Homeಮುಖಪುಟಮಧ್ಯಪ್ರದೇಶ: ಬೈಕ್‌ನಲ್ಲಿ 80 ಕಿ.ಮೀ ದೂರ ತಾಯಿಯ ಶವ ಸಾಗಿಸಿದ ಅಮಾನವೀಯ ಘಟನೆ

ಮಧ್ಯಪ್ರದೇಶ: ಬೈಕ್‌ನಲ್ಲಿ 80 ಕಿ.ಮೀ ದೂರ ತಾಯಿಯ ಶವ ಸಾಗಿಸಿದ ಅಮಾನವೀಯ ಘಟನೆ

- Advertisement -
- Advertisement -

ನಾಗರೀಕ ಸಮಾಜವೊಂದು ತಲೆ ತಗ್ಗಿಸುವಂತಹ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ಮತ್ತೆ ಮರುಕಳುಹಿಸಿದೆ. ಆಸ್ಪತ್ರೆಯಲ್ಲಿ ಮೃತಪಟ್ಟ ತಾಯಿಯ ಶವ ಸಾಗಿಸಲು ಆಂಬುಲೆನ್ಸ್ ಸಿಗದ ಕಾರಣ ಮಕ್ಕಳಿಬ್ಬರು ಮರದ ಹಲಗೆಗೆ ಶವವನ್ನು ಕಟ್ಟಿ 80 ಕಿ.ಮೀ ದೂರ ಬೈಕ್‌ನಲ್ಲಿ ಸಾಗಿಸಿದ ಧಾರುಣ ಘಟನೆ ವರದಿಯಾಗಿದೆ.

ಶಹದೋಲ್ ಜಿಲ್ಲೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಅನುಪ್ಪುರ್ ಜಿಲ್ಲೆಯ ಗೋಡಾರ ಗ್ರಾಮದ ವ್ಯಕ್ತಿಗಳು ತಮ್ಮ ತಾಯಿಯನ್ನು ದಾಖಲಿಸಿದ್ದರು. ಆದರೆ ಸಮರ್ಪಕ ಚಿಕಿತ್ಸೆ ಸಿಗದ ಕಾರಣ ನಮ್ಮ ತಾಯಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿರುವ ಅವರು, ಶವ ಸಾಗಿಸಲು ಆಂಬುಲೆನ್ಸ್ ಸಹ ಕೊಡಲಿಲ್ಲ ಎಂದು ಆರೋಪಿಸಿದ್ದಾರೆ. “ಖಾಸಗಿ ಆಂಬುಲೆನ್ಸ್‌ನವರು 5000 ರೂ ಚಾರ್ಜ್ ಆಗುತ್ತದೆ ಅಂದರು. ಆದರೆ ಅಷ್ಟು ಹಣ ನಮ್ಮ ಬಳಿ ಇರಲಿಲ್ಲ. ಹಾಗಾಗಿ 100 ರೂ ಕೊಟ್ಟು ಮರದ ಹಲಗೆ ಖರೀದಿಸಿ ಅದಕ್ಕೆ ನಮ್ಮ ತಾಯಿಯ ಶವ ಕಟ್ಟಿ ಬೈಕ್‌ನಲ್ಲಿಯೇ ಕೊಂಡೊಯ್ದವು” ಎಂದು ಸುಂದರ್ ಯಾದವ್ ತಿಳಿಸಿದ್ದಾರೆ.

ಮೊದಲು ಅನುಪ್ಪುರ್ ಜಿಲ್ಲಾಸ್ಪತ್ರೆಗೆ ನಮ್ಮ ತಾಯಿಯನ್ನು ಸೇರಿಸಲಾಗಿತ್ತು. ಆದರೆ ಎದೆನೋವು ಹೆಚ್ಚಾದಾಗ ಅವರು ಶಹದೋಲ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ವರ್ಗಾಹಿಸಲು ಸೂಚಿಸಿದರು. ಅದರಂತೆ ಇಲ್ಲಿಗೆ ವರ್ಗಾಹಿಸಿದರು ಸಹ ಇಲ್ಲಿನ ಸಿಬ್ಬಂದಿ ಸಮರ್ಪಕ ಚಿಕಿತ್ಸೆ ನೀಡದ ಕಾರಣ ನಮ್ಮ ತಾಯಿ ಮರಣ ಹೊಂದಿದ್ದರು ಎಂದು ಅವರು ಆರೋಪಿಸಿದ್ದಾರೆ.

ಈ ವರ್ಷದ ಮಾರ್ಚ್ 30 ರಂದು ಇದೇ ಮಧ್ಯಪ್ರದೇಶದ ರೇವಾ ಜಿಲ್ಲೆಯ ರಾಯ್ಪುರ್‌ನಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ಮಹಿಳೆಯ ಶವ ಸಾಗಿಸಲು ಯಾವುದೇ ಆಂಬುಲೆನ್ಸ್ ಸಿಗದ ಕಾರಣ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತೊಯ್ದಿದ್ದರು.

ಇದನ್ನೂ ಓದಿ; ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಘಟನೆ ಕುರಿತು ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ ಮಾತನಾಡಿ, “ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶವ ಸಾಗಿಸಲು ವಾಹನ ಅಥವಾ ಆಟೋ ವ್ಯವಸ್ಥೆ ಮಾಡಲು ಪ್ರಯತ್ನಿಸಿದರು. ಆದರೆ ಕಾಯಲು ಸಿದ್ದವಿಲ್ಲದ ಮೃತರ ಸಂಬಂಧಿಗಳು ತರಾತುರಿಯಲ್ಲಿ ಮಂಚದಲ್ಲಿಯೇ ಶವ ಹೊತ್ತೊಯ್ದಿದ್ದಾರೆ. ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ” ಎಂದಿದ್ದರು.

ಅವರ ಅಂದಿನ ಉಡಾಫೆ ಮತ್ತು ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದಾಗಿ ಇಂದು ಮತ್ತೊಂದು ಅದೇ ರೀತಿಯ ದುರ್ಘಟನೆ ಜರುಗಿದೆ. ಆದರೆ ಇದರಿಂದ ಸರ್ಕಾರವಾಗಲಿ, ಆರೋಗ್ಯ ಇಲಾಖೆಯಾಗಲಿ ಎಚ್ಚೆತ್ತುಕೊಳ್ಳುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.

ಕಳೆದ ವಾರ ಮಧ್ಯಪ್ರದೇಶ ಸಾಗರ್ ಎಂಬ ಪ್ರದೇಶದಲ್ಲಿ ಒಂದೇ ಸಿರಿಂಜ್‌ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ್ದ ತೀವ್ರ ಆರೋಗ್ಯದ ಘಟನೆ ವರದಿಯಾಗಿತ್ತು ಎಂಬುದನ್ನು ಇಲ್ಲಿ ಗಮನಿಸಬಹುದಾಗಿದೆ.

ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ಜರುಗಿವೆ ಮತ್ತು ದಿನನಿತ್ಯ ಜರುಗುತ್ತಿವೆ. ಎಲ್ಲೊ ಅಲ್ಲೊಂದು ಇಲ್ಲೊಂದು ಮಾತ್ರ ವರದಿಯಾಗುತ್ತಿವೆ. ಭಾರತದಲ್ಲಿ ಆರೋಗ್ಯ ವ್ಯವಸ್ಥೆ ಕಳಪೆ ಮಟ್ಟದಲ್ಲಿರುವುದನ್ನು ಇಂತಹ ಘಟನೆಗಳು ಪದೇ ಪದೇ ನಿರೂಪಿಸುತ್ತಿವೆ. ದೇಶದ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಸೇವೆ ನೀಡಬೇಕಾದ ಸರ್ಕಾರಗಳು ತಮ್ಮ ಕರ್ತವ್ಯ ಪಾಲಿಸುತ್ತಿಲ್ಲ. ಸಮರ್ಪಕ ಮೇಲ್ವಿಚಾರಣೆ ಇಲ್ಲದ ಕಾರಣಕ್ಕೆ ಇರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅದರಿಂದಾಗಿಯೇ ಇಂತಹ ಅನಾಹುತಗಳು ಸಂಭವಿಸುತ್ತಿವೆ. ಈಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಮತ್ತು ಅದಕ್ಕಾಗಿ ಜನರು ಒತ್ತಾಯಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಂದರೆ ವರದಿ ಮಾಡಿರುವುದೇ ತಪ್ಪಾ, ಮಾದ್ಯಮ ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತದೆ.

  2. ಅಂದರೆ ವರದಿ ಮಾಡಿರುವುದೇ ತಪ್ಪಾ, ಮಾದ್ಯಮ ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತದೆ. ಜನರನ್ನು ಜಾಗೃತಿ ಮೂಡಿಸುವ ಕೆಲಸ ಮಾಡುತ್ತದೆ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....