Homeಸಾಮಾಜಿಕಚಿಕ್ಕಮಗಳೂರಲ್ಲಿ ಮಧುಕರ ಶೆಟ್ಟಿ

ಚಿಕ್ಕಮಗಳೂರಲ್ಲಿ ಮಧುಕರ ಶೆಟ್ಟಿ

- Advertisement -
- Advertisement -

ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳು, ಯಾವ ಸರಕಾರಕ್ಕೂ ಸಹ್ಯವಾಗುವುದಿಲ್ಲ. ಕ್ರಮೇಣ ಅಂತಹವರನ್ನ ಅಧೈರ್ಯಗೊಳಿಸಿ ಮೆತ್ತಗಾಗಿಸುತ್ತವೆ. ಈಗ ತೀರಿಕೊಂಡ ಮಧುಕರ ಶೆಟ್ಟಿಯವರು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದಲೇ ಹೆಸರು ಮಾಡಿದವರು. ಇಂತಹ ಅಧಿಕಾರಿ ನಮ್ಮ ಚಿಕ್ಕಮಗಳೂರಿಗೆ ಎಸ್ಪಿಯಾಗಿ ಬಂದಾಗ ಸಾರ್ವಜನಿಕರಿಗೆ ಸಂಭ್ರಮವಾದರೆ, ಜನಪೀಡಕ ರಾಜಕಾರಣಿಗಳಿಗೆ ತೊಳ್ಳೆ ನಡುಕವುಂಟಾಯ್ತು. ಈ ಪೈಕಿ ಇಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯ ಬಲಗೈಯಂತಿರುವ ಭೋಜೇಗೌಡ ಮತ್ತು ಸಿ.ಟಿ ರವಿ ಎಂಬ ಜಿಲ್ಲೆಯ ಸಮಸ್ಯೆಗಳು ಮಧುಕರ ಶೆಟ್ಟಿಯವರನ್ನ ಎದುರುಗೊಳ್ಳಲು ಹಿಂಜರಿಯತೊಡಗಿದವು. ಆದರೂ ಅವರನ್ನ ಎತ್ತಂಗಡಿ ಮಾಡಿಸಲು ಜೊತೆಯಾಗಿಯೇ ಶ್ರಮಿಸುತ್ತಿದ್ದವು. ಭೋಜೇಗೌಡ ಆಗಾಗ್ಗೆ ಕುಮಾರಸ್ವಾಮಿಗೆ ಎಸ್ಪಿ ವಿರುದ್ಧ ದೂರು ಹೇಳುವುದನ್ನೇ ಕಾಯಕ ಮಾಡಿಕೊಂಡರೆ ಸಿ.ಟಿ.ರವಿ ಎಸ್ಪಿಗೆ ಕೆಟ್ಟ ಹೆಸರು ತರಲು ಹವಣಿಸುತ್ತಿದ್ದರು. ಈ ಸವiಯದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ಕಠಾರಿಯ ಧಕ್ಷ ಅಧಿಕಾರಿಯಾದ್ದರಿಂದ ರಾಜಕಾರಣಿಗಳ ಪುಂಗಿ ಬಂದಾಗಿತ್ತು. ಇಂತಹ ಉಸಿರುಗಟ್ಟುವ ಸನ್ನಿವೇಶದಲ್ಲಿ ಭೋಜೇಗೌಡ ಕುಮಾರಣ್ಣನ ಮೇಲೆ ವಿಪರೀತ ಒತ್ತಡ ತಂದಿದ್ದರಿಂದ ಮಧುಕರ ಶೆಟ್ಟರು ರಾಜ್ಯಪಾಲರ ಸೆಕ್ಯೂರಿಟಿ ಮುಖ್ಯಸ್ಥರಾಗಿ ವರ್ಗಾವಣೆಗೊಂಡರು! ಇದು ಒಬ್ಬ ದಕ್ಷ ಅಧಿಕಾರೊಗೆ ಸರಕಾರ ಮಾಡಿದ ತೀವ್ರ ತರದ ಅವಮಾನ. ಏಕೆಂದರೆ ಚಿಕ್ಕಮಗಳೂರ ಬಡವರು ಕೂಲಿ ಕಾರ್ಮಿಕರು ಮತ್ತು ಹಿಂದುಳಿದ ಜಾತಿಗಳು ನಮಗೆ ಯಾರಿಲ್ಲದಿದ್ದರೂ ಜಿಲ್ಲಾ ರಕ್ಷಣಾಧಿಕಾರಿಗಳಿಂದ ಪೂರ್ಣ ರಕ್ಷಣೆಯಿದೆ ಎಂದು ಭಾವಿಸಿದ್ದರು. ಕಾಡಲ್ಲಿನ ನಕ್ಷಲರೂ ಕೂಡ ಮಧುಕರ ಶೆಟ್ಟರು ಎಸ್ಪಿಯಾಗಿರುವುದರಿಂದ ನಮಗಾವ ತೊಂದರೆಯಿಲ್ಲವೆಂದು ಭಾವಿಸಿದ್ದರು. ಎಸ್ಪಿ ಕೂಡ ಆ ನಕ್ಸಲರನ್ನ ಅಕ್ಕ-ಪಕ್ಕದ ಜಿಲ್ಲೆಗೆ ಓಡಿಸಿ ಎಂದು ಹೇಳಿದ್ದರು. ತಮ್ಮ ಇರುವಿಕೆಯ ಕಾರಣಕ್ಕೆ ಹಲವು ಸಮಸ್ಯೆಗಳು ಕರಗಿ ಹೋಗುವಂತೆ ನೋಡಿಕೊಂಡಿದ್ದ ಮಧುಕರ ಶೆಟ್ಟರಿಂದ ರಾಜಕಾರಣಿಗಳು ನಿರುದ್ಯೋಗಿಗಳಂತಾಗಿದ್ದರು. ಇಂತಿರುವಾಗ ನಮಗೆ ಬೇಕೇ ಇಲ್ಲದ ರಾಜ್ಯಪಾಲರೆಂಬ ಮುದಿಯಾನೆಯ ರಕ್ಷಣೆಗೆ ಹೋಗಿ ಅದರ ಹಿಂದೆ ನಿಂತಾಗ ಜಿಲ್ಲೆಯ ಕಿಡಿಗೇಡಿ ರಾಜಕಾರಣಿಗಳು ಕುಹಕವಾಗಿ ನಕ್ಕು ಸಂತೋಷ ವ್ಯಕ್ತಪಡಿಸಿದ್ದರು.
ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳಿಗೆ ಅವಮಾನವಾಗುತ್ತಿರುವುದು ಈ ಜಿಲ್ಲೆಯಲ್ಲಿ ಇದೇ ಮೊದಲಲ್ಲ. ಹೆಚ್.ಎಲ್.ನಾಗೇಗೌಡರು ಡಿ.ಸಿ.ಯಾಗಿದ್ದ ಕಾಲದಿಂದಲೂ ನಡೆದು ಬಂದಿದೆ. ಅದರಲ್ಲೂ ಬಿರೂರು ಶಾಸಕರಾಗಿದ್ದ ಲಕ್ಷ್ಮಯ್ಯ ಪಿಳ್ಳೆನಳ್ಳಿ ಊರ ಮುಂದೆ ನಿಂತು ಪ್ಯಾಂಟ್‍ಜಿಪ್ ತೆಗೆದು ತನ್ನ ವೈರಿಗಳ ಹೆಂಗಸರನ್ನು ಕರೆದು ತನ್ನ ತಾಕತ್ತು ತೋರುತ್ತೇನೆ ಎಂದಿದ್ದರು. ಇದನ್ನು ಕಂಡ ಬಿಪಿನ್ ಗೋಪಾಲಕೃಷ್ಣ ಎಂಬ ಎಸ್ಪಿ ಕೂಡಲೆ ಕ್ರಮ ಜರುಗಿಸಿದ್ದರಿಂದ ಅವರನ್ನು 24 ಗಂಟೆಯಲ್ಲಿ ವರ್ಗ ಮಾಡಿಸಿದ್ದರು. ಅದೇ ¯ಕ್ಷ್ಮಯ್ಯನವರ ಮಗ ಭೋಜೇಗೌಡ ಮಧುಕರ ಶೆಟ್ಟರನ್ನ ವರ್ಗ ಮಾಡಿಸಿದ್ದರು. ಕೆಟ್ಟ ಸರಕಾರಗಳು ಬಂದಾಗ ಒಳ್ಳೆ ಅಧಿಕಾರಿಗಳು ತೊಂದರೆ ಅವಮಾನಕ್ಕೊಳಗಾಗುವುದು ಸಾಮಾನ್ಯ. ಆದ್ದರಿಂದ ಮಧುಕರಶೆಟ್ಟರು ತಮ್ಮ ಸೇವಾವಧಿಯಲ್ಲಿ ನೋವನ್ನ ಅನುಭವಿಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ದಲಿತ ಜನಾಂಗದಿಂದ ಬಂದ ಬಿ.ಬಿ ನಿಂಗಯ್ಯ, ಮೋಟಮ್ಮ ಇಂತವರೆಲ್ಲಾ ಮಂತ್ರಿಗಳಾಗಿ ಮೆರೆದರು. ಆದರೂ ಭೂಮಾಲೀಕರ ನಿರಂತರ ಶೋಷಣೆಗೆ ತುತ್ತಾದ ದಲಿತರಿಗೆ ಹರ್ಷಗುಪ್ತ ಮತ್ತು ಮಧುಕರ ಶೆಟ್ಟರು ವಸತಿ ನಿರ್ಮಿಸಿಕೊಟ್ಟು ನಿರ್ಗತಿಕರ ಬಾಳಿಗೆ ಬೆಳಕಾದದ್ದು ವಿಶೇಷ ಇದರಿಂದ ಅರ್ಥವಾಗುವುದೇನೆಂದರೆ, ಈ ಪಂಚರಂಗಿ ರಾಜಕಾರಣಿಗಳಿಂದ ಏನೂ ಆಗುವುದಿಲ್ಲ. ಜನಪರ ಕಾಳಜಿಯ ಅಧಿಕಾರಿಗಳಿಂದ ಮಾತ್ರ ಜನ ನೆಮ್ಮದಿ ಕಾಣಬಲ್ಲರು ಎಂಬುದು ಸಾಬೀತಾಗಿದೆ. ಚಿಕ್ಕಮಗಳೂರಲ್ಲಿ ಎಷ್ಟೆಲ್ಲಾ ರಾಜಕಾರಣಿಗಳು ಆಗಿಹೋದರೂ ಜನಮಾನಸಲ್ಲುಳಿದವರು ದಕ್ಷ ಪ್ರಾಮಾಣಿಕ ಅಧಿಕಾರಿಗಳು ಮಾತ್ರ ಎಂಬುದು ವಿಶೇಷ!

ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಿದ ಆಸ್ಟ್ರೇಲಿಯಾ ಸರ್ಕಾರ

16 ವರ್ಷದೊಳಗಿನ ಎಲ್ಲರಿಗೂ ಸಾಮಾಜಿಕ ಮಾಧ್ಯಮ ಪ್ರವೇಶವನ್ನು ದೇಶಾದ್ಯಂತ ನಿಷೇಧಿಸಿದ ಮೊದಲ ದೇಶ ಆಸ್ಟ್ರೇಲಿಯಾ. ಈ ಕಾನೂನು ಬುಧವಾರ ಜಾರಿಗೆ ಬಂದಿದ್ದು, ಟಿಕ್‌ಟಾಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್, ಫೇಸ್‌ಬುಕ್, ಸ್ನ್ಯಾಪ್‌ಚಾಟ್, ರೆಡ್ಡಿಟ್, ಎಕ್ಸ್, ಥ್ರೆಡ್ಸ್,...

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...

ಆಂಧ್ರ ಪ್ರದೇಶ| ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕರ ಬಂಧನ; ಭುಗಿಲೆದ್ದ ಪ್ರತಿಭಟನೆ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಇಡಿ ದಲಿತ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ್ ಕುಮಾರ್ ಮತ್ತು ಶೇಖರ್ ರೆಡ್ಡಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ...

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ...

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...