Homeಚಳವಳಿಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ಕ್ಷಮೆಯಲ್ಲಿ ಮುಗಿದುಹೋಗಬೇಕಿದ್ದ ಪ್ರಕರಣವನ್ನು ಅವರೇ ದೊಡ್ಡದು ಮಾಡುತ್ತಿದ್ದಾರೆ. ಇದರಿಂದ ನಾನು ಕುಗ್ಗುವುದಿಲ್ಲ. ಪ್ರಾಮಾಣಿಕವಾಗಿ ಹೋರಾಟ ಮುಂದುವರೆಸುತ್ತೇನೆ. ನಮ್ಮ ರೈತಸಂಘದ ಹಿರಿಯರೊಂದಿಗೆ ಸಭೆ ನಡೆಸಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ನಳಿನಿ ತಿಳಿಸಿದ್ದಾರೆ.

- Advertisement -
- Advertisement -

ರೈತ ಹೋರಾಟಗಾರ್ತಿಯೊಂದಿಗೆ ಅನುಚಿತವಾಗಿ ವರ್ತಿಸಿ ತೀವ್ರ ಖಂಡನೆಗೆ ಒಳಗಾಗಿದ್ದ ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರು ತನ್ನ ತಪ್ಪಿಗೆ ಕ್ಷಮೆ ಕೇಳುತ್ತಲೇ ನಳಿನಿ ವಿರುದ್ಧ ಮತ್ತಷ್ಟು ಆರೋಪಗಳನ್ನು ಮಾಡಿ ವಿವಾದವನ್ನು ಮುಂದುವರೆಸಿದ್ದಾರೆ.

ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು “ಆಯಮ್ಮ ನನ್ನನ್ನ ಟೆಂಪ್ಟ್ ಮಾಡಿದ್ದಾರೆ, ಒಬ್ಬ ಮಂತ್ರಿ ಅವರ ಊರಿಗೆ ಹೋಗಿ ಸುಮ್ಮನೆ ಬೈಸಿಕೊಂಡು ಬರುವುದಕ್ಕಾಗುತ್ತದೆಯೇ? ಆಯಮ್ಮನಿಗೆ ಅದೇನಾಗಿತ್ತೊ ಗೊತ್ತಿಲ್ಲ. ಆಯಮ್ಮ ಬಹುಶಃ ಅದೇ ರೀತಿ ಬೆಳೆದುಕೊಂಡಬಂದಿರಬಹುದು. ಈಯಮ್ಮನ ನೇಚರ್‌ ಅಂತದ್ದು ಎಂದು ಸ್ಥಳೀಯವಾಗಿ ಹೇಳಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಮಹಿಳಾ ಮತ್ತು ರೈತ ಹೋರಾಟಗಾರರನ್ನು ಮಾತನಾಡಿಸಿತು. ಅವರ ಪ್ರತಿಕ್ರಿಯೆಗಳು ಈ ಕೆಳಗಿನಂತವೆ.

ಒಬ್ಬ ಮಹಿಳೆಯ ಎದುರು “ನಾನು ಬಹಳ ಕೆಟ್ಟ ಮನುಷ್ಯ” ಎಂದರೆ ಏನರ್ಥ? : ನಂದಿನಿ ಜಯರಾಂ ಪ್ರಶ್ನೆ

“ಮೊದಲನೆಯದಾಗಿ ನಳಿನಿಯಂತಹ ಹೆಣ್ಣು ಮಕ್ಕಳು ಸಾಮಾಜಿಕ ಹೋರಾಟಕ್ಕೆ ಬರುವುದೇ ದೊಡ್ಡದು. ಅದಕ್ಕಾಗಿ ಅವಳನ್ನು ಅಭಿನಂದಿಸಬೇಕು. ಎರಡನೇಯದಾಗಿ ಅವರೂರಿಗೆ ಬಂದಾಗ ಅವರೂರಿನ ಸಮಸ್ಯೆಯನ್ನೇ ಅವಳು ಕೇಳಿದ್ದಾಳೆ. ಈ ಮೊದಲು ಆ ಕೆರೆ ನೀರು ಹಂಚಿಕೆ ಸಂಬಂಧಿಸಿದಂತೆ ಹೋರಾಟ ಮಾಡಿ ಯಶಸ್ಸು ಕಂಡಿದ್ದಾರೆ. ಈಗ ಒತ್ತುವರಿ ಸಮಸ್ಯೆ ಗಮನಕ್ಕೆ ಬಂದಾಗ ಅದನ್ನು ಪ್ರಶ್ನಿಸಿದ್ದಾರೆ. ಆಗ ಮಾಧುಸ್ವಾಮಿಯವರು ಆ ಪ್ರಶ್ನೆಯನ್ನು ಫ್ಯೂಡಲ್‌ ಮನಸ್ಥಿತಿಯಿಂದ ನೋಡಿದ್ದಾರೆ.

ಅಷ್ಟು ಚಿಕ್ಕ ಹುಡುಗಿ ಪ್ರಶ್ನೆ ಮಾಡಿರುವುದು ಮತ್ತು ಹುಡುಗಿಯೊಬ್ಬಳು ಸಾರ್ವಜನಿಕವಾಗಿ ಪ್ರಶ್ನೆ ಮಾಡಿರುವುದನ್ನು ತಡೆದುಕೊಳ್ಳಲು ಮಾಧುಸ್ವಾಮಿಯವರಿಗೆ ಆಗಿಲ್ಲ. ಅದಕ್ಕಾಗಿ ಅವರು ಪದೇ ಪದೇ ಅವಳ ಮಾತಿನ ಧಾಟಿ ಸರಿಯಿಲ್ಲ ಅನ್ನುತ್ತಾರಲ್ಲ, ಅವರು ಸಾರ್ವಜನಿಕವಾಗಿ ಮುಚ್ಚು ಬಾಯಿ ರ್‍ಯಾಸ್ಕಲ್ ಎನ್ನುವ ಧಾಟಿ ಸರಿಯೇ? ಒಬ್ಬ ಹೆಣ್ಣು ಮಗಳಿಗೆ ನಾನು ಕೆಟ್ಟ ಮನುಷ್ಯ ಗೊತ್ತಿಲ್ಲ ನಿನಗೆ ಎಂದರೆ ಅರ್ಥವೇನು? ಇದು ಬಹಿರಂಗ ಬೆದರಿಕೆಯಲ್ಲವೇ?

ನಂದಿನಿ ಜಯರಾಂ

ರೈತಸಂಘ ಮಾಧುಸ್ವಾಮಿಯವರ ನಡೆಯನ್ನು ತೀವ್ರವಾಗಿ ಖಂಡಿಸುತ್ತದೆ. ಕ್ಷಮೆ ಕೇಳಿದರೆಂದು ನಾವು ಸುಮ್ಮನಾಗಿದ್ದೆವು. ಆದರೆ ಅವರು ತಮ್ಮ ಹೇಳಿಕೆಗಳನ್ನು ಬದಲಿಸುತ್ತಿರುವುದನ್ನು ನೋಡಿದರೆ ಕ್ಷಮೆ ಅವರ ಮನಸ್ಸಿನಿಂದ ಬಂದಿಲ್ಲ, ಬದಲಿಗೆ ತಮ್ಮ ಮೇಲಿನ ದಾಳಿಯಿಂದ ತಪ್ಪಿಸಿಕೊಳ್ಳಲಿಕ್ಕಾಗಿ ಕ್ಷಮೆ ಕೇಳಿದ್ದಾರೆಂಬುದು ಅರಿವಿಗೆ ಬರುತ್ತದೆ. ಒಂದು ಕಡೆ ಸಂಸ್ಕೃತಿಯ ಬಗ್ಗೆ ಮಾತನಾಡುವ ಅವರು ಇಲ್ಲಿ ನಾಲಿಗೆ ಹರಿಯಬಿಡುತ್ತಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.

ನಂದಿನಿ ಜಯರಾಂ, ರೈತ ಮುಖಂಡರು,

ಕರ್ನಾಟಕ ರಾಜ್ಯ ರೈತ ಸಂಘ, ಕೆ.ಆರ್‌ ಪೇಟೆ.

ತಾನೊಬ್ಬ ಕೆಟ್ಟ ಮನುಷ್ಯ ಎಂಬುದನ್ನು ತೋರಿಸಿದ್ದಾರೆ. – ಗೀತಾ.ವಿ

ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ನಮ್ಮ ಕೋಲಾರದಲ್ಲಿ ಮಹಿಳಾ ರೈತ ಮುಖಂಡರುಗಳಿಗೆ ಬಾಯಿ ಮಚ್ಚು ರ್‍ಯಾಸ್ಕಲ್‌ ಎಂದು‌ ಕೆಟ್ಟ ಭಾಷೆಯಲ್ಲಿ ಬೈದು ತಾನೊಬ್ಬ ಕೆಟ್ಟ ಮನುಷ್ಯ ಎಂದು ಬೆರಳು ತೋರಿಸಿ ಹೇಳುತ್ತಿರುವುದು ಇದೊಂದು ಖಂಡನೀಯ ವರ್ತನೆ. ಯಾವ ವ್ಯಕ್ತಿಯೂ ಈ ರೀತಿ ನಡೆದುಕೊಳ್ಳಬಾರದು. ಅದರಲ್ಲಿಯೂ ಜನಪ್ರತಿನಿಧಿಗಳು ಶಾಸಕರು, ಸಚಿವರು‌ ಅದರಲ್ಲಿಯೂ ಕಾನೂನು ಸಚಿವರಾಗಿ ಕನಿಷ್ಟ ಸಾಮಾನ್ಯ ಪ್ರಜ್ಞೆಯಿಲ್ಲದೇ ನಾಲಿಗೆ ಹರಿಬಿಟ್ಟಿದ್ದು ಅಕ್ಷಮ್ಯ. ಸಾಲದ್ದಕ್ಕೆ ಸ್ಥಳದಲ್ಲಿ ಇದ್ದ ಪುರುಷ ಪೋಲೀಸ್ ಆಕೆಯನ್ನು ತಳ್ಳಿಕೊಂಡು ಹೋಗುತ್ತಿರುವುದೂ ಕಾಣುತ್ತಿದೆ. ಇದೂ ಆಕ್ಷೇಪಾರ್ಹ ಸಂಗತಿಯೇ.

ಗೀತಾ.ವಿ

ಕನಿಷ್ಟ ಸಾಮಾನ್ಯ ಜ್ಞಾನವಿಲ್ಲದವರು ಸಚಿವರಾಗಿರುವುದು ತರವಲ್ಲ. ಅದರಲ್ಲಿಯೂ ಕಾನೂನು ಸಚಿವರಾಗಿರುವುದಂತೂ ಸುತರಾಂ ಸರಿಯಲ್ಲ. ಇವರ‌ ಮನೋಧರ್ಮ ಮನುಧರ್ಮದ ಭಾಗವೇ ಆಗಿದೆ. ಮಹಿಳೆಯರ ಬಗ್ಗೆ ಕೂಡ ಕನಿಷ್ಟ ಗೌರವವಿಲ್ಲದ ಇವರು ಕಾನೂನು ಸಚಿವರಾಗಿ‌ ಮುಂದುವರೆಯಲು ಅರ್ಹರಲ್ಲವೆಂದೇ ಬಾವಿಸಬೇಕು. ನಾವು ಇದನ್ನು ಖಂಡಿಸುತ್ತೇವೆ.

ಗೀತಾ.ವಿ, ಉಪಾಧ್ಯಕ್ಷರು
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಸಮಿತಿ.

ಪ್ರಶ್ನೆ ಮತ್ತು ನ್ಯಾಯ ಈ ಎರಡು ಪದಗಳಿಂದ ಬಿಜೆಪಿಯವರು ಬಹಳ ದೂರ. – ಗೌರಿ

ಮಂತ್ರಿಗಳಿಗೆ ಮೊದಲು ಸಂವಿಧಾನದ ಬಗ್ಗೆ, ಕಾನೂನಿನ ತರಬೇತಿ ಕೊಡುವುದನ್ನು ಕಡ್ಡಾಯ ಮಾಡಬೇಕು. ಸಾಮಾನ್ಯ ಜ್ಞಾನ ಇಲ್ಲದ ಇಂತಹವರು ಮಂತ್ರಿಗಳಾದರೆ ಏನಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಮಹಿಳಾ ಹೋರಾಟಗಾರ್ತಿ ನಳಿನಿ ಏನೂ ತಪ್ಪಾಗಿ ಮಾತನಾಡಿಲ್ಲ. ಸಮಾಧಾನವಾಗಿಯೇ ಸಮಸ್ಯೆಯನ್ನು ಹೇಳುತ್ತಿದ್ದಾಳೆ. ಅದನ್ನು ಮಂತ್ರಿಗೆ ಕೇಳಿಸಿಕೊಳ್ಳಲು ಸಾಧ್ಯವಿಲ್ಲವೆಂದಾದರೆ ಅದು ಯಾರ ತಪ್ಪು?

ಗೌರಿ

ಪ್ರಶ್ನೆ ಮತ್ತು ನ್ಯಾಯ ಈ ಎರಡು ಪದಗಳಿಂದ ಬಿಜೆಪಿಯವರು ಬಹಳ ದೂರ. ಹಾಗಾಗಿ ಯಾರಾದರೂ ಪ್ರಶ್ನಿಸಿದರೆ ಕೆಂಡಾಮಂಡಲವಾಗುತ್ತಾರೆ. ಇದರಿಂದ ಆ ಮಂತ್ರಿಯ ಮನೆಯ ಹೆಣ್ಣು ಮಕ್ಕಳ ಸ್ಥಾನ ಏನು ಎಂಬುದು ತಿಳಿಯುತ್ತದೆ. ಜನರ ಸಮಸ್ಯೆಗಳನ್ನು ಇವರ ಗಮನಕ್ಕೆ ತರದೆ ಇನ್ಯಾರ ಹತ್ತಿರ ಹೇಳಬೇಕು. ಆ ಮಹಿಳೆ ಹಾಗೆ ಅಂತ ಅವಳ ನಡತೆಯನ್ನು ತೇಜೋವಧೆ ಮಾಡುವ ಮಾಧುಸ್ವಾಮಿಯವರು ಮಂತ್ರಿಯ ಸ್ಥಾನದಲ್ಲಿ ಉಳಿಯಲೂ ಅನರ್ಹರು. ಒಂದು ಕಡೆ ಮಹಿಳೆಯರನ್ನು ದೇವಿಗೆ ಹೋಲಿಸುವುದು ಮತ್ತೊಂದು ಕಡೆ ಅವಕಾಶ ಸಿಕ್ಕಾಗೆಲ್ಲಾ ಅವರನ್ನ ಕೀಳು ಮಟ್ಟದಲ್ಲಿ ನಡಸಿಕೂಳ್ಳುವುದೇ ಇವರ ಸಂಸ್ಕೃತಿ.  ಮೊದಲು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮಹಿಳೆಯರ ವಿಷಯದಲ್ಲಿ ಹೇಗೆ ನಡೆದುಕೊಳ್ಳಬೇಕೆಂದು ಉಳಿದ ಜನಪ್ರತಿನಿಧಿಗಳಿಗೂ ಇದು ಪಾಠವಾಗಲಿ.

ಗೌರಿ, ರಾಜ್ಯಸಮಿತಿ ಸದಸ್ಯರು

ಕರ್ನಾಟಕ ಜನಶಕ್ತಿ.

ಹೋರಾಟ ಮುಂದುವರೆಸುತ್ತೇನೆ – ನಳಿನಿ

ರೈತಸಂಘದವರು ಅಂತ ಗೊತ್ತಿರಲಿಲ್ಲ ಎಂದು ಹೇಳಿ ಇಂದು ಬೆಳಿಗ್ಗೆ ಮಾಧುಸ್ವಾಮಿಯವರು ಕ್ಷಮೆ ಕೇಳಿದ್ದರು. ಆದರೆ ಮತ್ತೆ ಮಧ್ಯಾಹ್ನ ಪತ್ರಿಕಾಗೋಷ್ಠಿಯಲ್ಲಿ ನನ್ನ ವಿರುದ್ಧವೇ ಆರೋಪ ಮಾಡಿದ್ದಾರೆ. ನಾನು ಜೋರುದನಿಯಲ್ಲಿ ಮಾತನಾಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ. ನಾನು ನನ್ನ ಹಕ್ಕನ್ನು ಕೇಳಿದ್ದೇನೆಯೇ ಹೊರತು ಮತ್ತೇನಲ್ಲ ಎಂಬುದನ್ನು ಅವರು ಮರೆಯಬಾರದು. ಅವರು ಪೊಲೀಸರ ಮಾತುಗಳನ್ನು ಕೇಳುವುದನ್ನು ಬಿಟ್ಟು ಜಿಲ್ಲಾಡಳಿತದಲ್ಲಿ ನನ್ನ ಬಗ್ಗೆ ಕೇಳಲಿ.

ನಳಿನಿ
ನಳಿನಿ

ಒಮ್ಮೆ ತಪ್ಪು ಮಾಡಿದ ಅವರು ಇಂದು ನನ್ನ ಮೇಲೆ ಕೆಟ್ಟದಾಗಿ ಮಾತನಾಡಿ ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದಾರೆ.  ಕ್ಷಮೆಯಲ್ಲಿ ಮುಗಿದುಹೋಗಬೇಕಿದ್ದ ಪ್ರಕರಣವನ್ನು ಅವರೇ ದೊಡ್ಡದು ಮಾಡುತ್ತಿದ್ದಾರೆ. ಇದರಿಂದ ನಾನು ಕುಗ್ಗುವುದಿಲ್ಲ. ಪ್ರಾಮಾಣಿಕವಾಗಿ ಹೋರಾಟ ಮುಂದುವರೆಸುತ್ತೇನೆ. ನಮ್ಮ ರೈತಸಂಘದ ಹಿರಿಯರೊಂದಿಗೆ ಸಭೆ ನಡೆಸಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ.

ನಳಿನಿ, ಜಿಲ್ಲಾಧ್ಯಕ್ಷೆ

ಕರ್ನಾಟಕ ರಾಜ್ಯ ರೈತ ಸಂಘ, ಕೋಲಾರ.


ಇದನ್ನೂ ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...