Homeಮುಖಪುಟಶಾಲೆಗೆ ತಡವಾಗಿ ಬಂದಿದ್ದಕ್ಕೆ ಬ್ಯಾಗ್ ಸಹಿತ 100 ಬಸ್ಕಿ ಹೊಡೆಯುವ ಶಿಕ್ಷೆ : 6ನೇ ತರಗತಿ...

ಶಾಲೆಗೆ ತಡವಾಗಿ ಬಂದಿದ್ದಕ್ಕೆ ಬ್ಯಾಗ್ ಸಹಿತ 100 ಬಸ್ಕಿ ಹೊಡೆಯುವ ಶಿಕ್ಷೆ : 6ನೇ ತರಗತಿ ವಿದ್ಯಾರ್ಥಿನಿ ಸಾವು

- Advertisement -
- Advertisement -

ಕೇವಲ 10 ನಿಮಿಷ ತಡವಾಗಿ ಶಾಲೆಗೆ ಬಂದಿದ್ದಕ್ಕೆ 6ನೇ ತರಗತಿ ವಿದ್ಯಾರ್ಥಿನಿಗೆ ಬ್ಯಾಗ್ ಸಹಿತ 100 ಬಸ್ಕಿ ಹೊಡೆಯುವ ಶಿಕ್ಷೆ ನೀಡಲಾಗಿದ್ದು, ವಾರದ ಬಳಿಕ ಆ ಬಾಲಕಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ.

ವಸಾಯಿ ಪ್ರದೇಶದ ಸತಿವಲಿಯ ಶ್ರೀ ಹನುಮಂತ ವಿದ್ಯಾ ಮಂದಿರ ಎಂಬ ಖಾಸಗಿ ಶಾಲೆಯ ಅನ್ಶಿಕಾ ಗೌಡ್‌ (ಕಾಜಲ್‌ ಗೌಡ್‌) ಮೃತ ವಿದ್ಯಾರ್ಥಿನಿ

ನವೆಂಬರ್ 8ರಂದು ಅನ್ಶಿಕಾ ಮತ್ತು ಇತರ ನಾಲ್ವರು ವಿದ್ಯಾರ್ಥಿನಿಯರು 10 ನಿಮಿಷ ತಡವಾಗಿ ಶಾಲೆಗೆ ಆಗಮಿಸಿದ್ದರು. ಈ ಕಾರಣಕ್ಕೆ ಬಾರವಾದ ಬ್ಯಾಗ್‌ ಸಹಿತ 100 ಬಸ್ಕಿ ಹೊಡೆಯು ಶಿಕ್ಷೆಯನ್ನು ಮಕ್ಕಳಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಶಾಲೆಯಿಂದ ಮನೆಗೆ ಆಗಮಿಸಿದ ಅನ್ಶಿಕಾ ನಡೆದ ವಿಷಯವನ್ನು ಪೋಷಕರಿಗೆ ತಿಳಿಸಿದ್ದರು. ಆಕೆ ಆ ಸಂದರ್ಭದಲ್ಲಿ ವಿಪರೀತ ಕತ್ತು ಮತ್ತು ಬೆನ್ನು ನೋವಿನಿಂದ ಬಳಲುತ್ತಿದ್ದರು. ಎದ್ದು ನಿಲ್ಲಲು ಸಾಧ್ಯವಾಗುತ್ತಿರಲಿಲ್ಲ ಎಂದು ವರದಿಗಳು ಹೇಳಿವೆ.

ನಂತರ, ಬಾಲಕಿಯ ಆರೋಗ್ಯ ಹದೆಗೆಡುತ್ತಾ ಹೋಯಿತು. ಹಾಗಾಗಿ, ಪೋಷಕರು ಆಕೆಯನ್ನು ಮುಂಬೈನ ಆಸ್ಪತ್ರೆಗೆ ದಾಖಲಿಸಿದ್ದರು. ನವೆಂಬರ್ 14ರಂದು ಶುಕ್ರವಾರ (ಮಕ್ಕಳ ದಿನಾಚರಣೆಯಂದು) ಚಿಕಿತ್ಸೆ ಫಲಿಸದೆ ಅನ್ಶಿಕಾ ಸಾವನ್ನಪ್ಪಿದ್ದಾರೆ.

ಬಾಲಕಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಿರುವಾಗ ಆಕೆಗೆ ಕಠಿಣವಾದ ಶಿಕ್ಷೆ ನೀಡಲಾಗಿದೆ. ಇದರಿಂದ ಆಕೆಯ ಆರೋಗ್ಯ ಇನ್ನಷ್ಟು ಹದೆಗೆಟ್ಟು ಸಾವನ್ನಪ್ಪಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಶಿಕ್ಷಕಿ ತನ್ನ ಮಗಳಿಗೆ ಅಮಾನವೀಯ ಶಿಕ್ಷೆ ವಿಧಿಸಿದ್ದಾರೆ ಎಂದು ಬಾಲಕಿಯ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನನ್ನ ಮಗಳ ಆರೋಗ್ಯ ಹದೆಗೆಟ್ಟಾಗ ಶಾಲೆಯವರು ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ ಎಂದು ದೂರಿದ್ದಾರೆ.

ಬಾಲಕಿಯ ಸಾವಿನ ಕುರಿತು ಆಕೆಯ ಕುಟುಂಬಸ್ಥರು ಇನ್ನೂ ಯಾವುದೇ ಔಪಚಾರಿಕ ದೂರು ನೀಡಿಲ್ಲ. ಪೊಲೀಸರು ಆಕಸ್ಮಿಕ ಸಾವು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಬಾಲಕಿ ಎಷ್ಟು ಬಸ್ಕಿ ಹೊಡೆದಿದ್ದಾಳೆ. ಅದರಿಂದಾಗಿಯೇ ಆಕೆ ಮೃತಪಟ್ಟಳೋ ಅಥವಾ ಬೇರೆ ಕಾರಣದಿಂದಲೋ ಎಂಬುದು ನಿಜವಾಗಿಯೂ ತಿಳಿದಿಲ್ಲ ಎಂದು ಶಾಲೆಯ ಶಿಕ್ಷಕರೊಬ್ಬರು ಹೇಳಿದ್ದಾರೆ.

ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಬ್ಲಾಕ್ ಶಿಕ್ಷಣ ಅಧಿಕಾರಿ ಪಾಂಡುರಂಗ ಗಲಂಗೆ ತಿಳಿಸಿದ್ದಾರೆ. ವಾಲಿವ್ (ಪಾಲ್ಘರ್) ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಆದರೆ, ನವೆಂಬರ್ 16 ರವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ಎಂಎನ್ಎಸ್ ಕಾರ್ಯಕರ್ತರು ಬಾಲಕಿಯ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಶಾಲೆಯ ಗೇಟುಗಳಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಶಿಕ್ಷಕರು ಮತ್ತು ಶಾಲಾ ಆಡಳಿತ ಮಂಡಳಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕೆಂದು ಒತ್ತಾಯಿಸಿದ್ದಾರೆ. ಕ್ರಮ ಕೈಗೊಳ್ಳುವವರೆಗೆ ಶಾಲೆಯನ್ನು ಮತ್ತೆ ತೆರೆಯಲು ಬಿಡುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಕೇರಳ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಿಜೆಪಿ ನಾಯಕನಿಗೆ ಮರಣದಂಡನೆ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...