Homeಮುಖಪುಟನಾಂದೇಡ್‌: ಸರಣಿ ಸಾವು ಸಂಭವಿಸಿದ ಸರ್ಕಾರಿ ಆಸ್ಪತ್ರೆಯ ಡೀನ್‌ ವಿರುದ್ಧ ಎಫ್ಐಆರ್‌ ದಾಖಲು

ನಾಂದೇಡ್‌: ಸರಣಿ ಸಾವು ಸಂಭವಿಸಿದ ಸರ್ಕಾರಿ ಆಸ್ಪತ್ರೆಯ ಡೀನ್‌ ವಿರುದ್ಧ ಎಫ್ಐಆರ್‌ ದಾಖಲು

- Advertisement -
- Advertisement -

ಮಹಾರಾಷ್ಟ್ರದ ನಾಂದೇಡ್‌ನಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 72 ಗಂಟೆಗಳಲ್ಲಿ 31 ರೋಗಿಗಳ ಸರಣಿ ಸಾವುಗಳು ಸಂಭವಿಸಿದ ಹಿನ್ನೆಲೆ ಡೀನ್ ವಿರುದ್ಧ ನರಹತ್ಯೆಯ ಪ್ರಕರಣವನ್ನು ದಾಖಲಿಸಲಾಗಿದೆ.

ಎಫ್‌ಐಆರ್‌ನಲ್ಲಿ ಡೀನ್ ಅಲ್ಲದೆ ಮತ್ತೋರ್ವ ವೈದ್ಯನನ್ನು ಕೂಡ ಆರೋಪಿ ಎಂದು ಹೆಸರಿಸಲಾಗಿದೆ.
ಆಸ್ಪತ್ರೆಯಲ್ಲಿ ಮೃತಪಟ್ಟ ನವಜಾತ ಶಿಶುವಿನ ಸಂಬಂಧಿಕರೋರ್ವರ ದೂರಿನ ಮೇರೆಗೆ ಹಂಗಾಮಿ ಡೀನ್ ಡಾ.ಎಸ್.ಆರ್.ವಕೋಡೆ ಮತ್ತು ಮತ್ತೊಬ್ಬ ವೈದ್ಯರ ವಿರುದ್ಧ ನಾಂದೇಡ್ ಗ್ರಾಮಾಂತರ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಡೀನ್ ಮತ್ತು ಮಕ್ಕಳ ತಜ್ಞರ ನಿರ್ಲಕ್ಷ್ಯದಿಂದ ನವಜಾತ ಶಿಶು ಸಾವನ್ನಪ್ಪಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಶಿಶುವಿನ ಕುಟುಂಬದವರು ಆಸ್ಪತ್ರೆಯ ಹೊರಗಿನಿಂದ ಔಷಧಿಗಳನ್ನು ಖರೀದಿಸಿ ಕಾಯುತ್ತಿದ್ದರು. ಆದರೆ ನವಜಾತ ಶಿಶುವನ್ನು ವೈದ್ಯರು ಪರಿಶೀಲಿಸಿಲ್ಲ. ಸಹಾಯಕ್ಕಾಗಿ ಡೀನ್ ಕಚೇರಿಗೆ ಹೋದಾಗ ಅವರನ್ನು ಬೆನ್ನಟ್ಟಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

ಮಂಗಳವಾರ ಆಸ್ಪತ್ರೆಯಲ್ಲಿ ಡೀನ್‌ಗೆ ಕೊಳಕು ಶೌಚಾಲಯವನ್ನು ಸ್ವಚ್ಛಗೊಳಿಸುವಂತೆ ಬಲವಂತ ಮಾಡಿದ ಆಡಳಿತಾರೂಢ ಶಿವಸೇನೆಯ ಸಂಸದರ ವಿರುದ್ಧ ಡೀನ್ ಪೊಲೀಸರಿಗೆ ದೂರು ನೀಡಿದ ಒಂದು ದಿನದ ನಂತರ ಡೀನ್‌ ವಿರುದ್ಧ ಈ ಪ್ರಕರಣ ದಾಖಲಾಗಿದೆ.

72 ಗಂಟೆಗಳಲ್ಲಿ 31 ಸಾವುಗಳ ವರದಿ ಬೆನ್ನಲ್ಲೇ  ನಾಂದೇಡ್‌ನ ಲೋಕಸಭಾ ಸಂಸದರಾದ ಹೇಮಂತ್ ಪಾಟೀಲ್ ಅವರು ಮಂಗಳವಾರ ಡಾ.ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿದ್ದರು. ಅಲ್ಲಿ ಶೌಚಾಲಯದ ದುಸ್ಥಿತಿ ಕಂಡು ಡೀನ್‌ ಕೈಯಲ್ಲೇ ಅದನ್ನೇ ಶುಚಿಗೊಳಿಸಿದ್ದರು. ಇದರ ಬೆನ್ನಲ್ಲೇ ಸಂಸದರ ವಿರುದ್ಧ ಪೊಲೀಸರಿಗೆ ದೂರನ್ನು ನೀಡಿದ್ದರು.

ಸಂಸದರು ತಮ್ಮ ಭೇಟಿಯ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಸರ್ಕಾರ ಕೋಟಿಗಟ್ಟಲೆ ಖರ್ಚು ಮಾಡುತ್ತದೆ, ಆದರೆ ಇಲ್ಲಿನ ಪರಿಸ್ಥಿತಿ ನೋಡಿ ನನಗೆ ನೋವಾಗಿದೆ. ತಿಂಗಳಿನಿಂದ ಶೌಚಾಲಯಗಳನ್ನು ಸ್ವಚ್ಛಗೊಳಿಸಿಲ್ಲ. ಆಸ್ಪತ್ರೆಯ ವಾರ್ಡ್‌ಗಳಲ್ಲಿನ ಶೌಚಾಲಯಗಳಿಗೆ ಬೀಗ ಹಾಕಲಾಗಿದೆ. ಶೌಚಾಲಯದಲ್ಲಿ ನೀರು ಕೂಡ ಇರಲಿಲ್ಲ ಎಂದು ಪಾಟೀಲ್ ಹೇಳಿದ್ದರು.

ಇದನ್ನು ಓದಿ: ಗುಜರಾತ್‌: ಮುಸ್ಲಿಂ ಯುವಕರಿಗೆ ಛಡಿಯೇಟು ಪ್ರಕರಣ; ಪೊಲೀಸರ ವಿರುದ್ಧ ದೋಷಾರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...