Homeಮುಖಪುಟಮಧ್ಯಪ್ರದೇಶ | ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮಸೀದಿಯ ಮುಂದೆ ವಿಜಯೋತ್ಸವ ರ‍್ಯಾಲಿ ನಡೆಸಿದ ದುಷ್ಕರ್ಮಿಗಳು;...

ಮಧ್ಯಪ್ರದೇಶ | ಮುಸ್ಲಿಂ ವಿರೋಧಿ ಘೋಷಣೆ ಕೂಗಿ ಮಸೀದಿಯ ಮುಂದೆ ವಿಜಯೋತ್ಸವ ರ‍್ಯಾಲಿ ನಡೆಸಿದ ದುಷ್ಕರ್ಮಿಗಳು; ಭುಗಿಲೆದ್ದ ಕೋಮು ಸಂಘರ್ಷ

- Advertisement -
- Advertisement -

ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡವು ವಿಜಯಗಳಿಸಿದ ನಂತರ ದುಷ್ಕರ್ಮಿಗಳ ತಂಡವೊಂದು ಮಸೀದಿಯ ಮುಂದೆ ತೆರಳಿ ರಂಝಾನ್‌ನ ವಿಶೇಷ ಪ್ರಾರ್ಥನೆ (ತರಾವೀಹ್) ನಡೆಸುತ್ತಿದ್ದ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಘೋಷಣೆ ಕೂಗಿ ಪಟಾಕಿ ಸಿಡಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‌ ಜಿಲ್ಲೆಯ ಅಂಬೇಡ್ಕರ್ ನಗರ – ಮೋವ್‌ ಪಟ್ಟಣದಲ್ಲಿ ನಡೆದಿದೆ. ಇತರ ನಂತರ ಪ್ರದೇಶದಲ್ಲಿ ಕೋಮು ಘರ್ಷಣೆ ಸಂಭವಿಸಿದೆ ಎಂದು ವರದಿಯಾಗಿದೆ. ಮುಸ್ಲಿಂ ವಿರೋಧಿ ಘೋಷಣೆ

ಘರ್ಷಣೆಯಲ್ಲಿ ಕನಿಷ್ಠ ನಾಲ್ವರು ಜನರು ಗಾಯಗೊಂಡಿದ್ದು, ಕೆಲವರಿಗೆ ಮೂಳೆ ಮುರಿತಗಳು ಉಂಟಾಗಿದೆ ಎಂದು ವರದಿ ಹೇಳಿದೆ. ಗಲಭೆಕೋರರನ್ನು ನಿಭಾಯಿಸುವಾಗ ಕೆಲವು ಪೊಲೀಸ್ ಸಿಬ್ಬಂದಿಗೆ ಕೂಡಾ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ರಾತ್ರಿ 10.45 ರ ಸುಮಾರಿಗೆ ದುಷ್ಕರ್ಮಿಗಳ ತಂಡವು ಜಾಮಿಯಾ ಮಸೀದಿ ಬಳಿ ತಲುಪಿದ್ದು, ಈ ವೇಳೆ ಪಟಾಕಿಗಳನ್ನು ಸಿಡಿಸಿದ್ದಾರೆ. ದುಷ್ಕರ್ಮಿಗಳ ಈ ಕೃತ್ಯದ ವೇಳೆ ಮಸೀದಿಯಲ್ಲಿ ಮುಸ್ಲಿಮರು ರಂಝಾನಿನ ವಿಶೇಷ ಪ್ರಾರ್ಥನೆ ನಡೆಸುತ್ತಿದ್ದರು. ಈ ವೇಳೆ ಎರಡು ಗುಂಪುಗಳ ನಡುವಿನ ಮಾತಿನ ಚಕಮಕಿ ಉಂಟಾಗಿದ್ದು, ನಂತರ ಅದು ಹಿಂಸಾತ್ಮಕ ತಿರುವು ಪಡೆದುಕೊಂಡಿದೆ. ಎರಡೂ ಕಡೆಯಿಂದ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ. ಮುಸ್ಲಿಂ ವಿರೋಧಿ ಘೋಷಣೆ

ದುಷ್ಕರ್ಮಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದ್ದು ಮಾತ್ರವಲ್ಲದೆ ಆ ಪ್ರದೇಶ ಮತ್ತು ನೆರೆಯ ಸ್ಥಳಗಳಲ್ಲಿ ಹಲವಾರು ವಾಹನಗಳನ್ನು ಸುಟ್ಟುಹಾಕಿದೆ. ಇದರ ನಂತರ ಪಟ್ಟಿ ಬಜಾರ್, ಮಾರ್ಕೆಟ್ ಚೌಕ್, ಮನಕ್ ಚೌಕ್, ಸಬ್ಜಿ ಮಾರ್ಕೆಟ್, ಗಫರ್ ಹೋಟೆಲ್ ಮತ್ತು ಕನ್ನಾಟ್ ರಸ್ತೆ ಸೇರಿದಂತೆ ಜಾಮಿಯ ಮಸೀದಿ ಪ್ರದೇಶದ ಪಕ್ಕದ ಪ್ರದೇಶಗಳಿಂದ ಕಲ್ಲು ತೂರಾಟ ಮತ್ತು ವಾಹನಗಳಿಗೆ ಹಾನಿ ಮಾಡಿದ ಘಟನೆ ನಡೆದಿವೆ ಎಂದು ವರದಿಯಾದೆ.

ಕನಿಷ್ಠ ನಾಲ್ಕು ಪೊಲೀಸ್ ಠಾಣೆ ಪ್ರದೇಶಗಳ ಪೊಲೀಸ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಕಾರ್ಯಾಚರಣೆಗೆ ಇಳಿದಿದ್ದು, ಅದಾಗ್ಯೂ, ಗಲಭೆಕೋರರು ವಾಹನಗಳಿಗೆ ಹಾನಿ ಅಥವಾ ಬೆಂಕಿ ಹಚ್ಚಿದ್ದಾರೆ. ಜೊತೆಗೆ ಗಲಭೆಕೋರರು ಕೆಲವು ಅಂಗಡಿಗಳಿಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾರೆ ಎಂದು ವರದಿಯಾಗಿದೆ.

“ಸುಮಾರು 7-8 ವಾಹನಗಳನ್ನು ಗಲಭೆಕೋರರು ಸುಟ್ಟುಹಾಕಿದರು ಮತ್ತು ಕಲ್ಲು ತೂರಾಟ ಕೂಡ ಹಲವಾರು ಸ್ಥಳಗಳಿಂದ ವರದಿಯಾಗಿದೆ. ಆದರೆ ಪ್ರಮುಖ ಹಿಂಸಾಚಾರ ಹೆಚ್ಚಾಗಿ ಪಟ್ಟಿ ಬಜಾರ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಸಂಭವಿಸಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ TNIE ವರದಿ ಮಾಡಿದೆ.

“ವಿವಿಧ ಪ್ರದೇಶಗಳಲ್ಲಿ, ವಿಶೇಷವಾಗಿ ಹಿಂಸಾಚಾರ ಪ್ರಾರಂಭವಾದ ಪ್ರದೇಶದಲ್ಲಿ ಬಲಪ್ರಯೋಗ ಮತ್ತು ಅಶ್ರುವಾಯು ಶೆಲ್‌ಗಳ ಮೂಲಕ ಹಿಂಸಾತ್ಮಕ ಗುಂಪನ್ನು ಚದುರಿಸಲಾಯಿತು. ಪರಿಸ್ಥಿತಿಯನ್ನು ಈಗ ನಿಯಂತ್ರಣಕ್ಕೆ ತರಲಾಗಿದೆ” ಎಂದು ಮೋವ್ ಹೆಚ್ಚುವರಿ ಎಸ್‌ಪಿ ರೂಪೇಶ್ ದ್ವಿವೇದಿ ಹೇಳಿದ್ದಾರೆ.

ಒಂದು ಪ್ರದೇಶದಲ್ಲಿ ಗುಂಪೊಂದು ಕಲ್ಲು ತೂರಾಟ ಮತ್ತು ದ್ವಿಚಕ್ರ ವಾಹನಕ್ಕೆ ಹಾನಿ ಮಾಡುತ್ತಿರುವ ದೃಶ್ಯಗಳು ತಡರಾತ್ರಿ ವೈರಲ್ ಆಗಿವೆ.

ಭಾನುವಾರ-ಸೋಮವಾರ ರಾತ್ರಿ ಮೋವ್ ಪಟ್ಟಣವನ್ನು ತಲುಪಿದ ಇಂದೋರ್ ಜಿಲ್ಲಾಧಿಕಾರಿ ಆಶಿಶ್ ಸಿಂಗ್, “ಮೋವ್‌ ಸಂಪೂರ್ಣ ಶಾಂತಿಯುತವಾಗಿದ್ದು, ಸಹಜ ಸ್ಥಿತಿ ಮರಳಿದೆ. ಸರಣಿ ಹಿಂಸಾಚಾರದಲ್ಲಿ ಭಾಗಿಯಾಗಿರುವವರನ್ನು ನಾವು ವೀಡಿಯೊಗಳ ಮೂಲಕ ಗುರುತಿಸುತ್ತಿದ್ದೇವೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದರೆ ಇದೀಗ, ಶಾಂತಿ ಮತ್ತು ನೆಮ್ಮದಿ ನೆಲೆಸುವಂತೆ ನೋಡಿಕೊಳ್ಳುವುದು ನಮ್ಮ ಆದ್ಯತೆಯಾಗಿದೆ” ಎಂದು ಅವರು ಹೇಳಿದ್ದಾರೆ.

ಸ್ಥಳೀಯ ಬಿಜೆಪಿ ಶಾಸಕಿ ಮತ್ತು ಮಾಜಿ ಸಂಸದ ಸಚಿವೆ ಉಷಾ ಠಾಕೂರ್, “ಬಂದಾ ಬಸ್ತಿ ಆಗಿರಲಿ, ಹೈದರಾಬಾದ್ ಬಸ್ತಿ ಆಗಿರಲಿ ಅಥವಾ ಜಾಮಿಯಾ ಮಸೀದಿ ಪ್ರದೇಶವಾಗಲಿ, ದೇಶದ್ರೋಹಿಗಳನ್ನು ಮೋವ್‌ನಲ್ಲಿ ತಮ್ಮ ಕೊಳಕು ತಲೆ ಎತ್ತಲು ಬಿಡುವುದಿಲ್ಲ. ಹಿಂಸಾಚಾರದಲ್ಲಿ ತೊಡಗಿದವರನ್ನು ವಿಡಿಯೊದಲ್ಲಿ ಗುರುತಿಸಿ ಅವರ ವಿರುದ್ಧ ತೀವ್ರ ಕ್ರಮ ಕೈಗೊಳ್ಳುವಂತೆ ನಾವು ರಾಜ್ಯದ ಮುಖ್ಯಮಂತ್ರಿಯನ್ನು ವಿನಂತಿಸುತ್ತೇವೆ” ಎಂದು ಹೇಳಿದ್ದಾರೆ. ಸಂಸದೆ ಉಷಾ ಅವರು ಬಿಜೆಪಿಯ ಕಟ್ಟರ್ ಹಿಂದುತ್ವ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ.

ಪಶ್ಚಿಮ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಮೋವ್ ಉಪವಿಭಾಗವು ಪ್ರಮುಖ ಮಿಲಿಟರಿ ಕಂಟೋನ್ಮೆಂಟ್ ನೆಲೆಯನ್ನು ಹೊಂದಿರುವುದರಿಂದ, ಸೇನಾ ಸಿಬ್ಬಂದಿ ಕೂಡ ತಡರಾತ್ರಿ ಟ್ರಕ್‌ನಲ್ಲಿ ಕೆಲವು ಪ್ರದೇಶಗಳನ್ನು ಭದ್ರತೆಗೆ ಒಳಪಡಿಸುತ್ತಿರುವುದು ಕಂಡುಬಂದಿದೆ.

ಇಂದೋರ್ ಗ್ರಾಮೀಣ ಶ್ರೇಣಿಯ (ಐಜಿ-ಇಂದೋರ್ ಗ್ರಾಮೀಣ) ಇನ್ಸ್‌ಪೆಕ್ಟರ್ ಜನರಲ್ ಅನುರಾಗ್ ಪ್ರಕಾರ, “17 ಹೆಸರಿಸಲಾದ ವ್ಯಕ್ತಿಗಳು ಮತ್ತು ಅನೇಕ ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಗಲಭೆಗೆ ಸಂಬಂಧಿಸಿದಂತೆ ಬಿಎನ್‌ಎಸ್ ವಿಭಾಗಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ವರದಿಯಾಗಿದೆ.

ಡಾ. ಅಂಬೇಡ್ಕರ್ ನಗರ-ಮೋವ್ ಪಟ್ಟಣವು ಮುಖ್ಯವಾಗಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮಸ್ಥಳ ಮತ್ತು ದೇಶದ ರಕ್ಷಣಾ ಸ್ಥಾಪನೆಯ ಪ್ರಮುಖ ಸ್ಥಳವಾಗಿದೆ. ಇಲ್ಲಿ ಮೂರು ಪ್ರಮುಖ ರಕ್ಷಣಾ ತರಬೇತಿ ಸಂಸ್ಥೆಗಳಾದ ಆರ್ಮಿ ವಾರ್ ಕಾಲೇಜು, ಇನ್ಫಂಟ್ರಿ ಶಾಲೆ ಮತ್ತು ಮಿಲಿಟರಿ ಕಾಲೇಜ್ ಆಫ್ ಟೆಲಿಕಮ್ಯುನಿಕೇಶನ್ ಎಂಜಿನಿಯರಿಂಗ್ ಸಂಸ್ಥೆಗಳನ್ನು ಹೊಂದಿದೆ.

ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶೀಘ್ರದಲ್ಲೇ ಮೋವ್‌ಗೆ ಆಗಮಿಸಲಿದ್ದು, ಇದರಿಂದಾಗಿ ಮೋವ್‌ನಲ್ಲಿರುವ ಸಂಪೂರ್ಣ ಸೇನಾ ಸಂಸ್ಥೆಗಳು ಕೂಡಾ ಹೆಚ್ಚಿನ ಜಾಗರೂಕತೆಯಲ್ಲಿದೆ ಎಂದು ಮೂಲಗಳು ಹೇಳಿವೆ.

ಆಡಳಿತಾರೂಢ ಬಿಜೆಪಿ ಮತ್ತು ಆರೆಸ್ಸೆಸ್‌ ಸಂಘಟನೆಗಳ ಭದ್ರಕೋಟೆಗಳಲ್ಲಿ ಪಶ್ಚಿಮ ಮಧ್ಯಪ್ರದೇಶದ ಮೋವ್ ನಗರ ಕೂಡಾ ಒಂದಾಗಿದೆ. ಡಾ. ಅಂಬೇಡ್ಕರ್ ನಗರ-ಮೋವ್ ವಿಧಾನಸಭಾ ಕ್ಷೇತ್ರವನ್ನು 2008 ರಿಂದ ಬಿಜೆಪಿ ಪಕ್ಷ ಗೆಲ್ಲುತ್ತಿದೆ. 2014 ರಿಂದ ಧಾರ್-ಎಸ್‌ಟಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸತತ ಮೂರು ಗೆಲುವು ಸಾಧಿಸುವಲ್ಲಿ ಈ ವಿಧಾನಸಭಾ ಸ್ಥಾನವು ಪ್ರಮುಖ ಪಾತ್ರ ವಹಿಸಿದೆ.

ಸುಮಾರು ಒಂದು ವರ್ಷದ ಹಿಂದೆಯೆ ಧಾರ್ಮಿಕ ಮೆರವಣಿಗೆಗಳು ಪೂಜಾ ಸ್ಥಳಗಳ ಮೂಲಕ ಸಂಚರಿಸದಂತೆ ನೋಡಿಕೊಳ್ಳಲು ಎರಡೂ ಸಮುದಾಯಗಳ (ಹಿಂದೂಗಳು ಮತ್ತು ಮುಸ್ಲಿಮರು) ನಾಯಕರ ನಡುವೆ ಒಮ್ಮತದ ಒಪ್ಪಂದವಾಗಿತ್ತು ಎಂದು ಮೂಲಗಳು ಹೇಳಿವೆ.

ಈ ಮಧ್ಯೆ, ಪಶ್ಚಿಮ ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ಮೋವ್ ಪಟ್ಟಣದಿಂದ ಸುಮಾರು 65 ಕಿ.ಮೀ ದೂರದ ಸಯಾಜಿ ಗೇಟ್ ಬಳಿ ಕೂಡಾ, ಭಾನುವಾರ ತಡರಾತ್ರಿ ಚಾಂಪಿಯನ್ಸ್ ಟ್ರೋಫಿ ವಿಜಯೋತ್ಸವ ಮೆರವಣಿಯ ಕೆಟ್ಟ ತಿರುವು ಪಡೆದುಕೊಂಡಿದೆ. ವಿಜಯೋತ್ಸವದಲ್ಲಿ ಭಾಗವಹಿಸಿದ್ದ ಕೆಲವು ದುಷ್ಕರ್ಮಿಗಳು ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ವರದಿಯಾಗಿದೆ. ಆದಾಗ್ಯೂ, ಈ ಘಟನೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ವರದಿ ತಿಳಿಸಿದೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಸತ್ ಕಲಾಪ | ಲೋಕಸಭೆಯಲ್ಲಿ ಡಿಎಂಕೆ ಪ್ರತಿಭಟನೆ, ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷ ಸದಸ್ಯರು

ಸಂಸತ್ ಕಲಾಪ | ಲೋಕಸಭೆಯಲ್ಲಿ ಡಿಎಂಕೆ ಪ್ರತಿಭಟನೆ, ರಾಜ್ಯಸಭೆಯಿಂದ ಹೊರನಡೆದ ಪ್ರತಿಪಕ್ಷ ಸದಸ್ಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...