Homeಮುಖಪುಟಮಧ್ಯಪ್ರದೇಶ: ಬೈಕ್‌ನಲ್ಲಿ 80 ಕಿ.ಮೀ ದೂರ ತಾಯಿಯ ಶವ ಸಾಗಿಸಿದ ಅಮಾನವೀಯ ಘಟನೆ

ಮಧ್ಯಪ್ರದೇಶ: ಬೈಕ್‌ನಲ್ಲಿ 80 ಕಿ.ಮೀ ದೂರ ತಾಯಿಯ ಶವ ಸಾಗಿಸಿದ ಅಮಾನವೀಯ ಘಟನೆ

- Advertisement -
- Advertisement -

ನಾಗರೀಕ ಸಮಾಜವೊಂದು ತಲೆ ತಗ್ಗಿಸುವಂತಹ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ಮತ್ತೆ ಮರುಕಳುಹಿಸಿದೆ. ಆಸ್ಪತ್ರೆಯಲ್ಲಿ ಮೃತಪಟ್ಟ ತಾಯಿಯ ಶವ ಸಾಗಿಸಲು ಆಂಬುಲೆನ್ಸ್ ಸಿಗದ ಕಾರಣ ಮಕ್ಕಳಿಬ್ಬರು ಮರದ ಹಲಗೆಗೆ ಶವವನ್ನು ಕಟ್ಟಿ 80 ಕಿ.ಮೀ ದೂರ ಬೈಕ್‌ನಲ್ಲಿ ಸಾಗಿಸಿದ ಧಾರುಣ ಘಟನೆ ವರದಿಯಾಗಿದೆ.

ಶಹದೋಲ್ ಜಿಲ್ಲೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಅನುಪ್ಪುರ್ ಜಿಲ್ಲೆಯ ಗೋಡಾರ ಗ್ರಾಮದ ವ್ಯಕ್ತಿಗಳು ತಮ್ಮ ತಾಯಿಯನ್ನು ದಾಖಲಿಸಿದ್ದರು. ಆದರೆ ಸಮರ್ಪಕ ಚಿಕಿತ್ಸೆ ಸಿಗದ ಕಾರಣ ನಮ್ಮ ತಾಯಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿರುವ ಅವರು, ಶವ ಸಾಗಿಸಲು ಆಂಬುಲೆನ್ಸ್ ಸಹ ಕೊಡಲಿಲ್ಲ ಎಂದು ಆರೋಪಿಸಿದ್ದಾರೆ. “ಖಾಸಗಿ ಆಂಬುಲೆನ್ಸ್‌ನವರು 5000 ರೂ ಚಾರ್ಜ್ ಆಗುತ್ತದೆ ಅಂದರು. ಆದರೆ ಅಷ್ಟು ಹಣ ನಮ್ಮ ಬಳಿ ಇರಲಿಲ್ಲ. ಹಾಗಾಗಿ 100 ರೂ ಕೊಟ್ಟು ಮರದ ಹಲಗೆ ಖರೀದಿಸಿ ಅದಕ್ಕೆ ನಮ್ಮ ತಾಯಿಯ ಶವ ಕಟ್ಟಿ ಬೈಕ್‌ನಲ್ಲಿಯೇ ಕೊಂಡೊಯ್ದವು” ಎಂದು ಸುಂದರ್ ಯಾದವ್ ತಿಳಿಸಿದ್ದಾರೆ.

ಮೊದಲು ಅನುಪ್ಪುರ್ ಜಿಲ್ಲಾಸ್ಪತ್ರೆಗೆ ನಮ್ಮ ತಾಯಿಯನ್ನು ಸೇರಿಸಲಾಗಿತ್ತು. ಆದರೆ ಎದೆನೋವು ಹೆಚ್ಚಾದಾಗ ಅವರು ಶಹದೋಲ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ವರ್ಗಾಹಿಸಲು ಸೂಚಿಸಿದರು. ಅದರಂತೆ ಇಲ್ಲಿಗೆ ವರ್ಗಾಹಿಸಿದರು ಸಹ ಇಲ್ಲಿನ ಸಿಬ್ಬಂದಿ ಸಮರ್ಪಕ ಚಿಕಿತ್ಸೆ ನೀಡದ ಕಾರಣ ನಮ್ಮ ತಾಯಿ ಮರಣ ಹೊಂದಿದ್ದರು ಎಂದು ಅವರು ಆರೋಪಿಸಿದ್ದಾರೆ.

ಈ ವರ್ಷದ ಮಾರ್ಚ್ 30 ರಂದು ಇದೇ ಮಧ್ಯಪ್ರದೇಶದ ರೇವಾ ಜಿಲ್ಲೆಯ ರಾಯ್ಪುರ್‌ನಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ಮಹಿಳೆಯ ಶವ ಸಾಗಿಸಲು ಯಾವುದೇ ಆಂಬುಲೆನ್ಸ್ ಸಿಗದ ಕಾರಣ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತೊಯ್ದಿದ್ದರು.

ಇದನ್ನೂ ಓದಿ; ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಘಟನೆ ಕುರಿತು ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ ಮಾತನಾಡಿ, “ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶವ ಸಾಗಿಸಲು ವಾಹನ ಅಥವಾ ಆಟೋ ವ್ಯವಸ್ಥೆ ಮಾಡಲು ಪ್ರಯತ್ನಿಸಿದರು. ಆದರೆ ಕಾಯಲು ಸಿದ್ದವಿಲ್ಲದ ಮೃತರ ಸಂಬಂಧಿಗಳು ತರಾತುರಿಯಲ್ಲಿ ಮಂಚದಲ್ಲಿಯೇ ಶವ ಹೊತ್ತೊಯ್ದಿದ್ದಾರೆ. ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ” ಎಂದಿದ್ದರು.

ಅವರ ಅಂದಿನ ಉಡಾಫೆ ಮತ್ತು ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದಾಗಿ ಇಂದು ಮತ್ತೊಂದು ಅದೇ ರೀತಿಯ ದುರ್ಘಟನೆ ಜರುಗಿದೆ. ಆದರೆ ಇದರಿಂದ ಸರ್ಕಾರವಾಗಲಿ, ಆರೋಗ್ಯ ಇಲಾಖೆಯಾಗಲಿ ಎಚ್ಚೆತ್ತುಕೊಳ್ಳುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.

ಕಳೆದ ವಾರ ಮಧ್ಯಪ್ರದೇಶ ಸಾಗರ್ ಎಂಬ ಪ್ರದೇಶದಲ್ಲಿ ಒಂದೇ ಸಿರಿಂಜ್‌ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ್ದ ತೀವ್ರ ಆರೋಗ್ಯದ ಘಟನೆ ವರದಿಯಾಗಿತ್ತು ಎಂಬುದನ್ನು ಇಲ್ಲಿ ಗಮನಿಸಬಹುದಾಗಿದೆ.

ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ಜರುಗಿವೆ ಮತ್ತು ದಿನನಿತ್ಯ ಜರುಗುತ್ತಿವೆ. ಎಲ್ಲೊ ಅಲ್ಲೊಂದು ಇಲ್ಲೊಂದು ಮಾತ್ರ ವರದಿಯಾಗುತ್ತಿವೆ. ಭಾರತದಲ್ಲಿ ಆರೋಗ್ಯ ವ್ಯವಸ್ಥೆ ಕಳಪೆ ಮಟ್ಟದಲ್ಲಿರುವುದನ್ನು ಇಂತಹ ಘಟನೆಗಳು ಪದೇ ಪದೇ ನಿರೂಪಿಸುತ್ತಿವೆ. ದೇಶದ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಸೇವೆ ನೀಡಬೇಕಾದ ಸರ್ಕಾರಗಳು ತಮ್ಮ ಕರ್ತವ್ಯ ಪಾಲಿಸುತ್ತಿಲ್ಲ. ಸಮರ್ಪಕ ಮೇಲ್ವಿಚಾರಣೆ ಇಲ್ಲದ ಕಾರಣಕ್ಕೆ ಇರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅದರಿಂದಾಗಿಯೇ ಇಂತಹ ಅನಾಹುತಗಳು ಸಂಭವಿಸುತ್ತಿವೆ. ಈಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಮತ್ತು ಅದಕ್ಕಾಗಿ ಜನರು ಒತ್ತಾಯಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಂದರೆ ವರದಿ ಮಾಡಿರುವುದೇ ತಪ್ಪಾ, ಮಾದ್ಯಮ ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತದೆ.

  2. ಅಂದರೆ ವರದಿ ಮಾಡಿರುವುದೇ ತಪ್ಪಾ, ಮಾದ್ಯಮ ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತದೆ. ಜನರನ್ನು ಜಾಗೃತಿ ಮೂಡಿಸುವ ಕೆಲಸ ಮಾಡುತ್ತದೆ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...