Homeಮುಖಪುಟಮಧ್ಯಪ್ರದೇಶ: ಮಾರ್ಚ್‌ನಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು ಬರೋಬ್ಬರಿ 27 ಶಾಸಕರು!

ಮಧ್ಯಪ್ರದೇಶ: ಮಾರ್ಚ್‌ನಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದು ಬರೋಬ್ಬರಿ 27 ಶಾಸಕರು!

- Advertisement -
- Advertisement -

ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಶಾಸಕ ಸಚಿನ್ ಬಿರ್ಲಾ ಭಾನುವಾರ ಆಡಳಿತರೂಢ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ 2021ರ ಮಾರ್ಚ್‌ನಿಂದ ರಾಜ್ಯದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಶಾಸಕರು ಬರೋಬ್ಬರಿ 27 ಮಂದಿ. ಈ ಮೂಲಕ ಪ್ರತಿಪಕ್ಷ ಕಾಂಗ್ರೆ‌ಸ್‌ಗೆ ಆಘಾತ ಎದುರಾಗುತ್ತಲೇ ಇದೆ.

2021 ಮಾರ್ಚ್‌ನಿಂದ ಇಲ್ಲಿಯವರೆಗೆ ಬಿಜೆಪಿಗೆ ಸೇರಿದ ಕಾಂಗ್ರೆಸ್‌ ಶಾಸಕರಲ್ಲಿ ಸಚಿನ್ ಬಿರ್ಲಾ 27ನೇ ಕಾಂಗ್ರೆಸ್ ಶಾಸಕರಾಗಿದ್ದಾರೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 2018 ರಲ್ಲಿ ಖಾರ್ಗೋನ್ ಜಿಲ್ಲೆಯ ಬದ್ವಾಹ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸಿ ಬಿಜೆಪಿ ಅಭ್ಯರ್ಥಿ ಹಿತೇಂದ್ರ ಸಿಂಗ್ ಸೋಲಂಕಿ ಅವರನ್ನು ಸುಮಾರು 30,500 ಮತಗಳ ಅಂತರದಿಂದ ಸೋಲಿಸಿ ಗೆದ್ದಿದ್ದರು.

ಸದ್ಯ ಖಾಂಡ್ವಾ ಲೋಕಸಭೆ ಕ್ಷೇತ್ರ ಮತ್ತು ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದೆ.

ಕಳೆದ ವರ್ಷದ ಮಾರ್ಚ್‌ ತಿಂಗಳಿನಲ್ಲಿ ಜ್ಯೋತಿರಾಧಿತ್ಯ ಸಿಂಧಿಯಾ ನೇತೃತ್ವದಲ್ಲಿ 22 ಕಾಂಗ್ರೆಸ್ ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡಿದ್ದರು. ಇದರಿಂದಾಗಿ ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಗೊಂಡು ಬಿಜೆಪಿ ಪಕ್ಷ ಅಧಿಕಾರಕ್ಕೇರಿತ್ತು. ನಂತರದಲ್ಲಿ ಇತರ ನಾಲ್ಕು ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದರು.

ಇದನ್ನೂ ಓದಿ: ಸತತ ಇಂಧನ ಬೆಲೆ ಏರಿಕೆ: ನ.14 ರಿಂದ 15 ದಿನಗಳ ಕಾಲ ಕಾಂಗ್ರೆಸ್ ಪ್ರತಿಭಟನೆ

“ಕಾಂಗ್ರೆಸ್ ದುರ್ಬಲವಾಗುತ್ತಿದೆ ಮತ್ತು ಸಾರ್ವಜನಿಕ ಬೆಂಬಲವನ್ನು ಕಳೆದುಕೊಳ್ಳುತ್ತಿದೆ. ಆದ್ದರಿಂದ ಯುವ ನಾಯಕರು ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಪಕ್ಷವನ್ನು ತೊರೆಯುತ್ತಿದ್ದಾರೆ. ಈ ನಾಯಕರು ಬಿಜೆಪಿಯಲ್ಲಿ ಉತ್ತಮ ರೀತಿಯಲ್ಲಿ ಜನರಿಗೆ ಸೇವೆ ಸಲ್ಲಿಸಬಹುದು. ತಮ್ಮ ರಾಜಕೀಯ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಹೇಳಿದ್ದಾರೆ.

2018ರ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಸಾಧಿಸಿದ ಕಾಂಗ್ರೆಸ್‌ ಸರ್ಕಾರವನ್ನು ರಚಿಸಿತ್ತು. ಆದರೆ, 2020ರ ಮಾರ್ಚ್‌ನಲ್ಲಿ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿ, ಬಿಜೆಪಿ ಸೇರಿದರು. ಇದರಿಂದಾಗಿ ಕಾಂಗ್ರೆಸ್‌ ಬಹುಮತ ಕಳೆದುಕೊಂಡಿತು. ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ರಚಿಸಿತ್ತು.

ಸದ್ಯ ಸಚಿನ್ ಬಿರ್ಲಾ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರೆ, ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಬಲ 94ಕ್ಕೆ ಇಳಿಯುತ್ತದೆ. 230 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 125 ಶಾಸಕರನ್ನು ಹೊಂದಿದೆ. ವಿಧಾನಸಭೆಯಲ್ಲಿ ಇಬ್ಬರು ಬಿಎಸ್‌ಪಿ, ಒಬ್ಬರು ಎಸ್‌ಪಿ ಮತ್ತು ನಾಲ್ವರು ಸ್ವತಂತ್ರ ಶಾಸಕರು ಇದ್ದಾರೆ.

ಖಾಂಡ್ವಾ ಲೋಕಸಭೆ ಕ್ಷೇತ್ರ ಮತ್ತು ಜೋಬತ್ (ಅಲಿರಾಜಪುರ), ಪೃಥ್ವಿಪುರ (ನಿವಾರಿ) ಮತ್ತು ರಾಯಗಾಂವ್ (ಸತ್ನಾ) ಸೇರಿದಂತೆ ಮೂರು ವಿಧಾನಸಭಾ ಸ್ಥಾನಗಳು ಖಾಲಿಯಿದ್ದು, ಅಕ್ಟೋಬರ್ 30 ರಂದು ಉಪಚುನಾವಣೆ ನಡೆಯಲಿದೆ.


ಇದನ್ನೂ ಓದಿ: ಕಾಂಗ್ರೆಸ್ ಸೇರಲು ಡ್ರಗ್ಸ್, ಮದ್ಯಪಾನ, ಸಾರ್ವಜನಿಕ ವೇದಿಕೆಯಲ್ಲಿ ಪಕ್ಷವನ್ನು ಟೀಕಿಸುವುದು ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...