Homeಮುಖಪುಟಮಧ್ಯಪ್ರದೇಶ: ಬೈಕ್‌ನಲ್ಲಿ 80 ಕಿ.ಮೀ ದೂರ ತಾಯಿಯ ಶವ ಸಾಗಿಸಿದ ಅಮಾನವೀಯ ಘಟನೆ

ಮಧ್ಯಪ್ರದೇಶ: ಬೈಕ್‌ನಲ್ಲಿ 80 ಕಿ.ಮೀ ದೂರ ತಾಯಿಯ ಶವ ಸಾಗಿಸಿದ ಅಮಾನವೀಯ ಘಟನೆ

- Advertisement -
- Advertisement -

ನಾಗರೀಕ ಸಮಾಜವೊಂದು ತಲೆ ತಗ್ಗಿಸುವಂತಹ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ಮತ್ತೆ ಮರುಕಳುಹಿಸಿದೆ. ಆಸ್ಪತ್ರೆಯಲ್ಲಿ ಮೃತಪಟ್ಟ ತಾಯಿಯ ಶವ ಸಾಗಿಸಲು ಆಂಬುಲೆನ್ಸ್ ಸಿಗದ ಕಾರಣ ಮಕ್ಕಳಿಬ್ಬರು ಮರದ ಹಲಗೆಗೆ ಶವವನ್ನು ಕಟ್ಟಿ 80 ಕಿ.ಮೀ ದೂರ ಬೈಕ್‌ನಲ್ಲಿ ಸಾಗಿಸಿದ ಧಾರುಣ ಘಟನೆ ವರದಿಯಾಗಿದೆ.

ಶಹದೋಲ್ ಜಿಲ್ಲೆ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಅನುಪ್ಪುರ್ ಜಿಲ್ಲೆಯ ಗೋಡಾರ ಗ್ರಾಮದ ವ್ಯಕ್ತಿಗಳು ತಮ್ಮ ತಾಯಿಯನ್ನು ದಾಖಲಿಸಿದ್ದರು. ಆದರೆ ಸಮರ್ಪಕ ಚಿಕಿತ್ಸೆ ಸಿಗದ ಕಾರಣ ನಮ್ಮ ತಾಯಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿರುವ ಅವರು, ಶವ ಸಾಗಿಸಲು ಆಂಬುಲೆನ್ಸ್ ಸಹ ಕೊಡಲಿಲ್ಲ ಎಂದು ಆರೋಪಿಸಿದ್ದಾರೆ. “ಖಾಸಗಿ ಆಂಬುಲೆನ್ಸ್‌ನವರು 5000 ರೂ ಚಾರ್ಜ್ ಆಗುತ್ತದೆ ಅಂದರು. ಆದರೆ ಅಷ್ಟು ಹಣ ನಮ್ಮ ಬಳಿ ಇರಲಿಲ್ಲ. ಹಾಗಾಗಿ 100 ರೂ ಕೊಟ್ಟು ಮರದ ಹಲಗೆ ಖರೀದಿಸಿ ಅದಕ್ಕೆ ನಮ್ಮ ತಾಯಿಯ ಶವ ಕಟ್ಟಿ ಬೈಕ್‌ನಲ್ಲಿಯೇ ಕೊಂಡೊಯ್ದವು” ಎಂದು ಸುಂದರ್ ಯಾದವ್ ತಿಳಿಸಿದ್ದಾರೆ.

ಮೊದಲು ಅನುಪ್ಪುರ್ ಜಿಲ್ಲಾಸ್ಪತ್ರೆಗೆ ನಮ್ಮ ತಾಯಿಯನ್ನು ಸೇರಿಸಲಾಗಿತ್ತು. ಆದರೆ ಎದೆನೋವು ಹೆಚ್ಚಾದಾಗ ಅವರು ಶಹದೋಲ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ವರ್ಗಾಹಿಸಲು ಸೂಚಿಸಿದರು. ಅದರಂತೆ ಇಲ್ಲಿಗೆ ವರ್ಗಾಹಿಸಿದರು ಸಹ ಇಲ್ಲಿನ ಸಿಬ್ಬಂದಿ ಸಮರ್ಪಕ ಚಿಕಿತ್ಸೆ ನೀಡದ ಕಾರಣ ನಮ್ಮ ತಾಯಿ ಮರಣ ಹೊಂದಿದ್ದರು ಎಂದು ಅವರು ಆರೋಪಿಸಿದ್ದಾರೆ.

ಈ ವರ್ಷದ ಮಾರ್ಚ್ 30 ರಂದು ಇದೇ ಮಧ್ಯಪ್ರದೇಶದ ರೇವಾ ಜಿಲ್ಲೆಯ ರಾಯ್ಪುರ್‌ನಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ಮಹಿಳೆಯ ಶವ ಸಾಗಿಸಲು ಯಾವುದೇ ಆಂಬುಲೆನ್ಸ್ ಸಿಗದ ಕಾರಣ ನಾಲ್ವರು ಮಹಿಳೆಯರು ಮಂಚದಲ್ಲಿಯೇ ಶವ ಹೊತ್ತೊಯ್ದಿದ್ದರು.

ಇದನ್ನೂ ಓದಿ; ಮಧ್ಯಪ್ರದೇಶ: ಶವ ಸಾಗಿಸಲು ಆಂಬುಲೆನ್ಸ್ ಸಿಗದೆ ಮಂಚದಲ್ಲಿಯೇ ಹೊತ್ತು ನಡೆದ ಮಹಿಳೆಯರು

ಘಟನೆ ಕುರಿತು ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿ ಬಿ.ಎಲ್ ಮಿಶ್ರಾ ಮಾತನಾಡಿ, “ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಶವ ಸಾಗಿಸಲು ವಾಹನ ಅಥವಾ ಆಟೋ ವ್ಯವಸ್ಥೆ ಮಾಡಲು ಪ್ರಯತ್ನಿಸಿದರು. ಆದರೆ ಕಾಯಲು ಸಿದ್ದವಿಲ್ಲದ ಮೃತರ ಸಂಬಂಧಿಗಳು ತರಾತುರಿಯಲ್ಲಿ ಮಂಚದಲ್ಲಿಯೇ ಶವ ಹೊತ್ತೊಯ್ದಿದ್ದಾರೆ. ಇದೇನು ದೊಡ್ಡ ವಿಷಯವಲ್ಲ, ಏಕೆಂದರೆ ನಾವು ಶವ ಸಾಗಿಲು ವಾಹನ ಹೊಂದಿಲ್ಲ” ಎಂದಿದ್ದರು.

ಅವರ ಅಂದಿನ ಉಡಾಫೆ ಮತ್ತು ಸರ್ಕಾರದ ನಿರ್ಲಕ್ಷ್ಯದ ಕಾರಣದಿಂದಾಗಿ ಇಂದು ಮತ್ತೊಂದು ಅದೇ ರೀತಿಯ ದುರ್ಘಟನೆ ಜರುಗಿದೆ. ಆದರೆ ಇದರಿಂದ ಸರ್ಕಾರವಾಗಲಿ, ಆರೋಗ್ಯ ಇಲಾಖೆಯಾಗಲಿ ಎಚ್ಚೆತ್ತುಕೊಳ್ಳುವ ಯಾವುದೇ ಲಕ್ಷಣಗಳು ಗೋಚರಿಸುತ್ತಿಲ್ಲ.

ಕಳೆದ ವಾರ ಮಧ್ಯಪ್ರದೇಶ ಸಾಗರ್ ಎಂಬ ಪ್ರದೇಶದಲ್ಲಿ ಒಂದೇ ಸಿರಿಂಜ್‌ನಿಂದ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ್ದ ತೀವ್ರ ಆರೋಗ್ಯದ ಘಟನೆ ವರದಿಯಾಗಿತ್ತು ಎಂಬುದನ್ನು ಇಲ್ಲಿ ಗಮನಿಸಬಹುದಾಗಿದೆ.

ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ಜರುಗಿವೆ ಮತ್ತು ದಿನನಿತ್ಯ ಜರುಗುತ್ತಿವೆ. ಎಲ್ಲೊ ಅಲ್ಲೊಂದು ಇಲ್ಲೊಂದು ಮಾತ್ರ ವರದಿಯಾಗುತ್ತಿವೆ. ಭಾರತದಲ್ಲಿ ಆರೋಗ್ಯ ವ್ಯವಸ್ಥೆ ಕಳಪೆ ಮಟ್ಟದಲ್ಲಿರುವುದನ್ನು ಇಂತಹ ಘಟನೆಗಳು ಪದೇ ಪದೇ ನಿರೂಪಿಸುತ್ತಿವೆ. ದೇಶದ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಸೇವೆ ನೀಡಬೇಕಾದ ಸರ್ಕಾರಗಳು ತಮ್ಮ ಕರ್ತವ್ಯ ಪಾಲಿಸುತ್ತಿಲ್ಲ. ಸಮರ್ಪಕ ಮೇಲ್ವಿಚಾರಣೆ ಇಲ್ಲದ ಕಾರಣಕ್ಕೆ ಇರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅದರಿಂದಾಗಿಯೇ ಇಂತಹ ಅನಾಹುತಗಳು ಸಂಭವಿಸುತ್ತಿವೆ. ಈಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಮತ್ತು ಅದಕ್ಕಾಗಿ ಜನರು ಒತ್ತಾಯಿಸಬೇಕಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಅಂದರೆ ವರದಿ ಮಾಡಿರುವುದೇ ತಪ್ಪಾ, ಮಾದ್ಯಮ ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತದೆ.

  2. ಅಂದರೆ ವರದಿ ಮಾಡಿರುವುದೇ ತಪ್ಪಾ, ಮಾದ್ಯಮ ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡುತ್ತದೆ. ಜನರನ್ನು ಜಾಗೃತಿ ಮೂಡಿಸುವ ಕೆಲಸ ಮಾಡುತ್ತದೆ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...