Homeಕರ್ನಾಟಕಯಾವನಾದ್ರು *** ಮಗ ನನ್ನ ಕೇಳಿದ್ದೀರಾ: ರೈತರ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ

ಯಾವನಾದ್ರು *** ಮಗ ನನ್ನ ಕೇಳಿದ್ದೀರಾ: ರೈತರ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ

- Advertisement -
- Advertisement -

ಅಧಿಕಾರಿಯೊಬ್ಬರನ್ನು ಕೀಳುಭಾಷೆಯಲ್ಲಿ ನಿಂದಿಸಿದ್ದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಇದೀಗ ರೈತರ ವಿರುದ್ಧ ದರ್ಪದ ಮಾತುಗಳನ್ನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಾವನಾದ್ರು ಬೋಸುಡಿಕೆ ಮಗ ಬಂದು ನನ್ನ ಕೇಳಿದ್ದೀರಾ ? ಎಂದು ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಬಹಿಷ್ಕರಿಸಿದ್ದ ಗ್ರಾಮಸ್ಥರ ವಿರುದ್ಧ ಸಂಸದೀಯ ವ್ಯವಹಾರಗಳ ಸಚಿವರೆಂಬುದನ್ನು ಮರೆತು ಅತ್ಯಂತ ಲಘು ಮತ್ತು ಬೇಜವಾಬ್ದಾರಿಯಿಂದ ಮಾತನಾಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಶಿರಾ ತಾಲೂಕು ಗೋಪಾಲದೇವರಹಳ್ಳಿಯ ಗ್ರಾಮಸ್ಥರು ಹೇಮಾವತಿ ನಾಲೆಯಿಂದ ಕುಡಿಯುವ ನೀರು ಹರಿಸಲು ಕೇಳಿರುವುದಕ್ಕೆ ಸಚಿವರು ಗ್ರಾಮಸ್ಥರ ಎದುರೆ ತಾನೊಬ್ಬ ಜವಾಬ್ದಾರಿ ಸ್ಥಾನದಲ್ಲಿರುವ ಸಚಿವ ಎಂಬುದನ್ನು ಮರೆತು ವರ್ತಿಸಿದ್ದಕ್ಕೆ ಜನರು ಅಲ್ಲಿಂದ ಹೊರಟು ಹೋಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದಾರೆ ಎಂದು ತಿಳಿದುಬಂದಿದೆ.

ಗೋಪಾಲದೇವರಹಳ್ಳಿ ಗ್ರಾಮಸ್ಥರು ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಹಲವು ಬಾರಿ ಮನವಿ ಸಲ್ಲಿಸಿದರೂ ಯಾರೂ ಗಮನಕ್ಕೆ ಹಾಕಿಕೊಂಡಿರಲಿಲ್ಲ. ಇದರಿಂದ ಬೇಸತ್ತ ಗ್ರಾಮಸ್ಥರು ಗ್ರಾಮ ಪಂಚಾಯ್ತಿ ಚುನಾವಣೆಯನ್ನು ಬಹಿಷ್ಕರಿಸಿದ್ದರು.

ಇದನ್ನೂ ಓದಿ: ಕೆಲಸ ಮಾಡದೇ ಹೆಂಡ್ತಿಗೆ ಸೀರೆ ತರೋಕೆ ಹೋಗಿದ್ದ?: ಮತ್ತೆ ನಾಲಿಗೆ ಹರಿಯಬಿಟ್ಟ ಸಚಿವ ಮಾಧುಸ್ವಾಮಿ

ಚುನಾವಣೆ ಬಳಿಕ ಸಚಿವ ಜೆ.ಸಿ.ಮಾಧುಸ್ವಾಮಿ ಗೋಪಾಲದೇವರಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಚುನಾವಣೆ ಬಹಿಷ್ಕರಿಸಿದ್ದಕ್ಕೆ ಸಿಟ್ಟಿಗೆದ್ದ ಮಾಧುಸ್ವಾಮಿ ಜನರ ಸಮ್ಮುಖದಲ್ಲೇ, ”ಯಾವನಾದ್ರೂ ಬೋಸುಡಿಕೆ ನನ್ನ ಕೇಳಿದ್ದೀರಾ, ನೋಡೋಣ ಯಾರ್ ಕೈಯಲ್ಲಿ ನೀರು ಬಿಡುಸ್ತ್ಯೋ” ಎಂದು ಪ್ರಶ್ನಿಸಿದ್ದಾರೆ. ಈ ಮಾತು ಕೇಳಿದ ಗ್ರಾಮದ ಕೆಲವರು, “ಈಯಪ್ಪನತ್ರ ಬೋಸುಡಿಕೆ ಅನ್ನಿಸಿಕೊಳ್ಳಬೇಕಾ” ಎಂದು ಬೈದುಕೊಂಡು ಜಾಗ ಖಾಲಿ ಮಾಡಿದರೆಂದು ಹೇಳಲಾಗಿದೆ.

ಹೇಮಾವತಿ ನೀರು ಬೇಕೆಂದು ಕೇಳಿದ್ದಕ್ಕೆ ಸಚಿವರಿಂದ ಬೈಗುಳ ಕೇಳಬೇಕಾಗಿ ಬಂತಲ್ಲ ಎಂದು ಗ್ರಾಮಸ್ಥರು ಅಸಮಾಧಾನ ತೋಡಿಕೊಂಡಿದ್ದಾರೆ. ಶೇಷನಹಳ್ಳಿ ಕೆರೆ ದೊಡ್ಡ ಅಗ್ರಹಾರ ಕೆರೆಗಳಿಗೆ ಹೇಮಾವತಿ ನೀರು ಹರಿಸಬೇಕು ಅಂತಾ ರೈತರು ಒತ್ತಾಯಿಸಿದ್ದರು.

ಉಪಚುನಾವಣೆಯ ಸಂದರ್ಭದಲ್ಲಿ ಶಿರಾ ಮದಲೂರು ಕೆರೆಗೆ ನೀರು ಹರಿಸುತ್ತೇವೆ. ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇವೆ. ಶಿರಾ ಜನರು ಇನ್ನೆಂದು ಕುಡಿಯುವ ನೀರಿಗೆ ಪರದಾಡುವಂತೆ ಆಗಬಾರದು ಎಂದೆಲ್ಲಾ ಭರವಸೆಗಳ ಮಹಾಪೂರವನ್ನೇ ಹರಿಸಿದ್ದ ಯಡಿಯೂರಪ್ಪ ನೇತೃತ್ವದ  ಬಿಜೆಪಿ ಸರ್ಕಾರ ಇದೀಗ ಕೊಟ್ಟ ಮಾತನ್ನು ಉಳಿಸಿಕೊಳ್ಳಲಾರದೆ ಅದೇ ಸರ್ಕಾರದ ಸಚಿವರೊಬ್ಬರು ರೈತರನ್ನು ಹೀನಾಮಾನ ಬೈದಿರುವುದು ಜಿಲ್ಲೆಯಾದ್ಯಂತ ಸಚಿವರ ಹೇಳಿಕೆಗೆ ಆಕ್ರೋಶ ವ್ಯಕ್ತವಾಗಿದೆ. ಇಂಥವರನ್ನು ಮುಂದೆ ಆಯ್ಕೆ ಮಾಡಬಾರದು ಎಂದು ರೈತರು ಹೇಳಿದ್ದಾರೆ.

ಇದನ್ನೂ ಓದಿ: ಕುಣಿಗಲ್‌ ಶಾಸಕರನ್ನು ’ಫ್ರಾಡ್’ ಎಂದು ಕರೆದ ಸಚಿವ ಜೆ. ಸಿ. ಮಾಧುಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...