Homeಕರೋನಾ ತಲ್ಲಣಮಧ್ಯಪ್ರದೇಶ: 'ಇದು ಪ್ರಯೋಗ' ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸುತ್ತಾರೆ ಎಂದು ನನ್ನ ಸ್ನೇಹಿತ ಹೇಳಿದ. ಹಾಗಾಗಿ ನಾನು ಅರ್ಜಿಯೊಂದಕ್ಕೆ ಸಹಿ ಹಾಕಿದ್ದೆ. ಅನಂತರ ನನಗೆ ಲಸಿಕೆ ನೀಡಲಾಗಿತ್ತು. ಕೆಲವೇ ದಿನಗಳಲ್ಲಿ ನನಗೆ ವಾಂತಿ ಆರಂಭವಾಗಿ, ಜ್ವರ ಬಂತು. ಕೆಲಸಕ್ಕೂ ಹೋಗಲು ಸಾಧ್ಯವಾಗಲಿಲ್ಲ- ದಿನಗೂಲಿ ಕೆಲಸಗಾರ ಜಿತೇಂದ್ರ

- Advertisement -
- Advertisement -

ಜನರ ಒಪ್ಪಿಗೆ ಇಲ್ಲದೆ ಅವರಿಗೆ ಕೊರೊನಾ ವೈರಸ್ ಲಸಿಕೆ ನೀಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, “ಇದು ಪ್ರಯೋಗ ಎಂದು ನಮಗೆ ಯಾರೂ ಹೇಳಿಲ್ಲ” ಎಂದು ಹಲವು ಜನರು ಆರೋಪಿಸಿದ್ದಾರೆ.

ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆಸಿದ ಲಸಿಕೆ ಪ್ರಯೋಗಗಳಲ್ಲಿ ಪಾಲ್ಗೊಳ್ಳಲು ಜನರನ್ನು ದಾರಿ ತಪ್ಪಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದ್ದು, “ನಮಗೆ ಯಾರೂ ಕೂಡ ಲಸಿಕೆ ಪ್ರಯೋಗದ ಕುರಿತು, ಅದರ ಅಪಾಯದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಚುಚ್ಚುಮದ್ದು ಕೊರೊನಾವನ್ನು ತಡೆಗಟ್ಟುತ್ತದೆ ಎಂದು ಮಾತ್ರ ಹೇಳಿದ್ದಾರೆ. ಇಂತಹ ಪ್ರಯೋಗಕ್ಕೆ ಕಡ್ಡಾಯವಾಗಿರುವ ಒಪ್ಪಿಗೆಯ ಅರ್ಜಿಯನ್ನೂ ನೀಡಿಲ್ಲ” ಎಂದು ಜನರು ಆರೋಪಿಸಿದ್ದಾರೆ.

“ಈ ಲಸಿಕೆ ತೆಗೆದುಕೊಳ್ಳುವುದರಿಂದ ಉಂಟಾಗುವು ಯಾವುದೇ ಅಡ್ಡ ಪರಿಣಾಮದ ಬಗ್ಗೆ ಯಾರೂ ನನಗೆ ಮಾಹಿತಿ ನೀಡಿಲ್ಲ. ಒಪ್ಪಿಗೆ ಫಾರ್ಮ್ ಅನ್ನು ಯಾರೂ ನನಗೆ ಕೊಟ್ಟಿಲ್ಲ. ಆಸ್ಪತ್ರೆಯಿಂದ ನನಗೆ ಯಾವತ್ತೂ ಕರೆ ಬಂದಿಲ್ಲ. ಈ ಚುಚ್ಚುಮದ್ದನ್ನು ತೆಗೆದುಕೊಂಡರೆ ನನಗೆ ಕೊರೊನಾ ಬರುವುದಿಲ್ಲ ಎಂದು ಆಸ್ಪತ್ರೆಯವರು ಹೇಳಿದ್ದರು” ಎಂದು ಭೋಪಾಲ್‌ನ ರೇಖಾ ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ: ಭೈರಪ್ಪನವರಿಗೆ ತಿರುಗೇಟು ನೀಡಿದ ದೇವನೂರು

“ಇದು ಒಂದು ಪ್ರಯೋಗ ಎಂದು ಯಾರೂ ನಮಗೆ ಹೇಳಲಿಲ್ಲ. ಕೊರೋನ ಲಸಿಕೆ ನೀಡುತ್ತಿದ್ದೇವೆ, ನಿಮಗೆ ಏನಾದರೂ ಸಮಸ್ಯೆಯಾದರೆ ನಮಗೆ ಕರೆ ಮಾಡಿ ಎಂದು ಆಸ್ಪತ್ರೆಯವರು ನಮಗೆ ಹೇಳಿದ್ದರು” ಎಂದು ಡಿಸಂಬರ್ 8 ರಂದು ಮೊದಲ ಡೋಸ್ ಪಡೆದಿದ್ದ ಶಂಕರ ನಗರದ ಸಾವಿತ್ರಿ ಹೇಳಿದ್ದಾರೆ.

“ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸುತ್ತಾರೆ ಎಂದು ನನ್ನ ಸ್ನೇಹಿತ ಹೇಳಿದ. ಹಾಗಾಗಿ ನಾನು ಅರ್ಜಿಯೊಂದಕ್ಕೆ ಸಹಿ ಹಾಕಿದ್ದೆ. ಅನಂತರ ನನಗೆ ಲಸಿಕೆ ನೀಡಲಾಗಿತ್ತು. ಕೆಲವೇ ದಿನಗಳಲ್ಲಿ ನನಗೆ ವಾಂತಿ ಆರಂಭವಾಗಿ, ಜ್ವರ ಬಂತು. ಕೆಲಸಕ್ಕೂ ಹೋಗಲು ಸಾಧ್ಯವಾಗಲಿಲ್ಲ. ಇದೊಂದು ಟ್ರಯಲ್ ಎಂದು ಯಾರೂ ಹೇಳಲಿಲ್ಲ” ಎಂದು ದಿನಗೂಲಿ ಕೆಲಸ ಮಾಡುತ್ತಿರುವ ಜಿತೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

ಈ ಕುರಿತು ಪ್ರತಿಕ್ರಿಯಿಸಿದ ಕಾಲೇಜ್ ಆಫ್ ಮೆಡಿಕಲ್ ಸೈಯನ್ಸ್ ಡೀನ್ ಡಾ. ಎ.ಕೆ ದೀಕ್ಷಿತ್, “ನಾವು ಎಲ್ಲ ನಿಯಮಗಳನ್ನು ಪಾಲಿಸಿದ್ದೇವೆ. ಐಸಿಎಂಆರ್ ಮಾರ್ಗಸೂಚಿಯ ಅನ್ವಯ ಟ್ರಯಲ್ಸ್ ನಡೆಸಿದ್ದೇವೆ. ಟ್ರಯಲ್ಸ್‌ನಲ್ಲಿ ಭಾಗವಹಿಸಿದವರಿಗೆ ಅರ್ಧಗಂಟೆ ಮೊದಲೇ ಆಪ್ತ ಸಮಾಲೋಚನೆ ನಡೆಸಿದ್ದೆವು. ಆಗ ಅವರಿಗೆ ಡೋಸ್‌ಗಳು ಹಾಗೂ ಅದರ ಅಡ್ಡ ಪರಿಣಾಮಗಳ ಬಗ್ಗೆ ತಿಳಿಸಲಾಗಿತ್ತು” ಎಂದು ಹೇಳಿದ್ದಾರೆ.

ಈ ವಿಚಾರವನ್ನು ತನಿಖೆ ನಡೆಸಲಾಗುವುದು ಎಂದು ಮಧ್ಯಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದು, “ಈ ಆರೋಪದ ಹಿಂದೆ ರಾಜಕೀಯ ಹುನ್ನಾರವಿದೆ. ನಮ್ಮ ವಿಜ್ಞಾನಿಗಳು ಲಸಿಕೆಯನ್ನು ತಯಾರಿಸಿದ್ದಾರೆ. ತುಕ್ಡೇ ತುಕ್ಟೇ ಗ್ಯಾಂಗ್ ಇದನ್ನು ವಿರೋಧಿಸುತ್ತಿದೆ” ಎಂದು  ಆರೋಪಿಸಿದ್ದಾರೆ.


ಇದನ್ನೂ ಓದಿ: JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...