Homeಕರ್ನಾಟಕಯಾವನಾದ್ರು *** ಮಗ ನನ್ನ ಕೇಳಿದ್ದೀರಾ: ರೈತರ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ

ಯಾವನಾದ್ರು *** ಮಗ ನನ್ನ ಕೇಳಿದ್ದೀರಾ: ರೈತರ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ

- Advertisement -
- Advertisement -

ಅಧಿಕಾರಿಯೊಬ್ಬರನ್ನು ಕೀಳುಭಾಷೆಯಲ್ಲಿ ನಿಂದಿಸಿದ್ದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಇದೀಗ ರೈತರ ವಿರುದ್ಧ ದರ್ಪದ ಮಾತುಗಳನ್ನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಾವನಾದ್ರು ಬೋಸುಡಿಕೆ ಮಗ ಬಂದು ನನ್ನ ಕೇಳಿದ್ದೀರಾ ? ಎಂದು ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಬಹಿಷ್ಕರಿಸಿದ್ದ ಗ್ರಾಮಸ್ಥರ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವರೆಂಬುದನ್ನು ಮರೆತು ಅತ್ಯಂತ ಲಘು ಮತ್ತು ಬೇಜವಾಬ್ದಾರಿಯಿಂದ ಮಾತನಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಶಿರಾ ತಾಲೂಕು ಗೋಪಾಲದೇವರಹಳ್ಳಿಯ ಗ್ರಾಮಸ್ಥರು ಹೇಮಾವತಿ ನಾಲೆಯಿಂದ ಕುಡಿಯುವ ನೀರು ಹರಿಸಲು ಕೇಳಿರುವುದಕ್ಕೆ ಸಚಿವರು ಗ್ರಾಮಸ್ಥರ ಎದುರೆ ತಾನೊಬ್ಬ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಎಂಬುದನ್ನು ಮರೆತು ವರ್ತಿಸಿದ್ದಕ್ಕೆ ಜನರು ಅಲ್ಲಿಂದ ಹೊರಟು ಹೋಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಗೋಪಾಲದೇವರಹಳ್ಳಿ ಗ್ರಾಮಸ್ಥರು ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಹಲವು ಬಾರಿ ಮನವಿ ಸಲ್ಲಿಸಿದರೂ ಯಾರೂ ಗಮನಕ್ಕೆ ಹಾಕಿಕೊಂಡಿರಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಬಹಿಷ್ಕರಿಸಿದ್ದರು.

ಇದನ್ನೂ ಓದಿ: ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಚುನಾವಣೆ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿ ಗೋಪಾಲದೇವರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಚುನಾವಣೆ ಬಹಿಷ್ಕರಿಸಿದ್ದಕ್ಕೆ ಸಿಟ್ಟಿಗೆದ್ದ ಮಾಧುಸ್ವಾಮಿ ಜನರ ಸಮ್ಮುಖದಲ್ಲೇ, ”ಯಾವನಾದ್ರೂ ಬೋಸುಡಿಕೆ ನನ್ನ ಕೇಳಿದ್ದೀರಾ, ನೋಡೋಣ ಯಾರ್ ಕೈಯಲ್ಲಿ ನೀರು ಬಿಡುಸ್ತ್ಯೋ” ಎಂದು ಪ್ರಶ್ನಿಸಿದ್ದಾರೆ. ಈ ಮಾತು ಕೇಳಿದ ಗ್ರಾಮದ ಕೆಲವರು, “ಈಯಪ್ಪನತ್ರ ಬೋಸುಡಿಕೆ ಅನ್ನಿಸಿಕೊಳ್ಳಬೇಕಾ” ಎಂದು ಬೈದುಕೊಂಡು ಜಾಗ ಖಾಲಿ ಮಾಡಿದರೆಂದು ಹೇಳಲಾಗಿದೆ.

ಹೇಮಾವತಿ ನೀರು ಬೇಕೆಂದು ಕೇಳಿದ್ದಕ್ಕೆ ಸಚಿವರಿಂದ ಬೈಗುಳ ಕೇಳಬೇಕಾಗಿ ಬಂತಲ್ಲ ಎಂದು ಗ್ರಾಮಸ್ಥರು ಅಸಮಾಧಾನ ತೋಡಿಕೊಂಡಿದ್ದಾರೆ. ಶೇಷನಹಳ್ಳಿ ಕೆರೆ ದೊಡ್ಡ ಅಗ್ರಹಾರ ಕೆರೆಗಳಿಗೆ ಹೇಮಾವತಿ ನೀರು ಹರಿಸಬೇಕು ಅಂತಾ ರೈತರು ಒತ್ತಾಯಿಸಿದ್ದರು.

ಉಪಚುನಾವಣೆಯ ಸಂದರ್ಭದಲ್ಲಿ ಶಿರಾ ಮದಲೂರು ಕೆರೆಗೆ ನೀರು ಹರಿಸುತ್ತೇವೆ. ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇವೆ. ಶಿರಾ ಜನರು ಇನ್ನೆಂದು ಕುಡಿಯುವ ನೀರಿಗೆ ಪರದಾಡುವಂತೆ ಆಗಬಾರದು ಎಂದೆಲ್ಲಾ ಭರವಸೆಗಳ ಮಹಾಪೂರವನ್ನೇ ಹರಿಸಿದ್ದ ಯಡಿಯೂರಪ್ಪ ನೇತೃತ್ವದ  ಬಿಜೆಪಿ ಸರ್ಕಾರ ಇದೀಗ ಕೊಟ್ಟ ಮಾತನ್ನು ಉಳಿಸಿಕೊಳ್ಳಲಾರದೆ ಅದೇ ಸರ್ಕಾರದ ಸಚಿವರೊಬ್ಬರು ರೈತರನ್ನು ಹೀನಾಮಾನ ಬೈದಿರುವುದು ಜಿಲ್ಲೆಯಾದ್ಯಂತ ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ. ಇಂಥವರನ್ನು ಮುಂದೆ ಆಯ್ಕೆ ಮಾಡಬಾರದು ಎಂದು ರೈತರು ಹೇಳಿದ್ದಾರೆ.

ಇದನ್ನೂ ಓದಿ: ಕುಣಿಗಲ್‌ ಶಾಸಕರನ್ನು ’ಫ್ರಾಡ್’ ಎಂದು ಕರೆದ ಸಚಿವ ಜೆ. ಸಿ. ಮಾಧುಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...