Homeಮುಖಪುಟಮಧ್ಯಪ್ರದೇಶ | ಡ್ರಗ್ ಮಾಫಿಯಾ ಜೊತೆ ನಂಟು ಆರೋಪ : ಡಿಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಮಧ್ಯಪ್ರದೇಶ | ಡ್ರಗ್ ಮಾಫಿಯಾ ಜೊತೆ ನಂಟು ಆರೋಪ : ಡಿಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ ಮಾಫಿಯಾದ ಆರೋಪಿಗಳು ಉಪ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಜಗದೀಶ್ ದೇವದಾ ಅವರ ಆಪ್ತರು ಎಂದು ಆರೋಪಿಸಿರುವ ಕಾಂಗ್ರೆಸ್, ದೇವದಾ ಅವರ ರಾಜೀನಾಮೆಗೆ ಆಗ್ರಹಿಸಿದೆ.

ಬಂಧಿತ ಡ್ರಗ್ ಸ್ಮಗ್ಲರ್‌ಗಳಲ್ಲಿ ಒಬ್ಬನಾಗಿರುವ ಹರೀಶ್ ಅಂಜನಾ ಜೊತೆಗಿನ ಡಿಸಿಎಂ ದೇವದಾ ಅವರ ಹಲವಾರು ಪೋಟೋಗಳನ್ನು ಪ್ರದರ್ಶಿಸಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಿತು ಪಟ್ವಾರಿ, ಡ್ರಗ್ ಸ್ಮಗ್ಲರ್ ಡಿಸಿಎಂಗೆ ಆಪ್ತ, ಆದ್ದರಿಂದ ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ವಾರದ ಆರಂಭದಲ್ಲಿ ಭೋಪಾಲ್‌ನ ಹೊರವಲಯದಲ್ಲಿ ಮೆಫೆಡ್ರೋನ್ (ಎಂಡಿ) ಡ್ರಗ್‌ನ ಬೃಹತ್ ಅಕ್ರಮ ಕಾರ್ಖಾನೆ ಪತ್ತೆಯಾಗಿತ್ತು. ಅಲ್ಲಿಂದ ಬರೋಬ್ಬರಿ 1,814 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ “ಪ್ರಧಾನಿ ನರೇಂದ್ರ ಮೋದಿ ಅಥವಾ ಅವರ ಪಕ್ಷವು ನಿಜವಾಗಿಯೂ ಮಾದಕ ವ್ಯಸನದ ವಿರುದ್ಧವಾಗಿದ್ದರೆ, ಮಧ್ಯ ಪ್ರದೇಶದ ಉಪ ಮುಖ್ಯಮಂತ್ರಿ ಜಗದೀಶ್ ದೇವದಾ ರಾಜೀನಾಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎರಡು ವರ್ಷಗಳ ಹಿಂದೆ ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ವರದಿಯ ಪ್ರಕಾರ ದೇಶದಲ್ಲಿ ಸುಮಾರು 40 ಕೋಟಿ ಜನರು ಮಾದಕ ದ್ರವ್ಯಗಳನ್ನು ಸೇವಿಸುತ್ತಿದ್ದಾರೆ. ದೇಶದಲ್ಲಿ ವಾರ್ಷಿಕವಾಗಿ 2 ಕೋಟಿ ಹೊಸ ಮಾದಕ ವ್ಯಸನಿಗಳು ಸೃಷ್ಟಿಯಾಗುತ್ತಿದ್ದಾರೆ. ಈ ಪೈಕಿ ಸುಮಾರು 50% ರಷ್ಟು ಮಂದಿ 25 ವರ್ಷ ವಯಸ್ಸಿನವರು. ಪ್ರಧಾನಿ ದೇಶದಲ್ಲಿ ವಾರ್ಷಿಕವಾಗಿ 2 ಕೋಟಿ ಉದ್ಯೋಗಗಳನ್ನು ಒದಗಿಸದಿದ್ದರೂ, ಪ್ರತಿ ವರ್ಷ 2 ಕೋಟಿ ಹೊಸ ಮಾದಕ ವ್ಯಸನಿಗಳು ಸೇರ್ಪಡೆಯಾಗುತ್ತಿದ್ದಾರೆ. ಭೋಪಾಲ್‌ನಲ್ಲಿ ಭೇದಿಸಲಾದ ಅಕ್ರಮ ಡ್ರಗ್ ಕಾರ್ಖಾನೆಯು ದೇಶದಾದ್ಯಂತ ತನ್ನ ಜಾಲವನ್ನು ಹೊಂದಿದೆ. ಅದಕ್ಕಾಗಿಯೇ ನಾವು ಈ ವಿಷಯವನ್ನು ಪ್ರಸ್ತಾಪಿಸಲು ದೆಹಲಿಗೆ ಬಂದಿದ್ದೇವೆ. ರಾಜ್ಯದ ಗೃಹ ಸಚಿವರೂ ಆಗಿರುವ ಸಿಎಂ ಮೋಹನ್ ಯಾದವ್ ಈ ವಿಚಾರದಲ್ಲಿ ಮೌನವಾಗಿದ್ದಾರೆ. ಅವರ ಇಬ್ಬರು ಉಪಮುಖ್ಯಮಂತ್ರಿಗಳ ಪೈಕಿ ಒಬ್ಬರಾದ ಜಗದೀಶ್ ದೇವದಾ ಅವರು ಬಂಧಿತ ಆರೋಪಿಗಳ ಪೈಕಿ ಒಬ್ಬನ ಜೊತೆ ಇರುವ ಫೋಟೋಗಳಿವೆ” ಎಂದಿದ್ದಾರೆ.

ಅಕ್ಟೋಬರ್ 7ರಂದು ಹರೀಶ್ ಅಂಜನಾ (ಪ್ರಕರಣದಲ್ಲಿ ಬಂಧಿತ ಮೂರನೇ ವ್ಯಕ್ತಿ) ಬಂಧನಕ್ಕೆ ಒಳಗಾದ ನಂತರ, ಡಿಸಿಎಂ ಜೊತೆಗಿನ ಹರೀಶ್ ಫೋಟೋಗಳು ವೈರಲ್ ಆಗಿದೆ. ಹಾಗಾಗಿ, ಪಟ್ವಾರಿ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಉಪ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕರ ಆರೋಪಗಳನ್ನು ತಳ್ಳಿ ಹಾಕಿರುವ ಜಗದೀಶ್ ದೇವದಾ, “ಹಲವು ಜನರು ಬಂದು ಸಾರ್ವಜನಿಕ ಮತ್ತು ರಾಜಕೀಯ ಜೀವನದಲ್ಲಿ ಇರುವ ವ್ಯಕ್ತಿಗಳೊಂದಿಗೆ ಫೋಟೋಗಳನ್ನು ತೆಗೆದುಕೊಳ್ಳುತ್ತಾರೆ. ಹಾಗೆಯೇ ಆತನೂ ನನ್ನ ಜೊತೆ ಫೋಟೊ ತೆಗೆಸಿಕೊಂಡಿರಬಹುದು. ಹಾಗಂತ, ನನಗೆ ಆತ ಆಪ್ತ ಎಂದಲ್ಲ. ಅಂತಹ ಕ್ರಿಮಿನಲ್‌ಗಳೊಂದಿಗೆ ನನಗೋ, ಬಿಜೆಪಿಗೋ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ರೈಲು ಅಪಘಾತ | ‘ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?’: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...