Homeಸಾಮಾಜಿಕಚಿಕ್ಕಮಗಳೂರಲ್ಲಿ ಮಧುಕರ ಶೆಟ್ಟಿ

ಚಿಕ್ಕಮಗಳೂರಲ್ಲಿ ಮಧುಕರ ಶೆಟ್ಟಿ

- Advertisement -
- Advertisement -

ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳು, ಯಾವ ಸರಕಾರಕ್ಕೂ ಸಹ್ಯವಾಗುವುದಿಲ್ಲ. ಕ್ರಮೇಣ ಅಂತಹವರನ್ನ ಅಧೈರ್ಯಗೊಳಿಸಿ ಮೆತ್ತಗಾಗಿಸುತ್ತವೆ. ಈಗ ತೀರಿಕೊಂಡ ಮಧುಕರ ಶೆಟ್ಟಿಯವರು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದಲೇ ಹೆಸರು ಮಾಡಿದವರು. ಇಂತಹ ಅಧಿಕಾರಿ ನಮ್ಮ ಚಿಕ್ಕಮಗಳೂರಿಗೆ ಎಸ್ಪಿಯಾಗಿ ಬಂದಾಗ ಸಾರ್ವಜನಿಕರಿಗೆ ಸಂಭ್ರಮವಾದರೆ, ಜನಪೀಡಕ ರಾಜಕಾರಣಿಗಳಿಗೆ ತೊಳ್ಳೆ ನಡುಕವುಂಟಾಯ್ತು. ಈ ಪೈಕಿ ಇಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯ ಬಲಗೈಯಂತಿರುವ ಭೋಜೇಗೌಡ ಮತ್ತು ಸಿ.ಟಿ ರವಿ ಎಂಬ ಜಿಲ್ಲೆಯ ಸಮಸ್ಯೆಗಳು ಮಧುಕರ ಶೆಟ್ಟಿಯವರನ್ನ ಎದುರುಗೊಳ್ಳಲು ಹಿಂಜರಿಯತೊಡಗಿದವು. ಆದರೂ ಅವರನ್ನ ಎತ್ತಂಗಡಿ ಮಾಡಿಸಲು ಜೊತೆಯಾಗಿಯೇ ಶ್ರಮಿಸುತ್ತಿದ್ದವು. ಭೋಜೇಗೌಡ ಆಗಾಗ್ಗೆ ಕುಮಾರಸ್ವಾಮಿಗೆ ಎಸ್ಪಿ ವಿರುದ್ಧ ದೂರು ಹೇಳುವುದನ್ನೇ ಕಾಯಕ ಮಾಡಿಕೊಂಡರೆ ಸಿ.ಟಿ.ರವಿ ಎಸ್ಪಿಗೆ ಕೆಟ್ಟ ಹೆಸರು ತರಲು ಹವಣಿಸುತ್ತಿದ್ದರು. ಈ ಸವiಯದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ಕಠಾರಿಯ ಧಕ್ಷ ಅಧಿಕಾರಿಯಾದ್ದರಿಂದ ರಾಜಕಾರಣಿಗಳ ಪುಂಗಿ ಬಂದಾಗಿತ್ತು. ಇಂತಹ ಉಸಿರುಗಟ್ಟುವ ಸನ್ನಿವೇಶದಲ್ಲಿ ಭೋಜೇಗೌಡ ಕುಮಾರಣ್ಣನ ಮೇಲೆ ವಿಪರೀತ ಒತ್ತಡ ತಂದಿದ್ದರಿಂದ ಮಧುಕರ ಶೆಟ್ಟರು ರಾಜ್ಯಪಾಲರ ಸೆಕ್ಯೂರಿಟಿ ಮುಖ್ಯಸ್ಥರಾಗಿ ವರ್ಗಾವಣೆಗೊಂಡರು! ಇದು ಒಬ್ಬ ದಕ್ಷ ಅಧಿಕಾರೊಗೆ ಸರಕಾರ ಮಾಡಿದ ತೀವ್ರ ತರದ ಅವಮಾನ. ಏಕೆಂದರೆ ಚಿಕ್ಕಮಗಳೂರ ಬಡವರು ಕೂಲಿ ಕಾರ್ಮಿಕರು ಮತ್ತು ಹಿಂದುಳಿದ ಜಾತಿಗಳು ನಮಗೆ ಯಾರಿಲ್ಲದಿದ್ದರೂ ಜಿಲ್ಲಾ ರಕ್ಷಣಾಧಿಕಾರಿಗಳಿಂದ ಪೂರ್ಣ ರಕ್ಷಣೆಯಿದೆ ಎಂದು ಭಾವಿಸಿದ್ದರು. ಕಾಡಲ್ಲಿನ ನಕ್ಷಲರೂ ಕೂಡ ಮಧುಕರ ಶೆಟ್ಟರು ಎಸ್ಪಿಯಾಗಿರುವುದರಿಂದ ನಮಗಾವ ತೊಂದರೆಯಿಲ್ಲವೆಂದು ಭಾವಿಸಿದ್ದರು. ಎಸ್ಪಿ ಕೂಡ ಆ ನಕ್ಸಲರನ್ನ ಅಕ್ಕ-ಪಕ್ಕದ ಜಿಲ್ಲೆಗೆ ಓಡಿಸಿ ಎಂದು ಹೇಳಿದ್ದರು. ತಮ್ಮ ಇರುವಿಕೆಯ ಕಾರಣಕ್ಕೆ ಹಲವು ಸಮಸ್ಯೆಗಳು ಕರಗಿ ಹೋಗುವಂತೆ ನೋಡಿಕೊಂಡಿದ್ದ ಮಧುಕರ ಶೆಟ್ಟರಿಂದ ರಾಜಕಾರಣಿಗಳು ನಿರುದ್ಯೋಗಿಗಳಂತಾಗಿದ್ದರು. ಇಂತಿರುವಾಗ ನಮಗೆ ಬೇಕೇ ಇಲ್ಲದ ರಾಜ್ಯಪಾಲರೆಂಬ ಮುದಿಯಾನೆಯ ರಕ್ಷಣೆಗೆ ಹೋಗಿ ಅದರ ಹಿಂದೆ ನಿಂತಾಗ ಜಿಲ್ಲೆಯ ಕಿಡಿಗೇಡಿ ರಾಜಕಾರಣಿಗಳು ಕುಹಕವಾಗಿ ನಕ್ಕು ಸಂತೋಷ ವ್ಯಕ್ತಪಡಿಸಿದ್ದರು.
ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳಿಗೆ ಅವಮಾನವಾಗುತ್ತಿರುವುದು ಈ ಜಿಲ್ಲೆಯಲ್ಲಿ ಇದೇ ಮೊದಲಲ್ಲ. ಹೆಚ್.ಎಲ್.ನಾಗೇಗೌಡರು ಡಿ.ಸಿ.ಯಾಗಿದ್ದ ಕಾಲದಿಂದಲೂ ನಡೆದು ಬಂದಿದೆ. ಅದರಲ್ಲೂ ಬಿರೂರು ಶಾಸಕರಾಗಿದ್ದ ಲಕ್ಷ್ಮಯ್ಯ ಪಿಳ್ಳೆನಳ್ಳಿ ಊರ ಮುಂದೆ ನಿಂತು ಪ್ಯಾಂಟ್‍ಜಿಪ್ ತೆಗೆದು ತನ್ನ ವೈರಿಗಳ ಹೆಂಗಸರನ್ನು ಕರೆದು ತನ್ನ ತಾಕತ್ತು ತೋರುತ್ತೇನೆ ಎಂದಿದ್ದರು. ಇದನ್ನು ಕಂಡ ಬಿಪಿನ್ ಗೋಪಾಲಕೃಷ್ಣ ಎಂಬ ಎಸ್ಪಿ ಕೂಡಲೆ ಕ್ರಮ ಜರುಗಿಸಿದ್ದರಿಂದ ಅವರನ್ನು 24 ಗಂಟೆಯಲ್ಲಿ ವರ್ಗ ಮಾಡಿಸಿದ್ದರು. ಅದೇ ¯ಕ್ಷ್ಮಯ್ಯನವರ ಮಗ ಭೋಜೇಗೌಡ ಮಧುಕರ ಶೆಟ್ಟರನ್ನ ವರ್ಗ ಮಾಡಿಸಿದ್ದರು. ಕೆಟ್ಟ ಸರಕಾರಗಳು ಬಂದಾಗ ಒಳ್ಳೆ ಅಧಿಕಾರಿಗಳು ತೊಂದರೆ ಅವಮಾನಕ್ಕೊಳಗಾಗುವುದು ಸಾಮಾನ್ಯ. ಆದ್ದರಿಂದ ಮಧುಕರಶೆಟ್ಟರು ತಮ್ಮ ಸೇವಾವಧಿಯಲ್ಲಿ ನೋವನ್ನ ಅನುಭವಿಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ದಲಿತ ಜನಾಂಗದಿಂದ ಬಂದ ಬಿ.ಬಿ ನಿಂಗಯ್ಯ, ಮೋಟಮ್ಮ ಇಂತವರೆಲ್ಲಾ ಮಂತ್ರಿಗಳಾಗಿ ಮೆರೆದರು. ಆದರೂ ಭೂಮಾಲೀಕರ ನಿರಂತರ ಶೋಷಣೆಗೆ ತುತ್ತಾದ ದಲಿತರಿಗೆ ಹರ್ಷಗುಪ್ತ ಮತ್ತು ಮಧುಕರ ಶೆಟ್ಟರು ವಸತಿ ನಿರ್ಮಿಸಿಕೊಟ್ಟು ನಿರ್ಗತಿಕರ ಬಾಳಿಗೆ ಬೆಳಕಾದದ್ದು ವಿಶೇಷ ಇದರಿಂದ ಅರ್ಥವಾಗುವುದೇನೆಂದರೆ, ಈ ಪಂಚರಂಗಿ ರಾಜಕಾರಣಿಗಳಿಂದ ಏನೂ ಆಗುವುದಿಲ್ಲ. ಜನಪರ ಕಾಳಜಿಯ ಅಧಿಕಾರಿಗಳಿಂದ ಮಾತ್ರ ಜನ ನೆಮ್ಮದಿ ಕಾಣಬಲ್ಲರು ಎಂಬುದು ಸಾಬೀತಾಗಿದೆ. ಚಿಕ್ಕಮಗಳೂರಲ್ಲಿ ಎಷ್ಟೆಲ್ಲಾ ರಾಜಕಾರಣಿಗಳು ಆಗಿಹೋದರೂ ಜನಮಾನಸಲ್ಲುಳಿದವರು ದಕ್ಷ ಪ್ರಾಮಾಣಿಕ ಅಧಿಕಾರಿಗಳು ಮಾತ್ರ ಎಂಬುದು ವಿಶೇಷ!

ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...