Homeಮುಖಪುಟಮಧ್ಯಪ್ರದೇಶ | ಡ್ರಗ್ ಮಾಫಿಯಾ ಜೊತೆ ನಂಟು ಆರೋಪ : ಡಿಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಮಧ್ಯಪ್ರದೇಶ | ಡ್ರಗ್ ಮಾಫಿಯಾ ಜೊತೆ ನಂಟು ಆರೋಪ : ಡಿಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಮಧ್ಯ ಪ್ರದೇಶದ ಭೋಪಾಲ್‌ನಲ್ಲಿ ಪತ್ತೆಯಾಗಿರುವ ಬೃಹತ್ ಡ್ರಗ್ ಮಾಫಿಯಾದ ಆರೋಪಿಗಳು ಉಪ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಜಗದೀಶ್ ದೇವದಾ ಅವರ ಆಪ್ತರು ಎಂದು ಆರೋಪಿಸಿರುವ ಕಾಂಗ್ರೆಸ್, ದೇವದಾ ಅವರ ರಾಜೀನಾಮೆಗೆ ಆಗ್ರಹಿಸಿದೆ.

ಬಂಧಿತ ಡ್ರಗ್ ಸ್ಮಗ್ಲರ್‌ಗಳಲ್ಲಿ ಒಬ್ಬನಾಗಿರುವ ಹರೀಶ್ ಅಂಜನಾ ಜೊತೆಗಿನ ಡಿಸಿಎಂ ದೇವದಾ ಅವರ ಹಲವಾರು ಪೋಟೋಗಳನ್ನು ಪ್ರದರ್ಶಿಸಿರುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಿತು ಪಟ್ವಾರಿ, ಡ್ರಗ್ ಸ್ಮಗ್ಲರ್ ಡಿಸಿಎಂಗೆ ಆಪ್ತ, ಆದ್ದರಿಂದ ಡಿಸಿಎಂ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ವಾರದ ಆರಂಭದಲ್ಲಿ ಭೋಪಾಲ್‌ನ ಹೊರವಲಯದಲ್ಲಿ ಮೆಫೆಡ್ರೋನ್ (ಎಂಡಿ) ಡ್ರಗ್‌ನ ಬೃಹತ್ ಅಕ್ರಮ ಕಾರ್ಖಾನೆ ಪತ್ತೆಯಾಗಿತ್ತು. ಅಲ್ಲಿಂದ ಬರೋಬ್ಬರಿ 1,814 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ.

ದೆಹಲಿಯ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ “ಪ್ರಧಾನಿ ನರೇಂದ್ರ ಮೋದಿ ಅಥವಾ ಅವರ ಪಕ್ಷವು ನಿಜವಾಗಿಯೂ ಮಾದಕ ವ್ಯಸನದ ವಿರುದ್ಧವಾಗಿದ್ದರೆ, ಮಧ್ಯ ಪ್ರದೇಶದ ಉಪ ಮುಖ್ಯಮಂತ್ರಿ ಜಗದೀಶ್ ದೇವದಾ ರಾಜೀನಾಮೆ ಕೇಳಬೇಕು” ಎಂದು ಒತ್ತಾಯಿಸಿದ್ದಾರೆ.

“ಎರಡು ವರ್ಷಗಳ ಹಿಂದೆ ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಮಂಡಿಸಿದ ವರದಿಯ ಪ್ರಕಾರ ದೇಶದಲ್ಲಿ ಸುಮಾರು 40 ಕೋಟಿ ಜನರು ಮಾದಕ ದ್ರವ್ಯಗಳನ್ನು ಸೇವಿಸುತ್ತಿದ್ದಾರೆ. ದೇಶದಲ್ಲಿ ವಾರ್ಷಿಕವಾಗಿ 2 ಕೋಟಿ ಹೊಸ ಮಾದಕ ವ್ಯಸನಿಗಳು ಸೃಷ್ಟಿಯಾಗುತ್ತಿದ್ದಾರೆ. ಈ ಪೈಕಿ ಸುಮಾರು 50% ರಷ್ಟು ಮಂದಿ 25 ವರ್ಷ ವಯಸ್ಸಿನವರು. ಪ್ರಧಾನಿ ದೇಶದಲ್ಲಿ ವಾರ್ಷಿಕವಾಗಿ 2 ಕೋಟಿ ಉದ್ಯೋಗಗಳನ್ನು ಒದಗಿಸದಿದ್ದರೂ, ಪ್ರತಿ ವರ್ಷ 2 ಕೋಟಿ ಹೊಸ ಮಾದಕ ವ್ಯಸನಿಗಳು ಸೇರ್ಪಡೆಯಾಗುತ್ತಿದ್ದಾರೆ. ಭೋಪಾಲ್‌ನಲ್ಲಿ ಭೇದಿಸಲಾದ ಅಕ್ರಮ ಡ್ರಗ್ ಕಾರ್ಖಾನೆಯು ದೇಶದಾದ್ಯಂತ ತನ್ನ ಜಾಲವನ್ನು ಹೊಂದಿದೆ. ಅದಕ್ಕಾಗಿಯೇ ನಾವು ಈ ವಿಷಯವನ್ನು ಪ್ರಸ್ತಾಪಿಸಲು ದೆಹಲಿಗೆ ಬಂದಿದ್ದೇವೆ. ರಾಜ್ಯದ ಗೃಹ ಸಚಿವರೂ ಆಗಿರುವ ಸಿಎಂ ಮೋಹನ್ ಯಾದವ್ ಈ ವಿಚಾರದಲ್ಲಿ ಮೌನವಾಗಿದ್ದಾರೆ. ಅವರ ಇಬ್ಬರು ಉಪಮುಖ್ಯಮಂತ್ರಿಗಳ ಪೈಕಿ ಒಬ್ಬರಾದ ಜಗದೀಶ್ ದೇವದಾ ಅವರು ಬಂಧಿತ ಆರೋಪಿಗಳ ಪೈಕಿ ಒಬ್ಬನ ಜೊತೆ ಇರುವ ಫೋಟೋಗಳಿವೆ” ಎಂದಿದ್ದಾರೆ.

ಅಕ್ಟೋಬರ್ 7ರಂದು ಹರೀಶ್ ಅಂಜನಾ (ಪ್ರಕರಣದಲ್ಲಿ ಬಂಧಿತ ಮೂರನೇ ವ್ಯಕ್ತಿ) ಬಂಧನಕ್ಕೆ ಒಳಗಾದ ನಂತರ, ಡಿಸಿಎಂ ಜೊತೆಗಿನ ಹರೀಶ್ ಫೋಟೋಗಳು ವೈರಲ್ ಆಗಿದೆ. ಹಾಗಾಗಿ, ಪಟ್ವಾರಿ ಸೇರಿದಂತೆ ರಾಜ್ಯ ಕಾಂಗ್ರೆಸ್ ನಾಯಕರು ಉಪ ಮುಖ್ಯಮಂತ್ರಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್ ನಾಯಕರ ಆರೋಪಗಳನ್ನು ತಳ್ಳಿ ಹಾಕಿರುವ ಜಗದೀಶ್ ದೇವದಾ, “ಹಲವು ಜನರು ಬಂದು ಸಾರ್ವಜನಿಕ ಮತ್ತು ರಾಜಕೀಯ ಜೀವನದಲ್ಲಿ ಇರುವ ವ್ಯಕ್ತಿಗಳೊಂದಿಗೆ ಫೋಟೋಗಳನ್ನು ತೆಗೆದುಕೊಳ್ಳುತ್ತಾರೆ. ಹಾಗೆಯೇ ಆತನೂ ನನ್ನ ಜೊತೆ ಫೋಟೊ ತೆಗೆಸಿಕೊಂಡಿರಬಹುದು. ಹಾಗಂತ, ನನಗೆ ಆತ ಆಪ್ತ ಎಂದಲ್ಲ. ಅಂತಹ ಕ್ರಿಮಿನಲ್‌ಗಳೊಂದಿಗೆ ನನಗೋ, ಬಿಜೆಪಿಗೋ ಯಾವುದೇ ಸಂಬಂಧವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ : ರೈಲು ಅಪಘಾತ | ‘ಇನ್ನೆಷ್ಟು ಕುಟುಂಬಗಳು ಬಲಿಯಾಗಬೇಕು?’: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...