Homeಮುಖಪುಟಮಧ್ಯಪ್ರದೇಶ | ಬೆಡ್‌ ಇಲ್ಲದೆ ಬಾಲಕಿಗೆ ನೆಲದ ಮೇಲೆ ಕೂರಿಸಿ ಚಿಕಿತ್ಸೆ; ಹದಗೆಟ್ಟ ಆರೋಗ್ಯ...

ಮಧ್ಯಪ್ರದೇಶ | ಬೆಡ್‌ ಇಲ್ಲದೆ ಬಾಲಕಿಗೆ ನೆಲದ ಮೇಲೆ ಕೂರಿಸಿ ಚಿಕಿತ್ಸೆ; ಹದಗೆಟ್ಟ ಆರೋಗ್ಯ ವ್ಯವಸ್ಥೆ?

- Advertisement -
- Advertisement -

ಮಧ್ಯಪ್ರದೇಶದ ಸತ್ನಾ ಜಿಲ್ಲಾಸ್ಪತ್ರೆಯಲ್ಲಿ ಖಾಲಿ ಹಾಸಿಗೆಗಳಿಲ್ಲದ ಕಾರಣ 15 ವರ್ಷದ ಬಾಲಕಿಗೆ ರಕ್ತ ನೀಡುವುದಕ್ಕಾಗಿ ನೆಲದ ಮೇಲೆ ಕುಳ್ಳಿರಿಸಿದ ಅಮಾನವೀಯ ಘಟನೆ ನಡೆದಿದೆ. ಮಹಿಳೆಯೊಬ್ಬರು ರಕ್ತದ ಬಾಟಲ್ ಅನ್ನು ಕೈಯಲ್ಲಿ ಹಿಡಿದು ನಿಂತಿದ್ದಾರೆ. ನೆಲದ ಮೇಲೆ ಕುಳಿತಿದ್ದ ಬಾಲಕಿಯ ಕೈಗೆ ರಕ್ತದ ಸೂಜಿಯನ್ನು ಜೋಡಿಸಲಾಗಿದೆ. ಘಟನೆಯ ಫೋಟೊ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸರ್ಕಾರದ ವೈದ್ಯಕೀಯ ವ್ಯವಸ್ಥೆಯ ಬಗ್ಗೆ ಟ್ವಿಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮಧ್ಯಪ್ರದೇಶದ ಆಸ್ಪತ್ರೆಯ ಈ ಚಿತ್ರ ನಮ್ಮ ದೇಶದ ಆರೋಗ್ಯ ವ್ಯವಸ್ಥೆಯ ನೈಜತೆಯನ್ನು ಹೊಂದಿದೆ. ಬಡತನವು ಬಡವರನ್ನು ಕೊಲ್ಲುತ್ತಿದೆಯೇ ರೋಗವಲ್ಲ!” ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಟ್ವೀಟ್ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಮೋಗ್ಲೋಬಿನ್ ಮಟ್ಟ ಕಡಿಮೆ ಇದ್ದ ಕಾರಣ ಸಂತೋಷಿ ಕೇವತ್ ತನ್ನ ತಾಯಿ ಜೊತೆಗೆ ಸರ್ಕಾರಿ ಆಸ್ಪತ್ರೆಗೆ ಹೋಗಿದ್ದರು. ಆದರೆ, ಬಾಲಕಿಗೆ ಚಿಕಿತ್ಸೆ ನೀಡಲು ಖಾಲಿ ಹಾಸಿಗೆಗಳಿಲ್ಲ ಎಂದು ಆಸ್ಪತ್ರೆಯ ಸಿಬ್ಬಂದಿಗಳು ಹೇಳಿದ್ದಾರೆ. ಇದರ ನಂತರ ತಮ್ಮ ಮಗಳಿಗೆ ಚಿಕಿತ್ಸೆ ನೀಡುವಂತೆ ಮಹಿಳೆ ಬೇಡಿಕೊಂಡಿದ್ದು, ನಂತರ ಹುಡುಗಿಯನ್ನು ನೆಲದ ಮೇಲೆ ಕುಳಿತು ಚಿಕಿತ್ಸೆ ಪಡೆಯುವಂತೆ ಮಾಡಲಾಗಿದೆ ಎಂದು ಎನ್ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ಆಸ್ಪತ್ರೆಯ ಬೆಡ್ ಮೇಲೆ ನಾಯಿ; ಆತಂಕಕಾರಿ ಆರೋಗ್ಯ ವ್ಯವಸ್ಥೆ ಎಂದ ಕಾಂಗ್ರೆಸ್

“ಇದು ಮಧ್ಯಪ್ರದೇಶದ ಮೈಹಾರ್‌ನ ಸಿವಿಲ್ ಆಸ್ಪತ್ರೆಯ ಚಿತ್ರ. ತಾಯಿ ರಕ್ತದ ಬಾಟಲನ್ನು ಕೈಯಲ್ಲಿ ಹಿಡಿದಿದ್ದಾರೆ, ಅನಾರೋಗ್ಯ ಪೀಡಿತ ಮಗಳನ್ನು ನೆಲದ ಮೇಲೆ ಕೂರಿಸಲಾಗಿದೆ. ಇದು ಕ್ರೂರ ಮತ್ತು ನಿರ್ಲಜ್ಜ ಸರ್ಕಾರದ ಆಡಳಿತಕ್ಕೆ ಉದಾಹರಣೆ” ಎಂದು ಎಎಪಿ ಶಾಸಕ ನರೇಶ್ ಬಾಲ್ಯಾನ್‌ ಟ್ವೀಟ್ ಮಾಡಿದ್ದಾರೆ.

ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯವನ್ನು ಬಿಂಬಿಸುವ ಫೋಟೋ ವೈರಲ್ ಆದ ನಂತರ ಅಧಿಕಾರಿಗಳು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಹೊಣೆಗಾರರ ​​ವಿರುದ್ಧ ಕ್ರಮ ಕೈಗೊಂಡಿದೆ.

ಜಿಲ್ಲಾಧಿಕಾರಿ ಅನುರಾಗ್ ವರ್ಮಾ ಅವರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸುವಂತೆ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯಾಧಿಕಾರಿ ಡಾ.ಅಶೋಕ್ ಅವಧಿಯವರಿಗೆ ಸೂಚಿಸಿದ್ದಾರೆ. ತನಿಖೆಯ ನಂತರ, ಮೈಹಾರ್ ಆಸ್ಪತ್ರೆಯ ಉಸ್ತುವಾರಿ ಡಾ. ಪ್ರದೀಪ್ ನಿಗಮ್ ಮತ್ತು ಸ್ಟಾಫ್ ನರ್ಸ್ ಅಂಜು ಸಿಂಗ್ ಭತ್ಯೆ ಏರಿಕೆಯನ್ನು ತಕ್ಷಣವೇ ಜಾರಿಗೆ ಬರುವಂತೆ ಸೂಚನೆಗಳನ್ನು ನೀಡಲಾಗಿದೆ ಎಂದು ಸ್ಥಳೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

ಇದನ್ನೂ ಓದಿ: ಮಧ್ಯಪ್ರದೇಶ: ಆಂಬ್ಯುಲೆನ್ಸ್‌ ಇಲ್ಲದೆ ತಳ್ಳೋಗಾಡಿ ಬಳಕೆ; ಘಟನೆ ವರದಿ ಮಾಡಿದ ಮೂವರು ಪತ್ರಕರ್ತರ ಮೇಲೆ ಎಫ್‌ಐಆರ್‌

ಈ ನಡುವೆ ರಾಜ್ಯದ ರತ್ಲಾಮ್‌ ಜಿಲ್ಲೆಯ ಆಸ್ಪತ್ರೆಯೊಂದರ ಹಾಸಿಗೆಯ ಮೇಲೆ ನಾಯಿಯೊಂದು ಮಲಗಿರುವ ವೀಡಿಯೊ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ಬಗ್ಗೆ ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದರು ಕಾಂಗ್ರೆಸ್ ಸಂಸದ ನರೇಂದ್ರ ಸಲೂಜಾ ಅವರು, “ಮಧ್ಯಪ್ರದೇಶದಲ್ಲಿ, ರೋಗಿಗಳಿಗೆ ಹಾಸಿಗೆ ಸಿಗುತ್ತದೆಯೋ ಇಲ್ಲವೋ, ಆದರೆ ‘ನಾಯಿ’ ಹಾಸಿಗೆಯ ಮೇಲೆ ಚೆನ್ನಾಗಿ ನಿದ್ರಿಸುತ್ತಿದೆ. ಈ ದೃಶ್ಯ ರತ್ಲಾಮ್‌ ಜಿಲ್ಲೆಯ ಅಲೋಟ್‌ನದ್ದು ಎಂದು ಹೇಳಲಾಗುತ್ತಿದೆ. ಆತಂಕಕಾರಿ ಆರೋಗ್ಯ ವ್ಯವಸ್ಥೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...