Homeಚಳವಳಿಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ಮಾಧುಸ್ವಾಮಿಗೆ ಕಾನೂನಿನ ಪಾಠ ಹೇಳಿಕೊಡಬೇಕಿದೆ ; ಹೋರಾಟಗಾರ್ತಿಯರ ಆಕ್ರೋಶ

ಕ್ಷಮೆಯಲ್ಲಿ ಮುಗಿದುಹೋಗಬೇಕಿದ್ದ ಪ್ರಕರಣವನ್ನು ಅವರೇ ದೊಡ್ಡದು ಮಾಡುತ್ತಿದ್ದಾರೆ. ಇದರಿಂದ ನಾನು ಕುಗ್ಗುವುದಿಲ್ಲ. ಪ್ರಾಮಾಣಿಕವಾಗಿ ಹೋರಾಟ ಮುಂದುವರೆಸುತ್ತೇನೆ. ನಮ್ಮ ರೈತಸಂಘದ ಹಿರಿಯರೊಂದಿಗೆ ಸಭೆ ನಡೆಸಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ನಳಿನಿ ತಿಳಿಸಿದ್ದಾರೆ.

- Advertisement -
- Advertisement -

ರೈತ ಹೋರಾಟಗಾರ್ತಿಯೊಂದಿಗೆ ಅನುಚಿತವಾಗಿ ವರ್ತಿಸಿ ತೀವ್ರ ಖಂಡನೆಗೆ ಒಳಗಾಗಿದ್ದ ಸಣ್ಣ ನೀರಾವರಿ ಮತ್ತು ಕಾನೂನು ಸಚಿವ ಮಾಧುಸ್ವಾಮಿಯವರು ತನ್ನ ತಪ್ಪಿಗೆ ಕ್ಷಮೆ ಕೇಳುತ್ತಲೇ ನಳಿನಿ ವಿರುದ್ಧ ಮತ್ತಷ್ಟು ಆರೋಪಗಳನ್ನು ಮಾಡಿ ವಿವಾದವನ್ನು ಮುಂದುವರೆಸಿದ್ದಾರೆ.

ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು “ಆಯಮ್ಮ ನನ್ನನ್ನ ಟೆಂಪ್ಟ್ ಮಾಡಿದ್ದಾರೆ, ಒಬ್ಬ ಮಂತ್ರಿ ಅವರ ಊರಿಗೆ ಹೋಗಿ ಸುಮ್ಮನೆ ಬೈಸಿಕೊಂಡು ಬರುವುದಕ್ಕಾಗುತ್ತದೆಯೇ? ಆಯಮ್ಮನಿಗೆ ಅದೇನಾಗಿತ್ತೊ ಗೊತ್ತಿಲ್ಲ. ಆಯಮ್ಮ ಬಹುಶಃ ಅದೇ ರೀತಿ ಬೆಳೆದುಕೊಂಡಬಂದಿರಬಹುದು. ಈಯಮ್ಮನ ನೇಚರ್‌ ಅಂತದ್ದು ಎಂದು ಸ್ಥಳೀಯವಾಗಿ ಹೇಳಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಮಹಿಳಾ ಮತ್ತು ರೈತ ಹೋರಾಟಗಾರರನ್ನು ಮಾತನಾಡಿಸಿತು. ಅವರ ಪ್ರತಿಕ್ರಿಯೆಗಳು ಈ ಕೆಳಗಿನಂತವೆ.

ಒಬ್ಬ ಮಹಿಳೆಯ ಎದುರು “ನಾನು ಬಹಳ ಕೆಟ್ಟ ಮನುಷ್ಯ” ಎಂದರೆ ಏನರ್ಥ? : ನಂದಿನಿ ಜಯರಾಂ ಪ್ರಶ್ನೆ

“ಮೊದಲನೆಯದಾಗಿ ನಳಿನಿಯಂತಹ ಹೆಣ್ಣು ಮಕ್ಕಳು ಸಾಮಾಜಿಕ ಹೋರಾಟಕ್ಕೆ ಬರುವುದೇ ದೊಡ್ಡದು. ಅದಕ್ಕಾಗಿ ಅವಳನ್ನು ಅಭಿನಂದಿಸಬೇಕು. ಎರಡನೇಯದಾಗಿ ಅವರೂರಿಗೆ ಬಂದಾಗ ಅವರೂರಿನ ಸಮಸ್ಯೆಯನ್ನೇ ಅವಳು ಕೇಳಿದ್ದಾಳೆ. ಈ ಮೊದಲು ಆ ಕೆರೆ ನೀರು ಹಂಚಿಕೆ ಸಂಬಂಧಿಸಿದಂತೆ ಹೋರಾಟ ಮಾಡಿ ಯಶಸ್ಸು ಕಂಡಿದ್ದಾರೆ. ಈಗ ಒತ್ತುವರಿ ಸಮಸ್ಯೆ ಗಮನಕ್ಕೆ ಬಂದಾಗ ಅದನ್ನು ಪ್ರಶ್ನಿಸಿದ್ದಾರೆ. ಆಗ ಮಾಧುಸ್ವಾಮಿಯವರು ಆ ಪ್ರಶ್ನೆಯನ್ನು ಫ್ಯೂಡಲ್‌ ಮನಸ್ಥಿತಿಯಿಂದ ನೋಡಿದ್ದಾರೆ.

ಅಷ್ಟು ಚಿಕ್ಕ ಹುಡುಗಿ ಪ್ರಶ್ನೆ ಮಾಡಿರುವುದು ಮತ್ತು ಹುಡುಗಿಯೊಬ್ಬಳು ಸಾರ್ವಜನಿಕವಾಗಿ ಪ್ರಶ್ನೆ ಮಾಡಿರುವುದನ್ನು ತಡೆದುಕೊಳ್ಳಲು ಮಾಧುಸ್ವಾಮಿಯವರಿಗೆ ಆಗಿಲ್ಲ. ಅದಕ್ಕಾಗಿ ಅವರು ಪದೇ ಪದೇ ಅವಳ ಮಾತಿನ ಧಾಟಿ ಸರಿಯಿಲ್ಲ ಅನ್ನುತ್ತಾರಲ್ಲ, ಅವರು ಸಾರ್ವಜನಿಕವಾಗಿ ಮುಚ್ಚು ಬಾಯಿ ರ್‍ಯಾಸ್ಕಲ್ ಎನ್ನುವ ಧಾಟಿ ಸರಿಯೇ? ಒಬ್ಬ ಹೆಣ್ಣು ಮಗಳಿಗೆ ನಾನು ಕೆಟ್ಟ ಮನುಷ್ಯ ಗೊತ್ತಿಲ್ಲ ನಿನಗೆ ಎಂದರೆ ಅರ್ಥವೇನು? ಇದು ಬಹಿರಂಗ ಬೆದರಿಕೆಯಲ್ಲವೇ?

ನಂದಿನಿ ಜಯರಾಂ

ರೈತಸಂಘ ಮಾಧುಸ್ವಾಮಿಯವರ ನಡೆಯನ್ನು ತೀವ್ರವಾಗಿ ಖಂಡಿಸುತ್ತದೆ. ಕ್ಷಮೆ ಕೇಳಿದರೆಂದು ನಾವು ಸುಮ್ಮನಾಗಿದ್ದೆವು. ಆದರೆ ಅವರು ತಮ್ಮ ಹೇಳಿಕೆಗಳನ್ನು ಬದಲಿಸುತ್ತಿರುವುದನ್ನು ನೋಡಿದರೆ ಕ್ಷಮೆ ಅವರ ಮನಸ್ಸಿನಿಂದ ಬಂದಿಲ್ಲ, ಬದಲಿಗೆ ತಮ್ಮ ಮೇಲಿನ ದಾಳಿಯಿಂದ ತಪ್ಪಿಸಿಕೊಳ್ಳಲಿಕ್ಕಾಗಿ ಕ್ಷಮೆ ಕೇಳಿದ್ದಾರೆಂಬುದು ಅರಿವಿಗೆ ಬರುತ್ತದೆ. ಒಂದು ಕಡೆ ಸಂಸ್ಕೃತಿಯ ಬಗ್ಗೆ ಮಾತನಾಡುವ ಅವರು ಇಲ್ಲಿ ನಾಲಿಗೆ ಹರಿಯಬಿಡುತ್ತಾರೆ. ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ.

ನಂದಿನಿ ಜಯರಾಂ, ರೈತ ಮುಖಂಡರು,

ಕರ್ನಾಟಕ ರಾಜ್ಯ ರೈತ ಸಂಘ, ಕೆ.ಆರ್‌ ಪೇಟೆ.

ತಾನೊಬ್ಬ ಕೆಟ್ಟ ಮನುಷ್ಯ ಎಂಬುದನ್ನು ತೋರಿಸಿದ್ದಾರೆ. – ಗೀತಾ.ವಿ

ರಾಜ್ಯದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರು ನಮ್ಮ ಕೋಲಾರದಲ್ಲಿ ಮಹಿಳಾ ರೈತ ಮುಖಂಡರುಗಳಿಗೆ ಬಾಯಿ ಮಚ್ಚು ರ್‍ಯಾಸ್ಕಲ್‌ ಎಂದು‌ ಕೆಟ್ಟ ಭಾಷೆಯಲ್ಲಿ ಬೈದು ತಾನೊಬ್ಬ ಕೆಟ್ಟ ಮನುಷ್ಯ ಎಂದು ಬೆರಳು ತೋರಿಸಿ ಹೇಳುತ್ತಿರುವುದು ಇದೊಂದು ಖಂಡನೀಯ ವರ್ತನೆ. ಯಾವ ವ್ಯಕ್ತಿಯೂ ಈ ರೀತಿ ನಡೆದುಕೊಳ್ಳಬಾರದು. ಅದರಲ್ಲಿಯೂ ಜನಪ್ರತಿನಿಧಿಗಳು ಶಾಸಕರು, ಸಚಿವರು‌ ಅದರಲ್ಲಿಯೂ ಕಾನೂನು ಸಚಿವರಾಗಿ ಕನಿಷ್ಟ ಸಾಮಾನ್ಯ ಪ್ರಜ್ಞೆಯಿಲ್ಲದೇ ನಾಲಿಗೆ ಹರಿಬಿಟ್ಟಿದ್ದು ಅಕ್ಷಮ್ಯ. ಸಾಲದ್ದಕ್ಕೆ ಸ್ಥಳದಲ್ಲಿ ಇದ್ದ ಪುರುಷ ಪೋಲೀಸ್ ಆಕೆಯನ್ನು ತಳ್ಳಿಕೊಂಡು ಹೋಗುತ್ತಿರುವುದೂ ಕಾಣುತ್ತಿದೆ. ಇದೂ ಆಕ್ಷೇಪಾರ್ಹ ಸಂಗತಿಯೇ.

ಗೀತಾ.ವಿ

ಕನಿಷ್ಟ ಸಾಮಾನ್ಯ ಜ್ಞಾನವಿಲ್ಲದವರು ಸಚಿವರಾಗಿರುವುದು ತರವಲ್ಲ. ಅದರಲ್ಲಿಯೂ ಕಾನೂನು ಸಚಿವರಾಗಿರುವುದಂತೂ ಸುತರಾಂ ಸರಿಯಲ್ಲ. ಇವರ‌ ಮನೋಧರ್ಮ ಮನುಧರ್ಮದ ಭಾಗವೇ ಆಗಿದೆ. ಮಹಿಳೆಯರ ಬಗ್ಗೆ ಕೂಡ ಕನಿಷ್ಟ ಗೌರವವಿಲ್ಲದ ಇವರು ಕಾನೂನು ಸಚಿವರಾಗಿ‌ ಮುಂದುವರೆಯಲು ಅರ್ಹರಲ್ಲವೆಂದೇ ಬಾವಿಸಬೇಕು. ನಾವು ಇದನ್ನು ಖಂಡಿಸುತ್ತೇವೆ.

ಗೀತಾ.ವಿ, ಉಪಾಧ್ಯಕ್ಷರು
ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ರಾಜ್ಯ ಸಮಿತಿ.

ಪ್ರಶ್ನೆ ಮತ್ತು ನ್ಯಾಯ ಈ ಎರಡು ಪದಗಳಿಂದ ಬಿಜೆಪಿಯವರು ಬಹಳ ದೂರ. – ಗೌರಿ

ಮಂತ್ರಿಗಳಿಗೆ ಮೊದಲು ಸಂವಿಧಾನದ ಬಗ್ಗೆ, ಕಾನೂನಿನ ತರಬೇತಿ ಕೊಡುವುದನ್ನು ಕಡ್ಡಾಯ ಮಾಡಬೇಕು. ಸಾಮಾನ್ಯ ಜ್ಞಾನ ಇಲ್ಲದ ಇಂತಹವರು ಮಂತ್ರಿಗಳಾದರೆ ಏನಾಗುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಮಹಿಳಾ ಹೋರಾಟಗಾರ್ತಿ ನಳಿನಿ ಏನೂ ತಪ್ಪಾಗಿ ಮಾತನಾಡಿಲ್ಲ. ಸಮಾಧಾನವಾಗಿಯೇ ಸಮಸ್ಯೆಯನ್ನು ಹೇಳುತ್ತಿದ್ದಾಳೆ. ಅದನ್ನು ಮಂತ್ರಿಗೆ ಕೇಳಿಸಿಕೊಳ್ಳಲು ಸಾಧ್ಯವಿಲ್ಲವೆಂದಾದರೆ ಅದು ಯಾರ ತಪ್ಪು?

ಗೌರಿ

ಪ್ರಶ್ನೆ ಮತ್ತು ನ್ಯಾಯ ಈ ಎರಡು ಪದಗಳಿಂದ ಬಿಜೆಪಿಯವರು ಬಹಳ ದೂರ. ಹಾಗಾಗಿ ಯಾರಾದರೂ ಪ್ರಶ್ನಿಸಿದರೆ ಕೆಂಡಾಮಂಡಲವಾಗುತ್ತಾರೆ. ಇದರಿಂದ ಆ ಮಂತ್ರಿಯ ಮನೆಯ ಹೆಣ್ಣು ಮಕ್ಕಳ ಸ್ಥಾನ ಏನು ಎಂಬುದು ತಿಳಿಯುತ್ತದೆ. ಜನರ ಸಮಸ್ಯೆಗಳನ್ನು ಇವರ ಗಮನಕ್ಕೆ ತರದೆ ಇನ್ಯಾರ ಹತ್ತಿರ ಹೇಳಬೇಕು. ಆ ಮಹಿಳೆ ಹಾಗೆ ಅಂತ ಅವಳ ನಡತೆಯನ್ನು ತೇಜೋವಧೆ ಮಾಡುವ ಮಾಧುಸ್ವಾಮಿಯವರು ಮಂತ್ರಿಯ ಸ್ಥಾನದಲ್ಲಿ ಉಳಿಯಲೂ ಅನರ್ಹರು. ಒಂದು ಕಡೆ ಮಹಿಳೆಯರನ್ನು ದೇವಿಗೆ ಹೋಲಿಸುವುದು ಮತ್ತೊಂದು ಕಡೆ ಅವಕಾಶ ಸಿಕ್ಕಾಗೆಲ್ಲಾ ಅವರನ್ನ ಕೀಳು ಮಟ್ಟದಲ್ಲಿ ನಡಸಿಕೂಳ್ಳುವುದೇ ಇವರ ಸಂಸ್ಕೃತಿ.  ಮೊದಲು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ. ಮಹಿಳೆಯರ ವಿಷಯದಲ್ಲಿ ಹೇಗೆ ನಡೆದುಕೊಳ್ಳಬೇಕೆಂದು ಉಳಿದ ಜನಪ್ರತಿನಿಧಿಗಳಿಗೂ ಇದು ಪಾಠವಾಗಲಿ.

ಗೌರಿ, ರಾಜ್ಯಸಮಿತಿ ಸದಸ್ಯರು

ಕರ್ನಾಟಕ ಜನಶಕ್ತಿ.

ಹೋರಾಟ ಮುಂದುವರೆಸುತ್ತೇನೆ – ನಳಿನಿ

ರೈತಸಂಘದವರು ಅಂತ ಗೊತ್ತಿರಲಿಲ್ಲ ಎಂದು ಹೇಳಿ ಇಂದು ಬೆಳಿಗ್ಗೆ ಮಾಧುಸ್ವಾಮಿಯವರು ಕ್ಷಮೆ ಕೇಳಿದ್ದರು. ಆದರೆ ಮತ್ತೆ ಮಧ್ಯಾಹ್ನ ಪತ್ರಿಕಾಗೋಷ್ಠಿಯಲ್ಲಿ ನನ್ನ ವಿರುದ್ಧವೇ ಆರೋಪ ಮಾಡಿದ್ದಾರೆ. ನಾನು ಜೋರುದನಿಯಲ್ಲಿ ಮಾತನಾಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ. ನಾನು ನನ್ನ ಹಕ್ಕನ್ನು ಕೇಳಿದ್ದೇನೆಯೇ ಹೊರತು ಮತ್ತೇನಲ್ಲ ಎಂಬುದನ್ನು ಅವರು ಮರೆಯಬಾರದು. ಅವರು ಪೊಲೀಸರ ಮಾತುಗಳನ್ನು ಕೇಳುವುದನ್ನು ಬಿಟ್ಟು ಜಿಲ್ಲಾಡಳಿತದಲ್ಲಿ ನನ್ನ ಬಗ್ಗೆ ಕೇಳಲಿ.

ನಳಿನಿ
ನಳಿನಿ

ಒಮ್ಮೆ ತಪ್ಪು ಮಾಡಿದ ಅವರು ಇಂದು ನನ್ನ ಮೇಲೆ ಕೆಟ್ಟದಾಗಿ ಮಾತನಾಡಿ ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದಾರೆ.  ಕ್ಷಮೆಯಲ್ಲಿ ಮುಗಿದುಹೋಗಬೇಕಿದ್ದ ಪ್ರಕರಣವನ್ನು ಅವರೇ ದೊಡ್ಡದು ಮಾಡುತ್ತಿದ್ದಾರೆ. ಇದರಿಂದ ನಾನು ಕುಗ್ಗುವುದಿಲ್ಲ. ಪ್ರಾಮಾಣಿಕವಾಗಿ ಹೋರಾಟ ಮುಂದುವರೆಸುತ್ತೇನೆ. ನಮ್ಮ ರೈತಸಂಘದ ಹಿರಿಯರೊಂದಿಗೆ ಸಭೆ ನಡೆಸಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ.

ನಳಿನಿ, ಜಿಲ್ಲಾಧ್ಯಕ್ಷೆ

ಕರ್ನಾಟಕ ರಾಜ್ಯ ರೈತ ಸಂಘ, ಕೋಲಾರ.


ಇದನ್ನೂ ಓದಿ: ಮಾಧುಸ್ವಾಮಿಯವರನ್ನು ಪ್ರಶ್ನಿಸಿದ ನಳಿನಿ ಯಾರು? ಅವರು ಯಾವಾಗಲೂ ಹಾಗೇನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....