ರಾಮನವಮಿಯ ದಿನ ದೇವಸ್ಥಾನದಲ್ಲಿ ಮೆಟ್ಟಿಲುಬಾವಿಯ ಛಾವಣಿ ಕುಸಿದು 35 ಜನ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಗುರುವಾರ ನಡೆದಿದೆ ಎಂದು ಎಎನ್ಐ ವರದಿ ಮಾಡಿದೆ.
ನಗರದ ಬೆಳೇಶ್ವರ ಮಹಾದೇವ್ ಝುಲೆಲಾಲ್ ಮಹದೇವ ದೇವಸ್ಥಾನದಲ್ಲಿ ರಾಮನವಮಿ ಹಿನ್ನೆಲೆ ಹೋಮಹವನ ಪೂಜೆ ನಡೆಯುತ್ತಿತ್ತು. ಈಸಂದರ್ಭದಲ್ಲಿ ಛಾವಣಿ ಕುಸಿದು ದೊಡ್ಡ ಅವಘಟ ಸಂಭವಿಸಿದೆ.
ಈ ದುರ್ಘಟನೆ ಬಗ್ಗೆ ಸ್ಥಳೀಯರು ಮಾತನಾಡಿದ್ದು, ದೇವಸ್ಥಾನದ ಮೆಟ್ಟಿಲು ಬಾವಿಯ ಸಿಮೆಂಟ್ ಕುಸಿದ 40ಕ್ಕೂ ಹೆಚ್ಚು ಭಕ್ತರು ಬಾವಿಯೊಳಗೆ ಬಿದ್ದಿದ್ದಾರೆ ಎಂದು ಹೇಳಿದ್ದಾರೆ.
ಬಾವಿಗೆ ಬಿದ್ದವರಲ್ಲಿ 35 ಜನರ ಶವ ಹೊರತೆಗೆಯಲಾಗಿದೆ. ಅದರಲ್ಲಿ 11 ಮಹಿಳೆಯರು ಸೇರಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಳ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Stepwell collapse at Indore temple | Death toll rises to 35
18 people were admitted to the hospital, out of which 2 people have been discharged. 35 people died. One person is still missing. Army, NDRF & SDRF teams are conducting search & rescue operation: Indore Collector Dr… pic.twitter.com/3Ff6VzAkXs
— ANI MP/CG/Rajasthan (@ANI_MP_CG_RJ) March 31, 2023
ಘಟನೆಯಲ್ಲಿ ಅನೇಕ ಜನ ಸಾವಿಗೀಡಾಗಿದ್ದಾರೆ. ಇನ್ನು ಕೆಲವರು ಗಾಯಗೊಂಡಿದ್ದಾರೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಘಟನೆಯ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ಮಿಶ್ರಾ ಹೇಳಿದ್ದಾರೆಂದು ಎಎನ್ಐ ವರದಿ ಮಾಡಿದೆ.
ಇದನ್ನೂ ಓದಿ: ನಮಾಜ್ ವೇಳೆ ಮಸೀದಿ ಮುಂದೆ ಮೈಕ್ ಬಳಸಿ ಮೆರವಣಿಗೆ ಮಾಡಿದ ಹಿಂದುತ್ವ ಗುಂಪು: ಕಲ್ಲು ತೂರಾಟ
ಗುರುವಾರ ರಾಮನವಮಿ ಹಿನ್ನೆಲೆ ದೇವಸ್ಥಾನದಲ್ಲಿ ಅತಿಹೆಚ್ಚು ಜನ ಸೇರಿದ್ದರು. ಜನದಟ್ಟನೆಯ ಭಾರದಿಂದ ಛಾವಣಿ ಕುಸಿದಿದೆ ಭಾರೀ ಕಾಲ್ತುಳಿತದಿಂದಾಗಿ ಮೆಟ್ಟಿಲುಬಾವಿಯ ನೆಲವು ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಾವಿಗೆ ಬಿದ್ದವರನ್ನು ಹಗ್ಗ ಮತ್ತು ಏಣಿ ಸಹಾಯದಿಂದ ರಕ್ಷಿಸುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮೃತರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ನೀಡಲಾಗುವುದು ಎಂದು ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
”ಇಂಧೋರ್ನಲ್ಲಿ ನಡೆದ ದುರ್ಘಟನೆಯಿಂದ ತುಂಬಾ ನೋವಾಗಿದೆ. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಪರಿಸ್ಥಿತಿಯ ಬಗ್ಗೆ ಮಾಹಿತಿ ತೆಗೆದುಕೊಂಡಿದ್ದೇನೆ. ರಾಜ್ಯ ಸರ್ಕಾರವು ತ್ವರಿತ ಗತಿಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ಮುನ್ನಡೆಸುತ್ತಿದೆ. ಎಲ್ಲಾ ಸಂತ್ರಸ್ತರು ಮತ್ತು ಅವರ ಕುಟುಂಬಗಳಿಗಾಗಿ ನಾನು ಪ್ರಾರ್ಥಿಸಿಕೊಳ್ಳುತ್ತೇನೆ” ಎಂದು ಅವರು ಟ್ವೀಟ್ನಲ್ಲಿ ಬರೆದಿದ್ದಾರೆ.
Extremely pained by the mishap in Indore. Spoke to CM @ChouhanShivraj Ji and took an update on the situation. The State Government is spearheading rescue and relief work at a quick pace. My prayers with all those affected and their families.
— Narendra Modi (@narendramodi) March 30, 2023