Homeಕರ್ನಾಟಕಮದ್ದೂರು | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ : ಕಾರ್ಮಿಕರು ಆಸ್ಪತ್ರೆಗೆ ದಾಖಲು

ಮದ್ದೂರು | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ : ಕಾರ್ಮಿಕರು ಆಸ್ಪತ್ರೆಗೆ ದಾಖಲು

ಕಾರ್ಖಾನೆ ಆಡಳಿತದ ಬೇಜವಾಬ್ದಾರಿಗೆ ಕಾರ್ಮಿಕರ ಜೀವನ ಬಲಿ

- Advertisement -
- Advertisement -

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜೆಲಗೆರೆ ಕೈಗಾರಿಕಾ ಪ್ರದೇಶದ ಗಾರ್ಮೆಂಟ್ಸ್ ಕಾರ್ಖಾನೆಯೊಂದರ ಬೇಜವಾಬ್ದಾರಿಯಿಂದಾಗಿ ಕಾರ್ಮಿಕರು ಆಸ್ಪತ್ರೆ ಸೇರಿ ನರಳುವಂತಾಗಿದೆ.

ಗುರುವಾರ (ಫೆ.20) ಕಾರ್ಖಾನೆಯಲ್ಲಿ ನಡೆದ ಎರಡು ಪ್ರತ್ಯೇಕ ಅವಘಡಗಳಲ್ಲಿ ಮೂವರು ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಒಬ್ಬರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲೇ ಇದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.

ಗುರುವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕಾರ್ಖಾನೆಯಲ್ಲಿ ಮೊದಲ ಅವಘಡ ಸಂಭವಿಸಿದೆ. ಪ್ರಿಂಟಿಂಗ್ ವಿಭಾಗದಲ್ಲಿ ಸ್ಪಾಟ್ ಲಿಕ್ಕರ್ (ಸ್ಪ್ರೇ ಬಾಟಲ್) ನಿಂದ ಕೆಮಿಕಲ್ ಸ್ಪೋಟಗೊಂಡ ಪರಿಣಾಮ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿವಕುಮಾರ್ ಮತ್ತು ಪ್ರಸನ್ನ ಎಂಬವರಿಗೆ ತೀವ್ರ ತರಹದ ಸುಟ್ಟ ಗಾಯಗಳಾಗಿವೆ. ಇನ್ನೊಬ್ಬರು ಮಹಿಳಾ ಕಾರ್ಮಿಕರಾದ ಲಕ್ಷ್ಮೀ ಎಂಬವರು ಪ್ರಜ್ಞಾಹೀನರಾಗಿದ್ದರು. ಪ್ರಥಮ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ.

ತೀವ್ರತರದ ಸುಟ್ಟ ಗಾಯಗಳಿಂದ ನರಳುತ್ತಿರುವ ಕಾರ್ಮಿಕ ಶಿವಕುಮಾರ್

ಅವಘಡದಲ್ಲಿ ಶಿವಕುಮಾರ್ ಮತ್ತು ಪ್ರಸನ್ನ ಅವರ ಕೈಗಳು ಮತ್ತು ಮುಖ ಸುಟ್ಟಿದೆ. ದುರಂತ ನಡೆದಾಗ ಗಂಭೀರ ಸ್ಥಿತಿಯಲ್ಲಿದ್ದ ಇವರಿಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಕರೆದೊಯ್ಯದ ಕಾರ್ಖಾನೆ ಆಡಳಿತ, ತುಂಬಾ ಹೊತ್ತು ಕಾಯಿಸಿ, ಬಳಿಕ ಮದ್ದೂರಿನ ಸಿದ್ದೇಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿದೆ. ಅಲ್ಲಿ ಚಿಕಿತ್ಸೆ ಕೊಡಿಸಿ ಆಂಬ್ಯುಲೆನ್ಸ್‌ನಲ್ಲಿ ವಾಪಸ್ ಕಾರ್ಖಾನೆಗೆ ಕರೆತಂದು ಆಂಬ್ಯುಲೆನ್ಸ್‌ನಲ್ಲೇ ಒಂದು ಗಂಟೆ ಕಾಲ ಇರಿಸಿ, ನಂತರ ಮನೆಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ ಎಂದು ಕರ್ನಾಟಕ ಇಂಡಿಪೆಂಡೆಂಟ್ ಗಾರ್ಮೆಂಟ್ ವರ್ಕರ್ಸ್ ಯೂನಿಯನ್ (ಕೆಐಜಿಡಬ್ಲ್ಯುಯು) ಪ್ರಧಾನ ಕಾರ್ಯದರ್ಶಿ ಜಯರಾಮ್ ಎ.ಹೆಚ್ ದೂರಿದ್ದಾರೆ.

ಕಾರ್ಮಿಕ ಪ್ರಸನ್ನ ಅವರಿಗೆ ಗಾಯಗಳಾಗಿರುವುದು

ಶಿವಕುಮಾರ್ ಅವರ ಪರಿಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಮನೆಯವರು ಮಂಡ್ಯ ಜಿಲ್ಲಾಸ್ಪತ್ರೆ ಮಿಮ್ಸ್‌ಗೆ ದಾಖಲಿಸಿದ್ದಾರೆ. ಅಲ್ಲಿ ತುರ್ತು ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಿದ್ದಾರೆ ಎಂದು ಜಯರಾಮ್ ತಿಳಿಸಿದ್ದಾರೆ.

ಶಿವಕುಮಾರ್ ಅವರನ್ನು ಮಿಮ್ಸ್‌ನಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು

ಕೆಮಿಕಲ್ ಬ್ಲಾಸ್ಟ್ ಅವಘಡದ ಸ್ವಲ್ಪ ಹೊತ್ತಿನ ಬಳಿಕ ಕಾರ್ಖಾನೆಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಇದರಲ್ಲಿ ಫ್ಲೋರ್ ಕಟ್ಟಿಂಗ್ ವೇಳೆ ಎಂ. ಅವಿನಾಶ್ ಎಂಬ ಕಾರ್ಮಿಕನ ಎಡಗೈನ ಮುಂಗೈಗೆ ತೀವ್ರವಾದ ಪೆಟ್ಟು ಬಿದ್ದಿದೆ. ಇವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅವಿನಾಶ್ ಅವರಿಗೆ ತೀವ್ರ ಪೆಟ್ಟಾಗಿರುವ ಕಾರಣ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಕೆಐಜಿಡಬ್ಲ್ಯುಯು ಸಂಘಟನಾ ಕಾರ್ಯದರ್ಶಿ ಉಮೇಶ್ ಮಾಹಿತಿ ನೀಡಿದ್ದಾರೆ.

ಗಾಯಗೊಂಡ ಅವಿನಾಶ್ ಅವರದ್ದು ವೆಲ್ಡಿಂಗ್ ಕೆಲಸ. ಆದರೆ, ಕಾರ್ಖಾನೆಯ ಸೂಪರ್ ವೈಝರ್ ಯಾವುದೇ ಸುರಕ್ಷಾ ಕ್ರಮಗಳಿಲ್ಲದೆ ಅವರು ಮಾಡದೇ ಇರುವ ಫ್ಲೋರ್ ಕಟ್ಟಿಂಗ್ ಕೆಲಸ ಮಾಡಿಸಿದ್ದಾರೆ ಎಂದು ಉಮೇಶ್ ಆರೋಪಿಸಿದ್ದಾರೆ.

ಮದ್ದೂರಿನ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಆಗಾಗ ಈ ರೀತಿಯ ಅವಘಡಗಳು ನಡೆಯುತ್ತಲೇ ಇರುತ್ತವೆ. ಅಲ್ಲಿ ಕಾರ್ಮಿಕರನ್ನು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ದುಡಿಸಲಾಗುತ್ತಿದೆ. ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಕೆಲ ತಿಂಗಳ ಹೀಟಿಂಗ್ ಮೆಷಿನ್ ಇಟ್ಟಿದ ಟೇಬಲ್‌ನ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ತುಂಡಾದ ಕಾರಣ, ಮೆಷಿನ್ ಕೆಳಗೆ ಬಿದ್ದಿತ್ತು. ಈ ವೇಳೆ ಮಹಿಳಾ ಕಾರ್ಮಿಕರೊಬ್ಬರ ಕಾಲಿಗೆ ಗಾಯವಾಗಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅವಘಡ ತಪ್ಪಿದೆ. ಕಾರ್ಖಾನೆ ಆಡಳಿತ ಗಾಯಗೊಂಡವರನ್ನು ಬೆದರಿಸಿ ಶೌಚಾಲಯದಲ್ಲಿ ಬಿದ್ದು ಗಾಯವಾಗಿದೆ ಎಂದು ಹೇಳಿಸಿದೆ. ಕಂಬಗಳು ತುಕ್ಕು ಹಿಡಿದ ಬಗ್ಗೆ ಕಾರ್ಮಿಕರು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಉಮೇಶ್ ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ಪ್ರಿಂಟಿಂಗ್ ವಿಭಾಗದಲ್ಲಿ ಕಾರ್ಮಿರೊಬ್ಬರ ಹೊಟ್ಟೆಯ ಭಾಗಕ್ಕೆ ಮೆಷಿನ್ ತಾಗಿತ್ತು. ಅವರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದರು. ಈ ರೀತಿಯ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ ಕಾರ್ಖಾನೆ ಅಡಳಿತ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಉಮೇಶ್ ದೂರಿದ್ದಾರೆ.

ಗುರುವಾರ ನಡೆದ ಅವಘಡದಲ್ಲಿ ಗಾಯಗೊಂಡ ಕಾರ್ಮಿಕರಿಗೆ ಕಾನೂನು ಪ್ರಕಾರ ಸಿಗಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಬೇಕು ಮತ್ತು ಕಾರ್ಖಾನೆ ಅಡಳಿತ ತಾವು ಮಾಡಬೇಕಾದ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಆಗ್ರಹಿಸಿದ್ದೇವೆ. ಅವರು ನಿರ್ಲಕ್ಷ್ಯ ವಹಿಸಿದರೆ ಮುಂದಿನ ನಡೆಯ ಬಗ್ಗೆ ಯೋಚಿಸುತ್ತೇವೆ ಎಂದು ಉಮೇಶ್ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಣದ ಸಚಿವರೇ ರಾಜ್ಯ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...