Homeಸಾಮಾಜಿಕಚಿಕ್ಕಮಗಳೂರಲ್ಲಿ ಮಧುಕರ ಶೆಟ್ಟಿ

ಚಿಕ್ಕಮಗಳೂರಲ್ಲಿ ಮಧುಕರ ಶೆಟ್ಟಿ

- Advertisement -
- Advertisement -

ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳು, ಯಾವ ಸರಕಾರಕ್ಕೂ ಸಹ್ಯವಾಗುವುದಿಲ್ಲ. ಕ್ರಮೇಣ ಅಂತಹವರನ್ನ ಅಧೈರ್ಯಗೊಳಿಸಿ ಮೆತ್ತಗಾಗಿಸುತ್ತವೆ. ಈಗ ತೀರಿಕೊಂಡ ಮಧುಕರ ಶೆಟ್ಟಿಯವರು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದಲೇ ಹೆಸರು ಮಾಡಿದವರು. ಇಂತಹ ಅಧಿಕಾರಿ ನಮ್ಮ ಚಿಕ್ಕಮಗಳೂರಿಗೆ ಎಸ್ಪಿಯಾಗಿ ಬಂದಾಗ ಸಾರ್ವಜನಿಕರಿಗೆ ಸಂಭ್ರಮವಾದರೆ, ಜನಪೀಡಕ ರಾಜಕಾರಣಿಗಳಿಗೆ ತೊಳ್ಳೆ ನಡುಕವುಂಟಾಯ್ತು. ಈ ಪೈಕಿ ಇಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯ ಬಲಗೈಯಂತಿರುವ ಭೋಜೇಗೌಡ ಮತ್ತು ಸಿ.ಟಿ ರವಿ ಎಂಬ ಜಿಲ್ಲೆಯ ಸಮಸ್ಯೆಗಳು ಮಧುಕರ ಶೆಟ್ಟಿಯವರನ್ನ ಎದುರುಗೊಳ್ಳಲು ಹಿಂಜರಿಯತೊಡಗಿದವು. ಆದರೂ ಅವರನ್ನ ಎತ್ತಂಗಡಿ ಮಾಡಿಸಲು ಜೊತೆಯಾಗಿಯೇ ಶ್ರಮಿಸುತ್ತಿದ್ದವು. ಭೋಜೇಗೌಡ ಆಗಾಗ್ಗೆ ಕುಮಾರಸ್ವಾಮಿಗೆ ಎಸ್ಪಿ ವಿರುದ್ಧ ದೂರು ಹೇಳುವುದನ್ನೇ ಕಾಯಕ ಮಾಡಿಕೊಂಡರೆ ಸಿ.ಟಿ.ರವಿ ಎಸ್ಪಿಗೆ ಕೆಟ್ಟ ಹೆಸರು ತರಲು ಹವಣಿಸುತ್ತಿದ್ದರು. ಈ ಸವiಯದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ಕಠಾರಿಯ ಧಕ್ಷ ಅಧಿಕಾರಿಯಾದ್ದರಿಂದ ರಾಜಕಾರಣಿಗಳ ಪುಂಗಿ ಬಂದಾಗಿತ್ತು. ಇಂತಹ ಉಸಿರುಗಟ್ಟುವ ಸನ್ನಿವೇಶದಲ್ಲಿ ಭೋಜೇಗೌಡ ಕುಮಾರಣ್ಣನ ಮೇಲೆ ವಿಪರೀತ ಒತ್ತಡ ತಂದಿದ್ದರಿಂದ ಮಧುಕರ ಶೆಟ್ಟರು ರಾಜ್ಯಪಾಲರ ಸೆಕ್ಯೂರಿಟಿ ಮುಖ್ಯಸ್ಥರಾಗಿ ವರ್ಗಾವಣೆಗೊಂಡರು! ಇದು ಒಬ್ಬ ದಕ್ಷ ಅಧಿಕಾರೊಗೆ ಸರಕಾರ ಮಾಡಿದ ತೀವ್ರ ತರದ ಅವಮಾನ. ಏಕೆಂದರೆ ಚಿಕ್ಕಮಗಳೂರ ಬಡವರು ಕೂಲಿ ಕಾರ್ಮಿಕರು ಮತ್ತು ಹಿಂದುಳಿದ ಜಾತಿಗಳು ನಮಗೆ ಯಾರಿಲ್ಲದಿದ್ದರೂ ಜಿಲ್ಲಾ ರಕ್ಷಣಾಧಿಕಾರಿಗಳಿಂದ ಪೂರ್ಣ ರಕ್ಷಣೆಯಿದೆ ಎಂದು ಭಾವಿಸಿದ್ದರು. ಕಾಡಲ್ಲಿನ ನಕ್ಷಲರೂ ಕೂಡ ಮಧುಕರ ಶೆಟ್ಟರು ಎಸ್ಪಿಯಾಗಿರುವುದರಿಂದ ನಮಗಾವ ತೊಂದರೆಯಿಲ್ಲವೆಂದು ಭಾವಿಸಿದ್ದರು. ಎಸ್ಪಿ ಕೂಡ ಆ ನಕ್ಸಲರನ್ನ ಅಕ್ಕ-ಪಕ್ಕದ ಜಿಲ್ಲೆಗೆ ಓಡಿಸಿ ಎಂದು ಹೇಳಿದ್ದರು. ತಮ್ಮ ಇರುವಿಕೆಯ ಕಾರಣಕ್ಕೆ ಹಲವು ಸಮಸ್ಯೆಗಳು ಕರಗಿ ಹೋಗುವಂತೆ ನೋಡಿಕೊಂಡಿದ್ದ ಮಧುಕರ ಶೆಟ್ಟರಿಂದ ರಾಜಕಾರಣಿಗಳು ನಿರುದ್ಯೋಗಿಗಳಂತಾಗಿದ್ದರು. ಇಂತಿರುವಾಗ ನಮಗೆ ಬೇಕೇ ಇಲ್ಲದ ರಾಜ್ಯಪಾಲರೆಂಬ ಮುದಿಯಾನೆಯ ರಕ್ಷಣೆಗೆ ಹೋಗಿ ಅದರ ಹಿಂದೆ ನಿಂತಾಗ ಜಿಲ್ಲೆಯ ಕಿಡಿಗೇಡಿ ರಾಜಕಾರಣಿಗಳು ಕುಹಕವಾಗಿ ನಕ್ಕು ಸಂತೋಷ ವ್ಯಕ್ತಪಡಿಸಿದ್ದರು.
ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳಿಗೆ ಅವಮಾನವಾಗುತ್ತಿರುವುದು ಈ ಜಿಲ್ಲೆಯಲ್ಲಿ ಇದೇ ಮೊದಲಲ್ಲ. ಹೆಚ್.ಎಲ್.ನಾಗೇಗೌಡರು ಡಿ.ಸಿ.ಯಾಗಿದ್ದ ಕಾಲದಿಂದಲೂ ನಡೆದು ಬಂದಿದೆ. ಅದರಲ್ಲೂ ಬಿರೂರು ಶಾಸಕರಾಗಿದ್ದ ಲಕ್ಷ್ಮಯ್ಯ ಪಿಳ್ಳೆನಳ್ಳಿ ಊರ ಮುಂದೆ ನಿಂತು ಪ್ಯಾಂಟ್‍ಜಿಪ್ ತೆಗೆದು ತನ್ನ ವೈರಿಗಳ ಹೆಂಗಸರನ್ನು ಕರೆದು ತನ್ನ ತಾಕತ್ತು ತೋರುತ್ತೇನೆ ಎಂದಿದ್ದರು. ಇದನ್ನು ಕಂಡ ಬಿಪಿನ್ ಗೋಪಾಲಕೃಷ್ಣ ಎಂಬ ಎಸ್ಪಿ ಕೂಡಲೆ ಕ್ರಮ ಜರುಗಿಸಿದ್ದರಿಂದ ಅವರನ್ನು 24 ಗಂಟೆಯಲ್ಲಿ ವರ್ಗ ಮಾಡಿಸಿದ್ದರು. ಅದೇ ¯ಕ್ಷ್ಮಯ್ಯನವರ ಮಗ ಭೋಜೇಗೌಡ ಮಧುಕರ ಶೆಟ್ಟರನ್ನ ವರ್ಗ ಮಾಡಿಸಿದ್ದರು. ಕೆಟ್ಟ ಸರಕಾರಗಳು ಬಂದಾಗ ಒಳ್ಳೆ ಅಧಿಕಾರಿಗಳು ತೊಂದರೆ ಅವಮಾನಕ್ಕೊಳಗಾಗುವುದು ಸಾಮಾನ್ಯ. ಆದ್ದರಿಂದ ಮಧುಕರಶೆಟ್ಟರು ತಮ್ಮ ಸೇವಾವಧಿಯಲ್ಲಿ ನೋವನ್ನ ಅನುಭವಿಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ದಲಿತ ಜನಾಂಗದಿಂದ ಬಂದ ಬಿ.ಬಿ ನಿಂಗಯ್ಯ, ಮೋಟಮ್ಮ ಇಂತವರೆಲ್ಲಾ ಮಂತ್ರಿಗಳಾಗಿ ಮೆರೆದರು. ಆದರೂ ಭೂಮಾಲೀಕರ ನಿರಂತರ ಶೋಷಣೆಗೆ ತುತ್ತಾದ ದಲಿತರಿಗೆ ಹರ್ಷಗುಪ್ತ ಮತ್ತು ಮಧುಕರ ಶೆಟ್ಟರು ವಸತಿ ನಿರ್ಮಿಸಿಕೊಟ್ಟು ನಿರ್ಗತಿಕರ ಬಾಳಿಗೆ ಬೆಳಕಾದದ್ದು ವಿಶೇಷ ಇದರಿಂದ ಅರ್ಥವಾಗುವುದೇನೆಂದರೆ, ಈ ಪಂಚರಂಗಿ ರಾಜಕಾರಣಿಗಳಿಂದ ಏನೂ ಆಗುವುದಿಲ್ಲ. ಜನಪರ ಕಾಳಜಿಯ ಅಧಿಕಾರಿಗಳಿಂದ ಮಾತ್ರ ಜನ ನೆಮ್ಮದಿ ಕಾಣಬಲ್ಲರು ಎಂಬುದು ಸಾಬೀತಾಗಿದೆ. ಚಿಕ್ಕಮಗಳೂರಲ್ಲಿ ಎಷ್ಟೆಲ್ಲಾ ರಾಜಕಾರಣಿಗಳು ಆಗಿಹೋದರೂ ಜನಮಾನಸಲ್ಲುಳಿದವರು ದಕ್ಷ ಪ್ರಾಮಾಣಿಕ ಅಧಿಕಾರಿಗಳು ಮಾತ್ರ ಎಂಬುದು ವಿಶೇಷ!

ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...