Homeಕರೋನಾ ತಲ್ಲಣಮಧ್ಯಪ್ರದೇಶ: 'ಇದು ಪ್ರಯೋಗ' ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸುತ್ತಾರೆ ಎಂದು ನನ್ನ ಸ್ನೇಹಿತ ಹೇಳಿದ. ಹಾಗಾಗಿ ನಾನು ಅರ್ಜಿಯೊಂದಕ್ಕೆ ಸಹಿ ಹಾಕಿದ್ದೆ. ಅನಂತರ ನನಗೆ ಲಸಿಕೆ ನೀಡಲಾಗಿತ್ತು. ಕೆಲವೇ ದಿನಗಳಲ್ಲಿ ನನಗೆ ವಾಂತಿ ಆರಂಭವಾಗಿ, ಜ್ವರ ಬಂತು. ಕೆಲಸಕ್ಕೂ ಹೋಗಲು ಸಾಧ್ಯವಾಗಲಿಲ್ಲ- ದಿನಗೂಲಿ ಕೆಲಸಗಾರ ಜಿತೇಂದ್ರ

- Advertisement -
- Advertisement -

ಜನರ ಒಪ್ಪಿಗೆ ಇಲ್ಲದೆ ಅವರಿಗೆ ಕೊರೊನಾ ವೈರಸ್ ಲಸಿಕೆ ನೀಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, “ಇದು ಪ್ರಯೋಗ ಎಂದು ನಮಗೆ ಯಾರೂ ಹೇಳಿಲ್ಲ” ಎಂದು ಹಲವು ಜನರು ಆರೋಪಿಸಿದ್ದಾರೆ.

ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆಸಿದ ಲಸಿಕೆ ಪ್ರಯೋಗಗಳಲ್ಲಿ ಪಾಲ್ಗೊಳ್ಳಲು ಜನರನ್ನು ದಾರಿ ತಪ್ಪಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದ್ದು, “ನಮಗೆ ಯಾರೂ ಕೂಡ ಲಸಿಕೆ ಪ್ರಯೋಗದ ಕುರಿತು, ಅದರ ಅಪಾಯದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಚುಚ್ಚುಮದ್ದು ಕೊರೊನಾವನ್ನು ತಡೆಗಟ್ಟುತ್ತದೆ ಎಂದು ಮಾತ್ರ ಹೇಳಿದ್ದಾರೆ. ಇಂತಹ ಪ್ರಯೋಗಕ್ಕೆ ಕಡ್ಡಾಯವಾಗಿರುವ ಒಪ್ಪಿಗೆಯ ಅರ್ಜಿಯನ್ನೂ ನೀಡಿಲ್ಲ” ಎಂದು ಜನರು ಆರೋಪಿಸಿದ್ದಾರೆ.

“ಈ ಲಸಿಕೆ ತೆಗೆದುಕೊಳ್ಳುವುದರಿಂದ ಉಂಟಾಗುವು ಯಾವುದೇ ಅಡ್ಡ ಪರಿಣಾಮದ ಬಗ್ಗೆ ಯಾರೂ ನನಗೆ ಮಾಹಿತಿ ನೀಡಿಲ್ಲ. ಒಪ್ಪಿಗೆ ಫಾರ್ಮ್ ಅನ್ನು ಯಾರೂ ನನಗೆ ಕೊಟ್ಟಿಲ್ಲ. ಆಸ್ಪತ್ರೆಯಿಂದ ನನಗೆ ಯಾವತ್ತೂ ಕರೆ ಬಂದಿಲ್ಲ. ಈ ಚುಚ್ಚುಮದ್ದನ್ನು ತೆಗೆದುಕೊಂಡರೆ ನನಗೆ ಕೊರೊನಾ ಬರುವುದಿಲ್ಲ ಎಂದು ಆಸ್ಪತ್ರೆಯವರು ಹೇಳಿದ್ದರು” ಎಂದು ಭೋಪಾಲ್‌ನ ರೇಖಾ ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ: ಭೈರಪ್ಪನವರಿಗೆ ತಿರುಗೇಟು ನೀಡಿದ ದೇವನೂರು

“ಇದು ಒಂದು ಪ್ರಯೋಗ ಎಂದು ಯಾರೂ ನಮಗೆ ಹೇಳಲಿಲ್ಲ. ಕೊರೋನ ಲಸಿಕೆ ನೀಡುತ್ತಿದ್ದೇವೆ, ನಿಮಗೆ ಏನಾದರೂ ಸಮಸ್ಯೆಯಾದರೆ ನಮಗೆ ಕರೆ ಮಾಡಿ ಎಂದು ಆಸ್ಪತ್ರೆಯವರು ನಮಗೆ ಹೇಳಿದ್ದರು” ಎಂದು ಡಿಸಂಬರ್ 8 ರಂದು ಮೊದಲ ಡೋಸ್ ಪಡೆದಿದ್ದ ಶಂಕರ ನಗರದ ಸಾವಿತ್ರಿ ಹೇಳಿದ್ದಾರೆ.

“ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸುತ್ತಾರೆ ಎಂದು ನನ್ನ ಸ್ನೇಹಿತ ಹೇಳಿದ. ಹಾಗಾಗಿ ನಾನು ಅರ್ಜಿಯೊಂದಕ್ಕೆ ಸಹಿ ಹಾಕಿದ್ದೆ. ಅನಂತರ ನನಗೆ ಲಸಿಕೆ ನೀಡಲಾಗಿತ್ತು. ಕೆಲವೇ ದಿನಗಳಲ್ಲಿ ನನಗೆ ವಾಂತಿ ಆರಂಭವಾಗಿ, ಜ್ವರ ಬಂತು. ಕೆಲಸಕ್ಕೂ ಹೋಗಲು ಸಾಧ್ಯವಾಗಲಿಲ್ಲ. ಇದೊಂದು ಟ್ರಯಲ್ ಎಂದು ಯಾರೂ ಹೇಳಲಿಲ್ಲ” ಎಂದು ದಿನಗೂಲಿ ಕೆಲಸ ಮಾಡುತ್ತಿರುವ ಜಿತೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

ಈ ಕುರಿತು ಪ್ರತಿಕ್ರಿಯಿಸಿದ ಕಾಲೇಜ್ ಆಫ್ ಮೆಡಿಕಲ್ ಸೈಯನ್ಸ್ ಡೀನ್ ಡಾ. ಎ.ಕೆ ದೀಕ್ಷಿತ್, “ನಾವು ಎಲ್ಲ ನಿಯಮಗಳನ್ನು ಪಾಲಿಸಿದ್ದೇವೆ. ಐಸಿಎಂಆರ್ ಮಾರ್ಗಸೂಚಿಯ ಅನ್ವಯ ಟ್ರಯಲ್ಸ್ ನಡೆಸಿದ್ದೇವೆ. ಟ್ರಯಲ್ಸ್‌ನಲ್ಲಿ ಭಾಗವಹಿಸಿದವರಿಗೆ ಅರ್ಧಗಂಟೆ ಮೊದಲೇ ಆಪ್ತ ಸಮಾಲೋಚನೆ ನಡೆಸಿದ್ದೆವು. ಆಗ ಅವರಿಗೆ ಡೋಸ್‌ಗಳು ಹಾಗೂ ಅದರ ಅಡ್ಡ ಪರಿಣಾಮಗಳ ಬಗ್ಗೆ ತಿಳಿಸಲಾಗಿತ್ತು” ಎಂದು ಹೇಳಿದ್ದಾರೆ.

ಈ ವಿಚಾರವನ್ನು ತನಿಖೆ ನಡೆಸಲಾಗುವುದು ಎಂದು ಮಧ್ಯಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದು, “ಈ ಆರೋಪದ ಹಿಂದೆ ರಾಜಕೀಯ ಹುನ್ನಾರವಿದೆ. ನಮ್ಮ ವಿಜ್ಞಾನಿಗಳು ಲಸಿಕೆಯನ್ನು ತಯಾರಿಸಿದ್ದಾರೆ. ತುಕ್ಡೇ ತುಕ್ಟೇ ಗ್ಯಾಂಗ್ ಇದನ್ನು ವಿರೋಧಿಸುತ್ತಿದೆ” ಎಂದು  ಆರೋಪಿಸಿದ್ದಾರೆ.


ಇದನ್ನೂ ಓದಿ: JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....