕೇಂದ್ರಗಳಲ್ಲಿ ನಿಯೋಜಿಸಲಾಗಿತ್ತು. ಇಡೀ ಪ್ರದೇಶವನ್ನು ಸಿಸಿಟಿವಿ ಕಣ್ಗಾವಲಿನಲ್ಲಿ ಇಡಲಾಗಿತ್ತು.

ಇದನ್ನೂ ಓದಿ: ರೋಮ್‌ ಭೇಟಿಗೆ ಅನುಮತಿ ನಿರಾಕರಣೆ: ಕೇಂದ್ರದ ‘ಅಸೂಯೆ’ ಎಂದ ದೀದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈಗ ನೋಡಿ ಗೆದ್ದ ಟಿಎಂಸಿ ಸೋತ ಬಿಜೆಪಿ ಅಭ್ಯರ್ಥಿ ಮನೆ ಸುಡುವುದು,ಬೆಂಕಿ ಹಚ್ಚುವುದು, ಬಿಜೆಪಿ ಪರ ಓಡಾಡಿದ ಮಹಿಳೆ ರೇಪ್ ಮಾಡುವುದು ಸಾಮಾನ್ಯ ಕಾರ್ಯ ಎನಿಸುತ್ತೇ ಇದನ್ನು ನೋಡಿ ಸಾಕಾಗಿ ಬಿಜೆಪಿಗೆ ಓಡಾಡಿದ ಜನ ಸದ್ದಿಲ್ಲದೆ ಟಿಎಂಸಿ ಸೇರಿ ಕೊಂಡು ಉಸಿರು ಬಿಡುತ್ತಾರೆ…!!
    #wastePM #GreatSecularTMC

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...