Homeಕರ್ನಾಟಕಮದ್ದೂರು ತಮಿಳು ಕಾಲೋನಿ ನಿವಾಸಿಗಳಿಂದ ಭೂಕಬಳಿಕೆ ವಿರೋಧಿಸಿ ಅಹೋರಾತ್ರಿ ಪ್ರತಿಭಟನೆ: ಅಧಿಕಾರಿಗಳಿಗೆ ಚಾಟಿ ಬೀಸಿದ ಜಿಲ್ಲಾಧಿಕಾರಿ...

ಮದ್ದೂರು ತಮಿಳು ಕಾಲೋನಿ ನಿವಾಸಿಗಳಿಂದ ಭೂಕಬಳಿಕೆ ವಿರೋಧಿಸಿ ಅಹೋರಾತ್ರಿ ಪ್ರತಿಭಟನೆ: ಅಧಿಕಾರಿಗಳಿಗೆ ಚಾಟಿ ಬೀಸಿದ ಜಿಲ್ಲಾಧಿಕಾರಿ ಡಾ. ಕುಮಾರ್

- Advertisement -
- Advertisement -

ಮಂಡ್ಯ: ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಮತ್ತು ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ನೇತೃತ್ವದಲ್ಲಿ ಮಂಡ್ಯದ ಜಿಲ್ಲಾಧಿಕಾರಿ ಎದುರು ನಡೆಯುತ್ತಿರುವ ‘ಅಹೋರಾತ್ರಿ ಪ್ರತಿಭಟನೆ’ಯು ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ಜಿಲ್ಲಾಡಳಿತದ ಗಮನ ಸೆಳೆದಿದೆ. ಪ್ರತಿಭಟನಾನಿರತರ ಬೇಡಿಕೆಗಳಿಗೆ ಸ್ಪಂದಿಸದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.

ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳ ಎಚ್ಚರಿಕೆ

ಮದ್ದೂರು ತಮಿಳು ಕಾಲೋನಿಯ ಜಾಗದ ವಿಚಾರವಾಗಿ ಕಳೆದ ಏಳು ದಿನಗಳಿಂದ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಭೇಟಿ ಮಾಡಲು (ಭಾನುವಾರ) ಬಂದಿದ್ದ ಜಿಲ್ಲಾಧಿಕಾರಿಗಳು, ಈ ಸಂದರ್ಭದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳ ಗೈರುಹಾಜರಿ ಕಂಡು ಕೆಂಡಾಮಂಡಲರಾದರು. ಕರ್ತವ್ಯ ನಿರ್ಲಕ್ಷ್ಯ ತೋರಿದ ಕೊಳಗೇರಿ ಅಭಿವೃದ್ಧಿ ಮಂಡಳಿಯ ಕಾರ್ಯನಿರ್ವಾಹಕ ಇಂಜಿನಿಯರ್ (EE) ಮತ್ತು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಅವರನ್ನು ಅವರ ಮನೆಗಳಿಂದಲೇ ತಕ್ಷಣವೇ ಪ್ರತಿಭಟನಾ ಸ್ಥಳಕ್ಕೆ ಕರೆಸಿ, ಸಮಸ್ಯೆಗಳನ್ನು ಪರಿಹರಿಸುವವರೆಗೂ ಜಾಗದಿಂದ ಕದಲಬಾರದೆಂದು ಖಡಕ್ ಆದೇಶ ನೀಡಿದರು.

ಜಿಲ್ಲಾಧಿಕಾರಿಗಳು ಸ್ವತಃ ಪ್ರತಿಭಟನಾಕಾರರ ಜೊತೆ ಸ್ಥಳದಲ್ಲೇ ಕುಳಿತುಕೊಂಡು ನಾಲ್ಕು ಗಂಟೆಗಳ ಕಾಲ ಸಮಸ್ಯೆಗಳ ಬಗ್ಗೆ ಚರ್ಚಿಸಿದರು. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಅವರು, ಸಮಸ್ಯೆಯನ್ನು ಪರಿಹರಿಸಿದ ನಂತರವೇ ತಮ್ಮಿಂದ ಅನುಮತಿ ಪಡೆದು ಇಲ್ಲಿಂದ ತೆರಳಬೇಕೆಂದು ತಾಕೀತು ಮಾಡಿದರು. ಹೀಗಾಗಿ, ಸ್ಲಂ ಬೋರ್ಡ್ ಅಧಿಕಾರಿಗಳು ಸಂಜೆಯವರೆಗೆ ಪ್ರತಿಭಟನಾಕಾರರ ಮಧ್ಯೆಯೇ ಕುಳಿತುಕೊಳ್ಳಬೇಕಾಯಿತು. ಈ ಸಂದರ್ಭದಲ್ಲಿ ಹೋರಾಟಗಾರರು, ಅಧಿಕಾರಿಗಳು ಮಾಡಿರುವ ತಪ್ಪುಗಳ ಬಗ್ಗೆ ಪಾಠ ಹೇಳಿದರಲ್ಲದೆ, ಅವರನ್ನು ಒಂದು ರೀತಿಯ ದಿಗ್ಬಂಧನದಲ್ಲಿ ಇರಿಸಿದ್ದರು.

ಅಕ್ರಮ ಒತ್ತುವರಿ ತಡೆಗೆ ಕಾನೂನು ಕ್ರಮ

ಈ ನಡುವೆ, ಕೊಳಗೇರಿ ಅಭಿವೃದ್ಧಿ ಮಂಡಳಿಯ ಆಯುಕ್ತರು, ಮಂಡಳಿ ವಕೀಲರು ಮತ್ತು ಮದ್ದೂರು ತಹಸೀಲ್ದಾರ್ ಜೊತೆ ಮಾತುಕತೆ ನಡೆಸಿದ ಅಧಿಕಾರಿಗಳು, ಆದಷ್ಟು ಬೇಗ ಸಮಸ್ಯೆ ಬಗೆಹರಿಸುವುದಾಗಿ ಆಯುಕ್ತರು ಭರವಸೆ ನೀಡಿದ್ದಾರೆಂದು ಪ್ರತಿಭಟನಾಕಾರರಿಗೆ ತಿಳಿಸಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ, ಅಕ್ರಮ ಭೂಕಬಳಿಕೆದಾರರು ಮತ್ತು ರಿಯಲ್ ಎಸ್ಟೇಟ್ ಮಾಫಿಯಾಗಳ ವಿರುದ್ಧ ಹೋರಾಟಗಾರರು ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ. ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಜಿಲ್ಲಾಡಳಿತ ನೀಡಿರುವ 3 ಎಕರೆ ಜಾಗವನ್ನು ರಕ್ಷಿಸಲು ತಕ್ಷಣದ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ, ಮೂರು ಇಲಾಖೆಗಳ ವತಿಯಿಂದ ಮಧ್ಯಂತರ ಅರ್ಜಿಯನ್ನು (IP) ಸಲ್ಲಿಸಲಾಗುತ್ತಿದೆ.

ಪ್ರತಿಭಟನಾಕಾರರ ಪರ ವಕೀಲರು, ಅಧಿಕಾರಿಗಳ ಪರ ವಕೀಲರ ಜೊತೆ ಚರ್ಚಿಸಿ, ಎರಡೂ ಕಡೆಯಿಂದಲೂ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಎಲ್ಲಾ ಕೆಲಸಗಳನ್ನು ಇಂದು ಸೋಮವಾರವೇ ಮಾಡಿ, ಜಿಲ್ಲಾಧಿಕಾರಿಗಳಿಗೂ ಈ ಬಗ್ಗೆ ಮಾಹಿತಿ ನೀಡಲಾಗುವುದು ಹಾಗೂ ಪ್ರತಿಭಟನಾ ಸ್ಥಳಕ್ಕೂ ಬಂದು ತಿಳಿಸುವುದಾಗಿ ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.

ಈ ಸಂದರ್ಭದಲ್ಲಿ, ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಸಿದ್ದರಾಜು, ಮುಖಂಡರಾದ ವೈದುನಾ, ಚಂದ್ರು, ಸೇಲ್ವಿ, ರಾಮು, ಲಕ್ಷ್ಮಿ, ಪ್ರಕಾಶ್ ಸೇರಿದಂತೆ ಮದ್ದೂರು ತಮಿಳು ಕಾಲೋನಿ ನಿವಾಸಿಗಳು ಉಪಸ್ಥಿತರಿದ್ದರು.

ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಶಾರ್ಜೀಲ್ ಇಮಾಮ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿರ್ಸಾ ಮುಂಡಾ 150ನೇ ಜಯಂತಿ ಹೆಸರಿನಲ್ಲಿ ಆದಿವಾಸಿ ಹಕ್ಕುಗಳ ಮೇಲೆ ಸಂಘ ಪರಿವಾರದ ಕಣ್ಣು?

ಮೇ 24 ರಂದು ನವದೆಹಲಿಯ ಕೆಂಪುಕೋಟೆಯಲ್ಲಿ (Red Fort) ಭಾರತದಾದ್ಯಂತದ ಲಕ್ಷಾಂತರ ಪರಿಶಿಷ್ಟ ಪಂಗಡದ (ST) ಸಮುದಾಯಗಳ ಜನರು ಒಟ್ಟಿಗೆ ಸೇರಿದ್ದರು. ‘ಜಂಜಾತಿ ಸುರಕ್ಷಾ ಮಂಚ್’ (ಬುಡಕಟ್ಟು ರಕ್ಷಣಾ ವೇದಿಕೆ) ಆಯೋಜಿಸಿದ್ದ ಈ...

ಆಪರೇಷನ್ ಕಮಲ ಭೀತಿ: ರಾಜ್ಯಸಭಾ ಚುನಾವಣೆಗೂ ಮುನ್ನ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಕರ್ನಾಟಕಕ್ಕೆ ಶಿಫ್ಟ್‌?

ಜೂನ್ 18 ರ ರಾಜ್ಯಸಭಾ ಚುನಾವಣೆಗೆ ಮುನ್ನ ಬಿಜೆಪಿಯಿಂದ ಅಕ್ರಮವಾಗಿ ಹಣ ವರ್ಗಾವಣೆ ಪ್ರಯತ್ನಗಳು ನಡೆಯುತ್ತಿವೆ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಅಡ್ಡ ಮತದಾನ ತಡೆಗಟ್ಟುವ ಜೊತೆಗೆ ತನ್ನ ಶಿಬಿರದ ಒಗ್ಗಟ್ಟು...

ವೀರಪ್ಪನ್ ಹೇಳಿದ ಕಥೆಗೆ 30 ವರ್ಷಗಳ ಬಳಿಕ ಕ್ಲೈಮ್ಯಾಕ್ಸ್ : ಸನ್ ಟಿವಿ ವಿರುದ್ಧ ಕಾನೂನು ಸಮರದಲ್ಲಿ ಗೆದ್ದ ನಟಿ ಸುಕನ್ಯಾ​

ತೊಂಬತ್ತರ ದಶಕದಲ್ಲಿ ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ಪ್ರಮುಖ ನಟರೊಂದಿಗೆ ನಟಿಸಿ, ಅಪಾರ ಜನಪ್ರಿಯತೆ ಗಳಿಸಿದ್ದ ನಟಿ ಸುಕನ್ಯಾ ರಮೇಶ್, ಪ್ರಸ್ತುತ ಕೆಲವು ಅಪರೂಪದ ಪಾತ್ರಗಳನ್ನು ಹೊರತುಪಡಿಸಿದರೆ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಈ ನಡುವೆ 2024ರಲ್ಲಿ...

“ರಾಜೀನಾಮೆ ನೀಡಿ, ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿ”: ಟಿಎಂಸಿ ಬಂಡುಕೋರರಿಗೆ ಮಹುವಾ ಮೊಯಿತ್ರಾ ನೇರ ಸವಾಲು

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (TMC) ಪಕ್ಷದೊಳಗೆ ತೀವ್ರ ಭಿನ್ನಾಭಿಪ್ರಾಯ ಸ್ಫೋಟಗೊಂಡಿದೆ. ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ (NDA) ಮೈತ್ರಿಕೂಟಕ್ಕೆ ಬೆಂಬಲ ನೀಡಲು ಮುಂದಾಗಿರುವ ಸ್ವಪಕ್ಷದ ಬಂಡಾಯ ಸಂಸದರ ವಿರುದ್ಧ ಟಿಎಂಸಿ ಸಂಸದೆ...

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...