Homeಕರೋನಾ ತಲ್ಲಣಮಧ್ಯಪ್ರದೇಶ: 'ಇದು ಪ್ರಯೋಗ' ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಮಧ್ಯಪ್ರದೇಶ: ‘ಇದು ಪ್ರಯೋಗ’ ಎಂದು ಹೇಳದೆ ಸಾರ್ವಜನಿಕರಿಗೆ ಲಸಿಕೆ ನೀಡಿದ ಖಾಸಗಿ ಆಸ್ಪತ್ರೆ!

ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸುತ್ತಾರೆ ಎಂದು ನನ್ನ ಸ್ನೇಹಿತ ಹೇಳಿದ. ಹಾಗಾಗಿ ನಾನು ಅರ್ಜಿಯೊಂದಕ್ಕೆ ಸಹಿ ಹಾಕಿದ್ದೆ. ಅನಂತರ ನನಗೆ ಲಸಿಕೆ ನೀಡಲಾಗಿತ್ತು. ಕೆಲವೇ ದಿನಗಳಲ್ಲಿ ನನಗೆ ವಾಂತಿ ಆರಂಭವಾಗಿ, ಜ್ವರ ಬಂತು. ಕೆಲಸಕ್ಕೂ ಹೋಗಲು ಸಾಧ್ಯವಾಗಲಿಲ್ಲ- ದಿನಗೂಲಿ ಕೆಲಸಗಾರ ಜಿತೇಂದ್ರ

- Advertisement -
- Advertisement -

ಜನರ ಒಪ್ಪಿಗೆ ಇಲ್ಲದೆ ಅವರಿಗೆ ಕೊರೊನಾ ವೈರಸ್ ಲಸಿಕೆ ನೀಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದ್ದು, “ಇದು ಪ್ರಯೋಗ ಎಂದು ನಮಗೆ ಯಾರೂ ಹೇಳಿಲ್ಲ” ಎಂದು ಹಲವು ಜನರು ಆರೋಪಿಸಿದ್ದಾರೆ.

ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆಸಿದ ಲಸಿಕೆ ಪ್ರಯೋಗಗಳಲ್ಲಿ ಪಾಲ್ಗೊಳ್ಳಲು ಜನರನ್ನು ದಾರಿ ತಪ್ಪಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದ್ದು, “ನಮಗೆ ಯಾರೂ ಕೂಡ ಲಸಿಕೆ ಪ್ರಯೋಗದ ಕುರಿತು, ಅದರ ಅಪಾಯದ ಬಗ್ಗೆ ಮಾಹಿತಿ ನೀಡಿರಲಿಲ್ಲ. ಚುಚ್ಚುಮದ್ದು ಕೊರೊನಾವನ್ನು ತಡೆಗಟ್ಟುತ್ತದೆ ಎಂದು ಮಾತ್ರ ಹೇಳಿದ್ದಾರೆ. ಇಂತಹ ಪ್ರಯೋಗಕ್ಕೆ ಕಡ್ಡಾಯವಾಗಿರುವ ಒಪ್ಪಿಗೆಯ ಅರ್ಜಿಯನ್ನೂ ನೀಡಿಲ್ಲ” ಎಂದು ಜನರು ಆರೋಪಿಸಿದ್ದಾರೆ.

“ಈ ಲಸಿಕೆ ತೆಗೆದುಕೊಳ್ಳುವುದರಿಂದ ಉಂಟಾಗುವು ಯಾವುದೇ ಅಡ್ಡ ಪರಿಣಾಮದ ಬಗ್ಗೆ ಯಾರೂ ನನಗೆ ಮಾಹಿತಿ ನೀಡಿಲ್ಲ. ಒಪ್ಪಿಗೆ ಫಾರ್ಮ್ ಅನ್ನು ಯಾರೂ ನನಗೆ ಕೊಟ್ಟಿಲ್ಲ. ಆಸ್ಪತ್ರೆಯಿಂದ ನನಗೆ ಯಾವತ್ತೂ ಕರೆ ಬಂದಿಲ್ಲ. ಈ ಚುಚ್ಚುಮದ್ದನ್ನು ತೆಗೆದುಕೊಂಡರೆ ನನಗೆ ಕೊರೊನಾ ಬರುವುದಿಲ್ಲ ಎಂದು ಆಸ್ಪತ್ರೆಯವರು ಹೇಳಿದ್ದರು” ಎಂದು ಭೋಪಾಲ್‌ನ ರೇಖಾ ಹೇಳಿದ್ದಾರೆ.

ಇದನ್ನೂ ಓದಿ: ಕಣ್ಣು ಕುರುಡಾಗಿ, ಕಿವಿ ಕಿವುಡಾಗಿ ಸಂವೇದನೆ ಹೊರಟುಹೋಗಿದೆಯೇ: ಭೈರಪ್ಪನವರಿಗೆ ತಿರುಗೇಟು ನೀಡಿದ ದೇವನೂರು

“ಇದು ಒಂದು ಪ್ರಯೋಗ ಎಂದು ಯಾರೂ ನಮಗೆ ಹೇಳಲಿಲ್ಲ. ಕೊರೋನ ಲಸಿಕೆ ನೀಡುತ್ತಿದ್ದೇವೆ, ನಿಮಗೆ ಏನಾದರೂ ಸಮಸ್ಯೆಯಾದರೆ ನಮಗೆ ಕರೆ ಮಾಡಿ ಎಂದು ಆಸ್ಪತ್ರೆಯವರು ನಮಗೆ ಹೇಳಿದ್ದರು” ಎಂದು ಡಿಸಂಬರ್ 8 ರಂದು ಮೊದಲ ಡೋಸ್ ಪಡೆದಿದ್ದ ಶಂಕರ ನಗರದ ಸಾವಿತ್ರಿ ಹೇಳಿದ್ದಾರೆ.

“ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ನಡೆಸುತ್ತಾರೆ ಎಂದು ನನ್ನ ಸ್ನೇಹಿತ ಹೇಳಿದ. ಹಾಗಾಗಿ ನಾನು ಅರ್ಜಿಯೊಂದಕ್ಕೆ ಸಹಿ ಹಾಕಿದ್ದೆ. ಅನಂತರ ನನಗೆ ಲಸಿಕೆ ನೀಡಲಾಗಿತ್ತು. ಕೆಲವೇ ದಿನಗಳಲ್ಲಿ ನನಗೆ ವಾಂತಿ ಆರಂಭವಾಗಿ, ಜ್ವರ ಬಂತು. ಕೆಲಸಕ್ಕೂ ಹೋಗಲು ಸಾಧ್ಯವಾಗಲಿಲ್ಲ. ಇದೊಂದು ಟ್ರಯಲ್ ಎಂದು ಯಾರೂ ಹೇಳಲಿಲ್ಲ” ಎಂದು ದಿನಗೂಲಿ ಕೆಲಸ ಮಾಡುತ್ತಿರುವ ಜಿತೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ‘ಲಸಿಕೆಯಲ್ಲಿ ಹಂದಿ ಮಾಂಸವಿಲ್ಲ’ – ಆಧಾರರಹಿತ ಸುದ್ದಿ ಕಡೆಗಣಿಸಲು ಮುಸ್ಲಿಂ ವಿದ್ವಾಂಸರ ಕರೆ

ಈ ಕುರಿತು ಪ್ರತಿಕ್ರಿಯಿಸಿದ ಕಾಲೇಜ್ ಆಫ್ ಮೆಡಿಕಲ್ ಸೈಯನ್ಸ್ ಡೀನ್ ಡಾ. ಎ.ಕೆ ದೀಕ್ಷಿತ್, “ನಾವು ಎಲ್ಲ ನಿಯಮಗಳನ್ನು ಪಾಲಿಸಿದ್ದೇವೆ. ಐಸಿಎಂಆರ್ ಮಾರ್ಗಸೂಚಿಯ ಅನ್ವಯ ಟ್ರಯಲ್ಸ್ ನಡೆಸಿದ್ದೇವೆ. ಟ್ರಯಲ್ಸ್‌ನಲ್ಲಿ ಭಾಗವಹಿಸಿದವರಿಗೆ ಅರ್ಧಗಂಟೆ ಮೊದಲೇ ಆಪ್ತ ಸಮಾಲೋಚನೆ ನಡೆಸಿದ್ದೆವು. ಆಗ ಅವರಿಗೆ ಡೋಸ್‌ಗಳು ಹಾಗೂ ಅದರ ಅಡ್ಡ ಪರಿಣಾಮಗಳ ಬಗ್ಗೆ ತಿಳಿಸಲಾಗಿತ್ತು” ಎಂದು ಹೇಳಿದ್ದಾರೆ.

ಈ ವಿಚಾರವನ್ನು ತನಿಖೆ ನಡೆಸಲಾಗುವುದು ಎಂದು ಮಧ್ಯಪ್ರದೇಶದ ವೈದ್ಯಕೀಯ ಶಿಕ್ಷಣ ಸಚಿವ ವಿಶ್ವಾಸ್ ಸಾರಂಗ್ ಹೇಳಿದ್ದು, “ಈ ಆರೋಪದ ಹಿಂದೆ ರಾಜಕೀಯ ಹುನ್ನಾರವಿದೆ. ನಮ್ಮ ವಿಜ್ಞಾನಿಗಳು ಲಸಿಕೆಯನ್ನು ತಯಾರಿಸಿದ್ದಾರೆ. ತುಕ್ಡೇ ತುಕ್ಟೇ ಗ್ಯಾಂಗ್ ಇದನ್ನು ವಿರೋಧಿಸುತ್ತಿದೆ” ಎಂದು  ಆರೋಪಿಸಿದ್ದಾರೆ.


ಇದನ್ನೂ ಓದಿ: JNU ಹಿಂಸಾಚಾರಕ್ಕೆ ಒಂದು ವರ್ಷ: ಒಂದೂ ಅರೆಸ್ಟ್ ಇಲ್ಲ, ಚಾರ್ಜ್‌ಶೀಟ್ ಇಲ್ಲ, ಆಂತರಿಕ ತನಿಖೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...