Homeಮುಖಪುಟನಾಂದೇಡ್‌: ಸರಣಿ ಸಾವು ಸಂಭವಿಸಿದ ಸರ್ಕಾರಿ ಆಸ್ಪತ್ರೆಯ ಡೀನ್‌ ವಿರುದ್ಧ ಎಫ್ಐಆರ್‌ ದಾಖಲು

ನಾಂದೇಡ್‌: ಸರಣಿ ಸಾವು ಸಂಭವಿಸಿದ ಸರ್ಕಾರಿ ಆಸ್ಪತ್ರೆಯ ಡೀನ್‌ ವಿರುದ್ಧ ಎಫ್ಐಆರ್‌ ದಾಖಲು

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 72 ಗಂಟೆಗಳಲ್ಲಿ 31 ರೋಗಿಗಳ ಸರಣಿ ಸಾವುಗಳು ಸಂಭವಿಸಿದ ಹಿನ್ನೆಲೆ ಡೀನ್ ವಿರುದ್ಧ ನರಹತ್ಯೆಯ ಪ್ರಕರಣವನ್ನು ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಡೀನ್ ಅಲ್ಲದೆ ಮತ್ತೋರ್ವ ವೈದ್ಯನನ್ನು ಕೂಡ ಆರೋಪಿ ಎಂದು ಹೆಸರಿಸಲಾಗಿದೆ.
ಆಸ್ಪತ್ರೆಯಲ್ಲಿ ಮೃತಪಟ್ಟ ನವಜಾತ ಶಿಶುವಿನ ಸಂಬಂಧಿಕರೋರ್ವರ ದೂರಿನ ಮೇರೆಗೆ ಹಂಗಾಮಿ ಡೀನ್ ಡಾ.ಎಸ್.ಆರ್.ವಕೋಡೆ ಮತ್ತು ಮತ್ತೊಬ್ಬ ವೈದ್ಯರ ವಿರುದ್ಧ ನಾಂದೇಡ್ ಗ್ರಾಮಾಂತರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಡೀನ್ ಮತ್ತು ಮಕ್ಕಳ ತಜ್ಞರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವನ್ನಪ್ಪಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಶಿಶುವಿನ ಕುಟುಂಬದವರು ಆಸ್ಪತ್ರೆಯ ಹೊರಗಿನಿಂದ ಔಷಧಿಗಳನ್ನು ಖರೀದಿಸಿ ಕಾಯುತ್ತಿದ್ದರು. ಆದರೆ ನವಜಾತ ಶಿಶುವನ್ನು ವೈದ್ಯರು ಪರಿಶೀಲಿಸಿಲ್ಲ. ಸಹಾಯಕ್ಕಾಗಿ ಡೀನ್ ಕಚೇರಿಗೆ ಹೋದಾಗ ಅವರನ್ನು ಬೆನ್ನಟ್ಟಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮಂಗಳವಾರ ಆಸ್ಪತ್ರೆಯಲ್ಲಿ ಡೀನ್‌ಗೆ ಕೊಳಕು ಶೌಚಾಲಯವನ್ನು ಸ್ವಚ್ಛಗೊಳಿಸುವಂತೆ ಬಲವಂತ ಮಾಡಿದ ಆಡಳಿತಾರೂಢ ಶಿವಸೇನೆಯ ಸಂಸದರ ವಿರುದ್ಧ ಡೀನ್ ಪೊಲೀಸರಿಗೆ ದೂರು ನೀಡಿದ ಒಂದು ದಿನದ ನಂತರ ಡೀನ್‌ ವಿರುದ್ಧ ಈ ಪ್ರಕರಣ ದಾಖಲಾಗಿದೆ.

72 ಗಂಟೆಗಳಲ್ಲಿ 31 ಸಾವುಗಳ ವರದಿ ಬೆನ್ನಲ್ಲೇ  ನಾಂದೇಡ್‌ನ ಲೋಕಸಭಾ ಸಂಸದರಾದ ಹೇಮಂತ್ ಪಾಟೀಲ್ ಅವರು ಮಂಗಳವಾರ ಡಾ.ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ಅಲ್ಲಿ ಶೌಚಾಲಯದ ದುಸ್ಥಿತಿ ಕಂಡು ಡೀನ್‌ ಕೈಯಲ್ಲೇ ಅದನ್ನೇ ಶುಚಿಗೊಳಿಸಿದ್ದರು. ಇದರ ಬೆನ್ನಲ್ಲೇ ಸಂಸದರ ವಿರುದ್ಧ ಪೊಲೀಸರಿಗೆ ದೂರನ್ನು ನೀಡಿದ್ದರು.

ಸಂಸದರು ತಮ್ಮ ಭೇಟಿಯ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರ ಕೋಟಿಗಟ್ಟಲೆ ಖರ್ಚು ಮಾಡುತ್ತದೆ, ಆದರೆ ಇಲ್ಲಿನ ಪರಿಸ್ಥಿತಿ ನೋಡಿ ನನಗೆ ನೋವಾಗಿದೆ. ತಿಂಗಳಿನಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿಲ್ಲ. ಆಸ್ಪತ್ರೆಯ ವಾರ್ಡ್‌ಗಳಲ್ಲಿನ ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಶೌಚಾಲಯದಲ್ಲಿ ನೀರು ಕೂಡ ಇರಲಿಲ್ಲ ಎಂದು ಪಾಟೀಲ್ ಹೇಳಿದ್ದರು.

ಇದನ್ನು ಓದಿ: ಗುಜರಾತ್‌: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ; ಪೊಲೀಸರ ವಿರುದ್ಧ ದೋಷಾರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...