Homeಕರ್ನಾಟಕಮದ್ದೂರು | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ : ಕಾರ್ಮಿಕರು ಆಸ್ಪತ್ರೆಗೆ ದಾಖಲು

ಮದ್ದೂರು | ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಫೋಟ : ಕಾರ್ಮಿಕರು ಆಸ್ಪತ್ರೆಗೆ ದಾಖಲು

ಕಾರ್ಖಾನೆ ಆಡಳಿತದ ಬೇಜವಾಬ್ದಾರಿಗೆ ಕಾರ್ಮಿಕರ ಜೀವನ ಬಲಿ

- Advertisement -
- Advertisement -

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜೆಲಗೆರೆ ಕೈಗಾರಿಕಾ ಪ್ರದೇಶದ ಗಾರ್ಮೆಂಟ್ಸ್ ಕಾರ್ಖಾನೆಯೊಂದರ ಬೇಜವಾಬ್ದಾರಿಯಿಂದಾಗಿ ಕಾರ್ಮಿಕರು ಆಸ್ಪತ್ರೆ ಸೇರಿ ನರಳುವಂತಾಗಿದೆ.

ಗುರುವಾರ (ಫೆ.20) ಕಾರ್ಖಾನೆಯಲ್ಲಿ ನಡೆದ ಎರಡು ಪ್ರತ್ಯೇಕ ಅವಘಡಗಳಲ್ಲಿ ಮೂವರು ಕಾರ್ಮಿಕರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಪೈಕಿ ಒಬ್ಬರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದು, ಇನ್ನಿಬ್ಬರು ಆಸ್ಪತ್ರೆಯಲ್ಲೇ ಇದ್ದಾರೆ. ಇವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ.

ಗುರುವಾರ ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕಾರ್ಖಾನೆಯಲ್ಲಿ ಮೊದಲ ಅವಘಡ ಸಂಭವಿಸಿದೆ. ಪ್ರಿಂಟಿಂಗ್ ವಿಭಾಗದಲ್ಲಿ ಸ್ಪಾಟ್ ಲಿಕ್ಕರ್ (ಸ್ಪ್ರೇ ಬಾಟಲ್) ನಿಂದ ಕೆಮಿಕಲ್ ಸ್ಪೋಟಗೊಂಡ ಪರಿಣಾಮ ಅಲ್ಲೇ ಕೆಲಸ ಮಾಡುತ್ತಿದ್ದ ಕಾರ್ಮಿಕರಾದ ಶಿವಕುಮಾರ್ ಮತ್ತು ಪ್ರಸನ್ನ ಎಂಬವರಿಗೆ ತೀವ್ರ ತರಹದ ಸುಟ್ಟ ಗಾಯಗಳಾಗಿವೆ. ಇನ್ನೊಬ್ಬರು ಮಹಿಳಾ ಕಾರ್ಮಿಕರಾದ ಲಕ್ಷ್ಮೀ ಎಂಬವರು ಪ್ರಜ್ಞಾಹೀನರಾಗಿದ್ದರು. ಪ್ರಥಮ ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ.

ತೀವ್ರತರದ ಸುಟ್ಟ ಗಾಯಗಳಿಂದ ನರಳುತ್ತಿರುವ ಕಾರ್ಮಿಕ ಶಿವಕುಮಾರ್

ಅವಘಡದಲ್ಲಿ ಶಿವಕುಮಾರ್ ಮತ್ತು ಪ್ರಸನ್ನ ಅವರ ಕೈಗಳು ಮತ್ತು ಮುಖ ಸುಟ್ಟಿದೆ. ದುರಂತ ನಡೆದಾಗ ಗಂಭೀರ ಸ್ಥಿತಿಯಲ್ಲಿದ್ದ ಇವರಿಬ್ಬರನ್ನೂ ತಕ್ಷಣ ಆಸ್ಪತ್ರೆಗೆ ಕರೆದೊಯ್ಯದ ಕಾರ್ಖಾನೆ ಆಡಳಿತ, ತುಂಬಾ ಹೊತ್ತು ಕಾಯಿಸಿ, ಬಳಿಕ ಮದ್ದೂರಿನ ಸಿದ್ದೇಗೌಡ ಆಸ್ಪತ್ರೆಗೆ ಕರೆದುಕೊಂಡು ಹೋಗಿದೆ. ಅಲ್ಲಿ ಚಿಕಿತ್ಸೆ ಕೊಡಿಸಿ ಆಂಬ್ಯುಲೆನ್ಸ್‌ನಲ್ಲಿ ವಾಪಸ್ ಕಾರ್ಖಾನೆಗೆ ಕರೆತಂದು ಆಂಬ್ಯುಲೆನ್ಸ್‌ನಲ್ಲೇ ಒಂದು ಗಂಟೆ ಕಾಲ ಇರಿಸಿ, ನಂತರ ಮನೆಗೆ ಕರೆದುಕೊಂಡು ಹೋಗಿ ಬಿಟ್ಟಿದ್ದಾರೆ ಎಂದು ಕರ್ನಾಟಕ ಇಂಡಿಪೆಂಡೆಂಟ್ ಗಾರ್ಮೆಂಟ್ ವರ್ಕರ್ಸ್ ಯೂನಿಯನ್ (ಕೆಐಜಿಡಬ್ಲ್ಯುಯು) ಪ್ರಧಾನ ಕಾರ್ಯದರ್ಶಿ ಜಯರಾಮ್ ಎ.ಹೆಚ್ ದೂರಿದ್ದಾರೆ.

ಕಾರ್ಮಿಕ ಪ್ರಸನ್ನ ಅವರಿಗೆ ಗಾಯಗಳಾಗಿರುವುದು

ಶಿವಕುಮಾರ್ ಅವರ ಪರಿಸ್ಥಿತಿ ಗಂಭೀರವಾಗಿರುವುದನ್ನು ಗಮನಿಸಿದ ಮನೆಯವರು ಮಂಡ್ಯ ಜಿಲ್ಲಾಸ್ಪತ್ರೆ ಮಿಮ್ಸ್‌ಗೆ ದಾಖಲಿಸಿದ್ದಾರೆ. ಅಲ್ಲಿ ತುರ್ತು ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಿದ್ದಾರೆ ಎಂದು ಜಯರಾಮ್ ತಿಳಿಸಿದ್ದಾರೆ.

ಶಿವಕುಮಾರ್ ಅವರನ್ನು ಮಿಮ್ಸ್‌ನಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು

ಕೆಮಿಕಲ್ ಬ್ಲಾಸ್ಟ್ ಅವಘಡದ ಸ್ವಲ್ಪ ಹೊತ್ತಿನ ಬಳಿಕ ಕಾರ್ಖಾನೆಯಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ಇದರಲ್ಲಿ ಫ್ಲೋರ್ ಕಟ್ಟಿಂಗ್ ವೇಳೆ ಎಂ. ಅವಿನಾಶ್ ಎಂಬ ಕಾರ್ಮಿಕನ ಎಡಗೈನ ಮುಂಗೈಗೆ ತೀವ್ರವಾದ ಪೆಟ್ಟು ಬಿದ್ದಿದೆ. ಇವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಜೆಎಸ್‌ಎಸ್‌ ಆಸ್ಪತ್ರೆಗೆ ಕಳುಹಿಸಿದ್ದಾರೆ. ಅವಿನಾಶ್ ಅವರಿಗೆ ತೀವ್ರ ಪೆಟ್ಟಾಗಿರುವ ಕಾರಣ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಕೆಐಜಿಡಬ್ಲ್ಯುಯು ಸಂಘಟನಾ ಕಾರ್ಯದರ್ಶಿ ಉಮೇಶ್ ಮಾಹಿತಿ ನೀಡಿದ್ದಾರೆ.

ಗಾಯಗೊಂಡ ಅವಿನಾಶ್ ಅವರದ್ದು ವೆಲ್ಡಿಂಗ್ ಕೆಲಸ. ಆದರೆ, ಕಾರ್ಖಾನೆಯ ಸೂಪರ್ ವೈಝರ್ ಯಾವುದೇ ಸುರಕ್ಷಾ ಕ್ರಮಗಳಿಲ್ಲದೆ ಅವರು ಮಾಡದೇ ಇರುವ ಫ್ಲೋರ್ ಕಟ್ಟಿಂಗ್ ಕೆಲಸ ಮಾಡಿಸಿದ್ದಾರೆ ಎಂದು ಉಮೇಶ್ ಆರೋಪಿಸಿದ್ದಾರೆ.

ಮದ್ದೂರಿನ ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಆಗಾಗ ಈ ರೀತಿಯ ಅವಘಡಗಳು ನಡೆಯುತ್ತಲೇ ಇರುತ್ತವೆ. ಅಲ್ಲಿ ಕಾರ್ಮಿಕರನ್ನು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ದುಡಿಸಲಾಗುತ್ತಿದೆ. ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲದಂತಾಗಿದೆ. ಕೆಲ ತಿಂಗಳ ಹೀಟಿಂಗ್ ಮೆಷಿನ್ ಇಟ್ಟಿದ ಟೇಬಲ್‌ನ ಕಬ್ಬಿಣದ ಕಂಬಗಳು ತುಕ್ಕು ಹಿಡಿದು ತುಂಡಾದ ಕಾರಣ, ಮೆಷಿನ್ ಕೆಳಗೆ ಬಿದ್ದಿತ್ತು. ಈ ವೇಳೆ ಮಹಿಳಾ ಕಾರ್ಮಿಕರೊಬ್ಬರ ಕಾಲಿಗೆ ಗಾಯವಾಗಿದೆ. ಅದೃಷ್ಟವಶಾತ್ ದೊಡ್ಡ ಮಟ್ಟದ ಅವಘಡ ತಪ್ಪಿದೆ. ಕಾರ್ಖಾನೆ ಆಡಳಿತ ಗಾಯಗೊಂಡವರನ್ನು ಬೆದರಿಸಿ ಶೌಚಾಲಯದಲ್ಲಿ ಬಿದ್ದು ಗಾಯವಾಗಿದೆ ಎಂದು ಹೇಳಿಸಿದೆ. ಕಂಬಗಳು ತುಕ್ಕು ಹಿಡಿದ ಬಗ್ಗೆ ಕಾರ್ಮಿಕರು ಸಂಬಂಧಪಟ್ಟವರ ಗಮನಕ್ಕೆ ತಂದಿದ್ದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಉಮೇಶ್ ತಿಳಿಸಿದ್ದಾರೆ.

ಮತ್ತೊಂದು ಘಟನೆಯಲ್ಲಿ ಪ್ರಿಂಟಿಂಗ್ ವಿಭಾಗದಲ್ಲಿ ಕಾರ್ಮಿರೊಬ್ಬರ ಹೊಟ್ಟೆಯ ಭಾಗಕ್ಕೆ ಮೆಷಿನ್ ತಾಗಿತ್ತು. ಅವರು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದರು. ಈ ರೀತಿಯ ಘಟನೆಗಳು ಪದೇ ಪದೇ ನಡೆಯುತ್ತಿದ್ದರೂ ಕಾರ್ಖಾನೆ ಅಡಳಿತ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ ಎಂದು ಉಮೇಶ್ ದೂರಿದ್ದಾರೆ.

ಗುರುವಾರ ನಡೆದ ಅವಘಡದಲ್ಲಿ ಗಾಯಗೊಂಡ ಕಾರ್ಮಿಕರಿಗೆ ಕಾನೂನು ಪ್ರಕಾರ ಸಿಗಬೇಕಾದ ಸೌಲಭ್ಯಗಳನ್ನು ದೊರಕಿಸಿಕೊಡಬೇಕು ಮತ್ತು ಕಾರ್ಖಾನೆ ಅಡಳಿತ ತಾವು ಮಾಡಬೇಕಾದ ಜವಾಬ್ದಾರಿಯನ್ನು ನಿರ್ವಹಿಸಬೇಕೆಂದು ಆಗ್ರಹಿಸಿದ್ದೇವೆ. ಅವರು ನಿರ್ಲಕ್ಷ್ಯ ವಹಿಸಿದರೆ ಮುಂದಿನ ನಡೆಯ ಬಗ್ಗೆ ಯೋಚಿಸುತ್ತೇವೆ ಎಂದು ಉಮೇಶ್ ಹೇಳಿದ್ದಾರೆ.

ಸಿಎಂ ಸಿದ್ದರಾಮಯ್ಯ ಬಣದ ಸಚಿವರೇ ರಾಜ್ಯ ಕಾಂಗ್ರೆಸ್‌ನ ಮುಂದಿನ ಅಧ್ಯಕ್ಷ – ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...