Homeಕರೋನಾ ತಲ್ಲಣಮಧ್ಯಪ್ರದೇಶ: 'ಇದು ಪ್ರಯೋಗ' ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸುತ್ತಾರೆ ಎಂದು ನನ್ನ ಸ್ನೇಹಿತ ಹೇಳಿದ. ಹಾಗಾಗಿ ನಾನು ಅರ್ಜಿಯೊಂದಕ್ಕೆ ಸಹಿ ಹಾಕಿದ್ದೆ. ಅನಂತರ ನನಗೆ ಲಸಿಕೆ ನೀಡಲಾಗಿತ್ತು. ಕೆಲವೇ ದಿನಗಳಲ್ಲಿ ನನಗೆ ವಾಂತಿ ಆರಂಭವಾಗಿ, ಜ್ವರ ಬಂತು. ಕೆಲಸಕ್ಕೂ ಹೋಗಲು ಸಾಧ್ಯವಾಗಲಿಲ್ಲ- ದಿನಗೂಲಿ ಕೆಲಸಗಾರ ಜಿತೇಂದ್ರ

- Advertisement -
- Advertisement -

ಜನರ ಒಪ್ಪಿಗೆ ಇಲ್ಲದೆ ಅವರಿಗೆ ಕೊರೊನಾ ವೈರಸ್ ಲಸಿಕೆ ನೀಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, “ಇದು ಪ್ರಯೋಗ ಎಂದು ನಮಗೆ ಯಾರೂ ಹೇಳಿಲ್ಲ” ಎಂದು ಹಲವು ಜನರು ಆರೋಪಿಸಿದ್ದಾರೆ.

ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆಸಿದ ಲಸಿಕೆ ಪ್ರಯೋಗಗಳಲ್ಲಿ ಪಾಲ್ಗೊಳ್ಳಲು ಜನರನ್ನು ದಾರಿ ತಪ್ಪಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದ್ದು, “ನಮಗೆ ಯಾರೂ ಕೂಡ ಲಸಿಕೆ ಪ್ರಯೋಗದ ಕುರಿತು, ಅದರ ಅಪಾಯದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಚುಚ್ಚುಮದ್ದು ಕೊರೊನಾವನ್ನು ತಡೆಗಟ್ಟುತ್ತದೆ ಎಂದು ಮಾತ್ರ ಹೇಳಿದ್ದಾರೆ. ಇಂತಹ ಪ್ರಯೋಗಕ್ಕೆ ಕಡ್ಡಾಯವಾಗಿರುವ ಒಪ್ಪಿಗೆಯ ಅರ್ಜಿಯನ್ನೂ ನೀಡಿಲ್ಲ” ಎಂದು ಜನರು ಆರೋಪಿಸಿದ್ದಾರೆ.

“ಈ ಲಸಿಕೆ ತೆಗೆದುಕೊಳ್ಳುವುದರಿಂದ ಉಂಟಾಗುವು ಯಾವುದೇ ಅಡ್ಡ ಪರಿಣಾಮದ ಬಗ್ಗೆ ಯಾರೂ ನನಗೆ ಮಾಹಿತಿ ನೀಡಿಲ್ಲ. ಒಪ್ಪಿಗೆ ಫಾರ್ಮ್ ಅನ್ನು ಯಾರೂ ನನಗೆ ಕೊಟ್ಟಿಲ್ಲ. ಆಸ್ಪತ್ರೆಯಿಂದ ನನಗೆ ಯಾವತ್ತೂ ಕರೆ ಬಂದಿಲ್ಲ. ಈ ಚುಚ್ಚುಮದ್ದನ್ನು ತೆಗೆದುಕೊಂಡರೆ ನನಗೆ ಕೊರೊನಾ ಬರುವುದಿಲ್ಲ ಎಂದು ಆಸ್ಪತ್ರೆಯವರು ಹೇಳಿದ್ದರು” ಎಂದು ಭೋಪಾಲ್‌ನ ರೇಖಾ ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ: ಭೈರಪ್ಪನವರಿಗೆ ತಿರುಗೇಟು ನೀಡಿದ ದೇವನೂರು

“ಇದು ಒಂದು ಪ್ರಯೋಗ ಎಂದು ಯಾರೂ ನಮಗೆ ಹೇಳಲಿಲ್ಲ. ಕೊರೋನ ಲಸಿಕೆ ನೀಡುತ್ತಿದ್ದೇವೆ, ನಿಮಗೆ ಏನಾದರೂ ಸಮಸ್ಯೆಯಾದರೆ ನಮಗೆ ಕರೆ ಮಾಡಿ ಎಂದು ಆಸ್ಪತ್ರೆಯವರು ನಮಗೆ ಹೇಳಿದ್ದರು” ಎಂದು ಡಿಸಂಬರ್ 8 ರಂದು ಮೊದಲ ಡೋಸ್ ಪಡೆದಿದ್ದ ಶಂಕರ ನಗರದ ಸಾವಿತ್ರಿ ಹೇಳಿದ್ದಾರೆ.

“ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸುತ್ತಾರೆ ಎಂದು ನನ್ನ ಸ್ನೇಹಿತ ಹೇಳಿದ. ಹಾಗಾಗಿ ನಾನು ಅರ್ಜಿಯೊಂದಕ್ಕೆ ಸಹಿ ಹಾಕಿದ್ದೆ. ಅನಂತರ ನನಗೆ ಲಸಿಕೆ ನೀಡಲಾಗಿತ್ತು. ಕೆಲವೇ ದಿನಗಳಲ್ಲಿ ನನಗೆ ವಾಂತಿ ಆರಂಭವಾಗಿ, ಜ್ವರ ಬಂತು. ಕೆಲಸಕ್ಕೂ ಹೋಗಲು ಸಾಧ್ಯವಾಗಲಿಲ್ಲ. ಇದೊಂದು ಟ್ರಯಲ್ ಎಂದು ಯಾರೂ ಹೇಳಲಿಲ್ಲ” ಎಂದು ದಿನಗೂಲಿ ಕೆಲಸ ಮಾಡುತ್ತಿರುವ ಜಿತೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

ಈ ಕುರಿತು ಪ್ರತಿಕ್ರಿಯಿಸಿದ ಕಾಲೇಜ್ ಆಫ್ ಮೆಡಿಕಲ್ ಸೈಯನ್ಸ್ ಡೀನ್ ಡಾ. ಎ.ಕೆ ದೀಕ್ಷಿತ್, “ನಾವು ಎಲ್ಲ ನಿಯಮಗಳನ್ನು ಪಾಲಿಸಿದ್ದೇವೆ. ಐಸಿಎಂಆರ್ ಮಾರ್ಗಸೂಚಿಯ ಅನ್ವಯ ಟ್ರಯಲ್ಸ್ ನಡೆಸಿದ್ದೇವೆ. ಟ್ರಯಲ್ಸ್‌ನಲ್ಲಿ ಭಾಗವಹಿಸಿದವರಿಗೆ ಅರ್ಧಗಂಟೆ ಮೊದಲೇ ಆಪ್ತ ಸಮಾಲೋಚನೆ ನಡೆಸಿದ್ದೆವು. ಆಗ ಅವರಿಗೆ ಡೋಸ್‌ಗಳು ಹಾಗೂ ಅದರ ಅಡ್ಡ ಪರಿಣಾಮಗಳ ಬಗ್ಗೆ ತಿಳಿಸಲಾಗಿತ್ತು” ಎಂದು ಹೇಳಿದ್ದಾರೆ.

ಈ ವಿಚಾರವನ್ನು ತನಿಖೆ ನಡೆಸಲಾಗುವುದು ಎಂದು ಮಧ್ಯಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದು, “ಈ ಆರೋಪದ ಹಿಂದೆ ರಾಜಕೀಯ ಹುನ್ನಾರವಿದೆ. ನಮ್ಮ ವಿಜ್ಞಾನಿಗಳು ಲಸಿಕೆಯನ್ನು ತಯಾರಿಸಿದ್ದಾರೆ. ತುಕ್ಡೇ ತುಕ್ಟೇ ಗ್ಯಾಂಗ್ ಇದನ್ನು ವಿರೋಧಿಸುತ್ತಿದೆ” ಎಂದು  ಆರೋಪಿಸಿದ್ದಾರೆ.


ಇದನ್ನೂ ಓದಿ: JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...