Homeಮುಖಪುಟಮಧ್ಯಪ್ರದೇಶ | ಡ್ರಗ್ ಮಾಫಿಯಾ ಜೊತೆ ನಂಟು ಆರೋಪ : ಡಿಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಮಧ್ಯಪ್ರದೇಶ | ಡ್ರಗ್ ಮಾಫಿಯಾ ಜೊತೆ ನಂಟು ಆರೋಪ : ಡಿಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ ಮಾಫಿಯಾದ ಆರೋಪಿಗಳು ಉಪ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಜಗದೀಶ್ ದೇವದಾ ಅವರ ಆಪ್ತರು ಎಂದು ಆರೋಪಿಸಿರುವ ಕಾಂಗ್ರೆಸ್, ದೇವದಾ ಅವರ ರಾಜೀನಾಮೆಗೆ ಆಗ್ರಹಿಸಿದೆ.

ಬಂಧಿತ ಡ್ರಗ್ ಸ್ಮಗ್ಲರ್‌ಗಳಲ್ಲಿ ಒಬ್ಬನಾಗಿರುವ ಹರೀಶ್ ಅಂಜನಾ ಜೊತೆಗಿನ ಡಿಸಿಎಂ ದೇವದಾ ಅವರ ಹಲವಾರು ಪೋಟೋಗಳನ್ನು ಪ್ರದರ್ಶಿಸಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಿತು ಪಟ್ವಾರಿ, ಡ್ರಗ್ ಸ್ಮಗ್ಲರ್ ಡಿಸಿಎಂಗೆ ಆಪ್ತ, ಆದ್ದರಿಂದ ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ವಾರದ ಆರಂಭದಲ್ಲಿ ಭೋಪಾಲ್‌ನ ಹೊರವಲಯದಲ್ಲಿ ಮೆಫೆಡ್ರೋನ್ (ಎಂಡಿ) ಡ್ರಗ್‌ನ ಬೃಹತ್ ಅಕ್ರಮ ಕಾರ್ಖಾನೆ ಪತ್ತೆಯಾಗಿತ್ತು. ಅಲ್ಲಿಂದ ಬರೋಬ್ಬರಿ 1,814 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ “ಪ್ರಧಾನಿ ನರೇಂದ್ರ ಮೋದಿ ಅಥವಾ ಅವರ ಪಕ್ಷವು ನಿಜವಾಗಿಯೂ ಮಾದಕ ವ್ಯಸನದ ವಿರುದ್ಧವಾಗಿದ್ದರೆ, ಮಧ್ಯ ಪ್ರದೇಶದ ಉಪ ಮುಖ್ಯಮಂತ್ರಿ ಜಗದೀಶ್ ದೇವದಾ ರಾಜೀನಾಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎರಡು ವರ್ಷಗಳ ಹಿಂದೆ ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ವರದಿಯ ಪ್ರಕಾರ ದೇಶದಲ್ಲಿ ಸುಮಾರು 40 ಕೋಟಿ ಜನರು ಮಾದಕ ದ್ರವ್ಯಗಳನ್ನು ಸೇವಿಸುತ್ತಿದ್ದಾರೆ. ದೇಶದಲ್ಲಿ ವಾರ್ಷಿಕವಾಗಿ 2 ಕೋಟಿ ಹೊಸ ಮಾದಕ ವ್ಯಸನಿಗಳು ಸೃಷ್ಟಿಯಾಗುತ್ತಿದ್ದಾರೆ. ಈ ಪೈಕಿ ಸುಮಾರು 50% ರಷ್ಟು ಮಂದಿ 25 ವರ್ಷ ವಯಸ್ಸಿನವರು. ಪ್ರಧಾನಿ ದೇಶದಲ್ಲಿ ವಾರ್ಷಿಕವಾಗಿ 2 ಕೋಟಿ ಉದ್ಯೋಗಗಳನ್ನು ಒದಗಿಸದಿದ್ದರೂ, ಪ್ರತಿ ವರ್ಷ 2 ಕೋಟಿ ಹೊಸ ಮಾದಕ ವ್ಯಸನಿಗಳು ಸೇರ್ಪಡೆಯಾಗುತ್ತಿದ್ದಾರೆ. ಭೋಪಾಲ್‌ನಲ್ಲಿ ಭೇದಿಸಲಾದ ಅಕ್ರಮ ಡ್ರಗ್ ಕಾರ್ಖಾನೆಯು ದೇಶದಾದ್ಯಂತ ತನ್ನ ಜಾಲವನ್ನು ಹೊಂದಿದೆ. ಅದಕ್ಕಾಗಿಯೇ ನಾವು ಈ ವಿಷಯವನ್ನು ಪ್ರಸ್ತಾಪಿಸಲು ದೆಹಲಿಗೆ ಬಂದಿದ್ದೇವೆ. ರಾಜ್ಯದ ಗೃಹ ಸಚಿವರೂ ಆಗಿರುವ ಸಿಎಂ ಮೋಹನ್ ಯಾದವ್ ಈ ವಿಚಾರದಲ್ಲಿ ಮೌನವಾಗಿದ್ದಾರೆ. ಅವರ ಇಬ್ಬರು ಉಪಮುಖ್ಯಮಂತ್ರಿಗಳ ಪೈಕಿ ಒಬ್ಬರಾದ ಜಗದೀಶ್ ದೇವದಾ ಅವರು ಬಂಧಿತ ಆರೋಪಿಗಳ ಪೈಕಿ ಒಬ್ಬನ ಜೊತೆ ಇರುವ ಫೋಟೋಗಳಿವೆ” ಎಂದಿದ್ದಾರೆ.

ಅಕ್ಟೋಬರ್ 7ರಂದು ಹರೀಶ್ ಅಂಜನಾ (ಪ್ರಕರಣದಲ್ಲಿ ಬಂಧಿತ ಮೂರನೇ ವ್ಯಕ್ತಿ) ಬಂಧನಕ್ಕೆ ಒಳಗಾದ ನಂತರ, ಡಿಸಿಎಂ ಜೊತೆಗಿನ ಹರೀಶ್ ಫೋಟೋಗಳು ವೈರಲ್ ಆಗಿದೆ. ಹಾಗಾಗಿ, ಪಟ್ವಾರಿ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಉಪ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕರ ಆರೋಪಗಳನ್ನು ತಳ್ಳಿ ಹಾಕಿರುವ ಜಗದೀಶ್ ದೇವದಾ, “ಹಲವು ಜನರು ಬಂದು ಸಾರ್ವಜನಿಕ ಮತ್ತು ರಾಜಕೀಯ ಜೀವನದಲ್ಲಿ ಇರುವ ವ್ಯಕ್ತಿಗಳೊಂದಿಗೆ ಫೋಟೋಗಳನ್ನು ತೆಗೆದುಕೊಳ್ಳುತ್ತಾರೆ. ಹಾಗೆಯೇ ಆತನೂ ನನ್ನ ಜೊತೆ ಫೋಟೊ ತೆಗೆಸಿಕೊಂಡಿರಬಹುದು. ಹಾಗಂತ, ನನಗೆ ಆತ ಆಪ್ತ ಎಂದಲ್ಲ. ಅಂತಹ ಕ್ರಿಮಿನಲ್‌ಗಳೊಂದಿಗೆ ನನಗೋ, ಬಿಜೆಪಿಗೋ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ರೈಲು ಅಪಘಾತ | ‘ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?’: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ತೀವ್ರ ವಿರೋಧದ ನಡುವೆಯೂ ಏಕರೂಪ ನಾಗರೀಕ ಸಂಹಿತೆ ಮಸೂದೆ ಅಂಗೀಕಾರ; ಇದು ‘ಮುಸ್ಲಿಂ ವಿರೋಧಿ’ ಎಂದ ಕಾಂಗ್ರೆಸ್

ಗುಜರಾತ್ ವಿಧಾನಸಭೆ ಮಂಗಳವಾರ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಮಸೂದೆಯನ್ನು ಅಂಗೀಕರಿಸಿದೆ. ಇದು ಧರ್ಮವನ್ನು ಲೆಕ್ಕಿಸದೆ ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಸಾಮಾನ್ಯ ಕಾನೂನು ಚೌಕಟ್ಟನ್ನು ರಚಿಸುವ ಗುರಿಯನ್ನು...

ಅಜಿತ್ ಪವಾರ್ ಸಾವಿನ ಕುರಿತು ಹಲವು ಅನುಮಾನ : ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲು

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ದಿವಂಗತ ಅಜಿತ್ ಪವಾರ್ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿ, ಈ ಹಿಂದೆ ಸರಣಿ ಸುದ್ದಿಗೋಷ್ಠಿಗಳನ್ನು ನಡೆಸಿದ್ದ ಎನ್‌ಸಿಪಿ (ಎಸ್‌ಪಿ) ಶಾಸಕ ರೋಹಿತ್ ಪವಾರ್, ಮಂಗಳವಾರ (ಮಾ.24) ಬೆಂಗಳೂರಿನ...

ಇಂಧನ ಕೊರತೆ ವದಂತಿ: ಆತಂಕದಿಂದ ಕುಕ್ಕರ್, ಹಾಲಿನ ಡಬ್ಬಿ, ನೀರಿನ ಬಕೆಟ್ ಗಳಲ್ಲಿ ಇಂಧನ ಸಂಗ್ರಹಣೆಗೆ ಮುಂದಾದ ಜನರು

ಇಂಧನ ಕೊರತೆಯ ವದಂತಿಗಳಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಜನರು ಕುಕ್ಕರ್, ಅಡುಗೆ ಪಾತ್ರೆ, ಹಾಲಿನ ಡಬ್ಬಿಗಳು, ನೀರಿನ ಟ್ಯಾಂಕರ್, ನೀರಿನ ಬಕೆಟ್ ಮತ್ತು ಬ್ಯಾರೆಲ್‌ಗಳಂತಹ ಅಡುಗೆ ಸಲಕರಣೆಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು...

ಪಂಜಾಬ್: ಮಹಿಳೆಗೆ ಲೈಂಗಿಕ ಶೋಷಣೆ, ಬೆದರಿಕೆ ಆರೋಪ; ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಬಂಧನ 

ಕಳೆದ ಸೆಪ್ಟೆಂಬರ್‌ನಿಂದ ಅತ್ಯಾಚಾರ ಪ್ರಕರಣವೊಂದರಲ್ಲಿ ತಲೆಮರೆಸಿಕೊಂಡಿದ್ದ ಎಎಪಿ ಶಾಸಕ ಹರ್ಮೀತ್ ಸಿಂಗ್ ಪಠಾಣಮಜ್ರಾ ಅವರನ್ನು ಪಂಜಾಬ್ ಪೊಲೀಸರು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಸನೂರ್‌ನಿಂದ ಮೊದಲ ಬಾರಿಗೆ ಶಾಸಕರಾಗಿರುವ ಪಠಣಮಜ್ರಾ...

ಆಸ್ತಿ ವಿವರ ಮುಚ್ಚಿಟ್ಟು ನಾಮಪತ್ರ ಸಲ್ಲಿಸಿದ ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ : ಕಾಂಗ್ರೆಸ್ ಆರೋಪ

ಬಿಜೆಪಿ ಕೇರಳ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟು ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ತಿರುವನಂತಪುರಂ ಜಿಲ್ಲೆಯ ನೇಮಮ್...

2026ರ ಮೊದಲ 74 ದಿನಗಳಲ್ಲಿ 170 ಕಸ್ಟಡಿ ಸಾವುಗಳು ವರದಿ; ಸಂಸತ್ತಿಗೆ ಕೇಂದ್ರ ಸರ್ಕಾರ ಮಾಹಿತಿ 

2026 ರ ಮೊದಲ 74 ದಿನಗಳಲ್ಲಿ (ಜನವರಿ 1 ರಿಂದ ಮಾರ್ಚ್ 15 ರವರೆಗೆ) ಭಾರತದಾದ್ಯಂತ ಒಟ್ಟು 170 ಕಸ್ಟಡಿ ಸಾವಿನ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಸಂಸತ್ತಿಗೆ ತಿಳಿಸಿದೆ. ಗೃಹ...

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...